Homeಕರ್ನಾಟಕಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಬಿಜೆಪಿ ಪರ ವೆಬ್‌ಸೈಟೊಂದರ ಮಾಲಿಕನಾಗಿರುವ ಶ್ಯಾಮ ಸುದರ್ಶನ ಭಟ್‌‌ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್‌, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ‘ಕಹಳೆ ನ್ಯೂಸ್‌’ ಎಂಬ ಬಿಜೆಪಿ ಪರ ಪ್ರೊಪಗಾಂಡ ಸೃಷ್ಟಿಸುವ ವೆಬ್‌ಸೈಟೊಂದರ ಸಂಪಾದಕ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಸುರತ್ಕಲ್‌‌‌ನಲ್ಲಿ ಬುಧವಾರ ನಡೆದ ಬೃಹತ್‌ ಟೋಲ್‌ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರು ತಮ್ಮ ಬಂಧನ ನಡೆಸುವ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡಾ ಆಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಹಲೆ ನ್ಯೂಸ್‌‌ ಮಾಲೀಕ ಮತ್ತು ಮುಖ್ಯ ಸಂಪಾದಕ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಎಂಬವರು, ಈ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಅಶ್ಲೀಲವಾಗಿ ಬರೆದುಕೊಂಡಿದ್ದು, ಅವರ ಘನತೆಗೆ ಕುಂದುಂಟು ಮಾಡುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಶಾಸಕರಾದ ಹರೀಶ್ ಪೂಂಜಾ, ಭರತ್‌ ಶೆಟ್ಟಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಬಿಸಿ ನಾಗೇಶ್ ಮತ್ತು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಸೇರಿದಂತೆ ಹಲವರ ಜೊತೆಗೆ ಇರುವ ಚಿತ್ರಗಳು ಕೂಡಾ ವೈರಲ್ ಆಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಿಭಾ ಕುಳಾಯಿ, “ನಾನು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದು ಪ್ರತೀ ಬಾರಿಯೂ ನನ್ನ ಬಿಲ್ಲವ ಸಮುದಾಯ ನನ್ನ ಜೊತೆ ಬೆಂಗಾವಲಾಗಿ ನಿಂತಿದೆ. ನಾನು ಬಿಲ್ಲವ ಸಮುದಾಯದ ನನ್ನ ಅಣ್ಣ ತಮ್ಮಂದಿರಿಗೆ ಏನೇ ಸಮಸ್ಯೆ ಎದುರಾದರೂ ಅವರ ಜೊತೆ ಹಿಂದೆಯೂ ಇದ್ದೆ ಮುಂದೆಯೂ ಇದ್ದೇನೆ” ಎಂದು ಹೇಳಿದ್ದಾರೆ.

“ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟವನ್ನು ನೆಪವಾಗಿಟ್ಟು ತೀರಾ ಅಸಹ್ಯ ರೀತಿಯಲ್ಲಿ ಕಮೆಂಟ್ಸ್, ಪೋಸ್ಟ್ ಮಾಡುತ್ತಿದ್ದಾರೆ. ಈ ಪೋಸ್ಟ್ ನನ್ನ ಸಮುದಾಯದ ಅಣ್ಣ ತಮ್ಮಂದಿರು ಮಾತ್ರವಲ್ಲದೆ ನನಗೆ ಪ್ರತೀ ಬಾರಿ ಸಹಕಾರ ನೀಡುತ್ತಾ ಬಂದಿರುವ ತುಳುನಾಡಿನ ವಿದ್ಯಾವಂತ ಯುವಜನತೆ ಒಮ್ಮೆ ಗಮನಿಸಿದರೆ ಸಾಕು. ಈ ರೀತಿ ಕಮೆಂಟ್ಸ್ ಮಾಡುವವರ ಮನೆಯಲ್ಲೂ ತಾಯಿ, ಅಕ್ಕ, ತಂಗಿ, ಅತ್ತಿಗೆ, ಪತ್ನಿ… ಹೀಗೆ ಯಾರಾದರೂ ‘ಹೆಣ್ಣು’ ಎಂಬ ಪವಿತ್ರ ಸ್ಥಾನ ಪಡೆದ ಜೀವವೊಂದು ಇದ್ದರೆ ಇಂತಹ ಕೆಟ್ಟ ಪದ ಬಳಕೆ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

“ನನ್ನ ಕೋರಿಕೆ ಇಷ್ಟೇ… ನನ್ನ ಹೋರಾಟ, ಸಮುದಾಯದ ಮೇಲಿನ ನನ್ನ ಪ್ರೀತಿ, ಅಭಿಮಾನ ನೀವೆಲ್ಲ ಕಂಡಿದ್ದರೆ ನನ್ನನ್ನು ಈ ಸಂದರ್ಭದಲ್ಲೂ ಬೆಂಬಲಿಸಬೇಕು” ಎಂದು ಪ್ರತಿಭಾ ಕುಳಾಯಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ತಮ್ಮ ಮೇಲಿನ ವೈಯಕ್ತಿಯ ಮತ್ತು ಅಶ್ಲೀಲ ದಾಳಿಯ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪ್ರತಿಭಾ ಕುಳಾಯಿ ಅವರು, ಈ ಬಗ್ಗೆ ಪೊಲೀಸ್ ದೂರು ನೀಡುತ್ತಿದ್ದೇನೆ, ಅದಕ್ಕಾಗಿಯೆ ಪೊಲೀಸ್ ಠಾಣೆಯಲ್ಲಿ ಇದ್ದೇನೆ ಎಂದು ಹೇಳಿದ್ದಾರೆ.

ಶ್ಯಾಮ್ ಸುದರ್ಶನ್ ಭಟ್‌‌ನ ಕೃತ್ಯವನ್ನು ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಸಮಿತಿ ಖಂಡಿಸಿದ್ದು, “ಟೋಲ್ ವಿರೋಧಿ ಹೋರಾಟದ ಜನ ಬೆಂಬಲ ಕಂಡು ಬಿಜೆಪಿ ಪರಿವಾರ ಎಷ್ಟು ಕ್ರದ್ಧ ಆಗಿದೆ ಅಂದರೆ, ಹೋರಾಟದಲ್ಲಿ ಭಾಗಿಯಾಗಿರುವ ತುಳುವ ಹೆಣ್ಣು ಮಕ್ಕಳ ಕುರಿತ ‘ಸಭ್ಯ’ ಮುಖವಾಡಗಳೂ ವಿಕಾರವಾಗಿ ಅರಚಾಡತೊಡಗಿದೆ. ಸಮಾಜ ಇದನ್ನೆಲ್ಲಾ ಗಮನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಇದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಸಮಿತಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಪ್ರತಿಭಾ ಕುಳಾಯಿ ಅವರ ಜೊತೆಗೆ ನಿಲ್ಲುತ್ತದೆ” ಎಂದು ಹೋರಾಟ ಸಮಿತಿ ಘೋಷಿಸಿದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...