Homeಕರ್ನಾಟಕಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

ಮೋದಿ ಮಾಮನ ಸುಳ್ಳು ಫಲಕದ ವಿದ್ಯುದಾ‍ಘಾತ..!

- Advertisement -
- Advertisement -
  • ಶುದ್ಧೋದನ

ಹಸಿ ಹಸಿ ಸುಳ್ಳುಗಳನ್ನು ಅದ್ಭುತವಾಗಿ ಮಾರ್ಕೆಟಿಂಗ್ ಮಾಡಿ, ಪಾಲಿಟಿಕಲ್ ಬಿಸಿನೆಸ್‌ನ್ನು ಲಾಭದಾಯಕವಾಗಿ ನಡೆಸುವ ಕಲೆ ಕರಗತ ಮಾಡಿಕೊಂಡಿರುವ ಮೋದಿ ಮಾಮನ ಕೇಸರಿ ಸರ್ಕಾರದ ಪ್ರಚಾರದ ತೆವಲಿಗೆ ದೇಶದ ಬೊಕ್ಕಸವೇ ಬರಿದಾಗುತ್ತಿದೆ. ವಿರೋಧಾಭಾಸ, ದ್ವಂದ್ವ ವ್ಯಕ್ತಿತ್ವ. ಮೋದಿ ಹೇಳೋದೇ ಒಂದು; ಮಾಡೋದು ಮತ್ತೊಂದು. ಕೋಟ್ಯಂತರ ಉದ್ಯೋಗ ಸೃಷ್ಟಿ ಮಾಡ್ತೇನೆಂದು ಹೇಳಿದ್ದ ಈ ಅಭಿನವ ರಾಷ್ಟ್ರಪಿತ, ನಿರುದ್ಯೋಗಿಗಳಿಗೆ ಬಜ್ಜಿ ಮಾರಾಟ ಮಾಡಿ ಎಂದು ಮುಲಾಜಿಲ್ಲದೆ ಛೇಡಿಸುತ್ತಾರೆ. “ಆಧಾರ” ಟೀಕಿಸಿದ್ದ ಮೋದಿಗೀಗ ಅದೇ ಆಧಾರ.! ಪ್ರಚಾರ ಘಲಕ, ಜಾಹೀರಾತುಗಳಲ್ಲಷ್ಟೇ ಬದುಕಿರುವ ಮೋದಿ ಸರ್ಕಾರ, ದಿಕ್ಕು ದಿವಾಳಿಯಾಗುತ್ತಿರುವ ದೇಶದ ಪ್ರತಿ ಹಳ್ಳಿ, ಪ್ರತಿ ಮನೆಗೆ ವಿದ್ಯುತ್‍ ಒದಗಿಸಿ ಬೆಳಗುತ್ತೇನೆಂದು ಹೇಳುವುದೇ ವಿಪರ್ಯಾಸ..!

ವಿದ್ಯುತ್ ಕಾಣದ ಹಳ್ಳಿ ಇಲ್ಲವೇ, ಕತ್ತಲೆಯ ಮನೆಗೆ ಕೇಂದ್ರ ಸರ್ಕಾರದ ಅನುದಾನದಿಂದ ಕರೆಂಟ್‍ ಸೌಲಭ್ಯ ನೀಡಲು ಒದಗಿಸುವ ಯೋಜನೆಗೆ ಪ್ರಧಾನಮಂತ್ರಿ ಸಹಜ ಬಿಜಲಿ ಹರ್ ಘರ್ ಯೋಜನಾ (ಸೌಭಾಗ್ಯ ಯೋಜನೆ) ಎಂದು ನಾಮಕರಣ ಮಾಡಲಾಗಿದೆ. ರಾಜ್ಯದಾದ್ಯಂತ ಈ ಕಾಮಗಾರಿ ನಡೆಯುತ್ತಿದೆ. ಆದರೆ ನಿರೀಕ್ಷಿಸಿದಂತೆ ಕೆಲಸ ಹಾಗೂ ಉದ್ದೇಶ ಈಡೇರುತ್ತಿಲ್ಲ. ಮೋದಿಯನ್ನು ಸುದ್ದಿಯಲ್ಲಿಡುವ ಹಿಡನ್ ಅಜೆಂಡಾದ ಈ ಸೌಭಾಗ್ಯ ಹಿಕಮತ್ತೀಗ ಜಗಜ್ಜಾಹೀರಾಗಿ ಹೋಗಿದೆ. ಸಾರಾಸಗಾಟಾಗಿ ಹಳ್ಳಿ-ಹಳ್ಳಿಗಳ ಅಗಸೆ ಬಾಗಿಲಿನಲ್ಲಿ ಮೋದಿ ಚಿತ್ರವಿರುವ “ಸೌಭಾಗ್ಯ ಫಲಕ” ನಿಲ್ಲಿಸಲಾಗುತ್ತಿದೆ. ಫಲಕದ ಸಂದೇಶವೆಂದರೆ, ಕತ್ತಲಿಲ್ಲದ್ದ ಈ ಹಳ್ಳಿಯ ಪ್ರತಿ ಮನೆಯೂ ಮೋದಿ ದಯೆಯಿಂದ ವಿದ್ಯುತ್ ಬೆಳಕು ಕಂಡಿದೆ ಎಂಬುದು.

