Homeಕರ್ನಾಟಕಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

ಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

- Advertisement -
- Advertisement -
  • ಶುದ್ಧೋದನ

ಹಸಿ ಹಸಿ ಸುಳ್ಳುಗಳನ್ನು ಅದ್ಭುತವಾಗಿ ಮಾರ್ಕೆಟಿಂಗ್ ಮಾಡಿ, ಪಾಲಿಟಿಕಲ್ ಬಿಸಿನೆಸ್‌ನ್ನು ಲಾಭದಾಯಕವಾಗಿ ನಡೆಸುವ ಕಲೆ ಕರಗತ ಮಾಡಿಕೊಂಡಿರುವ ಮೋದಿ ಮಾಮನ ಕೇಸರಿ ಸರ್ಕಾರದ ಪ್ರಚಾರದ ತೆವಲಿಗೆ ದೇಶದ ಬೊಕ್ಕಸವೇ ಬರಿದಾಗುತ್ತಿದೆ. ವಿರೋಧಾಭಾಸ, ದ್ವಂದ್ವ ವ್ಯಕ್ತಿತ್ವ. ಮೋದಿ ಹೇಳೋದೇ ಒಂದು; ಮಾಡೋದು ಮತ್ತೊಂದು. ಕೋಟ್ಯಂತರ ಉದ್ಯೋಗ ಸೃಷ್ಟಿ ಮಾಡ್ತೇನೆಂದು ಹೇಳಿದ್ದ ಈ ಅಭಿನವ ರಾಷ್ಟ್ರಪಿತ, ನಿರುದ್ಯೋಗಿಗಳಿಗೆ ಬಜ್ಜಿ ಮಾರಾಟ ಮಾಡಿ ಎಂದು ಮುಲಾಜಿಲ್ಲದೆ ಛೇಡಿಸುತ್ತಾರೆ. “ಆಧಾರ” ಟೀಕಿಸಿದ್ದ ಮೋದಿಗೀಗ ಅದೇ ಆಧಾರ.! ಪ್ರಚಾರ ಘಲಕ, ಜಾಹೀರಾತುಗಳಲ್ಲಷ್ಟೇ ಬದುಕಿರುವ ಮೋದಿ ಸರ್ಕಾರ, ದಿಕ್ಕು ದಿವಾಳಿಯಾಗುತ್ತಿರುವ ದೇಶದ ಪ್ರತಿ ಹಳ್ಳಿ, ಪ್ರತಿ ಮನೆಗೆ ವಿದ್ಯುತ್‍ ಒದಗಿಸಿ ಬೆಳಗುತ್ತೇನೆಂದು ಹೇಳುವುದೇ ವಿಪರ್ಯಾಸ..!

ವಿದ್ಯುತ್ ಕಾಣದ ಹಳ್ಳಿ ಇಲ್ಲವೇ, ಕತ್ತಲೆಯ ಮನೆಗೆ ಕೇಂದ್ರ ಸರ್ಕಾರದ ಅನುದಾನದಿಂದ ಕರೆಂಟ್‍ ಸೌಲಭ್ಯ ನೀಡಲು ಒದಗಿಸುವ ಯೋಜನೆಗೆ ಪ್ರಧಾನಮಂತ್ರಿ ಸಹಜ ಬಿಜಲಿ ಹರ್ ಘರ್ ಯೋಜನಾ (ಸೌಭಾಗ್ಯ ಯೋಜನೆ) ಎಂದು ನಾಮಕರಣ ಮಾಡಲಾಗಿದೆ. ರಾಜ್ಯದಾದ್ಯಂತ ಈ ಕಾಮಗಾರಿ ನಡೆಯುತ್ತಿದೆ. ಆದರೆ ನಿರೀಕ್ಷಿಸಿದಂತೆ ಕೆಲಸ ಹಾಗೂ ಉದ್ದೇಶ ಈಡೇರುತ್ತಿಲ್ಲ. ಮೋದಿಯನ್ನು ಸುದ್ದಿಯಲ್ಲಿಡುವ ಹಿಡನ್ ಅಜೆಂಡಾದ ಈ ಸೌಭಾಗ್ಯ ಹಿಕಮತ್ತೀಗ ಜಗಜ್ಜಾಹೀರಾಗಿ ಹೋಗಿದೆ. ಸಾರಾಸಗಾಟಾಗಿ ಹಳ್ಳಿ-ಹಳ್ಳಿಗಳ ಅಗಸೆ ಬಾಗಿಲಿನಲ್ಲಿ ಮೋದಿ ಚಿತ್ರವಿರುವ “ಸೌಭಾಗ್ಯ ಫಲಕ” ನಿಲ್ಲಿಸಲಾಗುತ್ತಿದೆ. ಫಲಕದ ಸಂದೇಶವೆಂದರೆ, ಕತ್ತಲಿಲ್ಲದ್ದ ಈ ಹಳ್ಳಿಯ ಪ್ರತಿ ಮನೆಯೂ ಮೋದಿ ದಯೆಯಿಂದ ವಿದ್ಯುತ್ ಬೆಳಕು ಕಂಡಿದೆ ಎಂಬುದು.

