Homeಮುಖಪುಟಬಿಲ್ಲವ ಮುಖಂಡ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ: ಮಧ್ಯರಾತ್ರಿ ಕಾರ್ಯಾಚರಣೆಗೆ ಟೀಕೆ

ಬಿಲ್ಲವ ಮುಖಂಡ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ: ಮಧ್ಯರಾತ್ರಿ ಕಾರ್ಯಾಚರಣೆಗೆ ಟೀಕೆ

- Advertisement -
- Advertisement -

ಬಿಲ್ಲವ ಮುಖಂಡ, ಸಂಘ ಪರಿವಾರದ ಮಾಜಿ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ಫೇಸ್‌ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ತಡರಾತ್ರಿ ಅವರನ್ನು ಬಂಧಿಸಿ ಕರೆದೊಯ್ದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.

ನಮೀಬಿಯಾದಿಂದ ತರಿಸಿದ್ದ ಚೀತಾ ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿ ಸುನೀಲ್ ಬಜಲಕೇರಿಯವರು ಸೀಮಂತ ಮಾಡುವ ಕಾರ್ಯಕ್ರಮದ ಬಗ್ಗೆ ಫೇಸ್‌ಬುಕ್‌ನಲ್ಲಿ ವ್ಯಂಗ್ಯಭರಿತ ಪೋಸ್ಟ್ ಹಾಕಿದ್ದರು. ಈ ಕುರಿತು ಅವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಎನ್ನಲಾಗಿದೆ.

ಶುಕ್ರವಾರ ರಾತ್ರಿ 11 ಗಂಟೆಗೆ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಆಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಆನಂತರ ಅವರನ್ನು ಉರ್ವ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಘಪರಿವಾರದ ನಾಯಕರಾಗಿದ್ದ ಸುನೀಲ್ ಬಜಿಲಕೇರಿಯವರು ಸದ್ಯ ಅದರಿಂದ ಹೊರಬಂದು ಪ್ರಗತಿಪರ ಸಂಘಟನೆಗಳ ಜೊತೆ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಸಂಘ ಪರಿವಾರವು ತಮ್ಮ ರಾಜಕೀಯ ಅಧಿಕಾರಕ್ಕಾಗಿ ಶೂದ್ರರನ್ನು ಬಲಿಕೊಟ್ಟು ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಟೀಕಿಸುತ್ತಿದ್ದರು. ಅಲ್ಲದೆ ಹಿಂದುತ್ವದಿಂದ ಬಂಧುತ್ವದೆಡೆಗೆ ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲಿನ ರಾಜಕೀಯ ದ್ವೇಷದ ಕಾರಣಕ್ಕೆ ಬಂಧನ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಶಿವಮೊಗ್ಗದ ಹರ್ಷ ಕೊಲೆ, ಮಂಗಳೂರಿನ ಪ್ರವೀಣ್ ನೆಟ್ಟಾರು ಕೊಲೆ ಕುರಿತು ಸುನೀಲ್ ಬಜಿಲಕೇರಿ ದನಿಯೆತ್ತಿದ್ದರು. ಬಿಜೆಪಿಯಿಂದ ನಾರಾಯಣಗುರುಗಳಿಗಾದ ಅವಮಾನ ಮರೆಸಲು ಹಿಜಾಬ್ ಗಲಭೆ ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದರು. ಈ ಎಲ್ಲಾ ಕಾರಣಗಳಿಗಾಗಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಮಧ್ಯರಾತ್ರಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಲಾಗಿದೆ.

ಸುನೀಲ್ ಬಜಿಲಕೇರಿಯವರ ಬಂಧನ ಅಕ್ರಮ ಮತ್ತು ಅನ್ಯಾಯದ ಪರಮಾವಧಿ ಎಂದು ಕರೆದಿರುವ ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಕೂಡಲೇ ಬಿಡುಗಡೆಗೆ ಆಗ್ರಹಿಸಿದ್ದಾರೆ. “ಮಂಗಳೂರು ನಗರದ ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಟೀಕಾತೀತರಾ? ನರೇಶ್ ಶೆಣೈ ಸೂಪರ್ ಶಾಸಕರಾ? ಇವರ ವಿರುದ್ದ ಮಾತಾಡಿದರೆ ಮಧ್ಯ ರಾತ್ರಿ ಮನೆ ನುಗ್ಗಿ ಸೀದಾ ಜೈಲಿಗಟ್ಟುವುದಾ? ಅದಕ್ಕಾಗಿ ಇಲ್ಲದ ಪ್ರಕರಣ ಸೃಷ್ಟಿಸುವುದಾ? ಕೋರ್ಟಿಗೆ ರಜಾ ಇರುವ ದಿನಗಳನ್ನೇ ಬಂಧನಕ್ಕಾಗಿ ಆಯ್ದು ಕೊಳ್ಳುವುದಾ ? ಮಂಗಳೂರು ಪೊಲೀಸು ಇಲಾಖೆ ಅಂದರೆ ಬಿಜೆಪಿ ಶಾಸಕರ ಕಚೇರಿಯಿಂದ ಬಂದ ಸ್ಕ್ರಿಪ್ಟ್ ಆಧಾರದಲ್ಲಿ ಅವರ ವಿರೋಧಿಗಳ ಬಾಯಿ ಮುಚ್ಚಿಸುವ ಹೊರ ಗುತ್ತಿಗೆ ಏಜನ್ಸಿಯಾ ? ಇವರಿಗೊಂದು ಸ್ವಂತಿಕೆ ಇಲ್ಲವಾ? ಎಂದು ಅವರು ಪ್ರಶ್ನಿಸಿದ್ದಾರೆ.

