Homeಮುಖಪುಟಬಯೋಪಿಕ್ ವಿವಾದ: '800' ಚಿತ್ರ ಕೈಬಿಡುವಂತೆ ವಿಜಯ್ ಸೇತುಪತಿಗೆ ಪತ್ರ ಬರೆದ ಮುತ್ತಯ್ಯ ಮುರುಳೀಧರನ್!

ಬಯೋಪಿಕ್ ವಿವಾದ: ‘800’ ಚಿತ್ರ ಕೈಬಿಡುವಂತೆ ವಿಜಯ್ ಸೇತುಪತಿಗೆ ಪತ್ರ ಬರೆದ ಮುತ್ತಯ್ಯ ಮುರುಳೀಧರನ್!

ಒಬ್ಬ ಉತ್ತಮ ಕಲಾವಿದನ ಭವಿಷ್ಯ ಈ ಚಿತ್ರದಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಸೇತುಪತಿ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ ಎಂದು ಮುರಳೀಧರನ್ ತಿಳಿಸಿದ್ದಾರೆ.

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಜೀವನ ಚರಿತ್ರೆ ಆಧಾರಿತ ಚಲನಚಿತ್ರ “800” ಕುರಿತು ತಮಿಳುನಾಡಿನಾಡಿನಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಮುಖ್ಯಪಾತ್ರಧಾರಿಯಾಗಿ ಅಭಿನಯಿಸಿರುವ ನಟ ವಿಜಯ್ ಸೇತುಪತಿಗೆ ಪತ್ರಬರೆದಿರುವ ಮುತ್ತಯ್ಯ ಮುರುಳೀಧರನ್, ಈ ಚಿತ್ರದಿಂದ ಹೊರಗುಳಿಯುವಂತೆ ಅವರನ್ನು ಕೇಳಿಕೊಂಡಿದ್ದಾರೆ.

ಖ್ಯಾತ ಕ್ರಿಕೆಟ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್ ಅವರ ಜೀವನಚರಿತ್ರೆ ಆಧಾರಿತ ಚಲನಚಿತ್ರ “800” ನಿರ್ಮಾಣವಾಗುತ್ತಿದ್ದು, ತಮಿಳಿನ ಪ್ರತಿಭಾವಂತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಆದರೆ, ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದರು. ಹಾಗಾಗಿ ಈ ಚಿತ್ರಕ್ಕೆ ತಮಿಳುನಾಡಿನ ಹಲವೆಡೆ ವಿರೋಧ ವ್ಯಕ್ತವಾಗಿತ್ತು.

ಇದರ ಪರಿಣಾಮ, ಇಂದು ಸ್ವತಃ ಪತ್ರಬರೆದಿರುವ ಮಾಜಿ ಕ್ರಿಕೆಟಿಗ, “ನನ್ನ ಜೀವನ ಚರಿತ್ರೆಯಾಧಾರಿತ ಚಿತ್ರ ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಇದಕ್ಕೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಈ ಸಿನಿಮಾವನ್ನು ಕೈಬಿಡುವಂತೆ ವಿಜಯ್ ಸೇತುಪತಿಗೆ ತೀವ್ರ ಒತ್ತಡ ಬರುತ್ತಿರುವುದನ್ನು ಗಮನಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಜೊತೆಗೆ ತಮಿಳು ಚಲನಚಿತ್ರದಲ್ಲಿ ಒಬ್ಬ ಉತ್ತಮ ಕಲಾವಿದನ ಭವಿಷ್ಯ ಇದರಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾರೆ.

“ಪ್ರತಿ ಬಾರಿಯೂ ಇಂತಹ ತಡೆಗಳನ್ನು ಎದುರಿಸಿಯೇ ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಭವಿಷ್ಯದ ಪೀಳಿಗೆಗೆ ಮತ್ತು ಕ್ರಿಕೆಟ್ ಆಡಬಯಸುವ ಯುವಕರಿಗೆ ಸ್ಪೂರ್ತಿಯಾಗಲೆಂದೇ ನನ್ನ ಜೀವನ ಚರಿತ್ರೆಯನ್ನು ಚಿತ್ರವಾಗಿಸಲು ಸಮ್ಮತಿಸಿದ್ದೆ. ಆದರೆ ಈಗ ಅದಕ್ಕೂ ತೊಡಕು ಉಂಟಾಗುತ್ತಿದೆ. ಆದರೆ ಈ ಸಿನಿಮಾವನ್ನು ಮುಂದಿನ ಜನಾಂಗಕ್ಕೆ ಸ್ಪೂರ್ತಿಯಾಗುವಂತೆ ತಲುಪಿಸುವುದಾಗಿ ನಿರ್ಮಾಪಕರು ದೃಢವಾದ ಆಶ್ವಾಸನೆಯನ್ನು ನೀಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ವಿವಾದ ಏರ್ಪಟ್ಟಾಗಿನಿಂದ ನನಗೆ ಬೆಂಬಲ ನೀಡಿದ ಪತ್ರಿಕೋದ್ಯಮಕ್ಕೂ, ಗಣ್ಯರಿಗೂ, ಅಭಿಮಾನಿಗಳಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ಇವರು ಬರೆದಿರುವ ಪತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ವಿಜಯ್ ಸೇತುಪತಿ, “ಧನ್ಯವಾದಗಳು, ನಮಸ್ಕಾರ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

ಮುತ್ತಯ್ಯ ಮುರುಳೀಧರನ್ ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇವರ ಬಯೋಪಿಕ್‌ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದರು.

“ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ನಿನ್ನೆ ಹೇಳಿದ್ದರು.

ಹಿರಿಯ ನಿರ್ದೇಶಕ ಭಾರತಿರಾಜ, “ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದರು.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದರು.

ಈ ಎಲ್ಲಾ ಕಾರಣಗಳಿಂದ ಈ ಚಿತ್ರದಿಂದ ಹಿಂದೆ ಸರಿಯುವಂತೆ ಮುತ್ತಯ್ಯ ಪತ್ರ ಬರೆದಿರುವುದು, ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳಲ್ಲಿ ನಿರಾಸೆಯನ್ನುಂಟುಮಾಡಿದೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...