Homeಕರ್ನಾಟಕಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

ಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

- Advertisement -
- Advertisement -
  • ಶುದ್ಧೋದನ

ಹಸಿ ಹಸಿ ಸುಳ್ಳುಗಳನ್ನು ಅದ್ಭುತವಾಗಿ ಮಾರ್ಕೆಟಿಂಗ್ ಮಾಡಿ, ಪಾಲಿಟಿಕಲ್ ಬಿಸಿನೆಸ್‌ನ್ನು ಲಾಭದಾಯಕವಾಗಿ ನಡೆಸುವ ಕಲೆ ಕರಗತ ಮಾಡಿಕೊಂಡಿರುವ ಮೋದಿ ಮಾಮನ ಕೇಸರಿ ಸರ್ಕಾರದ ಪ್ರಚಾರದ ತೆವಲಿಗೆ ದೇಶದ ಬೊಕ್ಕಸವೇ ಬರಿದಾಗುತ್ತಿದೆ. ವಿರೋಧಾಭಾಸ, ದ್ವಂದ್ವ ವ್ಯಕ್ತಿತ್ವ. ಮೋದಿ ಹೇಳೋದೇ ಒಂದು; ಮಾಡೋದು ಮತ್ತೊಂದು. ಕೋಟ್ಯಂತರ ಉದ್ಯೋಗ ಸೃಷ್ಟಿ ಮಾಡ್ತೇನೆಂದು ಹೇಳಿದ್ದ ಈ ಅಭಿನವ ರಾಷ್ಟ್ರಪಿತ, ನಿರುದ್ಯೋಗಿಗಳಿಗೆ ಬಜ್ಜಿ ಮಾರಾಟ ಮಾಡಿ ಎಂದು ಮುಲಾಜಿಲ್ಲದೆ ಛೇಡಿಸುತ್ತಾರೆ. “ಆಧಾರ” ಟೀಕಿಸಿದ್ದ ಮೋದಿಗೀಗ ಅದೇ ಆಧಾರ.! ಪ್ರಚಾರ ಘಲಕ, ಜಾಹೀರಾತುಗಳಲ್ಲಷ್ಟೇ ಬದುಕಿರುವ ಮೋದಿ ಸರ್ಕಾರ, ದಿಕ್ಕು ದಿವಾಳಿಯಾಗುತ್ತಿರುವ ದೇಶದ ಪ್ರತಿ ಹಳ್ಳಿ, ಪ್ರತಿ ಮನೆಗೆ ವಿದ್ಯುತ್‍ ಒದಗಿಸಿ ಬೆಳಗುತ್ತೇನೆಂದು ಹೇಳುವುದೇ ವಿಪರ್ಯಾಸ..!

ವಿದ್ಯುತ್ ಕಾಣದ ಹಳ್ಳಿ ಇಲ್ಲವೇ, ಕತ್ತಲೆಯ ಮನೆಗೆ ಕೇಂದ್ರ ಸರ್ಕಾರದ ಅನುದಾನದಿಂದ ಕರೆಂಟ್‍ ಸೌಲಭ್ಯ ನೀಡಲು ಒದಗಿಸುವ ಯೋಜನೆಗೆ ಪ್ರಧಾನಮಂತ್ರಿ ಸಹಜ ಬಿಜಲಿ ಹರ್ ಘರ್ ಯೋಜನಾ (ಸೌಭಾಗ್ಯ ಯೋಜನೆ) ಎಂದು ನಾಮಕರಣ ಮಾಡಲಾಗಿದೆ. ರಾಜ್ಯದಾದ್ಯಂತ ಈ ಕಾಮಗಾರಿ ನಡೆಯುತ್ತಿದೆ. ಆದರೆ ನಿರೀಕ್ಷಿಸಿದಂತೆ ಕೆಲಸ ಹಾಗೂ ಉದ್ದೇಶ ಈಡೇರುತ್ತಿಲ್ಲ. ಮೋದಿಯನ್ನು ಸುದ್ದಿಯಲ್ಲಿಡುವ ಹಿಡನ್ ಅಜೆಂಡಾದ ಈ ಸೌಭಾಗ್ಯ ಹಿಕಮತ್ತೀಗ ಜಗಜ್ಜಾಹೀರಾಗಿ ಹೋಗಿದೆ. ಸಾರಾಸಗಾಟಾಗಿ ಹಳ್ಳಿ-ಹಳ್ಳಿಗಳ ಅಗಸೆ ಬಾಗಿಲಿನಲ್ಲಿ ಮೋದಿ ಚಿತ್ರವಿರುವ “ಸೌಭಾಗ್ಯ ಫಲಕ” ನಿಲ್ಲಿಸಲಾಗುತ್ತಿದೆ. ಫಲಕದ ಸಂದೇಶವೆಂದರೆ, ಕತ್ತಲಿಲ್ಲದ್ದ ಈ ಹಳ್ಳಿಯ ಪ್ರತಿ ಮನೆಯೂ ಮೋದಿ ದಯೆಯಿಂದ ವಿದ್ಯುತ್ ಬೆಳಕು ಕಂಡಿದೆ ಎಂಬುದು.

