Homeಕರ್ನಾಟಕಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

ಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

- Advertisement -
- Advertisement -
  • ಶುದ್ಧೋದನ

ಹಸಿ ಹಸಿ ಸುಳ್ಳುಗಳನ್ನು ಅದ್ಭುತವಾಗಿ ಮಾರ್ಕೆಟಿಂಗ್ ಮಾಡಿ, ಪಾಲಿಟಿಕಲ್ ಬಿಸಿನೆಸ್‌ನ್ನು ಲಾಭದಾಯಕವಾಗಿ ನಡೆಸುವ ಕಲೆ ಕರಗತ ಮಾಡಿಕೊಂಡಿರುವ ಮೋದಿ ಮಾಮನ ಕೇಸರಿ ಸರ್ಕಾರದ ಪ್ರಚಾರದ ತೆವಲಿಗೆ ದೇಶದ ಬೊಕ್ಕಸವೇ ಬರಿದಾಗುತ್ತಿದೆ. ವಿರೋಧಾಭಾಸ, ದ್ವಂದ್ವ ವ್ಯಕ್ತಿತ್ವ. ಮೋದಿ ಹೇಳೋದೇ ಒಂದು; ಮಾಡೋದು ಮತ್ತೊಂದು. ಕೋಟ್ಯಂತರ ಉದ್ಯೋಗ ಸೃಷ್ಟಿ ಮಾಡ್ತೇನೆಂದು ಹೇಳಿದ್ದ ಈ ಅಭಿನವ ರಾಷ್ಟ್ರಪಿತ, ನಿರುದ್ಯೋಗಿಗಳಿಗೆ ಬಜ್ಜಿ ಮಾರಾಟ ಮಾಡಿ ಎಂದು ಮುಲಾಜಿಲ್ಲದೆ ಛೇಡಿಸುತ್ತಾರೆ. “ಆಧಾರ” ಟೀಕಿಸಿದ್ದ ಮೋದಿಗೀಗ ಅದೇ ಆಧಾರ.! ಪ್ರಚಾರ ಘಲಕ, ಜಾಹೀರಾತುಗಳಲ್ಲಷ್ಟೇ ಬದುಕಿರುವ ಮೋದಿ ಸರ್ಕಾರ, ದಿಕ್ಕು ದಿವಾಳಿಯಾಗುತ್ತಿರುವ ದೇಶದ ಪ್ರತಿ ಹಳ್ಳಿ, ಪ್ರತಿ ಮನೆಗೆ ವಿದ್ಯುತ್‍ ಒದಗಿಸಿ ಬೆಳಗುತ್ತೇನೆಂದು ಹೇಳುವುದೇ ವಿಪರ್ಯಾಸ..!

ವಿದ್ಯುತ್ ಕಾಣದ ಹಳ್ಳಿ ಇಲ್ಲವೇ, ಕತ್ತಲೆಯ ಮನೆಗೆ ಕೇಂದ್ರ ಸರ್ಕಾರದ ಅನುದಾನದಿಂದ ಕರೆಂಟ್‍ ಸೌಲಭ್ಯ ನೀಡಲು ಒದಗಿಸುವ ಯೋಜನೆಗೆ ಪ್ರಧಾನಮಂತ್ರಿ ಸಹಜ ಬಿಜಲಿ ಹರ್ ಘರ್ ಯೋಜನಾ (ಸೌಭಾಗ್ಯ ಯೋಜನೆ) ಎಂದು ನಾಮಕರಣ ಮಾಡಲಾಗಿದೆ. ರಾಜ್ಯದಾದ್ಯಂತ ಈ ಕಾಮಗಾರಿ ನಡೆಯುತ್ತಿದೆ. ಆದರೆ ನಿರೀಕ್ಷಿಸಿದಂತೆ ಕೆಲಸ ಹಾಗೂ ಉದ್ದೇಶ ಈಡೇರುತ್ತಿಲ್ಲ. ಮೋದಿಯನ್ನು ಸುದ್ದಿಯಲ್ಲಿಡುವ ಹಿಡನ್ ಅಜೆಂಡಾದ ಈ ಸೌಭಾಗ್ಯ ಹಿಕಮತ್ತೀಗ ಜಗಜ್ಜಾಹೀರಾಗಿ ಹೋಗಿದೆ. ಸಾರಾಸಗಾಟಾಗಿ ಹಳ್ಳಿ-ಹಳ್ಳಿಗಳ ಅಗಸೆ ಬಾಗಿಲಿನಲ್ಲಿ ಮೋದಿ ಚಿತ್ರವಿರುವ “ಸೌಭಾಗ್ಯ ಫಲಕ” ನಿಲ್ಲಿಸಲಾಗುತ್ತಿದೆ. ಫಲಕದ ಸಂದೇಶವೆಂದರೆ, ಕತ್ತಲಿಲ್ಲದ್ದ ಈ ಹಳ್ಳಿಯ ಪ್ರತಿ ಮನೆಯೂ ಮೋದಿ ದಯೆಯಿಂದ ವಿದ್ಯುತ್ ಬೆಳಕು ಕಂಡಿದೆ ಎಂಬುದು.

