Homeಮುಖಪುಟದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ಚುನಾಯಿತ ಸರ್ಕಾರ ತನ್ನ ಎಲ್ಲ ಪ್ರಮುಖ ನಿರ್ಧಾರಗಳಿಗೆ ಲೆಫ್ಟಿನೆಂಟ್ ಜನರಲ್ ಒಪ್ಪಿಗೆ ಪಡೆಯಬೇಕಾಗುತ್ತದೆ. ಒಂದರ್ಥದಲ್ಲಿ ಎಲ್-ಜಿ ಅವರೇ ಸರ್ಕಾರವಾಗುತ್ತಾರೆ ಎನ್ನಲಾಗಿದೆ.

- Advertisement -
- Advertisement -

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶ ಹೊಂದಿರುವ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರ ಮತ್ತು ನಾಮನಿರ್ದೇಶಿತ ಲೆಫ್ಟಿನೆಂಟ್ ಗವರ್ನರ್ ಪಾತ್ರಗಳನ್ನು ನಿರ್ದಿಷ್ಟಪಡಿಸುವ ಕಾಯಿದೆಯ ತಿದ್ದುಪಡಿಗಳನ್ನು ಮಸೂದೆ ಸೂಚಿಸುತ್ತದೆ.

ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸುವುದು ದೆಹಲಿ ಜನರಿಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಏಕೆಂದರೆ ಇದು ಜನರಿಂದ ಚುನಾಯಿತರಾದವರ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ನಿಯಂತ್ರಣವನ್ನು ನೀಡುತ್ತದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಈ ತಿದ್ದುಪಡಿಗಳು ದೆಹಲಿಯಲ್ಲಿ ಚುನಾವಣೆಗಳು ಮತ್ತು ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ವ್ಯವಹಾರಗಳನ್ನು ನಡೆಸುವಲ್ಲಿನ ಅಸ್ಪಷ್ಟತೆಯನ್ನು ಕೊನೆಗೊಳಿಸಲು ಈ ಮಸೂದೆಯನ್ನು ತರಲಾಗಿದೆ ಎಂದು ಕೇಂದ್ರವು ಹೇಳಿದೆ. ಇದು ನಗರದ ಜನರಿಗೆ ಪ್ರಯೋಜನಕಾರಿ ಆಗುವುದರಿಂದ ಇದನ್ನು “ರಾಜಕೀಯ ನಡೆ” ಎಂದು ಕರೆಯಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ.

ಎರಡು ಪ್ರಸ್ತಾವಿತ ತಿದ್ದುಪಡಿಗಳು, ನಿರ್ದಿಷ್ಟವಾಗಿ, ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರ್ಯಾಂಗೀಯ ಕ್ರಮಕ್ಕೆ ಲೆಫ್ಟಿನೆಂಟ್ ಜನರಲ್ ಅಭಿಪ್ರಾಯವನ್ನು ಪಡೆಯಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಕೇಂದ್ರವು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ಮಸೂದೆಯನ್ನು ತಂದಿದೆ. ಎಲ್-ಜಿ ಅವರೇ ಸರ್ಕಾರ ಎಂದು ಅದು ಹೇಳುತ್ತದೆ. ಎಲ್ಲಾ ನಿರ್ಧಾರಗಳು ಮತ್ತು ಫೈಲ್‌ಗಳನ್ನು ಅವರ ಮೂಲಕ ರವಾನಿಸಬೇಕಾಗಿದೆ” ಎಂದು ಸಿಸೋಡಿಯಾ ಸೋಮವಾರ ಹೇಳಿದ್ದಾರೆ. “ಈ ಮಸೂದೆ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಆದೇಶಕ್ಕೆ ವಿರುದ್ಧವಾಗಿದೆ. ಕೇಂದ್ರವು ಇದನ್ನೇ ಮಾಡಲು ಬಯಸಿದರೆ, ಚುನಾವಣೆಗಳನ್ನು ನಡೆಸುವ ಮತ್ತು ರಾಜ್ಯದಲ್ಲಿ ಚುನಾಯಿತ ಸರ್ಕಾರ ರಚನೆಯ ಅರ್ಥವೇನು? ಕೇಂದ್ರವು ತಾನು ಪ್ರಜಾತಾಂತ್ರಿಕ ಎಂದು ಏಕೆ ನಟಿಸುತ್ತದೆ? ” ಎಂದು ಅವರು ಪ್ರಶ್ನಿಸಿದ್ದಾರೆ.

ಮಾರ್ಚ್ 15 ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಪರಿಚಯಿಸಲಾಯಿತು. ಇದರ ನಂತರ ದೆಹಲಿ ಮಂತ್ರಿಗಳು ಮತ್ತು ಎಎಪಿ ಸಂಸದರು, ಶಾಸಕರು ಮತ್ತು ಕೌನ್ಸಿಲರ್‌ಗಳು ಇದರ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು, ಇದು ಎಲ್-ಜಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಅಪಾದಿಸಿದ್ದರು.

ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪರಿಚಯಿಸಿದ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 1991 ರ ಕಾಯಿದೆಯ ನಾಲ್ಕು ಷರತ್ತುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ.

ಮೊದಲನೆಯದು ಸೆಕ್ಷನ್ 21, ಅಂದರೆ ಇದು ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಶಾಸಕಾಂಗವು ಅಂಗೀಕರಿಸಿದ ಕಾನೂನುಗಳ ಮೇಲಿನ ನಿರ್ಬಂಧಗಳನ್ನು ಸೂಚಿಸುತ್ತದೆ. ಶಾಸಕಾಂಗವು ಮಾಡಬೇಕಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ “ಸರ್ಕಾರ” ಎಂಬ ಅಭಿವ್ಯಕ್ತಿ ಲೆಫ್ಟಿನೆಂಟ್ ಗವರ್ನರ್ ಎಂದು ಅರ್ಥೈಸುತ್ತದೆ” ಎಂದು ಸ್ಪಷ್ಟಪಡಿಸುವ ಮೂಲಕ ಉಪವಿಭಾಗವನ್ನು ಸೇರಿಸಲು ಮಸೂದೆ ಪ್ರಯತ್ನಿಸುತ್ತದೆ.

ಎರಡನೇ ತಿದ್ದುಪಡಿಯನ್ನು ಸೆಕ್ಷನ್ 24 ರಲ್ಲಿ ಕೋರಲಾಗಿದೆ, ಇದು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುತ್ತದೆ. ಶಾಸಕಾಂಗ ಸಭೆಗೆ ನೀಡಲಾಗಿರುವ ಅಧಿಕಾರಗಳ ವ್ಯಾಪ್ತಿಯಿಂದ ಹೊರಗುಳಿಯುವ ಯಾವುದೇ ವಿಷಯಗಳನ್ನು ಒಳಗೊಳ್ಳುವ ಯಾವುದೇ ಮಸೂದೆಯನ್ನು ಪರಿಗಣಿಸಲು ಮತ್ತು ರಾಷ್ಟ್ರಪತಿಗೆ ರವಾನಿಸಲು ಎಲ್-ಜಿ ಒಪ್ಪದಿರುವ ಅಧಿಕಾರವನ್ನು ನೀಡಲಾಗಿದೆ.

ಮೂರನೆಯದಾಗಿ, ಮಸೂದೆಯು ಸೆಕ್ಷನ್ 33, ಕಾರ್ಯವಿಧಾನದ ನಿಯಮಗಳು ಮಾರ್ಪಾಟಿಗೆ ಬಯಸಿದೆ. ಅದರ ವಿಧಾನ ಮತ್ತು ಸದನ ನಡವಳಿಕೆಯನ್ನು ನಿಯಂತ್ರಿಸಲು ಅಸೆಂಬ್ಲಿ ಮಾಡಿದ ನಿಯಮಗಳ ಮೇಲೆ ಇದು ನಿಯಂತ್ರಣ ಸಾಧಿಸುತ್ತದೆ.

ಅಲ್ಲದೆ, “ ಹೊಸ ಮಸೂದೆ ಜಾರಿಗೆ ಬರುವ ಮುನ್ನ ರಾಜಧಾನಿಯ ದಿನನಿತ್ಯದ ಆಡಳಿತದ ವಿಷಯಗಳನ್ನು ಪರಿಗಣಿಸಲು ಅಥವಾ ಆಡಳಿತಾತ್ಮಕ ನಿರ್ಧಾರಗಳಿಗೆ ಸಂಬಂಧಿಸಿದಂತೆ ವಿಚಾರಣೆಗಳನ್ನು ನಡೆಸಲು ಮತ್ತು ಯಾವುದೇ ನಿಯಮದಲ್ಲಿ ಶಾಸಕಾಂಗವು ತನ್ನನ್ನು ಅಥವಾ ಅದರ ಸಮಿತಿಗಳನ್ನು ಸಕ್ರಿಯಗೊಳಿಸಲು ಯಾವುದೇ ನಿಯಮವನ್ನು ಮಾಡಬಾರದು. ಎಂದು ನಿರ್ಬಂಧಿಸಿದೆ.

ತಿದ್ದುಪಡಿ ಮಸೂದೆಯು, “ಮಂತ್ರಿ ಮಂಡಲ ಅಥವಾ ಸಚಿವರ ನಿರ್ಧಾರದ ಅನುಸಾರ” ಅಥವಾ “ಸರ್ಕಾರದ ಅಧಿಕಾರವನ್ನು ಚಲಾಯಿಸಲು” ಯಾವುದೇ ಕಾರ್ಯಕಾರಿ ಕ್ರಮ ತೆಗೆದುಕೊಳ್ಳುವ ಮೊದಲು, ಎಲ್-ಜಿ ಅಭಿಪ್ರಾಯವನ್ನು ಪಡೆಯಬೇಕಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...