Homeಮುಖಪುಟದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ಚುನಾಯಿತ ಸರ್ಕಾರ ತನ್ನ ಎಲ್ಲ ಪ್ರಮುಖ ನಿರ್ಧಾರಗಳಿಗೆ ಲೆಫ್ಟಿನೆಂಟ್ ಜನರಲ್ ಒಪ್ಪಿಗೆ ಪಡೆಯಬೇಕಾಗುತ್ತದೆ. ಒಂದರ್ಥದಲ್ಲಿ ಎಲ್-ಜಿ ಅವರೇ ಸರ್ಕಾರವಾಗುತ್ತಾರೆ ಎನ್ನಲಾಗಿದೆ.

- Advertisement -
- Advertisement -

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶ ಹೊಂದಿರುವ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರ ಮತ್ತು ನಾಮನಿರ್ದೇಶಿತ ಲೆಫ್ಟಿನೆಂಟ್ ಗವರ್ನರ್ ಪಾತ್ರಗಳನ್ನು ನಿರ್ದಿಷ್ಟಪಡಿಸುವ ಕಾಯಿದೆಯ ತಿದ್ದುಪಡಿಗಳನ್ನು ಮಸೂದೆ ಸೂಚಿಸುತ್ತದೆ.

ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸುವುದು ದೆಹಲಿ ಜನರಿಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಏಕೆಂದರೆ ಇದು ಜನರಿಂದ ಚುನಾಯಿತರಾದವರ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ನಿಯಂತ್ರಣವನ್ನು ನೀಡುತ್ತದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಈ ತಿದ್ದುಪಡಿಗಳು ದೆಹಲಿಯಲ್ಲಿ ಚುನಾವಣೆಗಳು ಮತ್ತು ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ವ್ಯವಹಾರಗಳನ್ನು ನಡೆಸುವಲ್ಲಿನ ಅಸ್ಪಷ್ಟತೆಯನ್ನು ಕೊನೆಗೊಳಿಸಲು ಈ ಮಸೂದೆಯನ್ನು ತರಲಾಗಿದೆ ಎಂದು ಕೇಂದ್ರವು ಹೇಳಿದೆ. ಇದು ನಗರದ ಜನರಿಗೆ ಪ್ರಯೋಜನಕಾರಿ ಆಗುವುದರಿಂದ ಇದನ್ನು “ರಾಜಕೀಯ ನಡೆ” ಎಂದು ಕರೆಯಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ.

ಎರಡು ಪ್ರಸ್ತಾವಿತ ತಿದ್ದುಪಡಿಗಳು, ನಿರ್ದಿಷ್ಟವಾಗಿ, ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರ್ಯಾಂಗೀಯ ಕ್ರಮಕ್ಕೆ ಲೆಫ್ಟಿನೆಂಟ್ ಜನರಲ್ ಅಭಿಪ್ರಾಯವನ್ನು ಪಡೆಯಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಕೇಂದ್ರವು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ಮಸೂದೆಯನ್ನು ತಂದಿದೆ. ಎಲ್-ಜಿ ಅವರೇ ಸರ್ಕಾರ ಎಂದು ಅದು ಹೇಳುತ್ತದೆ. ಎಲ್ಲಾ ನಿರ್ಧಾರಗಳು ಮತ್ತು ಫೈಲ್‌ಗಳನ್ನು ಅವರ ಮೂಲಕ ರವಾನಿಸಬೇಕಾಗಿದೆ” ಎಂದು ಸಿಸೋಡಿಯಾ ಸೋಮವಾರ ಹೇಳಿದ್ದಾರೆ. “ಈ ಮಸೂದೆ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಆದೇಶಕ್ಕೆ ವಿರುದ್ಧವಾಗಿದೆ. ಕೇಂದ್ರವು ಇದನ್ನೇ ಮಾಡಲು ಬಯಸಿದರೆ, ಚುನಾವಣೆಗಳನ್ನು ನಡೆಸುವ ಮತ್ತು ರಾಜ್ಯದಲ್ಲಿ ಚುನಾಯಿತ ಸರ್ಕಾರ ರಚನೆಯ ಅರ್ಥವೇನು? ಕೇಂದ್ರವು ತಾನು ಪ್ರಜಾತಾಂತ್ರಿಕ ಎಂದು ಏಕೆ ನಟಿಸುತ್ತದೆ? ” ಎಂದು ಅವರು ಪ್ರಶ್ನಿಸಿದ್ದಾರೆ.

ಮಾರ್ಚ್ 15 ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಪರಿಚಯಿಸಲಾಯಿತು. ಇದರ ನಂತರ ದೆಹಲಿ ಮಂತ್ರಿಗಳು ಮತ್ತು ಎಎಪಿ ಸಂಸದರು, ಶಾಸಕರು ಮತ್ತು ಕೌನ್ಸಿಲರ್‌ಗಳು ಇದರ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು, ಇದು ಎಲ್-ಜಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಅಪಾದಿಸಿದ್ದರು.

ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪರಿಚಯಿಸಿದ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 1991 ರ ಕಾಯಿದೆಯ ನಾಲ್ಕು ಷರತ್ತುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ.

ಮೊದಲನೆಯದು ಸೆಕ್ಷನ್ 21, ಅಂದರೆ ಇದು ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಶಾಸಕಾಂಗವು ಅಂಗೀಕರಿಸಿದ ಕಾನೂನುಗಳ ಮೇಲಿನ ನಿರ್ಬಂಧಗಳನ್ನು ಸೂಚಿಸುತ್ತದೆ. ಶಾಸಕಾಂಗವು ಮಾಡಬೇಕಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ “ಸರ್ಕಾರ” ಎಂಬ ಅಭಿವ್ಯಕ್ತಿ ಲೆಫ್ಟಿನೆಂಟ್ ಗವರ್ನರ್ ಎಂದು ಅರ್ಥೈಸುತ್ತದೆ” ಎಂದು ಸ್ಪಷ್ಟಪಡಿಸುವ ಮೂಲಕ ಉಪವಿಭಾಗವನ್ನು ಸೇರಿಸಲು ಮಸೂದೆ ಪ್ರಯತ್ನಿಸುತ್ತದೆ.

ಎರಡನೇ ತಿದ್ದುಪಡಿಯನ್ನು ಸೆಕ್ಷನ್ 24 ರಲ್ಲಿ ಕೋರಲಾಗಿದೆ, ಇದು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುತ್ತದೆ. ಶಾಸಕಾಂಗ ಸಭೆಗೆ ನೀಡಲಾಗಿರುವ ಅಧಿಕಾರಗಳ ವ್ಯಾಪ್ತಿಯಿಂದ ಹೊರಗುಳಿಯುವ ಯಾವುದೇ ವಿಷಯಗಳನ್ನು ಒಳಗೊಳ್ಳುವ ಯಾವುದೇ ಮಸೂದೆಯನ್ನು ಪರಿಗಣಿಸಲು ಮತ್ತು ರಾಷ್ಟ್ರಪತಿಗೆ ರವಾನಿಸಲು ಎಲ್-ಜಿ ಒಪ್ಪದಿರುವ ಅಧಿಕಾರವನ್ನು ನೀಡಲಾಗಿದೆ.

ಮೂರನೆಯದಾಗಿ, ಮಸೂದೆಯು ಸೆಕ್ಷನ್ 33, ಕಾರ್ಯವಿಧಾನದ ನಿಯಮಗಳು ಮಾರ್ಪಾಟಿಗೆ ಬಯಸಿದೆ. ಅದರ ವಿಧಾನ ಮತ್ತು ಸದನ ನಡವಳಿಕೆಯನ್ನು ನಿಯಂತ್ರಿಸಲು ಅಸೆಂಬ್ಲಿ ಮಾಡಿದ ನಿಯಮಗಳ ಮೇಲೆ ಇದು ನಿಯಂತ್ರಣ ಸಾಧಿಸುತ್ತದೆ.

ಅಲ್ಲದೆ, “ ಹೊಸ ಮಸೂದೆ ಜಾರಿಗೆ ಬರುವ ಮುನ್ನ ರಾಜಧಾನಿಯ ದಿನನಿತ್ಯದ ಆಡಳಿತದ ವಿಷಯಗಳನ್ನು ಪರಿಗಣಿಸಲು ಅಥವಾ ಆಡಳಿತಾತ್ಮಕ ನಿರ್ಧಾರಗಳಿಗೆ ಸಂಬಂಧಿಸಿದಂತೆ ವಿಚಾರಣೆಗಳನ್ನು ನಡೆಸಲು ಮತ್ತು ಯಾವುದೇ ನಿಯಮದಲ್ಲಿ ಶಾಸಕಾಂಗವು ತನ್ನನ್ನು ಅಥವಾ ಅದರ ಸಮಿತಿಗಳನ್ನು ಸಕ್ರಿಯಗೊಳಿಸಲು ಯಾವುದೇ ನಿಯಮವನ್ನು ಮಾಡಬಾರದು. ಎಂದು ನಿರ್ಬಂಧಿಸಿದೆ.

ತಿದ್ದುಪಡಿ ಮಸೂದೆಯು, “ಮಂತ್ರಿ ಮಂಡಲ ಅಥವಾ ಸಚಿವರ ನಿರ್ಧಾರದ ಅನುಸಾರ” ಅಥವಾ “ಸರ್ಕಾರದ ಅಧಿಕಾರವನ್ನು ಚಲಾಯಿಸಲು” ಯಾವುದೇ ಕಾರ್ಯಕಾರಿ ಕ್ರಮ ತೆಗೆದುಕೊಳ್ಳುವ ಮೊದಲು, ಎಲ್-ಜಿ ಅಭಿಪ್ರಾಯವನ್ನು ಪಡೆಯಬೇಕಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...