ಇವುಗಳಲ್ಲಿ ಬಹುತೇಕ ಮೋಸ-ವಂಚನೆಯ ಘಾತುಕ ಫಲಕಗಳು. ವಿದ್ಯುತ್‍ ಕಂಡು ಹಲವು ವರ್ಷ ಅಥವಾ ಎರಡ್ಮೂರು ದಶಕವಾಗಿರುವ ಗ್ರಾಮಗಳಲ್ಲಿ ಸೌಭಾಗ್ಯ ಫಲಕ ಹಾಕಲಾಗಿದೆ.! ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ಹೊನ್ನಾವರದಂಥ ತಾಲೂಕುಗಳ ದುರ್ಗಮ ಹಳ್ಳಿಗಳಲ್ಲಿನ್ನೂ ಕರೆಂಟ್‍ ಸುಳಿವೇ ಇಲ್ಲ. ಇಂಥ ಹಳ್ಳಿಗಳನ್ನು ಬೇಕಂತಲೇ ಕಡೆಗಣಿಸಿ, ಬೆಳಕಿರುವಲ್ಲಿ ಬೋಗಸ್ ಬೋರ್ಡ್‌ ಹಾಕಿ, ಮೋದಿಯನ್ನು ಬೆಳಕಿನ ಭಾಗ್ಯವಿದಾತ ಎಂದು ಬಿಂಬಿಸಲು ಕೋಟ್ಯಾಂತರ ರೂಪಾಯಿಯನ್ನು ಶಕ್ತಿ ಮಂತ್ರಾಲಯ ಪೋಲು ಮಾಡುತ್ತಿದೆ. ಇದೊಂದು ಸಾವಿರಾರು ಕೋಟಿ ರೂ.ಗಳ ಕರ್ಮಕಾಂಡ. ಮೋದಿಯ ಪ್ರಚಾರದ ದೌರ್ಬಲ್ಯ ಅರ್ಥ ಮಾಡಿಕೊಂಡಿರುವ ವಿದ್ಯುತ್ ಇಲಾಖೆಯ ಪ್ರಬೃತಿಗಳು, ಗುತ್ತಿಗೆದಾರರು ಹಗಲು ದರೋಡೆಗೆ ಇಳಿದಿದ್ದಾರೆ.

ತಮಾಷೆ ನೋಡಿ; ಹಳ್ಳಿಗಳಲ್ಲಿ ತಿಂಗಳಲ್ಲಿ ಹೆಚ್ಚಿನ ದಿನ ಕರೆಂಟೇ ಇರುವುದಿಲ್ಲ. ಮಳೆಗಾಲದಲ್ಲಿ ಸಣ್ಣ ಗಾಳಿ-ಮಳೆ ಬಂದರೂ ಸಾಕು, ಸೀಮೆ ಎಣ್ಣೆಯ ಬುಡ್ಡಿ ದೀಪದಂತೆ ಕರೆಂಟ್ ಹೋಯ್ದಾಡುತ್ತಾ ಕಡೆಗೆ ಹೋದ ವಿದ್ಯುತ್‍ ವಾರವಾದರೂ ಬರುವುದೇ ಇಲ್ಲ.! ಆಗಲೋ, ಈಗಲೋ ಹರಿದು ಬೀಳುವಂಥ ಜೀರ್ಣಗೊಂಡ ತಂತಿಗಳು, ಮುರಿದು ಬೀಳಲು ಸಿದ್ಧವಾಗಿರುವ ಕಂಬಗಳು, ಕಳಪೆ ಟ್ರಾನ್ಸ್‌ಫಾರ್ಮರ್‌ ಮತ್ತಿತರ ಉಪಕರಣಗಳಿಂದ ವಿದ್ಯುತ್‍ ಸಂಪರ್ಕ ಇರುವಲ್ಲೇ ಸಮಾಧಾನಕರ ವಿದ್ಯುತ್ ಪೂರೈಕೆ ಇಲ್ಲ. ಇಂಥದ್ದರಲ್ಲಿ ಮೋದಿಜಿ ಮನೆ-ಮನೆಗೆ ವಿದ್ಯುತ್‍ ಕೊಟ್ಟಿದ್ದೇನೆಂದು ಸ್ಥಾವರವಾಗುವ ತರಾತುರಿಯಲ್ಲಿರುವುದು ಹಾಸ್ಯಾಸ್ಪದವೇ ಸರಿ.

