Homeಕರ್ನಾಟಕಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಬಿಜೆಪಿ ಪರ ವೆಬ್‌ಸೈಟೊಂದರ ಮಾಲಿಕನಾಗಿರುವ ಶ್ಯಾಮ ಸುದರ್ಶನ ಭಟ್‌‌ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್‌, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ‘ಕಹಳೆ ನ್ಯೂಸ್‌’ ಎಂಬ ಬಿಜೆಪಿ ಪರ ಪ್ರೊಪಗಾಂಡ ಸೃಷ್ಟಿಸುವ ವೆಬ್‌ಸೈಟೊಂದರ ಸಂಪಾದಕ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಸುರತ್ಕಲ್‌‌‌ನಲ್ಲಿ ಬುಧವಾರ ನಡೆದ ಬೃಹತ್‌ ಟೋಲ್‌ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರು ತಮ್ಮ ಬಂಧನ ನಡೆಸುವ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡಾ ಆಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಹಲೆ ನ್ಯೂಸ್‌‌ ಮಾಲೀಕ ಮತ್ತು ಮುಖ್ಯ ಸಂಪಾದಕ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಎಂಬವರು, ಈ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಅಶ್ಲೀಲವಾಗಿ ಬರೆದುಕೊಂಡಿದ್ದು, ಅವರ ಘನತೆಗೆ ಕುಂದುಂಟು ಮಾಡುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಶಾಸಕರಾದ ಹರೀಶ್ ಪೂಂಜಾ, ಭರತ್‌ ಶೆಟ್ಟಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಬಿಸಿ ನಾಗೇಶ್ ಮತ್ತು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಸೇರಿದಂತೆ ಹಲವರ ಜೊತೆಗೆ ಇರುವ ಚಿತ್ರಗಳು ಕೂಡಾ ವೈರಲ್ ಆಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಿಭಾ ಕುಳಾಯಿ, “ನಾನು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದು ಪ್ರತೀ ಬಾರಿಯೂ ನನ್ನ ಬಿಲ್ಲವ ಸಮುದಾಯ ನನ್ನ ಜೊತೆ ಬೆಂಗಾವಲಾಗಿ ನಿಂತಿದೆ. ನಾನು ಬಿಲ್ಲವ ಸಮುದಾಯದ ನನ್ನ ಅಣ್ಣ ತಮ್ಮಂದಿರಿಗೆ ಏನೇ ಸಮಸ್ಯೆ ಎದುರಾದರೂ ಅವರ ಜೊತೆ ಹಿಂದೆಯೂ ಇದ್ದೆ ಮುಂದೆಯೂ ಇದ್ದೇನೆ” ಎಂದು ಹೇಳಿದ್ದಾರೆ.

“ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟವನ್ನು ನೆಪವಾಗಿಟ್ಟು ತೀರಾ ಅಸಹ್ಯ ರೀತಿಯಲ್ಲಿ ಕಮೆಂಟ್ಸ್, ಪೋಸ್ಟ್ ಮಾಡುತ್ತಿದ್ದಾರೆ. ಈ ಪೋಸ್ಟ್ ನನ್ನ ಸಮುದಾಯದ ಅಣ್ಣ ತಮ್ಮಂದಿರು ಮಾತ್ರವಲ್ಲದೆ ನನಗೆ ಪ್ರತೀ ಬಾರಿ ಸಹಕಾರ ನೀಡುತ್ತಾ ಬಂದಿರುವ ತುಳುನಾಡಿನ ವಿದ್ಯಾವಂತ ಯುವಜನತೆ ಒಮ್ಮೆ ಗಮನಿಸಿದರೆ ಸಾಕು. ಈ ರೀತಿ ಕಮೆಂಟ್ಸ್ ಮಾಡುವವರ ಮನೆಯಲ್ಲೂ ತಾಯಿ, ಅಕ್ಕ, ತಂಗಿ, ಅತ್ತಿಗೆ, ಪತ್ನಿ… ಹೀಗೆ ಯಾರಾದರೂ ‘ಹೆಣ್ಣು’ ಎಂಬ ಪವಿತ್ರ ಸ್ಥಾನ ಪಡೆದ ಜೀವವೊಂದು ಇದ್ದರೆ ಇಂತಹ ಕೆಟ್ಟ ಪದ ಬಳಕೆ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

“ನನ್ನ ಕೋರಿಕೆ ಇಷ್ಟೇ… ನನ್ನ ಹೋರಾಟ, ಸಮುದಾಯದ ಮೇಲಿನ ನನ್ನ ಪ್ರೀತಿ, ಅಭಿಮಾನ ನೀವೆಲ್ಲ ಕಂಡಿದ್ದರೆ ನನ್ನನ್ನು ಈ ಸಂದರ್ಭದಲ್ಲೂ ಬೆಂಬಲಿಸಬೇಕು” ಎಂದು ಪ್ರತಿಭಾ ಕುಳಾಯಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ತಮ್ಮ ಮೇಲಿನ ವೈಯಕ್ತಿಯ ಮತ್ತು ಅಶ್ಲೀಲ ದಾಳಿಯ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪ್ರತಿಭಾ ಕುಳಾಯಿ ಅವರು, ಈ ಬಗ್ಗೆ ಪೊಲೀಸ್ ದೂರು ನೀಡುತ್ತಿದ್ದೇನೆ, ಅದಕ್ಕಾಗಿಯೆ ಪೊಲೀಸ್ ಠಾಣೆಯಲ್ಲಿ ಇದ್ದೇನೆ ಎಂದು ಹೇಳಿದ್ದಾರೆ.

ಶ್ಯಾಮ್ ಸುದರ್ಶನ್ ಭಟ್‌‌ನ ಕೃತ್ಯವನ್ನು ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಸಮಿತಿ ಖಂಡಿಸಿದ್ದು, “ಟೋಲ್ ವಿರೋಧಿ ಹೋರಾಟದ ಜನ ಬೆಂಬಲ ಕಂಡು ಬಿಜೆಪಿ ಪರಿವಾರ ಎಷ್ಟು ಕ್ರದ್ಧ ಆಗಿದೆ ಅಂದರೆ, ಹೋರಾಟದಲ್ಲಿ ಭಾಗಿಯಾಗಿರುವ ತುಳುವ ಹೆಣ್ಣು ಮಕ್ಕಳ ಕುರಿತ ‘ಸಭ್ಯ’ ಮುಖವಾಡಗಳೂ ವಿಕಾರವಾಗಿ ಅರಚಾಡತೊಡಗಿದೆ. ಸಮಾಜ ಇದನ್ನೆಲ್ಲಾ ಗಮನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಇದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಸಮಿತಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಪ್ರತಿಭಾ ಕುಳಾಯಿ ಅವರ ಜೊತೆಗೆ ನಿಲ್ಲುತ್ತದೆ” ಎಂದು ಹೋರಾಟ ಸಮಿತಿ ಘೋಷಿಸಿದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...