Homeಕರ್ನಾಟಕವಿಮರ್ಶಿಸಿದ್ದಾಕ್ಕಾಗಿ ಕವಿಯ ಬಂಧನ ಅಸಂವಿಧಾನಿಕ: ಡಾ. ಬರಗೂರು ರಾಮಚಂದ್ರಪ್ಪ

ವಿಮರ್ಶಿಸಿದ್ದಾಕ್ಕಾಗಿ ಕವಿಯ ಬಂಧನ ಅಸಂವಿಧಾನಿಕ: ಡಾ. ಬರಗೂರು ರಾಮಚಂದ್ರಪ್ಪ

ಪತ್ರಕರ್ತ ಸಿರಾಜ್‌ ಬಿಸರಳ್ಳಿ ಮತ್ತು ರಾಜಭಕ್ಷಿ ಅವರ ಬಂಧನವನ್ನು ಖಂಡಿಸಿದ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಪತ್ರಕರ್ತ ಸಿರಾಜ್‌ ಬಿಸರಳ್ಳಿ ಮತ್ತು ರಾಜಭಕ್ಷಿ ಅವರ ಬಂಧನವನ್ನು ಬಂಡಾಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅವರು ತೀವ್ರವಾಗಿ ಖಂಡಿಸಿದ್ದಾರೆ.

“ಆನೆಗುಂದಿ ಉತ್ಸವದಲ್ಲಿ ಪೌರತ್ವಕಾಯಿದೆ ವಿರೋಧಿಸಿ ಕವಿತೆ ವಾಚನಮಾಡಿದ ಕಾರಣಕ್ಕೆ ಕವಿ ಸಿರಾಜ್ ಬಿಸರಳ್ಳಿ ಮತ್ತು  ಸಾಮಾಜಿಕ ಜಾಲತಾಣದಲ್ಲಿ ಅದನ್ನು ಹಂಚಿಕೊಂಡದ್ದಕ್ಕೆ ರಾಜಭಕ್ಷಿ ಅವರನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಒಪ್ಪಸಿರುವ ವಿದ್ಯಮಾನ ಆಘಾತಕಾರಿಯಾದದು. ವ್ಯಕ್ತಿಯ ತೇಜೊವಧೆ ಹಾಗೂ ಚಾರಿತ್ರ್ಯ ಹರಣ ಮಾಡುವ ಬರಹಗಳಾಗಿದ್ದರೆ ಸಂಬಂಧಪಟ್ಟವರು  ‘ಮಾನಹಾನಿ ಮೊಕದ್ದಮೆ’ ಹೂಡಬಹುದು. ಆದರೆ ಸರ್ಕಾರವೊಂದರ ನೀತಿ ನಿಲುವುಗಳ ವಿರೋಧವು ದೇಶವಿರೋಧಿಯಾಗುವುದಿಲ್ಲ.”

“ಜನಸಂಘದಿಂದ ಲೋಕಸಭೆಗೆ ಸ್ಪರ್ಧಿಸಿದ್ದ ಕನ್ನಡದ ಪ್ರಸಿದ್ಧ ಕವಿ ಗೋಪಾಲಕೃಷ್ಣ ಅಡಿಗರು ನೆಹರೂ ಬದುಕಿದ್ದಾಗಲೇ ಅವರನ್ನು ವಿರೋಧಿಸಿ, ವಿಡಂಬಿಸಿ ‘ನೆಹರೂ ನಿವೃತ್ತರಾಗುವುದಿಲ್ಲ’ ಎಂಬ ಕವಿತೆ ಬರೆದಾಗ, ವಾಚಿಸಿದಾಗ, ಯಾರೂ ಮೊಕದ್ದಮೆ ಹೂಡದೆ ಇರುವ ಸಹಿಷ್ಣು ವಾತಾವರಣವಿತ್ತು. ಈಗ ಇಂಥ ವಾತಾವರಣ ಇಲ್ಲವಾಗುತ್ತಿರುವುದು ಆತಂಕದ ವಿಷಯ.”

“ಅಷ್ಟೇ ಏಕೆ, ಕೆಲವು ರಾಜಕಾರಣಿಗಳು ಮೋದಿ, ಅಮಿತ್‍ಷಾ ಅವರನ್ನು ಇನ್ನು ಕೆಲವರು ರಾಹುಲ್‍ಗಾಂಧಿ, ಸೋನಿಯಾಗಾಂಧಿಯವರನ್ನೂ ಬೀದಿ ಬೀದಿಗಳಲ್ಲಿ ಬಾಯಿಗೆ ಬಂದಂತೆ ಅಸಂಸದೀಯ ಭಾಷೆಯಲ್ಲಿ ನಿಂದಿಸಿದರೂ ಪರಸ್ಪರ ಮಾನಹಾನಿ ಮೊಕದ್ದಮೆ ಹೂಡುವುದಿಲ್ಲ”

“ಒಂದುವರ್ಷದ ಹಿಂದೆ ದೆಹಲಿಯ ಜಂತರ್ ಮಂತರ್ ನಲ್ಲಿ ಸಂವಿಧಾನದ ಪ್ರತಿಸುಟ್ಟು ‘ಅಂಬೇಡ್ಕರ್ ಗೆ ಧಿಕ್ಕಾರ ಕೂಗಿದವರ ವಿರುದ್ಧ ಯಾವ ಕ್ರಮ ಜರುಗಿಸುಲಾಯಿತೊ ಗೊತ್ತಿಲ್ಲ. ಗಾಂಧಿ ಚಿತ್ರಕ್ಕೆ ಗುಂಡು ಹಾರಿಸಿದವರು, ʼಗೋಡ್ಸೆ ದೇಶಭಕ್ತ ಗಾಂಧಿ ಪಾಕಿಸ್ತಾನದ ರಾಷ್ಟ್ರಪಿತʼ ಎಂದವರು ಯಾವ ಬಂಧನಕ್ಕೂ ಬಳಗಾಗಿಲ್ಲ. ಇಂತಹ ವಿಪರ್ಯಾಸಗಳ ನಡುವೆ ಕವಿಯ ಬಂಧನ ಮಾತ್ರ ಆಗುತ್ತಿದೆ. ಒಪ್ಪಿತವಾಗದ ವಿಚಾರಗಳ ಬಗ್ಗೆ ವಿಮರ್ಶೆ ಮತ್ತು ಟೀಕೆಗಳ ‘ಹಕ್ಕು’ ಚಲಾಯಿಸುವ ಬದಲು ಬಂಧನದ ‘ಅಧಿಕಾರ’ ಬಳಸುವುದು ಸಂವಿಧಾನದ ಆಶಯಕ್ಕೆ ವಿರೋದಿಯಾದ ಖಂಡನೀಯ ಕ್ರಮವಾಗುತ್ತದೆ” ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಡಾ.ಬರಗೂರು ರಾಮಚಂದ್ರಪ್ಪ ಬಂಧನವನ್ನು ತೀವ್ರವಾಗಿ ಖಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...