Homeಕರ್ನಾಟಕವಿಮರ್ಶಿಸಿದ್ದಾಕ್ಕಾಗಿ ಕವಿಯ ಬಂಧನ ಅಸಂವಿಧಾನಿಕ: ಡಾ. ಬರಗೂರು ರಾಮಚಂದ್ರಪ್ಪ

ವಿಮರ್ಶಿಸಿದ್ದಾಕ್ಕಾಗಿ ಕವಿಯ ಬಂಧನ ಅಸಂವಿಧಾನಿಕ: ಡಾ. ಬರಗೂರು ರಾಮಚಂದ್ರಪ್ಪ

ಪತ್ರಕರ್ತ ಸಿರಾಜ್‌ ಬಿಸರಳ್ಳಿ ಮತ್ತು ರಾಜಭಕ್ಷಿ ಅವರ ಬಂಧನವನ್ನು ಖಂಡಿಸಿದ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಪತ್ರಕರ್ತ ಸಿರಾಜ್‌ ಬಿಸರಳ್ಳಿ ಮತ್ತು ರಾಜಭಕ್ಷಿ ಅವರ ಬಂಧನವನ್ನು ಬಂಡಾಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅವರು ತೀವ್ರವಾಗಿ ಖಂಡಿಸಿದ್ದಾರೆ.

“ಆನೆಗುಂದಿ ಉತ್ಸವದಲ್ಲಿ ಪೌರತ್ವಕಾಯಿದೆ ವಿರೋಧಿಸಿ ಕವಿತೆ ವಾಚನಮಾಡಿದ ಕಾರಣಕ್ಕೆ ಕವಿ ಸಿರಾಜ್ ಬಿಸರಳ್ಳಿ ಮತ್ತು  ಸಾಮಾಜಿಕ ಜಾಲತಾಣದಲ್ಲಿ ಅದನ್ನು ಹಂಚಿಕೊಂಡದ್ದಕ್ಕೆ ರಾಜಭಕ್ಷಿ ಅವರನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಒಪ್ಪಸಿರುವ ವಿದ್ಯಮಾನ ಆಘಾತಕಾರಿಯಾದದು. ವ್ಯಕ್ತಿಯ ತೇಜೊವಧೆ ಹಾಗೂ ಚಾರಿತ್ರ್ಯ ಹರಣ ಮಾಡುವ ಬರಹಗಳಾಗಿದ್ದರೆ ಸಂಬಂಧಪಟ್ಟವರು  ‘ಮಾನಹಾನಿ ಮೊಕದ್ದಮೆ’ ಹೂಡಬಹುದು. ಆದರೆ ಸರ್ಕಾರವೊಂದರ ನೀತಿ ನಿಲುವುಗಳ ವಿರೋಧವು ದೇಶವಿರೋಧಿಯಾಗುವುದಿಲ್ಲ.”

“ಜನಸಂಘದಿಂದ ಲೋಕಸಭೆಗೆ ಸ್ಪರ್ಧಿಸಿದ್ದ ಕನ್ನಡದ ಪ್ರಸಿದ್ಧ ಕವಿ ಗೋಪಾಲಕೃಷ್ಣ ಅಡಿಗರು ನೆಹರೂ ಬದುಕಿದ್ದಾಗಲೇ ಅವರನ್ನು ವಿರೋಧಿಸಿ, ವಿಡಂಬಿಸಿ ‘ನೆಹರೂ ನಿವೃತ್ತರಾಗುವುದಿಲ್ಲ’ ಎಂಬ ಕವಿತೆ ಬರೆದಾಗ, ವಾಚಿಸಿದಾಗ, ಯಾರೂ ಮೊಕದ್ದಮೆ ಹೂಡದೆ ಇರುವ ಸಹಿಷ್ಣು ವಾತಾವರಣವಿತ್ತು. ಈಗ ಇಂಥ ವಾತಾವರಣ ಇಲ್ಲವಾಗುತ್ತಿರುವುದು ಆತಂಕದ ವಿಷಯ.”

“ಅಷ್ಟೇ ಏಕೆ, ಕೆಲವು ರಾಜಕಾರಣಿಗಳು ಮೋದಿ, ಅಮಿತ್‍ಷಾ ಅವರನ್ನು ಇನ್ನು ಕೆಲವರು ರಾಹುಲ್‍ಗಾಂಧಿ, ಸೋನಿಯಾಗಾಂಧಿಯವರನ್ನೂ ಬೀದಿ ಬೀದಿಗಳಲ್ಲಿ ಬಾಯಿಗೆ ಬಂದಂತೆ ಅಸಂಸದೀಯ ಭಾಷೆಯಲ್ಲಿ ನಿಂದಿಸಿದರೂ ಪರಸ್ಪರ ಮಾನಹಾನಿ ಮೊಕದ್ದಮೆ ಹೂಡುವುದಿಲ್ಲ”

“ಒಂದುವರ್ಷದ ಹಿಂದೆ ದೆಹಲಿಯ ಜಂತರ್ ಮಂತರ್ ನಲ್ಲಿ ಸಂವಿಧಾನದ ಪ್ರತಿಸುಟ್ಟು ‘ಅಂಬೇಡ್ಕರ್ ಗೆ ಧಿಕ್ಕಾರ ಕೂಗಿದವರ ವಿರುದ್ಧ ಯಾವ ಕ್ರಮ ಜರುಗಿಸುಲಾಯಿತೊ ಗೊತ್ತಿಲ್ಲ. ಗಾಂಧಿ ಚಿತ್ರಕ್ಕೆ ಗುಂಡು ಹಾರಿಸಿದವರು, ʼಗೋಡ್ಸೆ ದೇಶಭಕ್ತ ಗಾಂಧಿ ಪಾಕಿಸ್ತಾನದ ರಾಷ್ಟ್ರಪಿತʼ ಎಂದವರು ಯಾವ ಬಂಧನಕ್ಕೂ ಬಳಗಾಗಿಲ್ಲ. ಇಂತಹ ವಿಪರ್ಯಾಸಗಳ ನಡುವೆ ಕವಿಯ ಬಂಧನ ಮಾತ್ರ ಆಗುತ್ತಿದೆ. ಒಪ್ಪಿತವಾಗದ ವಿಚಾರಗಳ ಬಗ್ಗೆ ವಿಮರ್ಶೆ ಮತ್ತು ಟೀಕೆಗಳ ‘ಹಕ್ಕು’ ಚಲಾಯಿಸುವ ಬದಲು ಬಂಧನದ ‘ಅಧಿಕಾರ’ ಬಳಸುವುದು ಸಂವಿಧಾನದ ಆಶಯಕ್ಕೆ ವಿರೋದಿಯಾದ ಖಂಡನೀಯ ಕ್ರಮವಾಗುತ್ತದೆ” ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಡಾ.ಬರಗೂರು ರಾಮಚಂದ್ರಪ್ಪ ಬಂಧನವನ್ನು ತೀವ್ರವಾಗಿ ಖಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...