Homeಕರ್ನಾಟಕಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ; ಆರೆಸ್ಸೆಸ್‌-ಬಿಜೆಪಿ ಬೆಂಬಲಿಗ ಶ್ಯಾಮ ಭಟ್‌ ವಿರುದ್ಧ FIR

ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ; ಆರೆಸ್ಸೆಸ್‌-ಬಿಜೆಪಿ ಬೆಂಬಲಿಗ ಶ್ಯಾಮ ಭಟ್‌ ವಿರುದ್ಧ FIR

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಹೇಳಿಕೆ ನೀಡಿದ್ದ ಬಿಜೆಪಿ ಬೆಂಬಲಿಗ ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ವಿರುದ್ಧ ಶನಿವಾರ ಎಫ್‌ಐಆರ್‌ ದಾಖಲಾಗಿದೆ.

ಸುರತ್ಕಲ್‌‌‌ನಲ್ಲಿ ಬುಧವಾರ ನಡೆದ ಬೃಹತ್‌ ಟೋಲ್‌ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರು ತಮ್ಮ ಬಂಧನ ನಡೆಸುವ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡಾ ಆಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿ ಶ್ಯಾಮ ಸುದರ್ಶನ ಭಟ್‌‌ ‘ಕಹಳೆ ನ್ಯೂಸ್‌’ ಎಂಬ ಬಿಜೆಪಿ ಪರ ಪ್ರೊಪಗಾಂಡ ಸೃಷ್ಟಿಸುವ ವೆಬ್‌ಸೈಟೊಂದರ ಸಂಪಾದಕರಾಗಿದ್ದು, ಪ್ರತಿಭಾ ಅವರು ಪೊಲೀಸರ ವಿರುದ್ಧ ಪ್ರತಿಭಟಿಸುತ್ತಿರುವ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಅವರ ಬಗ್ಗೆ ಅಶ್ಲೀಲವಾಗಿ ಬರೆದುಕೊಂಡು, ಅವರ ಘನತೆಗೆ ಕುಂದುಂಟು ಮಾಡುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರು ನೀಡಿರುವ ದೂರಿನ ಅನ್ವಯ ಆರೋಪಿಯ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಮಹಿಳೆಯ ವಿರುದ್ಧ ಅನುಚಿತ ವರ್ತನೆ ಮತ್ತು ಸೈಬರ್‌ ಕ್ರೈಮ್ ಅಡಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ಪ್ರತಿಭಾ ಕುಳಾಯಿ ಅವರು ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದರು. ಅವರು ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್‌ನ ಮಾಜಿ ಕಾರ್ಪೋರೇಟರ್‌ ಕೂಡಾ ಆಗಿದ್ದಾರೆ.

ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಶಾಸಕರಾದ ಹರೀಶ್ ಪೂಂಜಾ, ಭರತ್‌ ಶೆಟ್ಟಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಬಿಸಿ ನಾಗೇಶ್ ಮತ್ತು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಸೇರಿದಂತೆ ಹಲವರ ಜೊತೆಗೆ ಇರುವ ಚಿತ್ರಗಳು ಕೂಡಾ ವೈರಲ್ ಆಗಿದೆ.

ಇದನ್ನೂ ಓದಿ: ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಿಭಾ ಕುಳಾಯಿ, “ನಾನು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದು ಪ್ರತೀ ಬಾರಿಯೂ ನನ್ನ ಬಿಲ್ಲವ ಸಮುದಾಯ ನನ್ನ ಜೊತೆ ಬೆಂಗಾವಲಾಗಿ ನಿಂತಿದೆ. ನಾನು ಬಿಲ್ಲವ ಸಮುದಾಯದ ನನ್ನ ಅಣ್ಣ ತಮ್ಮಂದಿರಿಗೆ ಏನೇ ಸಮಸ್ಯೆ ಎದುರಾದರೂ ಅವರ ಜೊತೆ ಹಿಂದೆಯೂ ಇದ್ದೆ ಮುಂದೆಯೂ ಇದ್ದೇನೆ” ಎಂದು ಹೇಳಿದ್ದಾರೆ.

“ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟವನ್ನು ನೆಪವಾಗಿಟ್ಟು ತೀರಾ ಅಸಹ್ಯ ರೀತಿಯಲ್ಲಿ ಕಮೆಂಟ್ಸ್, ಪೋಸ್ಟ್ ಮಾಡುತ್ತಿದ್ದಾರೆ. ಈ ಪೋಸ್ಟ್ ನನ್ನ ಸಮುದಾಯದ ಅಣ್ಣ ತಮ್ಮಂದಿರು ಮಾತ್ರವಲ್ಲದೆ ನನಗೆ ಪ್ರತೀ ಬಾರಿ ಸಹಕಾರ ನೀಡುತ್ತಾ ಬಂದಿರುವ ತುಳುನಾಡಿನ ವಿದ್ಯಾವಂತ ಯುವಜನತೆ ಒಮ್ಮೆ ಗಮನಿಸಿದರೆ ಸಾಕು. ಈ ರೀತಿ ಕಮೆಂಟ್ಸ್ ಮಾಡುವವರ ಮನೆಯಲ್ಲೂ ತಾಯಿ, ಅಕ್ಕ, ತಂಗಿ, ಅತ್ತಿಗೆ, ಪತ್ನಿ… ಹೀಗೆ ಯಾರಾದರೂ ‘ಹೆಣ್ಣು’ ಎಂಬ ಪವಿತ್ರ ಸ್ಥಾನ ಪಡೆದ ಜೀವವೊಂದು ಇದ್ದರೆ ಇಂತಹ ಕೆಟ್ಟ ಪದ ಬಳಕೆ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

“ನನ್ನ ಕೋರಿಕೆ ಇಷ್ಟೇ… ನನ್ನ ಹೋರಾಟ, ಸಮುದಾಯದ ಮೇಲಿನ ನನ್ನ ಪ್ರೀತಿ, ಅಭಿಮಾನ ನೀವೆಲ್ಲ ಕಂಡಿದ್ದರೆ ನನ್ನನ್ನು ಈ ಸಂದರ್ಭದಲ್ಲೂ ಬೆಂಬಲಿಸಬೇಕು” ಎಂದು ಪ್ರತಿಭಾ ಕುಳಾಯಿ ವಿನಂತಿಸಿದ್ದಾರೆ.

ಇದನ್ನೂ ಓದಿ: ನಾರಾಯಣಗುರುಗಳ ಪಠ್ಯ ಕೈಬಿಟ್ಟಿದ್ದಕ್ಕೆ ಆಕ್ರೋಶ: ಹೆದ್ದಾರಿ ಬಂದ್ ನಡೆಸಲು ಬಿಲ್ಲವ ಸಮಾಜದ ತಯಾರಿ

ಶ್ಯಾಮ್ ಸುದರ್ಶನ್ ಭಟ್‌‌ನ ಕೃತ್ಯವನ್ನು ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಸಮಿತಿ ಖಂಡಿಸಿದ್ದು, “ಟೋಲ್ ವಿರೋಧಿ ಹೋರಾಟದ ಜನ ಬೆಂಬಲ ಕಂಡು ಬಿಜೆಪಿ ಪರಿವಾರ ಎಷ್ಟು ಕ್ರದ್ಧ ಆಗಿದೆ ಅಂದರೆ, ಹೋರಾಟದಲ್ಲಿ ಭಾಗಿಯಾಗಿರುವ ತುಳುವ ಹೆಣ್ಣು ಮಕ್ಕಳ ಕುರಿತ ‘ಸಭ್ಯ’ ಮುಖವಾಡಗಳೂ ವಿಕಾರವಾಗಿ ಅರಚಾಡತೊಡಗಿದೆ. ಸಮಾಜ ಇದನ್ನೆಲ್ಲಾ ಗಮನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಇದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಸಮಿತಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಪ್ರತಿಭಾ ಕುಳಾಯಿ ಅವರ ಜೊತೆಗೆ ನಿಲ್ಲುತ್ತದೆ” ಎಂದು ಹೋರಾಟ ಸಮಿತಿ ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...