Homeಮುಖಪುಟಬಿಲ್ಲವ ಮುಖಂಡ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ: ಮಧ್ಯರಾತ್ರಿ ಕಾರ್ಯಾಚರಣೆಗೆ ಟೀಕೆ

ಬಿಲ್ಲವ ಮುಖಂಡ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ: ಮಧ್ಯರಾತ್ರಿ ಕಾರ್ಯಾಚರಣೆಗೆ ಟೀಕೆ

- Advertisement -
- Advertisement -

ಬಿಲ್ಲವ ಮುಖಂಡ, ಸಂಘ ಪರಿವಾರದ ಮಾಜಿ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ಫೇಸ್‌ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ತಡರಾತ್ರಿ ಅವರನ್ನು ಬಂಧಿಸಿ ಕರೆದೊಯ್ದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.

ನಮೀಬಿಯಾದಿಂದ ತರಿಸಿದ್ದ ಚೀತಾ ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿ ಸುನೀಲ್ ಬಜಲಕೇರಿಯವರು ಸೀಮಂತ ಮಾಡುವ ಕಾರ್ಯಕ್ರಮದ ಬಗ್ಗೆ ಫೇಸ್‌ಬುಕ್‌ನಲ್ಲಿ ವ್ಯಂಗ್ಯಭರಿತ ಪೋಸ್ಟ್ ಹಾಕಿದ್ದರು. ಈ ಕುರಿತು ಅವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಎನ್ನಲಾಗಿದೆ.

ಶುಕ್ರವಾರ ರಾತ್ರಿ 11 ಗಂಟೆಗೆ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಆಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಆನಂತರ ಅವರನ್ನು ಉರ್ವ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಘಪರಿವಾರದ ನಾಯಕರಾಗಿದ್ದ ಸುನೀಲ್ ಬಜಿಲಕೇರಿಯವರು ಸದ್ಯ ಅದರಿಂದ ಹೊರಬಂದು ಪ್ರಗತಿಪರ ಸಂಘಟನೆಗಳ ಜೊತೆ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಸಂಘ ಪರಿವಾರವು ತಮ್ಮ ರಾಜಕೀಯ ಅಧಿಕಾರಕ್ಕಾಗಿ ಶೂದ್ರರನ್ನು ಬಲಿಕೊಟ್ಟು ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಟೀಕಿಸುತ್ತಿದ್ದರು. ಅಲ್ಲದೆ ಹಿಂದುತ್ವದಿಂದ ಬಂಧುತ್ವದೆಡೆಗೆ ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲಿನ ರಾಜಕೀಯ ದ್ವೇಷದ ಕಾರಣಕ್ಕೆ ಬಂಧನ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಶಿವಮೊಗ್ಗದ ಹರ್ಷ ಕೊಲೆ, ಮಂಗಳೂರಿನ ಪ್ರವೀಣ್ ನೆಟ್ಟಾರು ಕೊಲೆ ಕುರಿತು ಸುನೀಲ್ ಬಜಿಲಕೇರಿ ದನಿಯೆತ್ತಿದ್ದರು. ಬಿಜೆಪಿಯಿಂದ ನಾರಾಯಣಗುರುಗಳಿಗಾದ ಅವಮಾನ ಮರೆಸಲು ಹಿಜಾಬ್ ಗಲಭೆ ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದರು. ಈ ಎಲ್ಲಾ ಕಾರಣಗಳಿಗಾಗಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಮಧ್ಯರಾತ್ರಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಲಾಗಿದೆ.

ಸುನೀಲ್ ಬಜಿಲಕೇರಿಯವರ ಬಂಧನ ಅಕ್ರಮ ಮತ್ತು ಅನ್ಯಾಯದ ಪರಮಾವಧಿ ಎಂದು ಕರೆದಿರುವ ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಕೂಡಲೇ ಬಿಡುಗಡೆಗೆ ಆಗ್ರಹಿಸಿದ್ದಾರೆ. “ಮಂಗಳೂರು ನಗರದ ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಟೀಕಾತೀತರಾ? ನರೇಶ್ ಶೆಣೈ ಸೂಪರ್ ಶಾಸಕರಾ? ಇವರ ವಿರುದ್ದ ಮಾತಾಡಿದರೆ ಮಧ್ಯ ರಾತ್ರಿ ಮನೆ ನುಗ್ಗಿ ಸೀದಾ ಜೈಲಿಗಟ್ಟುವುದಾ? ಅದಕ್ಕಾಗಿ ಇಲ್ಲದ ಪ್ರಕರಣ ಸೃಷ್ಟಿಸುವುದಾ? ಕೋರ್ಟಿಗೆ ರಜಾ ಇರುವ ದಿನಗಳನ್ನೇ ಬಂಧನಕ್ಕಾಗಿ ಆಯ್ದು ಕೊಳ್ಳುವುದಾ ? ಮಂಗಳೂರು ಪೊಲೀಸು ಇಲಾಖೆ ಅಂದರೆ ಬಿಜೆಪಿ ಶಾಸಕರ ಕಚೇರಿಯಿಂದ ಬಂದ ಸ್ಕ್ರಿಪ್ಟ್ ಆಧಾರದಲ್ಲಿ ಅವರ ವಿರೋಧಿಗಳ ಬಾಯಿ ಮುಚ್ಚಿಸುವ ಹೊರ ಗುತ್ತಿಗೆ ಏಜನ್ಸಿಯಾ ? ಇವರಿಗೊಂದು ಸ್ವಂತಿಕೆ ಇಲ್ಲವಾ? ಎಂದು ಅವರು ಪ್ರಶ್ನಿಸಿದ್ದಾರೆ.

