Homeಮುಖಪುಟಬಿಲ್ಲವ ಮುಖಂಡ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ: ಮಧ್ಯರಾತ್ರಿ ಕಾರ್ಯಾಚರಣೆಗೆ ಟೀಕೆ

ಬಿಲ್ಲವ ಮುಖಂಡ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ: ಮಧ್ಯರಾತ್ರಿ ಕಾರ್ಯಾಚರಣೆಗೆ ಟೀಕೆ

- Advertisement -
- Advertisement -

ಬಿಲ್ಲವ ಮುಖಂಡ, ಸಂಘ ಪರಿವಾರದ ಮಾಜಿ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ಫೇಸ್‌ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ತಡರಾತ್ರಿ ಅವರನ್ನು ಬಂಧಿಸಿ ಕರೆದೊಯ್ದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.

ನಮೀಬಿಯಾದಿಂದ ತರಿಸಿದ್ದ ಚೀತಾ ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿ ಸುನೀಲ್ ಬಜಲಕೇರಿಯವರು ಸೀಮಂತ ಮಾಡುವ ಕಾರ್ಯಕ್ರಮದ ಬಗ್ಗೆ ಫೇಸ್‌ಬುಕ್‌ನಲ್ಲಿ ವ್ಯಂಗ್ಯಭರಿತ ಪೋಸ್ಟ್ ಹಾಕಿದ್ದರು. ಈ ಕುರಿತು ಅವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಎನ್ನಲಾಗಿದೆ.

ಶುಕ್ರವಾರ ರಾತ್ರಿ 11 ಗಂಟೆಗೆ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಆಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಆನಂತರ ಅವರನ್ನು ಉರ್ವ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಘಪರಿವಾರದ ನಾಯಕರಾಗಿದ್ದ ಸುನೀಲ್ ಬಜಿಲಕೇರಿಯವರು ಸದ್ಯ ಅದರಿಂದ ಹೊರಬಂದು ಪ್ರಗತಿಪರ ಸಂಘಟನೆಗಳ ಜೊತೆ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಸಂಘ ಪರಿವಾರವು ತಮ್ಮ ರಾಜಕೀಯ ಅಧಿಕಾರಕ್ಕಾಗಿ ಶೂದ್ರರನ್ನು ಬಲಿಕೊಟ್ಟು ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಟೀಕಿಸುತ್ತಿದ್ದರು. ಅಲ್ಲದೆ ಹಿಂದುತ್ವದಿಂದ ಬಂಧುತ್ವದೆಡೆಗೆ ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲಿನ ರಾಜಕೀಯ ದ್ವೇಷದ ಕಾರಣಕ್ಕೆ ಬಂಧನ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಶಿವಮೊಗ್ಗದ ಹರ್ಷ ಕೊಲೆ, ಮಂಗಳೂರಿನ ಪ್ರವೀಣ್ ನೆಟ್ಟಾರು ಕೊಲೆ ಕುರಿತು ಸುನೀಲ್ ಬಜಿಲಕೇರಿ ದನಿಯೆತ್ತಿದ್ದರು. ಬಿಜೆಪಿಯಿಂದ ನಾರಾಯಣಗುರುಗಳಿಗಾದ ಅವಮಾನ ಮರೆಸಲು ಹಿಜಾಬ್ ಗಲಭೆ ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದರು. ಈ ಎಲ್ಲಾ ಕಾರಣಗಳಿಗಾಗಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಮಧ್ಯರಾತ್ರಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಲಾಗಿದೆ.

ಸುನೀಲ್ ಬಜಿಲಕೇರಿಯವರ ಬಂಧನ ಅಕ್ರಮ ಮತ್ತು ಅನ್ಯಾಯದ ಪರಮಾವಧಿ ಎಂದು ಕರೆದಿರುವ ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಕೂಡಲೇ ಬಿಡುಗಡೆಗೆ ಆಗ್ರಹಿಸಿದ್ದಾರೆ. “ಮಂಗಳೂರು ನಗರದ ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಟೀಕಾತೀತರಾ? ನರೇಶ್ ಶೆಣೈ ಸೂಪರ್ ಶಾಸಕರಾ? ಇವರ ವಿರುದ್ದ ಮಾತಾಡಿದರೆ ಮಧ್ಯ ರಾತ್ರಿ ಮನೆ ನುಗ್ಗಿ ಸೀದಾ ಜೈಲಿಗಟ್ಟುವುದಾ? ಅದಕ್ಕಾಗಿ ಇಲ್ಲದ ಪ್ರಕರಣ ಸೃಷ್ಟಿಸುವುದಾ? ಕೋರ್ಟಿಗೆ ರಜಾ ಇರುವ ದಿನಗಳನ್ನೇ ಬಂಧನಕ್ಕಾಗಿ ಆಯ್ದು ಕೊಳ್ಳುವುದಾ ? ಮಂಗಳೂರು ಪೊಲೀಸು ಇಲಾಖೆ ಅಂದರೆ ಬಿಜೆಪಿ ಶಾಸಕರ ಕಚೇರಿಯಿಂದ ಬಂದ ಸ್ಕ್ರಿಪ್ಟ್ ಆಧಾರದಲ್ಲಿ ಅವರ ವಿರೋಧಿಗಳ ಬಾಯಿ ಮುಚ್ಚಿಸುವ ಹೊರ ಗುತ್ತಿಗೆ ಏಜನ್ಸಿಯಾ ? ಇವರಿಗೊಂದು ಸ್ವಂತಿಕೆ ಇಲ್ಲವಾ? ಎಂದು ಅವರು ಪ್ರಶ್ನಿಸಿದ್ದಾರೆ.

