Homeಮುಖಪುಟಬಿಲ್ಲವ ಮುಖಂಡ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ: ಮಧ್ಯರಾತ್ರಿ ಕಾರ್ಯಾಚರಣೆಗೆ ಟೀಕೆ

ಬಿಲ್ಲವ ಮುಖಂಡ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ: ಮಧ್ಯರಾತ್ರಿ ಕಾರ್ಯಾಚರಣೆಗೆ ಟೀಕೆ

- Advertisement -
- Advertisement -

ಬಿಲ್ಲವ ಮುಖಂಡ, ಸಂಘ ಪರಿವಾರದ ಮಾಜಿ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ಫೇಸ್‌ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ತಡರಾತ್ರಿ ಅವರನ್ನು ಬಂಧಿಸಿ ಕರೆದೊಯ್ದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.

ನಮೀಬಿಯಾದಿಂದ ತರಿಸಿದ್ದ ಚೀತಾ ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿ ಸುನೀಲ್ ಬಜಲಕೇರಿಯವರು ಸೀಮಂತ ಮಾಡುವ ಕಾರ್ಯಕ್ರಮದ ಬಗ್ಗೆ ಫೇಸ್‌ಬುಕ್‌ನಲ್ಲಿ ವ್ಯಂಗ್ಯಭರಿತ ಪೋಸ್ಟ್ ಹಾಕಿದ್ದರು. ಈ ಕುರಿತು ಅವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಎನ್ನಲಾಗಿದೆ.

ಶುಕ್ರವಾರ ರಾತ್ರಿ 11 ಗಂಟೆಗೆ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಆಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಆನಂತರ ಅವರನ್ನು ಉರ್ವ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಘಪರಿವಾರದ ನಾಯಕರಾಗಿದ್ದ ಸುನೀಲ್ ಬಜಿಲಕೇರಿಯವರು ಸದ್ಯ ಅದರಿಂದ ಹೊರಬಂದು ಪ್ರಗತಿಪರ ಸಂಘಟನೆಗಳ ಜೊತೆ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಸಂಘ ಪರಿವಾರವು ತಮ್ಮ ರಾಜಕೀಯ ಅಧಿಕಾರಕ್ಕಾಗಿ ಶೂದ್ರರನ್ನು ಬಲಿಕೊಟ್ಟು ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಟೀಕಿಸುತ್ತಿದ್ದರು. ಅಲ್ಲದೆ ಹಿಂದುತ್ವದಿಂದ ಬಂಧುತ್ವದೆಡೆಗೆ ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲಿನ ರಾಜಕೀಯ ದ್ವೇಷದ ಕಾರಣಕ್ಕೆ ಬಂಧನ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಶಿವಮೊಗ್ಗದ ಹರ್ಷ ಕೊಲೆ, ಮಂಗಳೂರಿನ ಪ್ರವೀಣ್ ನೆಟ್ಟಾರು ಕೊಲೆ ಕುರಿತು ಸುನೀಲ್ ಬಜಿಲಕೇರಿ ದನಿಯೆತ್ತಿದ್ದರು. ಬಿಜೆಪಿಯಿಂದ ನಾರಾಯಣಗುರುಗಳಿಗಾದ ಅವಮಾನ ಮರೆಸಲು ಹಿಜಾಬ್ ಗಲಭೆ ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದರು. ಈ ಎಲ್ಲಾ ಕಾರಣಗಳಿಗಾಗಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಮಧ್ಯರಾತ್ರಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಲಾಗಿದೆ.

ಸುನೀಲ್ ಬಜಿಲಕೇರಿಯವರ ಬಂಧನ ಅಕ್ರಮ ಮತ್ತು ಅನ್ಯಾಯದ ಪರಮಾವಧಿ ಎಂದು ಕರೆದಿರುವ ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಕೂಡಲೇ ಬಿಡುಗಡೆಗೆ ಆಗ್ರಹಿಸಿದ್ದಾರೆ. “ಮಂಗಳೂರು ನಗರದ ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಟೀಕಾತೀತರಾ? ನರೇಶ್ ಶೆಣೈ ಸೂಪರ್ ಶಾಸಕರಾ? ಇವರ ವಿರುದ್ದ ಮಾತಾಡಿದರೆ ಮಧ್ಯ ರಾತ್ರಿ ಮನೆ ನುಗ್ಗಿ ಸೀದಾ ಜೈಲಿಗಟ್ಟುವುದಾ? ಅದಕ್ಕಾಗಿ ಇಲ್ಲದ ಪ್ರಕರಣ ಸೃಷ್ಟಿಸುವುದಾ? ಕೋರ್ಟಿಗೆ ರಜಾ ಇರುವ ದಿನಗಳನ್ನೇ ಬಂಧನಕ್ಕಾಗಿ ಆಯ್ದು ಕೊಳ್ಳುವುದಾ ? ಮಂಗಳೂರು ಪೊಲೀಸು ಇಲಾಖೆ ಅಂದರೆ ಬಿಜೆಪಿ ಶಾಸಕರ ಕಚೇರಿಯಿಂದ ಬಂದ ಸ್ಕ್ರಿಪ್ಟ್ ಆಧಾರದಲ್ಲಿ ಅವರ ವಿರೋಧಿಗಳ ಬಾಯಿ ಮುಚ್ಚಿಸುವ ಹೊರ ಗುತ್ತಿಗೆ ಏಜನ್ಸಿಯಾ ? ಇವರಿಗೊಂದು ಸ್ವಂತಿಕೆ ಇಲ್ಲವಾ? ಎಂದು ಅವರು ಪ್ರಶ್ನಿಸಿದ್ದಾರೆ.

