Homeಮುಖಪುಟಬಿರೇನ್ ಸಿಂಗ್ ಸರ್ಕಾರ ಕರೆದ ಸಭೆಗೆ ಹಾಜರಾಗದಿರಿ - ತನ್ನ ಸದಸ್ಯರಿಗೆ ಎನ್‌ಪಿಪಿ ಸೂಚನೆ

ಬಿರೇನ್ ಸಿಂಗ್ ಸರ್ಕಾರ ಕರೆದ ಸಭೆಗೆ ಹಾಜರಾಗದಿರಿ – ತನ್ನ ಸದಸ್ಯರಿಗೆ ಎನ್‌ಪಿಪಿ ಸೂಚನೆ

- Advertisement -
- Advertisement -

ಬಿರೇನ್ ಸಿಂಗ್ ಸರ್ಕಾರ ಕರೆದ ಯಾವುದೇ ಸಭೆಗಳಿಗೆ ಹಾಜರಾಗದಂತೆ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ತನ್ನ ಸದಸ್ಯರಿಗೆ ಸೂಚನೆ ನೀಡಿದೆ. ರಾಜ್ಯಾಧ್ಯಕ್ಷ ಎನ್ ಕೈಸಿ ಅವರು ಸಹಿ ಮಾಡಿದ ಸಲಹೆಯು ಗುರುವಾರ ಹೊರಡಿಸಲಾಗಿದೆ. ಈ ಹಿಂದೆ ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿದ್ದ ಎನ್‌ಪಿಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸು ಪಡೆದಿತ್ತು. ಬಿರೇನ್ ಸಿಂಗ್ ಸರ್ಕಾರ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನವೆಂಬರ್ 17 ರಂದು ಮಣಿಪುರದ ಬಿರೆನ್‌ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ಹಿಂಪಡೆದಿದ್ದಾರೆ ಎಂದು ರಾಜ್ಯಾಧ್ಯಕ್ಷ ಎನ್‌ ಕೈಸಿ ಅವರು ಒತ್ತಿಹೇಳಿದ್ದಾರೆ. “ಪರಿಣಾಮವಾಗಿ, ಎಲ್ಲಾ NPP ಸದಸ್ಯರು ಈ ನಿರ್ಧಾರವನ್ನು ಅನುಸರಿಸುವ ಅಗತ್ಯವಿದೆ,” ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯಾವುದೇ ಅಧಿಕೃತ ಹೇಳಿಕೆಗಳನ್ನು ನೀಡುವ ಮೊದಲು ಅಥವಾ ಈ ವಿಷಯದ ಬಗ್ಗೆ ಮಾಧ್ಯಮಗಳೊಂದಿಗೆ ತೊಡಗಿಸಿಕೊಳ್ಳುವ ಮೊದಲು ಸದಸ್ಯರು ರಾಜ್ಯ ಅಥವಾ ರಾಷ್ಟ್ರೀಯ ಅಧ್ಯಕ್ಷರಿಂದ ಅನುಮತಿ ಪಡೆಯಬೇಕು ಎಂದು ಸಲಹೆಯು ಹೇಳಿದೆ. ನವೆಂಬರ್ 18 ರಂದು ಸಿಎಂ ಸೆಕ್ರೆಟರಿಯೇಟ್‌ನಲ್ಲಿ ಬಿರೆನ್ ಸಿಂಗ್ ಕರೆದಿದ್ದ ಎನ್‌ಡಿಎ ಸಭೆಯಲ್ಲಿ ಮೂವರು ಎನ್‌ಪಿಪಿ ಶಾಸಕರು ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಪಕ್ಷದ ಈ ನಿರ್ದೇಶನ ಬಂದಿದೆ. ಬಿರೇನ್ ಸಿಂಗ್ ಸರ್ಕಾರ