ಸುನಿಲ್ ಬಜಿಲಕೇರಿ ಬಂಧನ ಅಕ್ರಮ, ಅನ್ಯಾಯದ ಪರಮಾವಧಿ. ಚೀತಾ ಗರ್ಭಿಣಿಯಾದ ವಿಷಯದಲ್ಲಿ ಯಾವುದೇ ರಾಜಕೀಯ ಉಲ್ಲೇಖ ಇಲ್ಲದ ಒಂದು ಸಾಮಾನ್ಯ ಹಾಸ್ಯ ಪೋಸ್ಟ್ ಹಾಕಿದರೆ ಹಿಡಿದು ಜೈಲಿಗೆ ತಳ್ಳುವುದು ಅಂದರೆ ಇದರ ಹುನ್ನಾರ ಅರ್ಥ ಆಗದೆ ಇರುವುದಿಲ್ಲ. ಇವರಿಗೆ ಭಯ ಹುಟ್ಟಿಸಲು ಒಂದು ನೆಪ ಬೇಕು ಅಷ್ಟೆ. ಇದು ಜನಸಾಮಾನ್ಯರಿಗೆ “ಬಾಯಿ ಮುಚ್ಚಿ ಕೂತುಕೊಳ್ಳಿ” ಎಂದು ಬಿಜೆಪಿ ಶಾಸಕರುಗಳು ಹಾಕಿದ ನೇರ ಬೆದರಿಕೆ. ಇದನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು, ಪ್ರತಿಭಟಿಸಬೇಕು. ಇಂದು ಬಜಿಲಕೇರಿ. ನಾಳೆ ನಾವು, ನೀವು ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಸುನೀಲ್ ಬಜಿಲಕೇರಿಯವರು ಇತ್ತೀಚೆಗೆ ಚೀತಾ ಗರ್ಭಿಣಿ ಆಗಿರುವುದು ಎಂಬ ಫೋಟೋ ಹಾಕಿದ್ದರು, ಇದರಲ್ಲಿ ಯಾರ ಭಾವನೆಗಳಿಗೆ ಧಕ್ಕೆ ಆಗುವಂತಹ ವಿಷಯವಿರಲಿಲ್ಲ‌‌. ಆದರೂ ಪೊಲೀಸರು ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದು ಸುನಿಲ್ ಬಜಿಲಕೇರಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ಬಿಲ್ಲವ ಮುಖಂಡರಾದ ಸುನಿಲ್ ಅವರು ಬಿಜೆಪಿಯ ನೈಜ ಮುಖದ ಅನಾವರಣ ಮಾಡುತ್ತಿದ್ದರು. ಆದರೂ ಇಂತಹ ಕ್ಷುಲ್ಲಕ ಕೇಸಿನಲ್ಲಿ ಪೊಲೀಸರು ಬಂಧಿಸುವಂತಿಲ್ಲ ಎಂಬ ಸುಪ್ರೀಂಕೋರ್ಟ್ ಆರ್ಡರ್ ಇದ್ದರೂ ಸಹ ಪೊಲೀಸರು ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಸುನಿಲ್ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತ ಜ್ಞಾನಿ ತಾವರೆಕೆರೆ ತಿಳಿಸಿದ್ದಾರೆ.

ಇದನ್ನೂ ಓದಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಮಾನಗೇಡಿ ಚಡ್ಡಿಗಳ ಪಾದ ಸೇವಕರಾಗಿ ಮಾರ್ಪಟ್ಟಿರುವ ಕರ್ನಾಟಕ ಪೋಲೀಸ್ ಇಲಾಖೆಯವ್ರು ತಮಗೆ ವಿದ್ಯೆ, ಬುದ್ಧಿ, ವಿವೇಕ,ವಿವೇಚನೆ ಯಾವುವೂ ಇಲ್ಲವೆಂಬುದನ್ನು ಪದೇ ಪದೆ ಸಾಬೀತು ಪಡಿಸುತ್ತಿದ್ದಾರೆ. ಸರಕಾರಗಳು ಬದಲಾಗುತ್ತಿರುತ್ತವೆ ಎಂಬುದನ್ನು ಇವರು ನೆನಪಿಟ್ಟುಕೊಳ್ಳಲಿ.

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....