ಸುನಿಲ್ ಬಜಿಲಕೇರಿ ಬಂಧನ ಅಕ್ರಮ, ಅನ್ಯಾಯದ ಪರಮಾವಧಿ. ಚೀತಾ ಗರ್ಭಿಣಿಯಾದ ವಿಷಯದಲ್ಲಿ ಯಾವುದೇ ರಾಜಕೀಯ ಉಲ್ಲೇಖ ಇಲ್ಲದ ಒಂದು ಸಾಮಾನ್ಯ ಹಾಸ್ಯ ಪೋಸ್ಟ್ ಹಾಕಿದರೆ ಹಿಡಿದು ಜೈಲಿಗೆ ತಳ್ಳುವುದು ಅಂದರೆ ಇದರ ಹುನ್ನಾರ ಅರ್ಥ ಆಗದೆ ಇರುವುದಿಲ್ಲ. ಇವರಿಗೆ ಭಯ ಹುಟ್ಟಿಸಲು ಒಂದು ನೆಪ ಬೇಕು ಅಷ್ಟೆ. ಇದು ಜನಸಾಮಾನ್ಯರಿಗೆ “ಬಾಯಿ ಮುಚ್ಚಿ ಕೂತುಕೊಳ್ಳಿ” ಎಂದು ಬಿಜೆಪಿ ಶಾಸಕರುಗಳು ಹಾಕಿದ ನೇರ ಬೆದರಿಕೆ. ಇದನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು, ಪ್ರತಿಭಟಿಸಬೇಕು. ಇಂದು ಬಜಿಲಕೇರಿ. ನಾಳೆ ನಾವು, ನೀವು ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಸುನೀಲ್ ಬಜಿಲಕೇರಿಯವರು ಇತ್ತೀಚೆಗೆ ಚೀತಾ ಗರ್ಭಿಣಿ ಆಗಿರುವುದು ಎಂಬ ಫೋಟೋ ಹಾಕಿದ್ದರು, ಇದರಲ್ಲಿ ಯಾರ ಭಾವನೆಗಳಿಗೆ ಧಕ್ಕೆ ಆಗುವಂತಹ ವಿಷಯವಿರಲಿಲ್ಲ‌‌. ಆದರೂ ಪೊಲೀಸರು ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದು ಸುನಿಲ್ ಬಜಿಲಕೇರಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ಬಿಲ್ಲವ ಮುಖಂಡರಾದ ಸುನಿಲ್ ಅವರು ಬಿಜೆಪಿಯ ನೈಜ ಮುಖದ ಅನಾವರಣ ಮಾಡುತ್ತಿದ್ದರು. ಆದರೂ ಇಂತಹ ಕ್ಷುಲ್ಲಕ ಕೇಸಿನಲ್ಲಿ ಪೊಲೀಸರು ಬಂಧಿಸುವಂತಿಲ್ಲ ಎಂಬ ಸುಪ್ರೀಂಕೋರ್ಟ್ ಆರ್ಡರ್ ಇದ್ದರೂ ಸಹ ಪೊಲೀಸರು ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಸುನಿಲ್ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತ ಜ್ಞಾನಿ ತಾವರೆಕೆರೆ ತಿಳಿಸಿದ್ದಾರೆ.

ಇದನ್ನೂ ಓದಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಮಾನಗೇಡಿ ಚಡ್ಡಿಗಳ ಪಾದ ಸೇವಕರಾಗಿ ಮಾರ್ಪಟ್ಟಿರುವ ಕರ್ನಾಟಕ ಪೋಲೀಸ್ ಇಲಾಖೆಯವ್ರು ತಮಗೆ ವಿದ್ಯೆ, ಬುದ್ಧಿ, ವಿವೇಕ,ವಿವೇಚನೆ ಯಾವುವೂ ಇಲ್ಲವೆಂಬುದನ್ನು ಪದೇ ಪದೆ ಸಾಬೀತು ಪಡಿಸುತ್ತಿದ್ದಾರೆ. ಸರಕಾರಗಳು ಬದಲಾಗುತ್ತಿರುತ್ತವೆ ಎಂಬುದನ್ನು ಇವರು ನೆನಪಿಟ್ಟುಕೊಳ್ಳಲಿ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...