ಸುನಿಲ್ ಬಜಿಲಕೇರಿ ಬಂಧನ ಅಕ್ರಮ, ಅನ್ಯಾಯದ ಪರಮಾವಧಿ. ಚೀತಾ ಗರ್ಭಿಣಿಯಾದ ವಿಷಯದಲ್ಲಿ ಯಾವುದೇ ರಾಜಕೀಯ ಉಲ್ಲೇಖ ಇಲ್ಲದ ಒಂದು ಸಾಮಾನ್ಯ ಹಾಸ್ಯ ಪೋಸ್ಟ್ ಹಾಕಿದರೆ ಹಿಡಿದು ಜೈಲಿಗೆ ತಳ್ಳುವುದು ಅಂದರೆ ಇದರ ಹುನ್ನಾರ ಅರ್ಥ ಆಗದೆ ಇರುವುದಿಲ್ಲ. ಇವರಿಗೆ ಭಯ ಹುಟ್ಟಿಸಲು ಒಂದು ನೆಪ ಬೇಕು ಅಷ್ಟೆ. ಇದು ಜನಸಾಮಾನ್ಯರಿಗೆ “ಬಾಯಿ ಮುಚ್ಚಿ ಕೂತುಕೊಳ್ಳಿ” ಎಂದು ಬಿಜೆಪಿ ಶಾಸಕರುಗಳು ಹಾಕಿದ ನೇರ ಬೆದರಿಕೆ. ಇದನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು, ಪ್ರತಿಭಟಿಸಬೇಕು. ಇಂದು ಬಜಿಲಕೇರಿ. ನಾಳೆ ನಾವು, ನೀವು ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಸುನೀಲ್ ಬಜಿಲಕೇರಿಯವರು ಇತ್ತೀಚೆಗೆ ಚೀತಾ ಗರ್ಭಿಣಿ ಆಗಿರುವುದು ಎಂಬ ಫೋಟೋ ಹಾಕಿದ್ದರು, ಇದರಲ್ಲಿ ಯಾರ ಭಾವನೆಗಳಿಗೆ ಧಕ್ಕೆ ಆಗುವಂತಹ ವಿಷಯವಿರಲಿಲ್ಲ‌‌. ಆದರೂ ಪೊಲೀಸರು ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದು ಸುನಿಲ್ ಬಜಿಲಕೇರಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ಬಿಲ್ಲವ ಮುಖಂಡರಾದ ಸುನಿಲ್ ಅವರು ಬಿಜೆಪಿಯ ನೈಜ ಮುಖದ ಅನಾವರಣ ಮಾಡುತ್ತಿದ್ದರು. ಆದರೂ ಇಂತಹ ಕ್ಷುಲ್ಲಕ ಕೇಸಿನಲ್ಲಿ ಪೊಲೀಸರು ಬಂಧಿಸುವಂತಿಲ್ಲ ಎಂಬ ಸುಪ್ರೀಂಕೋರ್ಟ್ ಆರ್ಡರ್ ಇದ್ದರೂ ಸಹ ಪೊಲೀಸರು ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಸುನಿಲ್ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತ ಜ್ಞಾನಿ ತಾವರೆಕೆರೆ ತಿಳಿಸಿದ್ದಾರೆ.

ಇದನ್ನೂ ಓದಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಮಾನಗೇಡಿ ಚಡ್ಡಿಗಳ ಪಾದ ಸೇವಕರಾಗಿ ಮಾರ್ಪಟ್ಟಿರುವ ಕರ್ನಾಟಕ ಪೋಲೀಸ್ ಇಲಾಖೆಯವ್ರು ತಮಗೆ ವಿದ್ಯೆ, ಬುದ್ಧಿ, ವಿವೇಕ,ವಿವೇಚನೆ ಯಾವುವೂ ಇಲ್ಲವೆಂಬುದನ್ನು ಪದೇ ಪದೆ ಸಾಬೀತು ಪಡಿಸುತ್ತಿದ್ದಾರೆ. ಸರಕಾರಗಳು ಬದಲಾಗುತ್ತಿರುತ್ತವೆ ಎಂಬುದನ್ನು ಇವರು ನೆನಪಿಟ್ಟುಕೊಳ್ಳಲಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...