ಸುನಿಲ್ ಬಜಿಲಕೇರಿ ಬಂಧನ ಅಕ್ರಮ, ಅನ್ಯಾಯದ ಪರಮಾವಧಿ. ಚೀತಾ ಗರ್ಭಿಣಿಯಾದ ವಿಷಯದಲ್ಲಿ ಯಾವುದೇ ರಾಜಕೀಯ ಉಲ್ಲೇಖ ಇಲ್ಲದ ಒಂದು ಸಾಮಾನ್ಯ ಹಾಸ್ಯ ಪೋಸ್ಟ್ ಹಾಕಿದರೆ ಹಿಡಿದು ಜೈಲಿಗೆ ತಳ್ಳುವುದು ಅಂದರೆ ಇದರ ಹುನ್ನಾರ ಅರ್ಥ ಆಗದೆ ಇರುವುದಿಲ್ಲ. ಇವರಿಗೆ ಭಯ ಹುಟ್ಟಿಸಲು ಒಂದು ನೆಪ ಬೇಕು ಅಷ್ಟೆ. ಇದು ಜನಸಾಮಾನ್ಯರಿಗೆ “ಬಾಯಿ ಮುಚ್ಚಿ ಕೂತುಕೊಳ್ಳಿ” ಎಂದು ಬಿಜೆಪಿ ಶಾಸಕರುಗಳು ಹಾಕಿದ ನೇರ ಬೆದರಿಕೆ. ಇದನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು, ಪ್ರತಿಭಟಿಸಬೇಕು. ಇಂದು ಬಜಿಲಕೇರಿ. ನಾಳೆ ನಾವು, ನೀವು ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಸುನೀಲ್ ಬಜಿಲಕೇರಿಯವರು ಇತ್ತೀಚೆಗೆ ಚೀತಾ ಗರ್ಭಿಣಿ ಆಗಿರುವುದು ಎಂಬ ಫೋಟೋ ಹಾಕಿದ್ದರು, ಇದರಲ್ಲಿ ಯಾರ ಭಾವನೆಗಳಿಗೆ ಧಕ್ಕೆ ಆಗುವಂತಹ ವಿಷಯವಿರಲಿಲ್ಲ‌‌. ಆದರೂ ಪೊಲೀಸರು ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದು ಸುನಿಲ್ ಬಜಿಲಕೇರಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ಬಿಲ್ಲವ ಮುಖಂಡರಾದ ಸುನಿಲ್ ಅವರು ಬಿಜೆಪಿಯ ನೈಜ ಮುಖದ ಅನಾವರಣ ಮಾಡುತ್ತಿದ್ದರು. ಆದರೂ ಇಂತಹ ಕ್ಷುಲ್ಲಕ ಕೇಸಿನಲ್ಲಿ ಪೊಲೀಸರು ಬಂಧಿಸುವಂತಿಲ್ಲ ಎಂಬ ಸುಪ್ರೀಂಕೋರ್ಟ್ ಆರ್ಡರ್ ಇದ್ದರೂ ಸಹ ಪೊಲೀಸರು ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಸುನಿಲ್ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತ ಜ್ಞಾನಿ ತಾವರೆಕೆರೆ ತಿಳಿಸಿದ್ದಾರೆ.

ಇದನ್ನೂ ಓದಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಮಾನಗೇಡಿ ಚಡ್ಡಿಗಳ ಪಾದ ಸೇವಕರಾಗಿ ಮಾರ್ಪಟ್ಟಿರುವ ಕರ್ನಾಟಕ ಪೋಲೀಸ್ ಇಲಾಖೆಯವ್ರು ತಮಗೆ ವಿದ್ಯೆ, ಬುದ್ಧಿ, ವಿವೇಕ,ವಿವೇಚನೆ ಯಾವುವೂ ಇಲ್ಲವೆಂಬುದನ್ನು ಪದೇ ಪದೆ ಸಾಬೀತು ಪಡಿಸುತ್ತಿದ್ದಾರೆ. ಸರಕಾರಗಳು ಬದಲಾಗುತ್ತಿರುತ್ತವೆ ಎಂಬುದನ್ನು ಇವರು ನೆನಪಿಟ್ಟುಕೊಳ್ಳಲಿ.

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...