Homeಮುಖಪುಟದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ಚುನಾಯಿತ ಸರ್ಕಾರ ತನ್ನ ಎಲ್ಲ ಪ್ರಮುಖ ನಿರ್ಧಾರಗಳಿಗೆ ಲೆಫ್ಟಿನೆಂಟ್ ಜನರಲ್ ಒಪ್ಪಿಗೆ ಪಡೆಯಬೇಕಾಗುತ್ತದೆ. ಒಂದರ್ಥದಲ್ಲಿ ಎಲ್-ಜಿ ಅವರೇ ಸರ್ಕಾರವಾಗುತ್ತಾರೆ ಎನ್ನಲಾಗಿದೆ.

- Advertisement -
- Advertisement -

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶ ಹೊಂದಿರುವ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರ ಮತ್ತು ನಾಮನಿರ್ದೇಶಿತ ಲೆಫ್ಟಿನೆಂಟ್ ಗವರ್ನರ್ ಪಾತ್ರಗಳನ್ನು ನಿರ್ದಿಷ್ಟಪಡಿಸುವ ಕಾಯಿದೆಯ ತಿದ್ದುಪಡಿಗಳನ್ನು ಮಸೂದೆ ಸೂಚಿಸುತ್ತದೆ.

ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸುವುದು ದೆಹಲಿ ಜನರಿಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಏಕೆಂದರೆ ಇದು ಜನರಿಂದ ಚುನಾಯಿತರಾದವರ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ನಿಯಂತ್ರಣವನ್ನು ನೀಡುತ್ತದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಈ ತಿದ್ದುಪಡಿಗಳು ದೆಹಲಿಯಲ್ಲಿ ಚುನಾವಣೆಗಳು ಮತ್ತು ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ವ್ಯವಹಾರಗಳನ್ನು ನಡೆಸುವಲ್ಲಿನ ಅಸ್ಪಷ್ಟತೆಯನ್ನು ಕೊನೆಗೊಳಿಸಲು ಈ ಮಸೂದೆಯನ್ನು ತರಲಾಗಿದೆ ಎಂದು ಕೇಂದ್ರವು ಹೇಳಿದೆ. ಇದು ನಗರದ ಜನರಿಗೆ ಪ್ರಯೋಜನಕಾರಿ ಆಗುವುದರಿಂದ ಇದನ್ನು “ರಾಜಕೀಯ ನಡೆ” ಎಂದು ಕರೆಯಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ.

ಎರಡು ಪ್ರಸ್ತಾವಿತ ತಿದ್ದುಪಡಿಗಳು, ನಿರ್ದಿಷ್ಟವಾಗಿ, ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರ್ಯಾಂಗೀಯ ಕ್ರಮಕ್ಕೆ ಲೆಫ್ಟಿನೆಂಟ್ ಜನರಲ್ ಅಭಿಪ್ರಾಯವನ್ನು ಪಡೆಯಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಕೇಂದ್ರವು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ಮಸೂದೆಯನ್ನು ತಂದಿದೆ. ಎಲ್-ಜಿ ಅವರೇ ಸರ್ಕಾರ ಎಂದು ಅದು ಹೇಳುತ್ತದೆ. ಎಲ್ಲಾ ನಿರ್ಧಾರಗಳು ಮತ್ತು ಫೈಲ್‌ಗಳನ್ನು ಅವರ ಮೂಲಕ ರವಾನಿಸಬೇಕಾಗಿದೆ” ಎಂದು ಸಿಸೋಡಿಯಾ ಸೋಮವಾರ ಹೇಳಿದ್ದಾರೆ. “ಈ ಮಸೂದೆ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಆದೇಶಕ್ಕೆ ವಿರುದ್ಧವಾಗಿದೆ. ಕೇಂದ್ರವು ಇದನ್ನೇ ಮಾಡಲು ಬಯಸಿದರೆ, ಚುನಾವಣೆಗಳನ್ನು ನಡೆಸುವ ಮತ್ತು ರಾಜ್ಯದಲ್ಲಿ ಚುನಾಯಿತ ಸರ್ಕಾರ ರಚನೆಯ ಅರ್ಥವೇನು? ಕೇಂದ್ರವು ತಾನು ಪ್ರಜಾತಾಂತ್ರಿಕ ಎಂದು ಏಕೆ ನಟಿಸುತ್ತದೆ? ” ಎಂದು ಅವರು ಪ್ರಶ್ನಿಸಿದ್ದಾರೆ.

ಮಾರ್ಚ್ 15 ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಪರಿಚಯಿಸಲಾಯಿತು. ಇದರ ನಂತರ ದೆಹಲಿ ಮಂತ್ರಿಗಳು ಮತ್ತು ಎಎಪಿ ಸಂಸದರು, ಶಾಸಕರು ಮತ್ತು ಕೌನ್ಸಿಲರ್‌ಗಳು ಇದರ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು, ಇದು ಎಲ್-ಜಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಅಪಾದಿಸಿದ್ದರು.

ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪರಿಚಯಿಸಿದ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 1991 ರ ಕಾಯಿದೆಯ ನಾಲ್ಕು ಷರತ್ತುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ.

ಮೊದಲನೆಯದು ಸೆಕ್ಷನ್ 21, ಅಂದರೆ ಇದು ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಶಾಸಕಾಂಗವು ಅಂಗೀಕರಿಸಿದ ಕಾನೂನುಗಳ ಮೇಲಿನ ನಿರ್ಬಂಧಗಳನ್ನು ಸೂಚಿಸುತ್ತದೆ. ಶಾಸಕಾಂಗವು ಮಾಡಬೇಕಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ “ಸರ್ಕಾರ” ಎಂಬ ಅಭಿವ್ಯಕ್ತಿ ಲೆಫ್ಟಿನೆಂಟ್ ಗವರ್ನರ್ ಎಂದು ಅರ್ಥೈಸುತ್ತದೆ” ಎಂದು ಸ್ಪಷ್ಟಪಡಿಸುವ ಮೂಲಕ ಉಪವಿಭಾಗವನ್ನು ಸೇರಿಸಲು ಮಸೂದೆ ಪ್ರಯತ್ನಿಸುತ್ತದೆ.

ಎರಡನೇ ತಿದ್ದುಪಡಿಯನ್ನು ಸೆಕ್ಷನ್ 24 ರಲ್ಲಿ ಕೋರಲಾಗಿದೆ, ಇದು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುತ್ತದೆ. ಶಾಸಕಾಂಗ ಸಭೆಗೆ ನೀಡಲಾಗಿರುವ ಅಧಿಕಾರಗಳ ವ್ಯಾಪ್ತಿಯಿಂದ ಹೊರಗುಳಿಯುವ ಯಾವುದೇ ವಿಷಯಗಳನ್ನು ಒಳಗೊಳ್ಳುವ ಯಾವುದೇ ಮಸೂದೆಯನ್ನು ಪರಿಗಣಿಸಲು ಮತ್ತು ರಾಷ್ಟ್ರಪತಿಗೆ ರವಾನಿಸಲು ಎಲ್-ಜಿ ಒಪ್ಪದಿರುವ ಅಧಿಕಾರವನ್ನು ನೀಡಲಾಗಿದೆ.

ಮೂರನೆಯದಾಗಿ, ಮಸೂದೆಯು ಸೆಕ್ಷನ್ 33, ಕಾರ್ಯವಿಧಾನದ ನಿಯಮಗಳು ಮಾರ್ಪಾಟಿಗೆ ಬಯಸಿದೆ. ಅದರ ವಿಧಾನ ಮತ್ತು ಸದನ ನಡವಳಿಕೆಯನ್ನು ನಿಯಂತ್ರಿಸಲು ಅಸೆಂಬ್ಲಿ ಮಾಡಿದ ನಿಯಮಗಳ ಮೇಲೆ ಇದು ನಿಯಂತ್ರಣ ಸಾಧಿಸುತ್ತದೆ.

ಅಲ್ಲದೆ, “ ಹೊಸ ಮಸೂದೆ ಜಾರಿಗೆ ಬರುವ ಮುನ್ನ ರಾಜಧಾನಿಯ ದಿನನಿತ್ಯದ ಆಡಳಿತದ ವಿಷಯಗಳನ್ನು ಪರಿಗಣಿಸಲು ಅಥವಾ ಆಡಳಿತಾತ್ಮಕ ನಿರ್ಧಾರಗಳಿಗೆ ಸಂಬಂಧಿಸಿದಂತೆ ವಿಚಾರಣೆಗಳನ್ನು ನಡೆಸಲು ಮತ್ತು ಯಾವುದೇ ನಿಯಮದಲ್ಲಿ ಶಾಸಕಾಂಗವು ತನ್ನನ್ನು ಅಥವಾ ಅದರ ಸಮಿತಿಗಳನ್ನು ಸಕ್ರಿಯಗೊಳಿಸಲು ಯಾವುದೇ ನಿಯಮವನ್ನು ಮಾಡಬಾರದು. ಎಂದು ನಿರ್ಬಂಧಿಸಿದೆ.

ತಿದ್ದುಪಡಿ ಮಸೂದೆಯು, “ಮಂತ್ರಿ ಮಂಡಲ ಅಥವಾ ಸಚಿವರ ನಿರ್ಧಾರದ ಅನುಸಾರ” ಅಥವಾ “ಸರ್ಕಾರದ ಅಧಿಕಾರವನ್ನು ಚಲಾಯಿಸಲು” ಯಾವುದೇ ಕಾರ್ಯಕಾರಿ ಕ್ರಮ ತೆಗೆದುಕೊಳ್ಳುವ ಮೊದಲು, ಎಲ್-ಜಿ ಅಭಿಪ್ರಾಯವನ್ನು ಪಡೆಯಬೇಕಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...