ಈ ನಡುವೆ, ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕೇಂದ್ರ ಸರ್ಕಾರವು “ಸಾಮೂಹಿಕ ಕಾರ್ಯಾಚರಣೆ” ಪ್ರಾರಂಭಿಸಬೇಕೆಂದು ಒತ್ತಾಯಿಸಿ ಮಣಿಪುರದ ಆಡಳಿತಾರೂಢ ಎನ್‌ಡಿಎ ಶಾಸಕರು ಅಂಗೀಕರಿಸಿದ ನಿರ್ಣಯವು “ವಿಭಜಕ, ಏಕಪಕ್ಷೀಯ ಮತ್ತು ಕೋಮುವಾದ” ಆಗಿದೆ ಎಂದು ಕುಕಿ-ಹ್ಮಾರ್-ಜೋಮಿ ಬುಡಕಟ್ಟು ಸಮುದಾಯಗಳ ಹತ್ತು ಶಾಸಕರು ಹೇಳಿದ್ದರು. ವಿಶೇಷವೆಂದರೆ, ಈ ಹತ್ತು ಶಾಸಕರಲ್ಲಿ 7 ಮಂದಿ ಬಿಜೆಪಿ ಪಕ್ಷದವರಾಗಿದ್ದು, ಒಬ್ಬರು ಪಕ್ಷೇತರ ಶಾಸಕ ಮತ್ತು ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ ಶಾಸಕರಾಗಿದ್ದಾರೆ.

ಕೇವಲ ಒಂದು ಸಮುದಾಯದ ವಿರುದ್ಧ ಸಾಮೂಹಿಕ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು ಪಕ್ಷಪಾತವಾಗಿದೆ ಎಂದು ಈ ಶಾಸಕರು ಹೇಳಿದ್ದಾರೆ. “ಎಲ್ಲಾ ಬಂಡುಕೋರ ಗುಂಪುಗಳಿಂದ ಎಲ್ಲಾ ಅಕ್ರಮ ಶಸ್ತ್ರಾಸ್ತ್ರಗಳನ್ನು ಮರುಪಡೆಯಲು ರಾಜ್ಯದಾದ್ಯಂತ ಸಾಮೂಹಿಕ ಕಾರ್ಯಾಚರಣೆಗಳನ್ನು ನಡೆಸಬೇಕು” ಎಂದು ಶಾಸಕರು ಹೇಳಿದ್ದಾರೆ.

10 ಮಂದಿ ಶಾಸಕರ ಹೇಳಿಕೆಗೂ ಒಂದು ದಿನ ಮುಂಚಿತವಾಗಿ, ನವೆಂಬರ್ 18 ರಂದು, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ 28 ಎನ್‌ಡಿಎ ಶಾಸಕರು ನವೆಂಬರ್ 11 ರಂದು ಜಿರಿಬಾಮ್‌ನಲ್ಲಿ ಆರು ಮೈತೇಯಿ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿ ಹತ್ಯೆಗೈದ ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ಣಯವನ್ನು ಅಂಗೀಕರಿಸಿದ್ದರು. ಈ ನಿರ್ಣಯದಲ್ಲಿ, ಏಳು ದಿನಗಳೊಳಗೆ ಶಂಕಿತ ಉಗ್ರರನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಕಾರಣ ರಾಜ್ಯದ ಐದು ಕಣಿವೆ ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ (AFSPA)ಯನ್ನು ಜಾರಿಗೊಳಿಸಿರುವುದನ್ನು ಪರಿಶೀಲಿಸುವಂತೆ ಎನ್‌ಡಿಎ ಶಾಸಕರು ಒತ್ತಾಯಿಸಿದ್ದರು. “ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆ” ಗಾಗಿ ಶೋಧನೆ ನಡೆಸಲು, ಜನರನ್ನು ಬಂಧಿಸಲು ಮತ್ತು ಗುಂಡಿನ ದಾಳಿ ನಡೆಸಲು ಸೇನಾ ಸಿಬ್ಬಂದಿಗೆ AFSPA ಕಾಯಿದೆಯು ಅಧಿಕಾರವನ್ನು ನೀಡುತ್ತದೆ. ಒಂದು ವೇಳೆ ಈ ದಾಳಿಯಲ್ಲಿ ವ್ಯಕ್ತಿಯು ಮೃತಪಟ್ಟರೆ ಕಾಯಿದೆ ಸೇನಾ ಸಿಬ್ಬಂದಿಗೆ ರಕ್ಷಣೆ ನೀಡುತ್ತದೆ.

ಇದನ್ನೂ ಓದಿ: ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...