Homeಕರ್ನಾಟಕಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಬಿಜೆಪಿ ಪರ ವೆಬ್‌ಸೈಟೊಂದರ ಮಾಲಿಕನಾಗಿರುವ ಶ್ಯಾಮ ಸುದರ್ಶನ ಭಟ್‌‌ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್‌, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ‘ಕಹಳೆ ನ್ಯೂಸ್‌’ ಎಂಬ ಬಿಜೆಪಿ ಪರ ಪ್ರೊಪಗಾಂಡ ಸೃಷ್ಟಿಸುವ ವೆಬ್‌ಸೈಟೊಂದರ ಸಂಪಾದಕ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಸುರತ್ಕಲ್‌‌‌ನಲ್ಲಿ ಬುಧವಾರ ನಡೆದ ಬೃಹತ್‌ ಟೋಲ್‌ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರು ತಮ್ಮ ಬಂಧನ ನಡೆಸುವ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡಾ ಆಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಹಲೆ ನ್ಯೂಸ್‌‌ ಮಾಲೀಕ ಮತ್ತು ಮುಖ್ಯ ಸಂಪಾದಕ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಎಂಬವರು, ಈ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಅಶ್ಲೀಲವಾಗಿ ಬರೆದುಕೊಂಡಿದ್ದು, ಅವರ ಘನತೆಗೆ ಕುಂದುಂಟು ಮಾಡುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಶಾಸಕರಾದ ಹರೀಶ್ ಪೂಂಜಾ, ಭರತ್‌ ಶೆಟ್ಟಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಬಿಸಿ ನಾಗೇಶ್ ಮತ್ತು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಸೇರಿದಂತೆ ಹಲವರ ಜೊತೆಗೆ ಇರುವ ಚಿತ್ರಗಳು ಕೂಡಾ ವೈರಲ್ ಆಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಿಭಾ ಕುಳಾಯಿ, “ನಾನು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದು ಪ್ರತೀ ಬಾರಿಯೂ ನನ್ನ ಬಿಲ್ಲವ ಸಮುದಾಯ ನನ್ನ ಜೊತೆ ಬೆಂಗಾವಲಾಗಿ ನಿಂತಿದೆ. ನಾನು ಬಿಲ್ಲವ ಸಮುದಾಯದ ನನ್ನ ಅಣ್ಣ ತಮ್ಮಂದಿರಿಗೆ ಏನೇ ಸಮಸ್ಯೆ ಎದುರಾದರೂ ಅವರ ಜೊತೆ ಹಿಂದೆಯೂ ಇದ್ದೆ ಮುಂದೆಯೂ ಇದ್ದೇನೆ” ಎಂದು ಹೇಳಿದ್ದಾರೆ.

“ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟವನ್ನು ನೆಪವಾಗಿಟ್ಟು ತೀರಾ ಅಸಹ್ಯ ರೀತಿಯಲ್ಲಿ ಕಮೆಂಟ್ಸ್, ಪೋಸ್ಟ್ ಮಾಡುತ್ತಿದ್ದಾರೆ. ಈ ಪೋಸ್ಟ್ ನನ್ನ ಸಮುದಾಯದ ಅಣ್ಣ ತಮ್ಮಂದಿರು ಮಾತ್ರವಲ್ಲದೆ ನನಗೆ ಪ್ರತೀ ಬಾರಿ ಸಹಕಾರ ನೀಡುತ್ತಾ ಬಂದಿರುವ ತುಳುನಾಡಿನ ವಿದ್ಯಾವಂತ ಯುವಜನತೆ ಒಮ್ಮೆ ಗಮನಿಸಿದರೆ ಸಾಕು. ಈ ರೀತಿ ಕಮೆಂಟ್ಸ್ ಮಾಡುವವರ ಮನೆಯಲ್ಲೂ ತಾಯಿ, ಅಕ್ಕ, ತಂಗಿ, ಅತ್ತಿಗೆ, ಪತ್ನಿ… ಹೀಗೆ ಯಾರಾದರೂ ‘ಹೆಣ್ಣು’ ಎಂಬ ಪವಿತ್ರ ಸ್ಥಾನ ಪಡೆದ ಜೀವವೊಂದು ಇದ್ದರೆ ಇಂತಹ ಕೆಟ್ಟ ಪದ ಬಳಕೆ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

“ನನ್ನ ಕೋರಿಕೆ ಇಷ್ಟೇ… ನನ್ನ ಹೋರಾಟ, ಸಮುದಾಯದ ಮೇಲಿನ ನನ್ನ ಪ್ರೀತಿ, ಅಭಿಮಾನ ನೀವೆಲ್ಲ ಕಂಡಿದ್ದರೆ ನನ್ನನ್ನು ಈ ಸಂದರ್ಭದಲ್ಲೂ ಬೆಂಬಲಿಸಬೇಕು” ಎಂದು ಪ್ರತಿಭಾ ಕುಳಾಯಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ತಮ್ಮ ಮೇಲಿನ ವೈಯಕ್ತಿಯ ಮತ್ತು ಅಶ್ಲೀಲ ದಾಳಿಯ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪ್ರತಿಭಾ ಕುಳಾಯಿ ಅವರು, ಈ ಬಗ್ಗೆ ಪೊಲೀಸ್ ದೂರು ನೀಡುತ್ತಿದ್ದೇನೆ, ಅದಕ್ಕಾಗಿಯೆ ಪೊಲೀಸ್ ಠಾಣೆಯಲ್ಲಿ ಇದ್ದೇನೆ ಎಂದು ಹೇಳಿದ್ದಾರೆ.

ಶ್ಯಾಮ್ ಸುದರ್ಶನ್ ಭಟ್‌‌ನ ಕೃತ್ಯವನ್ನು ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಸಮಿತಿ ಖಂಡಿಸಿದ್ದು, “ಟೋಲ್ ವಿರೋಧಿ ಹೋರಾಟದ ಜನ ಬೆಂಬಲ ಕಂಡು ಬಿಜೆಪಿ ಪರಿವಾರ ಎಷ್ಟು ಕ್ರದ್ಧ ಆಗಿದೆ ಅಂದರೆ, ಹೋರಾಟದಲ್ಲಿ ಭಾಗಿಯಾಗಿರುವ ತುಳುವ ಹೆಣ್ಣು ಮಕ್ಕಳ ಕುರಿತ ‘ಸಭ್ಯ’ ಮುಖವಾಡಗಳೂ ವಿಕಾರವಾಗಿ ಅರಚಾಡತೊಡಗಿದೆ. ಸಮಾಜ ಇದನ್ನೆಲ್ಲಾ ಗಮನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಇದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಸಮಿತಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಪ್ರತಿಭಾ ಕುಳಾಯಿ ಅವರ ಜೊತೆಗೆ ನಿಲ್ಲುತ್ತದೆ” ಎಂದು ಹೋರಾಟ ಸಮಿತಿ ಘೋಷಿಸಿದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...