Homeಕರ್ನಾಟಕಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

ಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

- Advertisement -
- Advertisement -
  • ಶುದ್ಧೋದನ

ಹಸಿ ಹಸಿ ಸುಳ್ಳುಗಳನ್ನು ಅದ್ಭುತವಾಗಿ ಮಾರ್ಕೆಟಿಂಗ್ ಮಾಡಿ, ಪಾಲಿಟಿಕಲ್ ಬಿಸಿನೆಸ್‌ನ್ನು ಲಾಭದಾಯಕವಾಗಿ ನಡೆಸುವ ಕಲೆ ಕರಗತ ಮಾಡಿಕೊಂಡಿರುವ ಮೋದಿ ಮಾಮನ ಕೇಸರಿ ಸರ್ಕಾರದ ಪ್ರಚಾರದ ತೆವಲಿಗೆ ದೇಶದ ಬೊಕ್ಕಸವೇ ಬರಿದಾಗುತ್ತಿದೆ. ವಿರೋಧಾಭಾಸ, ದ್ವಂದ್ವ ವ್ಯಕ್ತಿತ್ವ. ಮೋದಿ ಹೇಳೋದೇ ಒಂದು; ಮಾಡೋದು ಮತ್ತೊಂದು. ಕೋಟ್ಯಂತರ ಉದ್ಯೋಗ ಸೃಷ್ಟಿ ಮಾಡ್ತೇನೆಂದು ಹೇಳಿದ್ದ ಈ ಅಭಿನವ ರಾಷ್ಟ್ರಪಿತ, ನಿರುದ್ಯೋಗಿಗಳಿಗೆ ಬಜ್ಜಿ ಮಾರಾಟ ಮಾಡಿ ಎಂದು ಮುಲಾಜಿಲ್ಲದೆ ಛೇಡಿಸುತ್ತಾರೆ. “ಆಧಾರ” ಟೀಕಿಸಿದ್ದ ಮೋದಿಗೀಗ ಅದೇ ಆಧಾರ.! ಪ್ರಚಾರ ಘಲಕ, ಜಾಹೀರಾತುಗಳಲ್ಲಷ್ಟೇ ಬದುಕಿರುವ ಮೋದಿ ಸರ್ಕಾರ, ದಿಕ್ಕು ದಿವಾಳಿಯಾಗುತ್ತಿರುವ ದೇಶದ ಪ್ರತಿ ಹಳ್ಳಿ, ಪ್ರತಿ ಮನೆಗೆ ವಿದ್ಯುತ್‍ ಒದಗಿಸಿ ಬೆಳಗುತ್ತೇನೆಂದು ಹೇಳುವುದೇ ವಿಪರ್ಯಾಸ..!

ವಿದ್ಯುತ್ ಕಾಣದ ಹಳ್ಳಿ ಇಲ್ಲವೇ, ಕತ್ತಲೆಯ ಮನೆಗೆ ಕೇಂದ್ರ ಸರ್ಕಾರದ ಅನುದಾನದಿಂದ ಕರೆಂಟ್‍ ಸೌಲಭ್ಯ ನೀಡಲು ಒದಗಿಸುವ ಯೋಜನೆಗೆ ಪ್ರಧಾನಮಂತ್ರಿ ಸಹಜ ಬಿಜಲಿ ಹರ್ ಘರ್ ಯೋಜನಾ (ಸೌಭಾಗ್ಯ ಯೋಜನೆ) ಎಂದು ನಾಮಕರಣ ಮಾಡಲಾಗಿದೆ. ರಾಜ್ಯದಾದ್ಯಂತ ಈ ಕಾಮಗಾರಿ ನಡೆಯುತ್ತಿದೆ. ಆದರೆ ನಿರೀಕ್ಷಿಸಿದಂತೆ ಕೆಲಸ ಹಾಗೂ ಉದ್ದೇಶ ಈಡೇರುತ್ತಿಲ್ಲ. ಮೋದಿಯನ್ನು ಸುದ್ದಿಯಲ್ಲಿಡುವ ಹಿಡನ್ ಅಜೆಂಡಾದ ಈ ಸೌಭಾಗ್ಯ ಹಿಕಮತ್ತೀಗ ಜಗಜ್ಜಾಹೀರಾಗಿ ಹೋಗಿದೆ. ಸಾರಾಸಗಾಟಾಗಿ ಹಳ್ಳಿ-ಹಳ್ಳಿಗಳ ಅಗಸೆ ಬಾಗಿಲಿನಲ್ಲಿ ಮೋದಿ ಚಿತ್ರವಿರುವ “ಸೌಭಾಗ್ಯ ಫಲಕ” ನಿಲ್ಲಿಸಲಾಗುತ್ತಿದೆ. ಫಲಕದ ಸಂದೇಶವೆಂದರೆ, ಕತ್ತಲಿಲ್ಲದ್ದ ಈ ಹಳ್ಳಿಯ ಪ್ರತಿ ಮನೆಯೂ ಮೋದಿ ದಯೆಯಿಂದ ವಿದ್ಯುತ್ ಬೆಳಕು ಕಂಡಿದೆ ಎಂಬುದು.

