Homeಮುಖಪುಟಬಯೋಪಿಕ್ ವಿವಾದ: '800' ಚಿತ್ರ ಕೈಬಿಡುವಂತೆ ವಿಜಯ್ ಸೇತುಪತಿಗೆ ಪತ್ರ ಬರೆದ ಮುತ್ತಯ್ಯ ಮುರುಳೀಧರನ್!

ಬಯೋಪಿಕ್ ವಿವಾದ: ‘800’ ಚಿತ್ರ ಕೈಬಿಡುವಂತೆ ವಿಜಯ್ ಸೇತುಪತಿಗೆ ಪತ್ರ ಬರೆದ ಮುತ್ತಯ್ಯ ಮುರುಳೀಧರನ್!

ಒಬ್ಬ ಉತ್ತಮ ಕಲಾವಿದನ ಭವಿಷ್ಯ ಈ ಚಿತ್ರದಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಸೇತುಪತಿ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ ಎಂದು ಮುರಳೀಧರನ್ ತಿಳಿಸಿದ್ದಾರೆ.

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಜೀವನ ಚರಿತ್ರೆ ಆಧಾರಿತ ಚಲನಚಿತ್ರ “800” ಕುರಿತು ತಮಿಳುನಾಡಿನಾಡಿನಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಮುಖ್ಯಪಾತ್ರಧಾರಿಯಾಗಿ ಅಭಿನಯಿಸಿರುವ ನಟ ವಿಜಯ್ ಸೇತುಪತಿಗೆ ಪತ್ರಬರೆದಿರುವ ಮುತ್ತಯ್ಯ ಮುರುಳೀಧರನ್, ಈ ಚಿತ್ರದಿಂದ ಹೊರಗುಳಿಯುವಂತೆ ಅವರನ್ನು ಕೇಳಿಕೊಂಡಿದ್ದಾರೆ.

ಖ್ಯಾತ ಕ್ರಿಕೆಟ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್ ಅವರ ಜೀವನಚರಿತ್ರೆ ಆಧಾರಿತ ಚಲನಚಿತ್ರ “800” ನಿರ್ಮಾಣವಾಗುತ್ತಿದ್ದು, ತಮಿಳಿನ ಪ್ರತಿಭಾವಂತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಆದರೆ, ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದರು. ಹಾಗಾಗಿ ಈ ಚಿತ್ರಕ್ಕೆ ತಮಿಳುನಾಡಿನ ಹಲವೆಡೆ ವಿರೋಧ ವ್ಯಕ್ತವಾಗಿತ್ತು.

ಇದರ ಪರಿಣಾಮ, ಇಂದು ಸ್ವತಃ ಪತ್ರಬರೆದಿರುವ ಮಾಜಿ ಕ್ರಿಕೆಟಿಗ, “ನನ್ನ ಜೀವನ ಚರಿತ್ರೆಯಾಧಾರಿತ ಚಿತ್ರ ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಇದಕ್ಕೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಈ ಸಿನಿಮಾವನ್ನು ಕೈಬಿಡುವಂತೆ ವಿಜಯ್ ಸೇತುಪತಿಗೆ ತೀವ್ರ ಒತ್ತಡ ಬರುತ್ತಿರುವುದನ್ನು ಗಮನಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಜೊತೆಗೆ ತಮಿಳು ಚಲನಚಿತ್ರದಲ್ಲಿ ಒಬ್ಬ ಉತ್ತಮ ಕಲಾವಿದನ ಭವಿಷ್ಯ ಇದರಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾರೆ.

“ಪ್ರತಿ ಬಾರಿಯೂ ಇಂತಹ ತಡೆಗಳನ್ನು ಎದುರಿಸಿಯೇ ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಭವಿಷ್ಯದ ಪೀಳಿಗೆಗೆ ಮತ್ತು ಕ್ರಿಕೆಟ್ ಆಡಬಯಸುವ ಯುವಕರಿಗೆ ಸ್ಪೂರ್ತಿಯಾಗಲೆಂದೇ ನನ್ನ ಜೀವನ ಚರಿತ್ರೆಯನ್ನು ಚಿತ್ರವಾಗಿಸಲು ಸಮ್ಮತಿಸಿದ್ದೆ. ಆದರೆ ಈಗ ಅದಕ್ಕೂ ತೊಡಕು ಉಂಟಾಗುತ್ತಿದೆ. ಆದರೆ ಈ ಸಿನಿಮಾವನ್ನು ಮುಂದಿನ ಜನಾಂಗಕ್ಕೆ ಸ್ಪೂರ್ತಿಯಾಗುವಂತೆ ತಲುಪಿಸುವುದಾಗಿ ನಿರ್ಮಾಪಕರು ದೃಢವಾದ ಆಶ್ವಾಸನೆಯನ್ನು ನೀಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ವಿವಾದ ಏರ್ಪಟ್ಟಾಗಿನಿಂದ ನನಗೆ ಬೆಂಬಲ ನೀಡಿದ ಪತ್ರಿಕೋದ್ಯಮಕ್ಕೂ, ಗಣ್ಯರಿಗೂ, ಅಭಿಮಾನಿಗಳಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಇವರು ಬರೆದಿರುವ ಪತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ವಿಜಯ್ ಸೇತುಪತಿ, “ಧನ್ಯವಾದಗಳು, ನಮಸ್ಕಾರ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

ಮುತ್ತಯ್ಯ ಮುರುಳೀಧರನ್ ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇವರ ಬಯೋಪಿಕ್‌ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದರು.

“ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ನಿನ್ನೆ ಹೇಳಿದ್ದರು.

ಹಿರಿಯ ನಿರ್ದೇಶಕ ಭಾರತಿರಾಜ, “ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದರು.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದರು.

ಈ ಎಲ್ಲಾ ಕಾರಣಗಳಿಂದ ಈ ಚಿತ್ರದಿಂದ ಹಿಂದೆ ಸರಿಯುವಂತೆ ಮುತ್ತಯ್ಯ ಪತ್ರ ಬರೆದಿರುವುದು, ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳಲ್ಲಿ ನಿರಾಸೆಯನ್ನುಂಟುಮಾಡಿದೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...