ಇವುಗಳಲ್ಲಿ ಬಹುತೇಕ ಮೋಸ-ವಂಚನೆಯ ಘಾತುಕ ಫಲಕಗಳು. ವಿದ್ಯುತ್‍ ಕಂಡು ಹಲವು ವರ್ಷ ಅಥವಾ ಎರಡ್ಮೂರು ದಶಕವಾಗಿರುವ ಗ್ರಾಮಗಳಲ್ಲಿ ಸೌಭಾಗ್ಯ ಫಲಕ ಹಾಕಲಾಗಿದೆ.! ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ಹೊನ್ನಾವರದಂಥ ತಾಲೂಕುಗಳ ದುರ್ಗಮ ಹಳ್ಳಿಗಳಲ್ಲಿನ್ನೂ ಕರೆಂಟ್‍ ಸುಳಿವೇ ಇಲ್ಲ. ಇಂಥ ಹಳ್ಳಿಗಳನ್ನು ಬೇಕಂತಲೇ ಕಡೆಗಣಿಸಿ, ಬೆಳಕಿರುವಲ್ಲಿ ಬೋಗಸ್ ಬೋರ್ಡ್‌ ಹಾಕಿ, ಮೋದಿಯನ್ನು ಬೆಳಕಿನ ಭಾಗ್ಯವಿದಾತ ಎಂದು ಬಿಂಬಿಸಲು ಕೋಟ್ಯಾಂತರ ರೂಪಾಯಿಯನ್ನು ಶಕ್ತಿ ಮಂತ್ರಾಲಯ ಪೋಲು ಮಾಡುತ್ತಿದೆ. ಇದೊಂದು ಸಾವಿರಾರು ಕೋಟಿ ರೂ.ಗಳ ಕರ್ಮಕಾಂಡ. ಮೋದಿಯ ಪ್ರಚಾರದ ದೌರ್ಬಲ್ಯ ಅರ್ಥ ಮಾಡಿಕೊಂಡಿರುವ ವಿದ್ಯುತ್ ಇಲಾಖೆಯ ಪ್ರಬೃತಿಗಳು, ಗುತ್ತಿಗೆದಾರರು ಹಗಲು ದರೋಡೆಗೆ ಇಳಿದಿದ್ದಾರೆ.

ತಮಾಷೆ ನೋಡಿ; ಹಳ್ಳಿಗಳಲ್ಲಿ ತಿಂಗಳಲ್ಲಿ ಹೆಚ್ಚಿನ ದಿನ ಕರೆಂಟೇ ಇರುವುದಿಲ್ಲ. ಮಳೆಗಾಲದಲ್ಲಿ ಸಣ್ಣ ಗಾಳಿ-ಮಳೆ ಬಂದರೂ ಸಾಕು, ಸೀಮೆ ಎಣ್ಣೆಯ ಬುಡ್ಡಿ ದೀಪದಂತೆ ಕರೆಂಟ್ ಹೋಯ್ದಾಡುತ್ತಾ ಕಡೆಗೆ ಹೋದ ವಿದ್ಯುತ್‍ ವಾರವಾದರೂ ಬರುವುದೇ ಇಲ್ಲ.! ಆಗಲೋ, ಈಗಲೋ ಹರಿದು ಬೀಳುವಂಥ ಜೀರ್ಣಗೊಂಡ ತಂತಿಗಳು, ಮುರಿದು ಬೀಳಲು ಸಿದ್ಧವಾಗಿರುವ ಕಂಬಗಳು, ಕಳಪೆ ಟ್ರಾನ್ಸ್‌ಫಾರ್ಮರ್‌ ಮತ್ತಿತರ ಉಪಕರಣಗಳಿಂದ ವಿದ್ಯುತ್‍ ಸಂಪರ್ಕ ಇರುವಲ್ಲೇ ಸಮಾಧಾನಕರ ವಿದ್ಯುತ್ ಪೂರೈಕೆ ಇಲ್ಲ. ಇಂಥದ್ದರಲ್ಲಿ ಮೋದಿಜಿ ಮನೆ-ಮನೆಗೆ ವಿದ್ಯುತ್‍ ಕೊಟ್ಟಿದ್ದೇನೆಂದು ಸ್ಥಾವರವಾಗುವ ತರಾತುರಿಯಲ್ಲಿರುವುದು ಹಾಸ್ಯಾಸ್ಪದವೇ ಸರಿ.