ಇವುಗಳಲ್ಲಿ ಬಹುತೇಕ ಮೋಸ-ವಂಚನೆಯ ಘಾತುಕ ಫಲಕಗಳು. ವಿದ್ಯುತ್‍ ಕಂಡು ಹಲವು ವರ್ಷ ಅಥವಾ ಎರಡ್ಮೂರು ದಶಕವಾಗಿರುವ ಗ್ರಾಮಗಳಲ್ಲಿ ಸೌಭಾಗ್ಯ ಫಲಕ ಹಾಕಲಾಗಿದೆ.! ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ಹೊನ್ನಾವರದಂಥ ತಾಲೂಕುಗಳ ದುರ್ಗಮ ಹಳ್ಳಿಗಳಲ್ಲಿನ್ನೂ ಕರೆಂಟ್‍ ಸುಳಿವೇ ಇಲ್ಲ. ಇಂಥ ಹಳ್ಳಿಗಳನ್ನು ಬೇಕಂತಲೇ ಕಡೆಗಣಿಸಿ, ಬೆಳಕಿರುವಲ್ಲಿ ಬೋಗಸ್ ಬೋರ್ಡ್‌ ಹಾಕಿ, ಮೋದಿಯನ್ನು ಬೆಳಕಿನ ಭಾಗ್ಯವಿದಾತ ಎಂದು ಬಿಂಬಿಸಲು ಕೋಟ್ಯಾಂತರ ರೂಪಾಯಿಯನ್ನು ಶಕ್ತಿ ಮಂತ್ರಾಲಯ ಪೋಲು ಮಾಡುತ್ತಿದೆ. ಇದೊಂದು ಸಾವಿರಾರು ಕೋಟಿ ರೂ.ಗಳ ಕರ್ಮಕಾಂಡ. ಮೋದಿಯ ಪ್ರಚಾರದ ದೌರ್ಬಲ್ಯ ಅರ್ಥ ಮಾಡಿಕೊಂಡಿರುವ ವಿದ್ಯುತ್ ಇಲಾಖೆಯ ಪ್ರಬೃತಿಗಳು, ಗುತ್ತಿಗೆದಾರರು ಹಗಲು ದರೋಡೆಗೆ ಇಳಿದಿದ್ದಾರೆ.

ತಮಾಷೆ ನೋಡಿ; ಹಳ್ಳಿಗಳಲ್ಲಿ ತಿಂಗಳಲ್ಲಿ ಹೆಚ್ಚಿನ ದಿನ ಕರೆಂಟೇ ಇರುವುದಿಲ್ಲ. ಮಳೆಗಾಲದಲ್ಲಿ ಸಣ್ಣ ಗಾಳಿ-ಮಳೆ ಬಂದರೂ ಸಾಕು, ಸೀಮೆ ಎಣ್ಣೆಯ ಬುಡ್ಡಿ ದೀಪದಂತೆ ಕರೆಂಟ್ ಹೋಯ್ದಾಡುತ್ತಾ ಕಡೆಗೆ ಹೋದ ವಿದ್ಯುತ್‍ ವಾರವಾದರೂ ಬರುವುದೇ ಇಲ್ಲ.! ಆಗಲೋ, ಈಗಲೋ ಹರಿದು ಬೀಳುವಂಥ ಜೀರ್ಣಗೊಂಡ ತಂತಿಗಳು, ಮುರಿದು ಬೀಳಲು ಸಿದ್ಧವಾಗಿರುವ ಕಂಬಗಳು, ಕಳಪೆ ಟ್ರಾನ್ಸ್‌ಫಾರ್ಮರ್‌ ಮತ್ತಿತರ ಉಪಕರಣಗಳಿಂದ ವಿದ್ಯುತ್‍ ಸಂಪರ್ಕ ಇರುವಲ್ಲೇ ಸಮಾಧಾನಕರ ವಿದ್ಯುತ್ ಪೂರೈಕೆ ಇಲ್ಲ. ಇಂಥದ್ದರಲ್ಲಿ ಮೋದಿಜಿ ಮನೆ-ಮನೆಗೆ ವಿದ್ಯುತ್‍ ಕೊಟ್ಟಿದ್ದೇನೆಂದು ಸ್ಥಾವರವಾಗುವ ತರಾತುರಿಯಲ್ಲಿರುವುದು ಹಾಸ್ಯಾಸ್ಪದವೇ ಸರಿ.

