Homeಮುಖಪುಟಬಯೋಪಿಕ್ ವಿವಾದ: '800' ಚಿತ್ರ ಕೈಬಿಡುವಂತೆ ವಿಜಯ್ ಸೇತುಪತಿಗೆ ಪತ್ರ ಬರೆದ ಮುತ್ತಯ್ಯ ಮುರುಳೀಧರನ್!

ಬಯೋಪಿಕ್ ವಿವಾದ: ‘800’ ಚಿತ್ರ ಕೈಬಿಡುವಂತೆ ವಿಜಯ್ ಸೇತುಪತಿಗೆ ಪತ್ರ ಬರೆದ ಮುತ್ತಯ್ಯ ಮುರುಳೀಧರನ್!

ಒಬ್ಬ ಉತ್ತಮ ಕಲಾವಿದನ ಭವಿಷ್ಯ ಈ ಚಿತ್ರದಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಸೇತುಪತಿ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ ಎಂದು ಮುರಳೀಧರನ್ ತಿಳಿಸಿದ್ದಾರೆ.

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಜೀವನ ಚರಿತ್ರೆ ಆಧಾರಿತ ಚಲನಚಿತ್ರ “800” ಕುರಿತು ತಮಿಳುನಾಡಿನಾಡಿನಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಮುಖ್ಯಪಾತ್ರಧಾರಿಯಾಗಿ ಅಭಿನಯಿಸಿರುವ ನಟ ವಿಜಯ್ ಸೇತುಪತಿಗೆ ಪತ್ರಬರೆದಿರುವ ಮುತ್ತಯ್ಯ ಮುರುಳೀಧರನ್, ಈ ಚಿತ್ರದಿಂದ ಹೊರಗುಳಿಯುವಂತೆ ಅವರನ್ನು ಕೇಳಿಕೊಂಡಿದ್ದಾರೆ.

ಖ್ಯಾತ ಕ್ರಿಕೆಟ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್ ಅವರ ಜೀವನಚರಿತ್ರೆ ಆಧಾರಿತ ಚಲನಚಿತ್ರ “800” ನಿರ್ಮಾಣವಾಗುತ್ತಿದ್ದು, ತಮಿಳಿನ ಪ್ರತಿಭಾವಂತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಆದರೆ, ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದರು. ಹಾಗಾಗಿ ಈ ಚಿತ್ರಕ್ಕೆ ತಮಿಳುನಾಡಿನ ಹಲವೆಡೆ ವಿರೋಧ ವ್ಯಕ್ತವಾಗಿತ್ತು.

ಇದರ ಪರಿಣಾಮ, ಇಂದು ಸ್ವತಃ ಪತ್ರಬರೆದಿರುವ ಮಾಜಿ ಕ್ರಿಕೆಟಿಗ, “ನನ್ನ ಜೀವನ ಚರಿತ್ರೆಯಾಧಾರಿತ ಚಿತ್ರ ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಇದಕ್ಕೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಈ ಸಿನಿಮಾವನ್ನು ಕೈಬಿಡುವಂತೆ ವಿಜಯ್ ಸೇತುಪತಿಗೆ ತೀವ್ರ ಒತ್ತಡ ಬರುತ್ತಿರುವುದನ್ನು ಗಮನಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಜೊತೆಗೆ ತಮಿಳು ಚಲನಚಿತ್ರದಲ್ಲಿ ಒಬ್ಬ ಉತ್ತಮ ಕಲಾವಿದನ ಭವಿಷ್ಯ ಇದರಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾರೆ.

“ಪ್ರತಿ ಬಾರಿಯೂ ಇಂತಹ ತಡೆಗಳನ್ನು ಎದುರಿಸಿಯೇ ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಭವಿಷ್ಯದ ಪೀಳಿಗೆಗೆ ಮತ್ತು ಕ್ರಿಕೆಟ್ ಆಡಬಯಸುವ ಯುವಕರಿಗೆ ಸ್ಪೂರ್ತಿಯಾಗಲೆಂದೇ ನನ್ನ ಜೀವನ ಚರಿತ್ರೆಯನ್ನು ಚಿತ್ರವಾಗಿಸಲು ಸಮ್ಮತಿಸಿದ್ದೆ. ಆದರೆ ಈಗ ಅದಕ್ಕೂ ತೊಡಕು ಉಂಟಾಗುತ್ತಿದೆ. ಆದರೆ ಈ ಸಿನಿಮಾವನ್ನು ಮುಂದಿನ ಜನಾಂಗಕ್ಕೆ ಸ್ಪೂರ್ತಿಯಾಗುವಂತೆ ತಲುಪಿಸುವುದಾಗಿ ನಿರ್ಮಾಪಕರು ದೃಢವಾದ ಆಶ್ವಾಸನೆಯನ್ನು ನೀಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ವಿವಾದ ಏರ್ಪಟ್ಟಾಗಿನಿಂದ ನನಗೆ ಬೆಂಬಲ ನೀಡಿದ ಪತ್ರಿಕೋದ್ಯಮಕ್ಕೂ, ಗಣ್ಯರಿಗೂ, ಅಭಿಮಾನಿಗಳಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಇವರು ಬರೆದಿರುವ ಪತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ವಿಜಯ್ ಸೇತುಪತಿ, “ಧನ್ಯವಾದಗಳು, ನಮಸ್ಕಾರ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

ಮುತ್ತಯ್ಯ ಮುರುಳೀಧರನ್ ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇವರ ಬಯೋಪಿಕ್‌ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದರು.

“ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ನಿನ್ನೆ ಹೇಳಿದ್ದರು.

ಹಿರಿಯ ನಿರ್ದೇಶಕ ಭಾರತಿರಾಜ, “ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದರು.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದರು.

ಈ ಎಲ್ಲಾ ಕಾರಣಗಳಿಂದ ಈ ಚಿತ್ರದಿಂದ ಹಿಂದೆ ಸರಿಯುವಂತೆ ಮುತ್ತಯ್ಯ ಪತ್ರ ಬರೆದಿರುವುದು, ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳಲ್ಲಿ ನಿರಾಸೆಯನ್ನುಂಟುಮಾಡಿದೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...