Homeಕರ್ನಾಟಕಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಬಿಜೆಪಿ ಪರ ವೆಬ್‌ಸೈಟೊಂದರ ಮಾಲಿಕನಾಗಿರುವ ಶ್ಯಾಮ ಸುದರ್ಶನ ಭಟ್‌‌ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್‌, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ‘ಕಹಳೆ ನ್ಯೂಸ್‌’ ಎಂಬ ಬಿಜೆಪಿ ಪರ ಪ್ರೊಪಗಾಂಡ ಸೃಷ್ಟಿಸುವ ವೆಬ್‌ಸೈಟೊಂದರ ಸಂಪಾದಕ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಸುರತ್ಕಲ್‌‌‌ನಲ್ಲಿ ಬುಧವಾರ ನಡೆದ ಬೃಹತ್‌ ಟೋಲ್‌ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರು ತಮ್ಮ ಬಂಧನ ನಡೆಸುವ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡಾ ಆಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಹಲೆ ನ್ಯೂಸ್‌‌ ಮಾಲೀಕ ಮತ್ತು ಮುಖ್ಯ ಸಂಪಾದಕ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಎಂಬವರು, ಈ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಅಶ್ಲೀಲವಾಗಿ ಬರೆದುಕೊಂಡಿದ್ದು, ಅವರ ಘನತೆಗೆ ಕುಂದುಂಟು ಮಾಡುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಶಾಸಕರಾದ ಹರೀಶ್ ಪೂಂಜಾ, ಭರತ್‌ ಶೆಟ್ಟಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಬಿಸಿ ನಾಗೇಶ್ ಮತ್ತು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಸೇರಿದಂತೆ ಹಲವರ ಜೊತೆಗೆ ಇರುವ ಚಿತ್ರಗಳು ಕೂಡಾ ವೈರಲ್ ಆಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಿಭಾ ಕುಳಾಯಿ, “ನಾನು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದು ಪ್ರತೀ ಬಾರಿಯೂ ನನ್ನ ಬಿಲ್ಲವ ಸಮುದಾಯ ನನ್ನ ಜೊತೆ ಬೆಂಗಾವಲಾಗಿ ನಿಂತಿದೆ. ನಾನು ಬಿಲ್ಲವ ಸಮುದಾಯದ ನನ್ನ ಅಣ್ಣ ತಮ್ಮಂದಿರಿಗೆ ಏನೇ ಸಮಸ್ಯೆ ಎದುರಾದರೂ ಅವರ ಜೊತೆ ಹಿಂದೆಯೂ ಇದ್ದೆ ಮುಂದೆಯೂ ಇದ್ದೇನೆ” ಎಂದು ಹೇಳಿದ್ದಾರೆ.

“ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟವನ್ನು ನೆಪವಾಗಿಟ್ಟು ತೀರಾ ಅಸಹ್ಯ ರೀತಿಯಲ್ಲಿ ಕಮೆಂಟ್ಸ್, ಪೋಸ್ಟ್ ಮಾಡುತ್ತಿದ್ದಾರೆ. ಈ ಪೋಸ್ಟ್ ನನ್ನ ಸಮುದಾಯದ ಅಣ್ಣ ತಮ್ಮಂದಿರು ಮಾತ್ರವಲ್ಲದೆ ನನಗೆ ಪ್ರತೀ ಬಾರಿ ಸಹಕಾರ ನೀಡುತ್ತಾ ಬಂದಿರುವ ತುಳುನಾಡಿನ ವಿದ್ಯಾವಂತ ಯುವಜನತೆ ಒಮ್ಮೆ ಗಮನಿಸಿದರೆ ಸಾಕು. ಈ ರೀತಿ ಕಮೆಂಟ್ಸ್ ಮಾಡುವವರ ಮನೆಯಲ್ಲೂ ತಾಯಿ, ಅಕ್ಕ, ತಂಗಿ, ಅತ್ತಿಗೆ, ಪತ್ನಿ… ಹೀಗೆ ಯಾರಾದರೂ ‘ಹೆಣ್ಣು’ ಎಂಬ ಪವಿತ್ರ ಸ್ಥಾನ ಪಡೆದ ಜೀವವೊಂದು ಇದ್ದರೆ ಇಂತಹ ಕೆಟ್ಟ ಪದ ಬಳಕೆ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