ಬೆಳಗ್ಗೆ ಒಂದು ದೇಶ; ರಾತ್ರಿ ಒಂದು ದೇಶ ಸುತ್ತುವ ಮೋದಿಜಿ ಭಾರತದ ಎಲ್ಲ ಹಳ್ಳಿಗಳು, ವಿದ್ಯುತ್‍ ದೀಪದಿಂದ ಝಗಮಗಿಸುತ್ತಿವೆ ಎಂದು ಒಣ ಪೋಸು ಕೊಡುವ ಉದ್ದೇಶದಿಂದ “ಆಟ” ಆಡುತ್ತಿದ್ದಾರೆಂದು ಜನತೆ ಮಾತನಾಡಿಕೊಳ್ಳುತ್ತಿದ್ದಾರೆ. ದೇಶ ಕತ್ತಲು ಮುಕ್ತವಾಗಿದೆ ಎಂದು ವಿಶ್ವಸಂಸ್ಥೆಗೆ ತೋರಿಸಿಕೊಳ್ಳುವ ಐಡಿಯಾ ಮೋದಿಯದು. ಸುಳ್ಳು ಫಲಕ ಹಾಕಲಾಗಿರುವ ಹಳ್ಳಿಗಳ ಚಿತ್ರ, ಉಪಗ್ರಹದ ಮೂಲಕ ತೆಗೆದು ವಿಶ್ವ ಸಮುದಾಯದ ಮುಂದೆ ಮಿಂಚುವ “ಸೌಭಾಗ್ಯ”ಕ್ಕಾಗಿ ಮೋದಿ ಪಠಾಲಮ್ ಕಾತರಿಸುತ್ತಿದೆಯಷ್ಟೇ.

ಇದೆಂಥ ಬೋಗಸ್ ಯೋಜನೆ ಮತ್ತು ಕೋಟಿ-ಕೋಟಿ ಲೂಟಿ ಪ್ರಾಜೆಕ್ಟ್ ಎಂಬುದಕ್ಕೆ ಸಣ್ಣದೊಂದು ಸ್ಯಾಂಪಲ್ ಇಲ್ಲಿದೆ. ಉತ್ತರ ಕನ್ನಡದ ಶಿರಸಿ ಉಪ ವಿಭಾಗದ 638 ಗ್ರಾಮಗಳಲ್ಲಿ ಬಹುತೇಕ ಹಳ್ಳಿಗಳು ಹಲವು ವರ್ಷದ ಹಿಂದೆಯೇ ವಿದ್ಯುತ್‍ ಸಂಪರ್ಕ ಹೊಂದಿವೆ. ಸೌಭಾಗ್ಯ ಯೋಜನೆಯಲ್ಲಿ ಕೇವಲ 8-10 ಮನೆಗಳಿಗಷ್ಟೇ ಕರೆಂಟ್‌ ಸಿಕ್ಕಿದೆ. ಆದರೆ ಎಲ್ಲ 638 ಹಳ್ಳಿಗಳಲ್ಲೂ “ಪ್ರಧಾನಿ ಸೌಭಾಗ್ಯ ಹಳ್ಳಿ” ಫೇಕ್ ಫಲಕವನ್ನು ವಿದ್ಯುತ್ ಇಲಾಖೆ ಹಾಕುತ್ತಿದೆ. ಈಗಾಗಲೇ ಸುಮಾರು ಐದುನೂರು ಹಳ್ಳಿಗಳಲ್ಲಿ ಸುಳ್ಳು ಬೋರ್ಡ್ ರಾರಾಜಿಸುತ್ತಿವೆ. ಒಂದು ಬೋರ್ಡಿಗೆ ಸರ್ಕಾರದ ಲೆಕ್ಕದಲ್ಲಿ 17,693 ರೂ. ವೆಚ್ಚ ತಗುಲಿದೆ. ಅಂದರೆ ಶಿರಸಿ ಉಪ ವಿಭಾದಲ್ಲೇ ನೂರಾರು ಕೋಟಿ ರೂ. ಟೆಂಡರ್ ಸ್ಕ್ಯಾಂಡಲ್ ಆಗುತ್ತಿದೆಯಾದರೆ, ಕರ್ನಾಟಕದಲ್ಲಿ ಎಷ್ಟು ಕೋಟಿ ಆಗಿರಬಹುದು..? ಇಡೀ ಭಾರತದಲ್ಲಾಗುತ್ತಿರುವ ಲೂಟಿಯ ಮೊತ್ತ ಎಷ್ಟು ಆಗಬಹುದು ಎಂಬುದನ್ನು ನೀವೇ ಊಹಿಸಿ..! ಈಗ ಮೋದಿಯ ಗಿಮಿಕ್‍ಗೆ ಏನೆನ್ನುತ್ತೀರಿ..!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...