ಇವುಗಳಲ್ಲಿ ಬಹುತೇಕ ಮೋಸ-ವಂಚನೆಯ ಘಾತುಕ ಫಲಕಗಳು. ವಿದ್ಯುತ್‍ ಕಂಡು ಹಲವು ವರ್ಷ ಅಥವಾ ಎರಡ್ಮೂರು ದಶಕವಾಗಿರುವ ಗ್ರಾಮಗಳಲ್ಲಿ ಸೌಭಾಗ್ಯ ಫಲಕ ಹಾಕಲಾಗಿದೆ.! ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ಹೊನ್ನಾವರದಂಥ ತಾಲೂಕುಗಳ ದುರ್ಗಮ ಹಳ್ಳಿಗಳಲ್ಲಿನ್ನೂ ಕರೆಂಟ್‍ ಸುಳಿವೇ ಇಲ್ಲ. ಇಂಥ ಹಳ್ಳಿಗಳನ್ನು ಬೇಕಂತಲೇ ಕಡೆಗಣಿಸಿ, ಬೆಳಕಿರುವಲ್ಲಿ ಬೋಗಸ್ ಬೋರ್ಡ್‌ ಹಾಕಿ, ಮೋದಿಯನ್ನು ಬೆಳಕಿನ ಭಾಗ್ಯವಿದಾತ ಎಂದು ಬಿಂಬಿಸಲು ಕೋಟ್ಯಾಂತರ ರೂಪಾಯಿಯನ್ನು ಶಕ್ತಿ ಮಂತ್ರಾಲಯ ಪೋಲು ಮಾಡುತ್ತಿದೆ. ಇದೊಂದು ಸಾವಿರಾರು ಕೋಟಿ ರೂ.ಗಳ ಕರ್ಮಕಾಂಡ. ಮೋದಿಯ ಪ್ರಚಾರದ ದೌರ್ಬಲ್ಯ ಅರ್ಥ ಮಾಡಿಕೊಂಡಿರುವ ವಿದ್ಯುತ್ ಇಲಾಖೆಯ ಪ್ರಬೃತಿಗಳು, ಗುತ್ತಿಗೆದಾರರು ಹಗಲು ದರೋಡೆಗೆ ಇಳಿದಿದ್ದಾರೆ.

ತಮಾಷೆ ನೋಡಿ; ಹಳ್ಳಿಗಳಲ್ಲಿ ತಿಂಗಳಲ್ಲಿ ಹೆಚ್ಚಿನ ದಿನ ಕರೆಂಟೇ ಇರುವುದಿಲ್ಲ. ಮಳೆಗಾಲದಲ್ಲಿ ಸಣ್ಣ ಗಾಳಿ-ಮಳೆ ಬಂದರೂ ಸಾಕು, ಸೀಮೆ ಎಣ್ಣೆಯ ಬುಡ್ಡಿ ದೀಪದಂತೆ ಕರೆಂಟ್ ಹೋಯ್ದಾಡುತ್ತಾ ಕಡೆಗೆ ಹೋದ ವಿದ್ಯುತ್‍ ವಾರವಾದರೂ ಬರುವುದೇ ಇಲ್ಲ.! ಆಗಲೋ, ಈಗಲೋ ಹರಿದು ಬೀಳುವಂಥ ಜೀರ್ಣಗೊಂಡ ತಂತಿಗಳು, ಮುರಿದು ಬೀಳಲು ಸಿದ್ಧವಾಗಿರುವ ಕಂಬಗಳು, ಕಳಪೆ ಟ್ರಾನ್ಸ್‌ಫಾರ್ಮರ್‌ ಮತ್ತಿತರ ಉಪಕರಣಗಳಿಂದ ವಿದ್ಯುತ್‍ ಸಂಪರ್ಕ ಇರುವಲ್ಲೇ ಸಮಾಧಾನಕರ ವಿದ್ಯುತ್ ಪೂರೈಕೆ ಇಲ್ಲ. ಇಂಥದ್ದರಲ್ಲಿ ಮೋದಿಜಿ ಮನೆ-ಮನೆಗೆ ವಿದ್ಯುತ್‍ ಕೊಟ್ಟಿದ್ದೇನೆಂದು ಸ್ಥಾವರವಾಗುವ ತರಾತುರಿಯಲ್ಲಿರುವುದು ಹಾಸ್ಯಾಸ್ಪದವೇ ಸರಿ.