ಬೆಳಗ್ಗೆ ಒಂದು ದೇಶ; ರಾತ್ರಿ ಒಂದು ದೇಶ ಸುತ್ತುವ ಮೋದಿಜಿ ಭಾರತದ ಎಲ್ಲ ಹಳ್ಳಿಗಳು, ವಿದ್ಯುತ್‍ ದೀಪದಿಂದ ಝಗಮಗಿಸುತ್ತಿವೆ ಎಂದು ಒಣ ಪೋಸು ಕೊಡುವ ಉದ್ದೇಶದಿಂದ “ಆಟ” ಆಡುತ್ತಿದ್ದಾರೆಂದು ಜನತೆ ಮಾತನಾಡಿಕೊಳ್ಳುತ್ತಿದ್ದಾರೆ. ದೇಶ ಕತ್ತಲು ಮುಕ್ತವಾಗಿದೆ ಎಂದು ವಿಶ್ವಸಂಸ್ಥೆಗೆ ತೋರಿಸಿಕೊಳ್ಳುವ ಐಡಿಯಾ ಮೋದಿಯದು. ಸುಳ್ಳು ಫಲಕ ಹಾಕಲಾಗಿರುವ ಹಳ್ಳಿಗಳ ಚಿತ್ರ, ಉಪಗ್ರಹದ ಮೂಲಕ ತೆಗೆದು ವಿಶ್ವ ಸಮುದಾಯದ ಮುಂದೆ ಮಿಂಚುವ “ಸೌಭಾಗ್ಯ”ಕ್ಕಾಗಿ ಮೋದಿ ಪಠಾಲಮ್ ಕಾತರಿಸುತ್ತಿದೆಯಷ್ಟೇ.

ಇದೆಂಥ ಬೋಗಸ್ ಯೋಜನೆ ಮತ್ತು ಕೋಟಿ-ಕೋಟಿ ಲೂಟಿ ಪ್ರಾಜೆಕ್ಟ್ ಎಂಬುದಕ್ಕೆ ಸಣ್ಣದೊಂದು ಸ್ಯಾಂಪಲ್ ಇಲ್ಲಿದೆ. ಉತ್ತರ ಕನ್ನಡದ ಶಿರಸಿ ಉಪ ವಿಭಾಗದ 638 ಗ್ರಾಮಗಳಲ್ಲಿ ಬಹುತೇಕ ಹಳ್ಳಿಗಳು ಹಲವು ವರ್ಷದ ಹಿಂದೆಯೇ ವಿದ್ಯುತ್‍ ಸಂಪರ್ಕ ಹೊಂದಿವೆ. ಸೌಭಾಗ್ಯ ಯೋಜನೆಯಲ್ಲಿ ಕೇವಲ 8-10 ಮನೆಗಳಿಗಷ್ಟೇ ಕರೆಂಟ್‌ ಸಿಕ್ಕಿದೆ. ಆದರೆ ಎಲ್ಲ 638 ಹಳ್ಳಿಗಳಲ್ಲೂ “ಪ್ರಧಾನಿ ಸೌಭಾಗ್ಯ ಹಳ್ಳಿ” ಫೇಕ್ ಫಲಕವನ್ನು ವಿದ್ಯುತ್ ಇಲಾಖೆ ಹಾಕುತ್ತಿದೆ. ಈಗಾಗಲೇ ಸುಮಾರು ಐದುನೂರು ಹಳ್ಳಿಗಳಲ್ಲಿ ಸುಳ್ಳು ಬೋರ್ಡ್ ರಾರಾಜಿಸುತ್ತಿವೆ. ಒಂದು ಬೋರ್ಡಿಗೆ ಸರ್ಕಾರದ ಲೆಕ್ಕದಲ್ಲಿ 17,693 ರೂ. ವೆಚ್ಚ ತಗುಲಿದೆ. ಅಂದರೆ ಶಿರಸಿ ಉಪ ವಿಭಾದಲ್ಲೇ ನೂರಾರು ಕೋಟಿ ರೂ. ಟೆಂಡರ್ ಸ್ಕ್ಯಾಂಡಲ್ ಆಗುತ್ತಿದೆಯಾದರೆ, ಕರ್ನಾಟಕದಲ್ಲಿ ಎಷ್ಟು ಕೋಟಿ ಆಗಿರಬಹುದು..? ಇಡೀ ಭಾರತದಲ್ಲಾಗುತ್ತಿರುವ ಲೂಟಿಯ ಮೊತ್ತ ಎಷ್ಟು ಆಗಬಹುದು ಎಂಬುದನ್ನು ನೀವೇ ಊಹಿಸಿ..! ಈಗ ಮೋದಿಯ ಗಿಮಿಕ್‍ಗೆ ಏನೆನ್ನುತ್ತೀರಿ..!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...