ಇವುಗಳಲ್ಲಿ ಬಹುತೇಕ ಮೋಸ-ವಂಚನೆಯ ಘಾತುಕ ಫಲಕಗಳು. ವಿದ್ಯುತ್‍ ಕಂಡು ಹಲವು ವರ್ಷ ಅಥವಾ ಎರಡ್ಮೂರು ದಶಕವಾಗಿರುವ ಗ್ರಾಮಗಳಲ್ಲಿ ಸೌಭಾಗ್ಯ ಫಲಕ ಹಾಕಲಾಗಿದೆ.! ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ಹೊನ್ನಾವರದಂಥ ತಾಲೂಕುಗಳ ದುರ್ಗಮ ಹಳ್ಳಿಗಳಲ್ಲಿನ್ನೂ ಕರೆಂಟ್‍ ಸುಳಿವೇ ಇಲ್ಲ. ಇಂಥ ಹಳ್ಳಿಗಳನ್ನು ಬೇಕಂತಲೇ ಕಡೆಗಣಿಸಿ, ಬೆಳಕಿರುವಲ್ಲಿ ಬೋಗಸ್ ಬೋರ್ಡ್‌ ಹಾಕಿ, ಮೋದಿಯನ್ನು ಬೆಳಕಿನ ಭಾಗ್ಯವಿದಾತ ಎಂದು ಬಿಂಬಿಸಲು ಕೋಟ್ಯಾಂತರ ರೂಪಾಯಿಯನ್ನು ಶಕ್ತಿ ಮಂತ್ರಾಲಯ ಪೋಲು ಮಾಡುತ್ತಿದೆ. ಇದೊಂದು ಸಾವಿರಾರು ಕೋಟಿ ರೂ.ಗಳ ಕರ್ಮಕಾಂಡ. ಮೋದಿಯ ಪ್ರಚಾರದ ದೌರ್ಬಲ್ಯ ಅರ್ಥ ಮಾಡಿಕೊಂಡಿರುವ ವಿದ್ಯುತ್ ಇಲಾಖೆಯ ಪ್ರಬೃತಿಗಳು, ಗುತ್ತಿಗೆದಾರರು ಹಗಲು ದರೋಡೆಗೆ ಇಳಿದಿದ್ದಾರೆ.

ತಮಾಷೆ ನೋಡಿ; ಹಳ್ಳಿಗಳಲ್ಲಿ ತಿಂಗಳಲ್ಲಿ ಹೆಚ್ಚಿನ ದಿನ ಕರೆಂಟೇ ಇರುವುದಿಲ್ಲ. ಮಳೆಗಾಲದಲ್ಲಿ ಸಣ್ಣ ಗಾಳಿ-ಮಳೆ ಬಂದರೂ ಸಾಕು, ಸೀಮೆ ಎಣ್ಣೆಯ ಬುಡ್ಡಿ ದೀಪದಂತೆ ಕರೆಂಟ್ ಹೋಯ್ದಾಡುತ್ತಾ ಕಡೆಗೆ ಹೋದ ವಿದ್ಯುತ್‍ ವಾರವಾದರೂ ಬರುವುದೇ ಇಲ್ಲ.! ಆಗಲೋ, ಈಗಲೋ ಹರಿದು ಬೀಳುವಂಥ ಜೀರ್ಣಗೊಂಡ ತಂತಿಗಳು, ಮುರಿದು ಬೀಳಲು ಸಿದ್ಧವಾಗಿರುವ ಕಂಬಗಳು, ಕಳಪೆ ಟ್ರಾನ್ಸ್‌ಫಾರ್ಮರ್‌ ಮತ್ತಿತರ ಉಪಕರಣಗಳಿಂದ ವಿದ್ಯುತ್‍ ಸಂಪರ್ಕ ಇರುವಲ್ಲೇ ಸಮಾಧಾನಕರ ವಿದ್ಯುತ್ ಪೂರೈಕೆ ಇಲ್ಲ. ಇಂಥದ್ದರಲ್ಲಿ ಮೋದಿಜಿ ಮನೆ-ಮನೆಗೆ ವಿದ್ಯುತ್‍ ಕೊಟ್ಟಿದ್ದೇನೆಂದು ಸ್ಥಾವರವಾಗುವ ತರಾತುರಿಯಲ್ಲಿರುವುದು ಹಾಸ್ಯಾಸ್ಪದವೇ ಸರಿ.