ಬೆಳಗ್ಗೆ ಒಂದು ದೇಶ; ರಾತ್ರಿ ಒಂದು ದೇಶ ಸುತ್ತುವ ಮೋದಿಜಿ ಭಾರತದ ಎಲ್ಲ ಹಳ್ಳಿಗಳು, ವಿದ್ಯುತ್‍ ದೀಪದಿಂದ ಝಗಮಗಿಸುತ್ತಿವೆ ಎಂದು ಒಣ ಪೋಸು ಕೊಡುವ ಉದ್ದೇಶದಿಂದ “ಆಟ” ಆಡುತ್ತಿದ್ದಾರೆಂದು ಜನತೆ ಮಾತನಾಡಿಕೊಳ್ಳುತ್ತಿದ್ದಾರೆ. ದೇಶ ಕತ್ತಲು ಮುಕ್ತವಾಗಿದೆ ಎಂದು ವಿಶ್ವಸಂಸ್ಥೆಗೆ ತೋರಿಸಿಕೊಳ್ಳುವ ಐಡಿಯಾ ಮೋದಿಯದು. ಸುಳ್ಳು ಫಲಕ ಹಾಕಲಾಗಿರುವ ಹಳ್ಳಿಗಳ ಚಿತ್ರ, ಉಪಗ್ರಹದ ಮೂಲಕ ತೆಗೆದು ವಿಶ್ವ ಸಮುದಾಯದ ಮುಂದೆ ಮಿಂಚುವ “ಸೌಭಾಗ್ಯ”ಕ್ಕಾಗಿ ಮೋದಿ ಪಠಾಲಮ್ ಕಾತರಿಸುತ್ತಿದೆಯಷ್ಟೇ.

ಇದೆಂಥ ಬೋಗಸ್ ಯೋಜನೆ ಮತ್ತು ಕೋಟಿ-ಕೋಟಿ ಲೂಟಿ ಪ್ರಾಜೆಕ್ಟ್ ಎಂಬುದಕ್ಕೆ ಸಣ್ಣದೊಂದು ಸ್ಯಾಂಪಲ್ ಇಲ್ಲಿದೆ. ಉತ್ತರ ಕನ್ನಡದ ಶಿರಸಿ ಉಪ ವಿಭಾಗದ 638 ಗ್ರಾಮಗಳಲ್ಲಿ ಬಹುತೇಕ ಹಳ್ಳಿಗಳು ಹಲವು ವರ್ಷದ ಹಿಂದೆಯೇ ವಿದ್ಯುತ್‍ ಸಂಪರ್ಕ ಹೊಂದಿವೆ. ಸೌಭಾಗ್ಯ ಯೋಜನೆಯಲ್ಲಿ ಕೇವಲ 8-10 ಮನೆಗಳಿಗಷ್ಟೇ ಕರೆಂಟ್‌ ಸಿಕ್ಕಿದೆ. ಆದರೆ ಎಲ್ಲ 638 ಹಳ್ಳಿಗಳಲ್ಲೂ “ಪ್ರಧಾನಿ ಸೌಭಾಗ್ಯ ಹಳ್ಳಿ” ಫೇಕ್ ಫಲಕವನ್ನು ವಿದ್ಯುತ್ ಇಲಾಖೆ ಹಾಕುತ್ತಿದೆ. ಈಗಾಗಲೇ ಸುಮಾರು ಐದುನೂರು ಹಳ್ಳಿಗಳಲ್ಲಿ ಸುಳ್ಳು ಬೋರ್ಡ್ ರಾರಾಜಿಸುತ್ತಿವೆ. ಒಂದು ಬೋರ್ಡಿಗೆ ಸರ್ಕಾರದ ಲೆಕ್ಕದಲ್ಲಿ 17,693 ರೂ. ವೆಚ್ಚ ತಗುಲಿದೆ. ಅಂದರೆ ಶಿರಸಿ ಉಪ ವಿಭಾದಲ್ಲೇ ನೂರಾರು ಕೋಟಿ ರೂ. ಟೆಂಡರ್ ಸ್ಕ್ಯಾಂಡಲ್ ಆಗುತ್ತಿದೆಯಾದರೆ, ಕರ್ನಾಟಕದಲ್ಲಿ ಎಷ್ಟು ಕೋಟಿ ಆಗಿರಬಹುದು..? ಇಡೀ ಭಾರತದಲ್ಲಾಗುತ್ತಿರುವ ಲೂಟಿಯ ಮೊತ್ತ ಎಷ್ಟು ಆಗಬಹುದು ಎಂಬುದನ್ನು ನೀವೇ ಊಹಿಸಿ..! ಈಗ ಮೋದಿಯ ಗಿಮಿಕ್‍ಗೆ ಏನೆನ್ನುತ್ತೀರಿ..!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...