Homeಮುಖಪುಟದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ಚುನಾಯಿತ ಸರ್ಕಾರ ತನ್ನ ಎಲ್ಲ ಪ್ರಮುಖ ನಿರ್ಧಾರಗಳಿಗೆ ಲೆಫ್ಟಿನೆಂಟ್ ಜನರಲ್ ಒಪ್ಪಿಗೆ ಪಡೆಯಬೇಕಾಗುತ್ತದೆ. ಒಂದರ್ಥದಲ್ಲಿ ಎಲ್-ಜಿ ಅವರೇ ಸರ್ಕಾರವಾಗುತ್ತಾರೆ ಎನ್ನಲಾಗಿದೆ.

- Advertisement -
- Advertisement -

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶ ಹೊಂದಿರುವ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರ ಮತ್ತು ನಾಮನಿರ್ದೇಶಿತ ಲೆಫ್ಟಿನೆಂಟ್ ಗವರ್ನರ್ ಪಾತ್ರಗಳನ್ನು ನಿರ್ದಿಷ್ಟಪಡಿಸುವ ಕಾಯಿದೆಯ ತಿದ್ದುಪಡಿಗಳನ್ನು ಮಸೂದೆ ಸೂಚಿಸುತ್ತದೆ.

ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸುವುದು ದೆಹಲಿ ಜನರಿಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಏಕೆಂದರೆ ಇದು ಜನರಿಂದ ಚುನಾಯಿತರಾದವರ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ನಿಯಂತ್ರಣವನ್ನು ನೀಡುತ್ತದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಈ ತಿದ್ದುಪಡಿಗಳು ದೆಹಲಿಯಲ್ಲಿ ಚುನಾವಣೆಗಳು ಮತ್ತು ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ವ್ಯವಹಾರಗಳನ್ನು ನಡೆಸುವಲ್ಲಿನ ಅಸ್ಪಷ್ಟತೆಯನ್ನು ಕೊನೆಗೊಳಿಸಲು ಈ ಮಸೂದೆಯನ್ನು ತರಲಾಗಿದೆ ಎಂದು ಕೇಂದ್ರವು ಹೇಳಿದೆ. ಇದು ನಗರದ ಜನರಿಗೆ ಪ್ರಯೋಜನಕಾರಿ ಆಗುವುದರಿಂದ ಇದನ್ನು “ರಾಜಕೀಯ ನಡೆ” ಎಂದು ಕರೆಯಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ.

ಎರಡು ಪ್ರಸ್ತಾವಿತ ತಿದ್ದುಪಡಿಗಳು, ನಿರ್ದಿಷ್ಟವಾಗಿ, ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರ್ಯಾಂಗೀಯ ಕ್ರಮಕ್ಕೆ ಲೆಫ್ಟಿನೆಂಟ್ ಜನರಲ್ ಅಭಿಪ್ರಾಯವನ್ನು ಪಡೆಯಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಕೇಂದ್ರವು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ಮಸೂದೆಯನ್ನು ತಂದಿದೆ. ಎಲ್-ಜಿ ಅವರೇ ಸರ್ಕಾರ ಎಂದು ಅದು ಹೇಳುತ್ತದೆ. ಎಲ್ಲಾ ನಿರ್ಧಾರಗಳು ಮತ್ತು ಫೈಲ್‌ಗಳನ್ನು ಅವರ ಮೂಲಕ ರವಾನಿಸಬೇಕಾಗಿದೆ” ಎಂದು ಸಿಸೋಡಿಯಾ ಸೋಮವಾರ ಹೇಳಿದ್ದಾರೆ. “ಈ ಮಸೂದೆ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಆದೇಶಕ್ಕೆ ವಿರುದ್ಧವಾಗಿದೆ. ಕೇಂದ್ರವು ಇದನ್ನೇ ಮಾಡಲು ಬಯಸಿದರೆ, ಚುನಾವಣೆಗಳನ್ನು ನಡೆಸುವ ಮತ್ತು ರಾಜ್ಯದಲ್ಲಿ ಚುನಾಯಿತ ಸರ್ಕಾರ ರಚನೆಯ ಅರ್ಥವೇನು? ಕೇಂದ್ರವು ತಾನು ಪ್ರಜಾತಾಂತ್ರಿಕ ಎಂದು ಏಕೆ ನಟಿಸುತ್ತದೆ? ” ಎಂದು ಅವರು ಪ್ರಶ್ನಿಸಿದ್ದಾರೆ.

ಮಾರ್ಚ್ 15 ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಪರಿಚಯಿಸಲಾಯಿತು. ಇದರ ನಂತರ ದೆಹಲಿ ಮಂತ್ರಿಗಳು ಮತ್ತು ಎಎಪಿ ಸಂಸದರು, ಶಾಸಕರು ಮತ್ತು ಕೌನ್ಸಿಲರ್‌ಗಳು ಇದರ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು, ಇದು ಎಲ್-ಜಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಅಪಾದಿಸಿದ್ದರು.

ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪರಿಚಯಿಸಿದ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 1991 ರ ಕಾಯಿದೆಯ ನಾಲ್ಕು ಷರತ್ತುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ.

ಮೊದಲನೆಯದು ಸೆಕ್ಷನ್ 21, ಅಂದರೆ ಇದು ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಶಾಸಕಾಂಗವು ಅಂಗೀಕರಿಸಿದ ಕಾನೂನುಗಳ ಮೇಲಿನ ನಿರ್ಬಂಧಗಳನ್ನು ಸೂಚಿಸುತ್ತದೆ. ಶಾಸಕಾಂಗವು ಮಾಡಬೇಕಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ “ಸರ್ಕಾರ” ಎಂಬ ಅಭಿವ್ಯಕ್ತಿ ಲೆಫ್ಟಿನೆಂಟ್ ಗವರ್ನರ್ ಎಂದು ಅರ್ಥೈಸುತ್ತದೆ” ಎಂದು ಸ್ಪಷ್ಟಪಡಿಸುವ ಮೂಲಕ ಉಪವಿಭಾಗವನ್ನು ಸೇರಿಸಲು ಮಸೂದೆ ಪ್ರಯತ್ನಿಸುತ್ತದೆ.

ಎರಡನೇ ತಿದ್ದುಪಡಿಯನ್ನು ಸೆಕ್ಷನ್ 24 ರಲ್ಲಿ ಕೋರಲಾಗಿದೆ, ಇದು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುತ್ತದೆ. ಶಾಸಕಾಂಗ ಸಭೆಗೆ ನೀಡಲಾಗಿರುವ ಅಧಿಕಾರಗಳ ವ್ಯಾಪ್ತಿಯಿಂದ ಹೊರಗುಳಿಯುವ ಯಾವುದೇ ವಿಷಯಗಳನ್ನು ಒಳಗೊಳ್ಳುವ ಯಾವುದೇ ಮಸೂದೆಯನ್ನು ಪರಿಗಣಿಸಲು ಮತ್ತು ರಾಷ್ಟ್ರಪತಿಗೆ ರವಾನಿಸಲು ಎಲ್-ಜಿ ಒಪ್ಪದಿರುವ ಅಧಿಕಾರವನ್ನು ನೀಡಲಾಗಿದೆ.

ಮೂರನೆಯದಾಗಿ, ಮಸೂದೆಯು ಸೆಕ್ಷನ್ 33, ಕಾರ್ಯವಿಧಾನದ ನಿಯಮಗಳು ಮಾರ್ಪಾಟಿಗೆ ಬಯಸಿದೆ. ಅದರ ವಿಧಾನ ಮತ್ತು ಸದನ ನಡವಳಿಕೆಯನ್ನು ನಿಯಂತ್ರಿಸಲು ಅಸೆಂಬ್ಲಿ ಮಾಡಿದ ನಿಯಮಗಳ ಮೇಲೆ ಇದು ನಿಯಂತ್ರಣ ಸಾಧಿಸುತ್ತದೆ.

ಅಲ್ಲದೆ, “ ಹೊಸ ಮಸೂದೆ ಜಾರಿಗೆ ಬರುವ ಮುನ್ನ ರಾಜಧಾನಿಯ ದಿನನಿತ್ಯದ ಆಡಳಿತದ ವಿಷಯಗಳನ್ನು ಪರಿಗಣಿಸಲು ಅಥವಾ ಆಡಳಿತಾತ್ಮಕ ನಿರ್ಧಾರಗಳಿಗೆ ಸಂಬಂಧಿಸಿದಂತೆ ವಿಚಾರಣೆಗಳನ್ನು ನಡೆಸಲು ಮತ್ತು ಯಾವುದೇ ನಿಯಮದಲ್ಲಿ ಶಾಸಕಾಂಗವು ತನ್ನನ್ನು ಅಥವಾ ಅದರ ಸಮಿತಿಗಳನ್ನು ಸಕ್ರಿಯಗೊಳಿಸಲು ಯಾವುದೇ ನಿಯಮವನ್ನು ಮಾಡಬಾರದು. ಎಂದು ನಿರ್ಬಂಧಿಸಿದೆ.

ತಿದ್ದುಪಡಿ ಮಸೂದೆಯು, “ಮಂತ್ರಿ ಮಂಡಲ ಅಥವಾ ಸಚಿವರ ನಿರ್ಧಾರದ ಅನುಸಾರ” ಅಥವಾ “ಸರ್ಕಾರದ ಅಧಿಕಾರವನ್ನು ಚಲಾಯಿಸಲು” ಯಾವುದೇ ಕಾರ್ಯಕಾರಿ ಕ್ರಮ ತೆಗೆದುಕೊಳ್ಳುವ ಮೊದಲು, ಎಲ್-ಜಿ ಅಭಿಪ್ರಾಯವನ್ನು ಪಡೆಯಬೇಕಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...