ಬೆಳಗ್ಗೆ ಒಂದು ದೇಶ; ರಾತ್ರಿ ಒಂದು ದೇಶ ಸುತ್ತುವ ಮೋದಿಜಿ ಭಾರತದ ಎಲ್ಲ ಹಳ್ಳಿಗಳು, ವಿದ್ಯುತ್‍ ದೀಪದಿಂದ ಝಗಮಗಿಸುತ್ತಿವೆ ಎಂದು ಒಣ ಪೋಸು ಕೊಡುವ ಉದ್ದೇಶದಿಂದ “ಆಟ” ಆಡುತ್ತಿದ್ದಾರೆಂದು ಜನತೆ ಮಾತನಾಡಿಕೊಳ್ಳುತ್ತಿದ್ದಾರೆ. ದೇಶ ಕತ್ತಲು ಮುಕ್ತವಾಗಿದೆ ಎಂದು ವಿಶ್ವಸಂಸ್ಥೆಗೆ ತೋರಿಸಿಕೊಳ್ಳುವ ಐಡಿಯಾ ಮೋದಿಯದು. ಸುಳ್ಳು ಫಲಕ ಹಾಕಲಾಗಿರುವ ಹಳ್ಳಿಗಳ ಚಿತ್ರ, ಉಪಗ್ರಹದ ಮೂಲಕ ತೆಗೆದು ವಿಶ್ವ ಸಮುದಾಯದ ಮುಂದೆ ಮಿಂಚುವ “ಸೌಭಾಗ್ಯ”ಕ್ಕಾಗಿ ಮೋದಿ ಪಠಾಲಮ್ ಕಾತರಿಸುತ್ತಿದೆಯಷ್ಟೇ.

ಇದೆಂಥ ಬೋಗಸ್ ಯೋಜನೆ ಮತ್ತು ಕೋಟಿ-ಕೋಟಿ ಲೂಟಿ ಪ್ರಾಜೆಕ್ಟ್ ಎಂಬುದಕ್ಕೆ ಸಣ್ಣದೊಂದು ಸ್ಯಾಂಪಲ್ ಇಲ್ಲಿದೆ. ಉತ್ತರ ಕನ್ನಡದ ಶಿರಸಿ ಉಪ ವಿಭಾಗದ 638 ಗ್ರಾಮಗಳಲ್ಲಿ ಬಹುತೇಕ ಹಳ್ಳಿಗಳು ಹಲವು ವರ್ಷದ ಹಿಂದೆಯೇ ವಿದ್ಯುತ್‍ ಸಂಪರ್ಕ ಹೊಂದಿವೆ. ಸೌಭಾಗ್ಯ ಯೋಜನೆಯಲ್ಲಿ ಕೇವಲ 8-10 ಮನೆಗಳಿಗಷ್ಟೇ ಕರೆಂಟ್‌ ಸಿಕ್ಕಿದೆ. ಆದರೆ ಎಲ್ಲ 638 ಹಳ್ಳಿಗಳಲ್ಲೂ “ಪ್ರಧಾನಿ ಸೌಭಾಗ್ಯ ಹಳ್ಳಿ” ಫೇಕ್ ಫಲಕವನ್ನು ವಿದ್ಯುತ್ ಇಲಾಖೆ ಹಾಕುತ್ತಿದೆ. ಈಗಾಗಲೇ ಸುಮಾರು ಐದುನೂರು ಹಳ್ಳಿಗಳಲ್ಲಿ ಸುಳ್ಳು ಬೋರ್ಡ್ ರಾರಾಜಿಸುತ್ತಿವೆ. ಒಂದು ಬೋರ್ಡಿಗೆ ಸರ್ಕಾರದ ಲೆಕ್ಕದಲ್ಲಿ 17,693 ರೂ. ವೆಚ್ಚ ತಗುಲಿದೆ. ಅಂದರೆ ಶಿರಸಿ ಉಪ ವಿಭಾದಲ್ಲೇ ನೂರಾರು ಕೋಟಿ ರೂ. ಟೆಂಡರ್ ಸ್ಕ್ಯಾಂಡಲ್ ಆಗುತ್ತಿದೆಯಾದರೆ, ಕರ್ನಾಟಕದಲ್ಲಿ ಎಷ್ಟು ಕೋಟಿ ಆಗಿರಬಹುದು..? ಇಡೀ ಭಾರತದಲ್ಲಾಗುತ್ತಿರುವ ಲೂಟಿಯ ಮೊತ್ತ ಎಷ್ಟು ಆಗಬಹುದು ಎಂಬುದನ್ನು ನೀವೇ ಊಹಿಸಿ..! ಈಗ ಮೋದಿಯ ಗಿಮಿಕ್‍ಗೆ ಏನೆನ್ನುತ್ತೀರಿ..!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...