“ನನ್ನ ಕೋರಿಕೆ ಇಷ್ಟೇ… ನನ್ನ ಹೋರಾಟ, ಸಮುದಾಯದ ಮೇಲಿನ ನನ್ನ ಪ್ರೀತಿ, ಅಭಿಮಾನ ನೀವೆಲ್ಲ ಕಂಡಿದ್ದರೆ ನನ್ನನ್ನು ಈ ಸಂದರ್ಭದಲ್ಲೂ ಬೆಂಬಲಿಸಬೇಕು” ಎಂದು ಪ್ರತಿಭಾ ಕುಳಾಯಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ತಮ್ಮ ಮೇಲಿನ ವೈಯಕ್ತಿಯ ಮತ್ತು ಅಶ್ಲೀಲ ದಾಳಿಯ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪ್ರತಿಭಾ ಕುಳಾಯಿ ಅವರು, ಈ ಬಗ್ಗೆ ಪೊಲೀಸ್ ದೂರು ನೀಡುತ್ತಿದ್ದೇನೆ, ಅದಕ್ಕಾಗಿಯೆ ಪೊಲೀಸ್ ಠಾಣೆಯಲ್ಲಿ ಇದ್ದೇನೆ ಎಂದು ಹೇಳಿದ್ದಾರೆ.

ಶ್ಯಾಮ್ ಸುದರ್ಶನ್ ಭಟ್‌‌ನ ಕೃತ್ಯವನ್ನು ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಸಮಿತಿ ಖಂಡಿಸಿದ್ದು, “ಟೋಲ್ ವಿರೋಧಿ ಹೋರಾಟದ ಜನ ಬೆಂಬಲ ಕಂಡು ಬಿಜೆಪಿ ಪರಿವಾರ ಎಷ್ಟು ಕ್ರದ್ಧ ಆಗಿದೆ ಅಂದರೆ, ಹೋರಾಟದಲ್ಲಿ ಭಾಗಿಯಾಗಿರುವ ತುಳುವ ಹೆಣ್ಣು ಮಕ್ಕಳ ಕುರಿತ ‘ಸಭ್ಯ’ ಮುಖವಾಡಗಳೂ ವಿಕಾರವಾಗಿ ಅರಚಾಡತೊಡಗಿದೆ. ಸಮಾಜ ಇದನ್ನೆಲ್ಲಾ ಗಮನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಇದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಸಮಿತಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಪ್ರತಿಭಾ ಕುಳಾಯಿ ಅವರ ಜೊತೆಗೆ ನಿಲ್ಲುತ್ತದೆ” ಎಂದು ಹೋರಾಟ ಸಮಿತಿ ಘೋಷಿಸಿದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...

“ದಲಿತ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ..’ ಬಿಜೆಪಿಯ ರಾಜೀನಾಮೆ ಬೇಡಿಕೆಗೆ ಸಚಿವ ಬಿ. ನಾಗೇಂದ್ರ ತಿರುಗೇಟು

"ನಾನು ದಲಿತ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಸಚಿವ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪಟ್ಟು ಹಿಡಿದಿರುವ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. "ಕೇಂದ್ರ ಸಚಿವರು...

ಉತ್ತರ ಪ್ರದೇಶ : ಮಾಜಿ ಸಚಿವ ಆಝಂ ಖಾನ್, ಮೊಹಮ್ಮದ್ ಅಲಿ ಜೌಹರ್ ವಿವಿಗೆ ಸೇರಿದ 10 ಸ್ಥಳಗಳಲ್ಲಿ ಇಡಿ ಶೋಧ

ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ (ಆ.19) ಉತ್ತರ ಪ್ರದೇಶದ ರಾಂಪುರ, ಸಹಾರನ್‌ಪುರ ಮತ್ತು ದೆಹಲಿಯಲ್ಲಿ ಶೋಧ ನಡೆಸಿದೆ. ವರದಿಗಳ ಪ್ರಕಾರ, ಹಣ ಅಕ್ರಮ...

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ರದ್ದು: ಹೈಕೋರ್ಟ್‌ನಿಂದ ಮರುನೇಮಕಕ್ಕೆ ಆದೇಶ

ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ...