‘ಚುನಾವಣಾ ಕಾನೂನುಗಳು (ತಿದ್ದುಪಡಿ ಮಸೂದೆ)’ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ, ಲೋಕಸಭೆಯು ಸೋಮವಾರ ಮತದಾರರ ಐಡಿ ಕಾರ್ಡ್ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಅನುವು ಮಾಡಿಕೊಡುವ ಚುನಾವಣಾ ಕಾನೂನುಗಳಿಗೆ ತಿದ್ದುಪಡಿಗಳನ್ನು ಅಂಗೀಕರಿಸಿದೆ. ಈ ಮಸೂದೆಯು ದೇಶದಲ್ಲಿ ನಾಗರಿಕರಲ್ಲದ ತುಂಬಾ ಜನರಿಗೆ ಮತ ಚಲಾಯಿಸಲು ಅನುವು ಮಾಡಿಕೊಡುತ್ತದೆ ಎಂದು ಪ್ರತಿಪಕ್ಷವು ಆರೋಪಿಸಿದೆ.
ಆಧಾರ್ ನಿವಾಸದ ಪುರಾವೆಯೇ ಹೊರತು ಪೌರತ್ವವಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ, ಈ ಕ್ರಮವು ನಾಗರಿಕರಲ್ಲದವರಿಗೆ ಮತದಾನದ ಹಕ್ಕನ್ನು ನೀಡುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ
ಮತದಾನವು ಕಾನೂನುಬದ್ಧ ಹಕ್ಕು ಮತ್ತು ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವುದು ತಪ್ಪು ಎಂದು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ.
ಎಲ್ಲಾ ನಾಗರಿಕರಿಗೆ ಸರ್ಕಾರವು ಆಧಾರ್ ಕಾರ್ಡ್ಗಳನ್ನು ನೀಡುತ್ತದೆ ಎಂದು ಹೇಳಿದ ತೃಣಮೂಲ ಕಾಂಗ್ರೆಸ್ ನಾಯಕ ಸೌಗತೋ ರಾಯ್, ಒಕ್ಕೂಟ ಸರ್ಕಾರವು ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
AIMIM ಮುಖ್ಯಸ್ಥ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್ ಕಾರ್ಡ್ಗಳನ್ನು ಲಿಂಕ್ ಮಾಡುವುದು ‘ದೊಡ್ಡ ತಪ್ಪು’ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕೃಷಿ ಕಾಯಿದೆಗಳ ವಾಪಸಾತಿ; ದಣಿವರಿಯದ ಹೋರಾಟ ಕಲಿಸಿದ ಪಾಠಗಳೇನು?
“ಇದು ಪ್ರಜಾಪ್ರಭುತ್ವ ಮತ್ತು ನಾಗರಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ. ಆಧಾರ್ ಕಾರ್ಡ್ಗಳಲ್ಲಿ 8% ದಷ್ಟು ವ್ಯತ್ಯಾಸಗಳು ಕಂಡುಬಂದರೆ, ಮತದಾರರ ಪಟ್ಟಿಯಲ್ಲಿ ಕೇವಲ 3 ರಿಂದ 4% ದೋಷಗಳು ಕಂಡುಬಂದಿವೆ. ಮಸೂದೆ ಅಂಗೀಕಾರವಾದರೆ ಹೆಚ್ಚಿನ ಸಂಖ್ಯೆಯ ಜನರು ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಾರೆ” ಎಂದು ಒವೈಸಿ ಎಚ್ಚರಿಸಿದ್ದಾರೆ.
ವಿರೋಧ ಪಕ್ಷದ ಸಂಸದರ ಆಕ್ಷೇಪ ಮತ್ತು ಘೋಷಣೆಗಳ ನಡುವೆಯೇ ಈ ತಿದ್ದಪಡಿಗಳನ್ನು ಅಂಗೀಕರಿಸಲಾಗಿದೆ.
ಪ್ರತಿಪಕ್ಷಗಳ ಆಕ್ಷೇಪಣೆಗಳನ್ನು ‘ತಪ್ಪುದಾರಿ’ ಮತ್ತು ‘ಆಧಾರರಹಿತ’ ಎಂದು ಕರೆದ ಒಕ್ಕೂಸ ಸರ್ಕಾರದ ಸಚಿವ ಕಿರಣ್ ರಿಜಿಜು, ಸುಳ್ಳು ಮತದಾನ ಮತ್ತು ನಕಲಿ ಮತದಾನವನ್ನು ತಡೆಯಲು ಪ್ರತಿಪಕ್ಷಗಳು ಸರ್ಕಾರವನ್ನು ಬೆಂಬಲಿಸಬೇಕು ಎಂದು ಹೇಳಿದ್ದಾರೆ.
News is good for you read