Homeಕರ್ನಾಟಕಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಬಿಜೆಪಿ ಪರ ವೆಬ್‌ಸೈಟೊಂದರ ಮಾಲಿಕನಾಗಿರುವ ಶ್ಯಾಮ ಸುದರ್ಶನ ಭಟ್‌‌ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್‌, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ‘ಕಹಳೆ ನ್ಯೂಸ್‌’ ಎಂಬ ಬಿಜೆಪಿ ಪರ ಪ್ರೊಪಗಾಂಡ ಸೃಷ್ಟಿಸುವ ವೆಬ್‌ಸೈಟೊಂದರ ಸಂಪಾದಕ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಸುರತ್ಕಲ್‌‌‌ನಲ್ಲಿ ಬುಧವಾರ ನಡೆದ ಬೃಹತ್‌ ಟೋಲ್‌ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರು ತಮ್ಮ ಬಂಧನ ನಡೆಸುವ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡಾ ಆಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಹಲೆ ನ್ಯೂಸ್‌‌ ಮಾಲೀಕ ಮತ್ತು ಮುಖ್ಯ ಸಂಪಾದಕ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಎಂಬವರು, ಈ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಅಶ್ಲೀಲವಾಗಿ ಬರೆದುಕೊಂಡಿದ್ದು, ಅವರ ಘನತೆಗೆ ಕುಂದುಂಟು ಮಾಡುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಶಾಸಕರಾದ ಹರೀಶ್ ಪೂಂಜಾ, ಭರತ್‌ ಶೆಟ್ಟಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಬಿಸಿ ನಾಗೇಶ್ ಮತ್ತು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಸೇರಿದಂತೆ ಹಲವರ ಜೊತೆಗೆ ಇರುವ ಚಿತ್ರಗಳು ಕೂಡಾ ವೈರಲ್ ಆಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಿಭಾ ಕುಳಾಯಿ, “ನಾನು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದು ಪ್ರತೀ ಬಾರಿಯೂ ನನ್ನ ಬಿಲ್ಲವ ಸಮುದಾಯ ನನ್ನ ಜೊತೆ ಬೆಂಗಾವಲಾಗಿ ನಿಂತಿದೆ. ನಾನು ಬಿಲ್ಲವ ಸಮುದಾಯದ ನನ್ನ ಅಣ್ಣ ತಮ್ಮಂದಿರಿಗೆ ಏನೇ ಸಮಸ್ಯೆ ಎದುರಾದರೂ ಅವರ ಜೊತೆ ಹಿಂದೆಯೂ ಇದ್ದೆ ಮುಂದೆಯೂ ಇದ್ದೇನೆ” ಎಂದು ಹೇಳಿದ್ದಾರೆ.

“ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟವನ್ನು ನೆಪವಾಗಿಟ್ಟು ತೀರಾ ಅಸಹ್ಯ ರೀತಿಯಲ್ಲಿ ಕಮೆಂಟ್ಸ್, ಪೋಸ್ಟ್ ಮಾಡುತ್ತಿದ್ದಾರೆ. ಈ ಪೋಸ್ಟ್ ನನ್ನ ಸಮುದಾಯದ ಅಣ್ಣ ತಮ್ಮಂದಿರು ಮಾತ್ರವಲ್ಲದೆ ನನಗೆ ಪ್ರತೀ ಬಾರಿ ಸಹಕಾರ ನೀಡುತ್ತಾ ಬಂದಿರುವ ತುಳುನಾಡಿನ ವಿದ್ಯಾವಂತ ಯುವಜನತೆ ಒಮ್ಮೆ ಗಮನಿಸಿದರೆ ಸಾಕು. ಈ ರೀತಿ ಕಮೆಂಟ್ಸ್ ಮಾಡುವವರ ಮನೆಯಲ್ಲೂ ತಾಯಿ, ಅಕ್ಕ, ತಂಗಿ, ಅತ್ತಿಗೆ, ಪತ್ನಿ… ಹೀಗೆ ಯಾರಾದರೂ ‘ಹೆಣ್ಣು’ ಎಂಬ ಪವಿತ್ರ ಸ್ಥಾನ ಪಡೆದ ಜೀವವೊಂದು ಇದ್ದರೆ ಇಂತಹ ಕೆಟ್ಟ ಪದ ಬಳಕೆ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

“ನನ್ನ ಕೋರಿಕೆ ಇಷ್ಟೇ… ನನ್ನ ಹೋರಾಟ, ಸಮುದಾಯದ ಮೇಲಿನ ನನ್ನ ಪ್ರೀತಿ, ಅಭಿಮಾನ ನೀವೆಲ್ಲ ಕಂಡಿದ್ದರೆ ನನ್ನನ್ನು ಈ ಸಂದರ್ಭದಲ್ಲೂ ಬೆಂಬಲಿಸಬೇಕು” ಎಂದು ಪ್ರತಿಭಾ ಕುಳಾಯಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ತಮ್ಮ ಮೇಲಿನ ವೈಯಕ್ತಿಯ ಮತ್ತು ಅಶ್ಲೀಲ ದಾಳಿಯ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪ್ರತಿಭಾ ಕುಳಾಯಿ ಅವರು, ಈ ಬಗ್ಗೆ ಪೊಲೀಸ್ ದೂರು ನೀಡುತ್ತಿದ್ದೇನೆ, ಅದಕ್ಕಾಗಿಯೆ ಪೊಲೀಸ್ ಠಾಣೆಯಲ್ಲಿ ಇದ್ದೇನೆ ಎಂದು ಹೇಳಿದ್ದಾರೆ.

ಶ್ಯಾಮ್ ಸುದರ್ಶನ್ ಭಟ್‌‌ನ ಕೃತ್ಯವನ್ನು ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಸಮಿತಿ ಖಂಡಿಸಿದ್ದು, “ಟೋಲ್ ವಿರೋಧಿ ಹೋರಾಟದ ಜನ ಬೆಂಬಲ ಕಂಡು ಬಿಜೆಪಿ ಪರಿವಾರ ಎಷ್ಟು ಕ್ರದ್ಧ ಆಗಿದೆ ಅಂದರೆ, ಹೋರಾಟದಲ್ಲಿ ಭಾಗಿಯಾಗಿರುವ ತುಳುವ ಹೆಣ್ಣು ಮಕ್ಕಳ ಕುರಿತ ‘ಸಭ್ಯ’ ಮುಖವಾಡಗಳೂ ವಿಕಾರವಾಗಿ ಅರಚಾಡತೊಡಗಿದೆ. ಸಮಾಜ ಇದನ್ನೆಲ್ಲಾ ಗಮನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಇದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಸಮಿತಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಪ್ರತಿಭಾ ಕುಳಾಯಿ ಅವರ ಜೊತೆಗೆ ನಿಲ್ಲುತ್ತದೆ” ಎಂದು ಹೋರಾಟ ಸಮಿತಿ ಘೋಷಿಸಿದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...