Homeಕರ್ನಾಟಕಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಬಿಜೆಪಿ ಪರ ವೆಬ್‌ಸೈಟೊಂದರ ಮಾಲಿಕನಾಗಿರುವ ಶ್ಯಾಮ ಸುದರ್ಶನ ಭಟ್‌‌ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್‌, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ‘ಕಹಳೆ ನ್ಯೂಸ್‌’ ಎಂಬ ಬಿಜೆಪಿ ಪರ ಪ್ರೊಪಗಾಂಡ ಸೃಷ್ಟಿಸುವ ವೆಬ್‌ಸೈಟೊಂದರ ಸಂಪಾದಕ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಸುರತ್ಕಲ್‌‌‌ನಲ್ಲಿ ಬುಧವಾರ ನಡೆದ ಬೃಹತ್‌ ಟೋಲ್‌ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರು ತಮ್ಮ ಬಂಧನ ನಡೆಸುವ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡಾ ಆಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಹಲೆ ನ್ಯೂಸ್‌‌ ಮಾಲೀಕ ಮತ್ತು ಮುಖ್ಯ ಸಂಪಾದಕ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಎಂಬವರು, ಈ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಅಶ್ಲೀಲವಾಗಿ ಬರೆದುಕೊಂಡಿದ್ದು, ಅವರ ಘನತೆಗೆ ಕುಂದುಂಟು ಮಾಡುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಶಾಸಕರಾದ ಹರೀಶ್ ಪೂಂಜಾ, ಭರತ್‌ ಶೆಟ್ಟಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಬಿಸಿ ನಾಗೇಶ್ ಮತ್ತು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಸೇರಿದಂತೆ ಹಲವರ ಜೊತೆಗೆ ಇರುವ ಚಿತ್ರಗಳು ಕೂಡಾ ವೈರಲ್ ಆಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಿಭಾ ಕುಳಾಯಿ, “ನಾನು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದು ಪ್ರತೀ ಬಾರಿಯೂ ನನ್ನ ಬಿಲ್ಲವ ಸಮುದಾಯ ನನ್ನ ಜೊತೆ ಬೆಂಗಾವಲಾಗಿ ನಿಂತಿದೆ. ನಾನು ಬಿಲ್ಲವ ಸಮುದಾಯದ ನನ್ನ ಅಣ್ಣ ತಮ್ಮಂದಿರಿಗೆ ಏನೇ ಸಮಸ್ಯೆ ಎದುರಾದರೂ ಅವರ ಜೊತೆ ಹಿಂದೆಯೂ ಇದ್ದೆ ಮುಂದೆಯೂ ಇದ್ದೇನೆ” ಎಂದು ಹೇಳಿದ್ದಾರೆ.

“ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟವನ್ನು ನೆಪವಾಗಿಟ್ಟು ತೀರಾ ಅಸಹ್ಯ ರೀತಿಯಲ್ಲಿ ಕಮೆಂಟ್ಸ್, ಪೋಸ್ಟ್ ಮಾಡುತ್ತಿದ್ದಾರೆ. ಈ ಪೋಸ್ಟ್ ನನ್ನ ಸಮುದಾಯದ ಅಣ್ಣ ತಮ್ಮಂದಿರು ಮಾತ್ರವಲ್ಲದೆ ನನಗೆ ಪ್ರತೀ ಬಾರಿ ಸಹಕಾರ ನೀಡುತ್ತಾ ಬಂದಿರುವ ತುಳುನಾಡಿನ ವಿದ್ಯಾವಂತ ಯುವಜನತೆ ಒಮ್ಮೆ ಗಮನಿಸಿದರೆ ಸಾಕು. ಈ ರೀತಿ ಕಮೆಂಟ್ಸ್ ಮಾಡುವವರ ಮನೆಯಲ್ಲೂ ತಾಯಿ, ಅಕ್ಕ, ತಂಗಿ, ಅತ್ತಿಗೆ, ಪತ್ನಿ… ಹೀಗೆ ಯಾರಾದರೂ ‘ಹೆಣ್ಣು’ ಎಂಬ ಪವಿತ್ರ ಸ್ಥಾನ ಪಡೆದ ಜೀವವೊಂದು ಇದ್ದರೆ ಇಂತಹ ಕೆಟ್ಟ ಪದ ಬಳಕೆ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

“ನನ್ನ ಕೋರಿಕೆ ಇಷ್ಟೇ… ನನ್ನ ಹೋರಾಟ, ಸಮುದಾಯದ ಮೇಲಿನ ನನ್ನ ಪ್ರೀತಿ, ಅಭಿಮಾನ ನೀವೆಲ್ಲ ಕಂಡಿದ್ದರೆ ನನ್ನನ್ನು ಈ ಸಂದರ್ಭದಲ್ಲೂ ಬೆಂಬಲಿಸಬೇಕು” ಎಂದು ಪ್ರತಿಭಾ ಕುಳಾಯಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ತಮ್ಮ ಮೇಲಿನ ವೈಯಕ್ತಿಯ ಮತ್ತು ಅಶ್ಲೀಲ ದಾಳಿಯ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪ್ರತಿಭಾ ಕುಳಾಯಿ ಅವರು, ಈ ಬಗ್ಗೆ ಪೊಲೀಸ್ ದೂರು ನೀಡುತ್ತಿದ್ದೇನೆ, ಅದಕ್ಕಾಗಿಯೆ ಪೊಲೀಸ್ ಠಾಣೆಯಲ್ಲಿ ಇದ್ದೇನೆ ಎಂದು ಹೇಳಿದ್ದಾರೆ.

ಶ್ಯಾಮ್ ಸುದರ್ಶನ್ ಭಟ್‌‌ನ ಕೃತ್ಯವನ್ನು ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಸಮಿತಿ ಖಂಡಿಸಿದ್ದು, “ಟೋಲ್ ವಿರೋಧಿ ಹೋರಾಟದ ಜನ ಬೆಂಬಲ ಕಂಡು ಬಿಜೆಪಿ ಪರಿವಾರ ಎಷ್ಟು ಕ್ರದ್ಧ ಆಗಿದೆ ಅಂದರೆ, ಹೋರಾಟದಲ್ಲಿ ಭಾಗಿಯಾಗಿರುವ ತುಳುವ ಹೆಣ್ಣು ಮಕ್ಕಳ ಕುರಿತ ‘ಸಭ್ಯ’ ಮುಖವಾಡಗಳೂ ವಿಕಾರವಾಗಿ ಅರಚಾಡತೊಡಗಿದೆ. ಸಮಾಜ ಇದನ್ನೆಲ್ಲಾ ಗಮನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಇದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಸಮಿತಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಪ್ರತಿಭಾ ಕುಳಾಯಿ ಅವರ ಜೊತೆಗೆ ನಿಲ್ಲುತ್ತದೆ” ಎಂದು ಹೋರಾಟ ಸಮಿತಿ ಘೋಷಿಸಿದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...