HomeಮುಖಪುಟNEET ಪರೀಕ್ಷೆ ತಗೆದುಹಾಕುವ ಮಸೂದೆಗೆ ರಾಜ್ಯಪಾಲರ ಅನುಮತಿ ಬೇಕಿಲ್ಲ: ಸಚಿವ ಸುಬ್ರಮಣಿಯನ್

NEET ಪರೀಕ್ಷೆ ತಗೆದುಹಾಕುವ ಮಸೂದೆಗೆ ರಾಜ್ಯಪಾಲರ ಅನುಮತಿ ಬೇಕಿಲ್ಲ: ಸಚಿವ ಸುಬ್ರಮಣಿಯನ್

- Advertisement -
- Advertisement -

NEET ಪರೀಕ್ಷೆ ವಿರುದ್ಧದ ರಾಜ್ಯದ ಮಸೂದೆಯನ್ನು ಅನುಮೋದಿಸುವಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅವರು ವಿರೋಧಿಸುವಂತಿಲ್ಲ, ಇದರಲ್ಲಿ ಅವರ ಪಾತ್ರ ಏನೂ ಇಲ್ಲ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಭಾನುವಾರ ಹೇಳಿದ್ದಾರೆ.

ಭಾರತದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಪದವಿಪೂರ್ವ ಕೋರ್ಸ್‌ಗಳಿಗೆ ಅರ್ಹತಾ ಪರೀಕ್ಷೆಯಾಗಿ NEET ನಡೆಸಲಾಗುತ್ತದೆ. ಇದನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುತ್ತದೆ.

ಸೆಪ್ಟೆಂಬರ್ 2021ರಲ್ಲಿ, ತಮಿಳುನಾಡು ಅಸೆಂಬ್ಲಿಯು ಡಿಎಂಕೆ ಮಂಡಿಸಿದ ಮಸೂದೆಯನ್ನು ಅಂಗೀಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ NEETನಿಂದ ವಿನಾಯಿತಿ ನೀಡುವಂತೆ ಕೋರಿತ್ತು. 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಕೈಗೊಳ್ಳಲಾಗುವುದು ಎಂದು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಪಠ್ಯಕ್ರಮವನ್ನು ಆಧರಿಸಿದ ಈ ಪ್ರವೇಶ ಪರೀಕ್ಷೆಯು ರಾಜ್ಯ ಮಂಡಳಿಯ ಪಠ್ಯಕ್ರಮವನ್ನು ಅನುಸರಿಸುವ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುತ್ತದೆ ಎಂಬ ಆಧಾರದ ಮೇಲೆ ತಮಿಳುನಾಡು ಪರೀಕ್ಷೆಯನ್ನು ವಿರೋಧಿಸುತ್ತಿದೆ.

ರಾಜ್ಯಪಾಲ ರವಿ ಅವರು ಮಸೂದೆಗೆ ಒಪ್ಪಿಗೆ ನೀಡಲಿಲ್ಲ ಮತ್ತು ಕಾಯಿದೆಯು ಕಾನೂನಾಗುವುದನ್ನು ನಿಲ್ಲಿಸಿತು. ಆನಂತರ ಫೆಬ್ರವರಿ 2022ರಲ್ಲಿ ತಮಿಳುನಾಡು ಅಸೆಂಬ್ಲಿಯು ಮತ್ತೊಮ್ಮೆ ಮಸೂದೆಯನ್ನು ಅಂಗೀಕರಿಸಿತು. ಶಿಕ್ಷಣವು ಸಂವಿಧಾನದ ಏಕಕಾಲಿಕ ಪಟ್ಟಿಯಲ್ಲಿ ಒಂದು ವಿಷಯವಾಗಿರುವುದರಿಂದ ಮಸೂದೆಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಲುಪಿಸಲಾಯಿತು.

ನೀಟ್ ಪರೀಕ್ಷೆಯು ಇಡೀ ದೇಶದಲ್ಲಿ ಇರುವುದಾದರೆ ರಾಜ್ಯತದಲ್ಲಿ ಮಾತ್ರ ತಗೆದುಹಾಕುವ ಬಿಲ್‌ಗೆ ನಾನು ಎಂದಿಗೂ ಒಪ್ಪಿಗೆ ನೀಡುವುದಿಲ್ಲ ಎಂದು ರವಿ ಅವರು ಶನಿವಾರ ಹೇಳಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

ಬಿಲ್‌ಗೆ ಒಪ್ಪಿಗೆ ನೀಡುವ ಕುರಿತು ವಿದ್ಯಾರ್ಥಿಯೊಬ್ಬರ ತಂದೆ ರವಿ ಅವರನ್ನು ಕೇಳಿದಾಗ, ”ನಾನು ನಿಮಗೆ ತುಂಬಾ ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ. ನಾನು ಎಂದಿಗೂ NEET ಗೆ ಕ್ಲಿಯರೆನ್ಸ್ ನೀಡುವುದಿಲ್ಲ [ವಿನಾಯಿತಿ ಮಸೂದೆ]” ಎಂದಿದ್ದಾರೆ.

ರವಿ ಅವರ ಹೇಳಿಕೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದ ಸುಬ್ರಮಣಿಯನ್, ರಾಷ್ಟ್ರಪತಿಗಳ ಕಚೇರಿ ಈ ಮಸೂದೆಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿದ್ದು, ತಮಿಳುನಾಡು ಸರ್ಕಾರದಿಂದ ಸ್ಪಷ್ಟನೆ ಕೇಳಿದೆ. ಈಗ, ರಾಷ್ಟ್ರಪತಿಗಳು ಮಸೂದೆಗೆ ಒಪ್ಪಿಗೆ ನೀಡುತ್ತಾರೆ ಎಂದು ಭಾವಿಸಿದರೆ, ರಾಜ್ಯಪಾಲರ ಕಚೇರಿಗೆ ಸೂಚನೆ ಸಿಗುತ್ತದೆ, ಅನುಮತಿ ಅಲ್ಲ. ಆದ್ದರಿಂದ, ಮಸೂದೆಯಲ್ಲಿ ರಾಜ್ಯಪಾಲರಿಗೆ ಹೆಚ್ಚಿನ ಪಾತ್ರವಿಲ್ಲ” ಎಂದು ಸುಬ್ರಮಣಿಯನ್ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು, ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ನಿಮ್ಮ ಗುರಿಗೆ ತೊಡಕಾಗಿರುವ NEET ಪರೀಕ್ಷೆಯನ್ನು ತೆಗೆದುಹಾಕುತ್ತೇವೆ: ಅಭ್ಯರ್ಥಿಗಳಿಗೆ ಸ್ಟಾಲಿನ್ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...