Homeಕರ್ನಾಟಕಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಬಿಜೆಪಿ ಪರ ವೆಬ್‌ಸೈಟೊಂದರ ಮಾಲಿಕನಾಗಿರುವ ಶ್ಯಾಮ ಸುದರ್ಶನ ಭಟ್‌‌ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್‌, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ‘ಕಹಳೆ ನ್ಯೂಸ್‌’ ಎಂಬ ಬಿಜೆಪಿ ಪರ ಪ್ರೊಪಗಾಂಡ ಸೃಷ್ಟಿಸುವ ವೆಬ್‌ಸೈಟೊಂದರ ಸಂಪಾದಕ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಸುರತ್ಕಲ್‌‌‌ನಲ್ಲಿ ಬುಧವಾರ ನಡೆದ ಬೃಹತ್‌ ಟೋಲ್‌ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರು ತಮ್ಮ ಬಂಧನ ನಡೆಸುವ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡಾ ಆಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಹಲೆ ನ್ಯೂಸ್‌‌ ಮಾಲೀಕ ಮತ್ತು ಮುಖ್ಯ ಸಂಪಾದಕ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಎಂಬವರು, ಈ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಅಶ್ಲೀಲವಾಗಿ ಬರೆದುಕೊಂಡಿದ್ದು, ಅವರ ಘನತೆಗೆ ಕುಂದುಂಟು ಮಾಡುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಶಾಸಕರಾದ ಹರೀಶ್ ಪೂಂಜಾ, ಭರತ್‌ ಶೆಟ್ಟಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಬಿಸಿ ನಾಗೇಶ್ ಮತ್ತು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಸೇರಿದಂತೆ ಹಲವರ ಜೊತೆಗೆ ಇರುವ ಚಿತ್ರಗಳು ಕೂಡಾ ವೈರಲ್ ಆಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಿಭಾ ಕುಳಾಯಿ, “ನಾನು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದು ಪ್ರತೀ ಬಾರಿಯೂ ನನ್ನ ಬಿಲ್ಲವ ಸಮುದಾಯ ನನ್ನ ಜೊತೆ ಬೆಂಗಾವಲಾಗಿ ನಿಂತಿದೆ. ನಾನು ಬಿಲ್ಲವ ಸಮುದಾಯದ ನನ್ನ ಅಣ್ಣ ತಮ್ಮಂದಿರಿಗೆ ಏನೇ ಸಮಸ್ಯೆ ಎದುರಾದರೂ ಅವರ ಜೊತೆ ಹಿಂದೆಯೂ ಇದ್ದೆ ಮುಂದೆಯೂ ಇದ್ದೇನೆ” ಎಂದು ಹೇಳಿದ್ದಾರೆ.

“ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟವನ್ನು ನೆಪವಾಗಿಟ್ಟು ತೀರಾ ಅಸಹ್ಯ ರೀತಿಯಲ್ಲಿ ಕಮೆಂಟ್ಸ್, ಪೋಸ್ಟ್ ಮಾಡುತ್ತಿದ್ದಾರೆ. ಈ ಪೋಸ್ಟ್ ನನ್ನ ಸಮುದಾಯದ ಅಣ್ಣ ತಮ್ಮಂದಿರು ಮಾತ್ರವಲ್ಲದೆ ನನಗೆ ಪ್ರತೀ ಬಾರಿ ಸಹಕಾರ ನೀಡುತ್ತಾ ಬಂದಿರುವ ತುಳುನಾಡಿನ ವಿದ್ಯಾವಂತ ಯುವಜನತೆ ಒಮ್ಮೆ ಗಮನಿಸಿದರೆ ಸಾಕು. ಈ ರೀತಿ ಕಮೆಂಟ್ಸ್ ಮಾಡುವವರ ಮನೆಯಲ್ಲೂ ತಾಯಿ, ಅಕ್ಕ, ತಂಗಿ, ಅತ್ತಿಗೆ, ಪತ್ನಿ… ಹೀಗೆ ಯಾರಾದರೂ ‘ಹೆಣ್ಣು’ ಎಂಬ ಪವಿತ್ರ ಸ್ಥಾನ ಪಡೆದ ಜೀವವೊಂದು ಇದ್ದರೆ ಇಂತಹ ಕೆಟ್ಟ ಪದ ಬಳಕೆ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

“ನನ್ನ ಕೋರಿಕೆ ಇಷ್ಟೇ… ನನ್ನ ಹೋರಾಟ, ಸಮುದಾಯದ ಮೇಲಿನ ನನ್ನ ಪ್ರೀತಿ, ಅಭಿಮಾನ ನೀವೆಲ್ಲ ಕಂಡಿದ್ದರೆ ನನ್ನನ್ನು ಈ ಸಂದರ್ಭದಲ್ಲೂ ಬೆಂಬಲಿಸಬೇಕು” ಎಂದು ಪ್ರತಿಭಾ ಕುಳಾಯಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ತಮ್ಮ ಮೇಲಿನ ವೈಯಕ್ತಿಯ ಮತ್ತು ಅಶ್ಲೀಲ ದಾಳಿಯ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪ್ರತಿಭಾ ಕುಳಾಯಿ ಅವರು, ಈ ಬಗ್ಗೆ ಪೊಲೀಸ್ ದೂರು ನೀಡುತ್ತಿದ್ದೇನೆ, ಅದಕ್ಕಾಗಿಯೆ ಪೊಲೀಸ್ ಠಾಣೆಯಲ್ಲಿ ಇದ್ದೇನೆ ಎಂದು ಹೇಳಿದ್ದಾರೆ.

ಶ್ಯಾಮ್ ಸುದರ್ಶನ್ ಭಟ್‌‌ನ ಕೃತ್ಯವನ್ನು ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಸಮಿತಿ ಖಂಡಿಸಿದ್ದು, “ಟೋಲ್ ವಿರೋಧಿ ಹೋರಾಟದ ಜನ ಬೆಂಬಲ ಕಂಡು ಬಿಜೆಪಿ ಪರಿವಾರ ಎಷ್ಟು ಕ್ರದ್ಧ ಆಗಿದೆ ಅಂದರೆ, ಹೋರಾಟದಲ್ಲಿ ಭಾಗಿಯಾಗಿರುವ ತುಳುವ ಹೆಣ್ಣು ಮಕ್ಕಳ ಕುರಿತ ‘ಸಭ್ಯ’ ಮುಖವಾಡಗಳೂ ವಿಕಾರವಾಗಿ ಅರಚಾಡತೊಡಗಿದೆ. ಸಮಾಜ ಇದನ್ನೆಲ್ಲಾ ಗಮನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಇದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಸಮಿತಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಪ್ರತಿಭಾ ಕುಳಾಯಿ ಅವರ ಜೊತೆಗೆ ನಿಲ್ಲುತ್ತದೆ” ಎಂದು ಹೋರಾಟ ಸಮಿತಿ ಘೋಷಿಸಿದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...