ಬೆಳಗ್ಗೆ ಒಂದು ದೇಶ; ರಾತ್ರಿ ಒಂದು ದೇಶ ಸುತ್ತುವ ಮೋದಿಜಿ ಭಾರತದ ಎಲ್ಲ ಹಳ್ಳಿಗಳು, ವಿದ್ಯುತ್‍ ದೀಪದಿಂದ ಝಗಮಗಿಸುತ್ತಿವೆ ಎಂದು ಒಣ ಪೋಸು ಕೊಡುವ ಉದ್ದೇಶದಿಂದ “ಆಟ” ಆಡುತ್ತಿದ್ದಾರೆಂದು ಜನತೆ ಮಾತನಾಡಿಕೊಳ್ಳುತ್ತಿದ್ದಾರೆ. ದೇಶ ಕತ್ತಲು ಮುಕ್ತವಾಗಿದೆ ಎಂದು ವಿಶ್ವಸಂಸ್ಥೆಗೆ ತೋರಿಸಿಕೊಳ್ಳುವ ಐಡಿಯಾ ಮೋದಿಯದು. ಸುಳ್ಳು ಫಲಕ ಹಾಕಲಾಗಿರುವ ಹಳ್ಳಿಗಳ ಚಿತ್ರ, ಉಪಗ್ರಹದ ಮೂಲಕ ತೆಗೆದು ವಿಶ್ವ ಸಮುದಾಯದ ಮುಂದೆ ಮಿಂಚುವ “ಸೌಭಾಗ್ಯ”ಕ್ಕಾಗಿ ಮೋದಿ ಪಠಾಲಮ್ ಕಾತರಿಸುತ್ತಿದೆಯಷ್ಟೇ.

ಇದೆಂಥ ಬೋಗಸ್ ಯೋಜನೆ ಮತ್ತು ಕೋಟಿ-ಕೋಟಿ ಲೂಟಿ ಪ್ರಾಜೆಕ್ಟ್ ಎಂಬುದಕ್ಕೆ ಸಣ್ಣದೊಂದು ಸ್ಯಾಂಪಲ್ ಇಲ್ಲಿದೆ. ಉತ್ತರ ಕನ್ನಡದ ಶಿರಸಿ ಉಪ ವಿಭಾಗದ 638 ಗ್ರಾಮಗಳಲ್ಲಿ ಬಹುತೇಕ ಹಳ್ಳಿಗಳು ಹಲವು ವರ್ಷದ ಹಿಂದೆಯೇ ವಿದ್ಯುತ್‍ ಸಂಪರ್ಕ ಹೊಂದಿವೆ. ಸೌಭಾಗ್ಯ ಯೋಜನೆಯಲ್ಲಿ ಕೇವಲ 8-10 ಮನೆಗಳಿಗಷ್ಟೇ ಕರೆಂಟ್‌ ಸಿಕ್ಕಿದೆ. ಆದರೆ ಎಲ್ಲ 638 ಹಳ್ಳಿಗಳಲ್ಲೂ “ಪ್ರಧಾನಿ ಸೌಭಾಗ್ಯ ಹಳ್ಳಿ” ಫೇಕ್ ಫಲಕವನ್ನು ವಿದ್ಯುತ್ ಇಲಾಖೆ ಹಾಕುತ್ತಿದೆ. ಈಗಾಗಲೇ ಸುಮಾರು ಐದುನೂರು ಹಳ್ಳಿಗಳಲ್ಲಿ ಸುಳ್ಳು ಬೋರ್ಡ್ ರಾರಾಜಿಸುತ್ತಿವೆ. ಒಂದು ಬೋರ್ಡಿಗೆ ಸರ್ಕಾರದ ಲೆಕ್ಕದಲ್ಲಿ 17,693 ರೂ. ವೆಚ್ಚ ತಗುಲಿದೆ. ಅಂದರೆ ಶಿರಸಿ ಉಪ ವಿಭಾದಲ್ಲೇ ನೂರಾರು ಕೋಟಿ ರೂ. ಟೆಂಡರ್ ಸ್ಕ್ಯಾಂಡಲ್ ಆಗುತ್ತಿದೆಯಾದರೆ, ಕರ್ನಾಟಕದಲ್ಲಿ ಎಷ್ಟು ಕೋಟಿ ಆಗಿರಬಹುದು..? ಇಡೀ ಭಾರತದಲ್ಲಾಗುತ್ತಿರುವ ಲೂಟಿಯ ಮೊತ್ತ ಎಷ್ಟು ಆಗಬಹುದು ಎಂಬುದನ್ನು ನೀವೇ ಊಹಿಸಿ..! ಈಗ ಮೋದಿಯ ಗಿಮಿಕ್‍ಗೆ ಏನೆನ್ನುತ್ತೀರಿ..!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...