Homeಮುಖಪುಟಬಿರೇನ್ ಸಿಂಗ್ ಸರ್ಕಾರ ಕರೆದ ಸಭೆಗೆ ಹಾಜರಾಗದಿರಿ - ತನ್ನ ಸದಸ್ಯರಿಗೆ ಎನ್‌ಪಿಪಿ ಸೂಚನೆ

ಬಿರೇನ್ ಸಿಂಗ್ ಸರ್ಕಾರ ಕರೆದ ಸಭೆಗೆ ಹಾಜರಾಗದಿರಿ – ತನ್ನ ಸದಸ್ಯರಿಗೆ ಎನ್‌ಪಿಪಿ ಸೂಚನೆ

- Advertisement -
- Advertisement -

ಬಿರೇನ್ ಸಿಂಗ್ ಸರ್ಕಾರ ಕರೆದ ಯಾವುದೇ ಸಭೆಗಳಿಗೆ ಹಾಜರಾಗದಂತೆ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ತನ್ನ ಸದಸ್ಯರಿಗೆ ಸೂಚನೆ ನೀಡಿದೆ. ರಾಜ್ಯಾಧ್ಯಕ್ಷ ಎನ್ ಕೈಸಿ ಅವರು ಸಹಿ ಮಾಡಿದ ಸಲಹೆಯು ಗುರುವಾರ ಹೊರಡಿಸಲಾಗಿದೆ. ಈ ಹಿಂದೆ ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿದ್ದ ಎನ್‌ಪಿಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸು ಪಡೆದಿತ್ತು. ಬಿರೇನ್ ಸಿಂಗ್ ಸರ್ಕಾರ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನವೆಂಬರ್ 17 ರಂದು ಮಣಿಪುರದ ಬಿರೆನ್‌ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ಹಿಂಪಡೆದಿದ್ದಾರೆ ಎಂದು ರಾಜ್ಯಾಧ್ಯಕ್ಷ ಎನ್‌ ಕೈಸಿ ಅವರು ಒತ್ತಿಹೇಳಿದ್ದಾರೆ. “ಪರಿಣಾಮವಾಗಿ, ಎಲ್ಲಾ NPP ಸದಸ್ಯರು ಈ ನಿರ್ಧಾರವನ್ನು ಅನುಸರಿಸುವ ಅಗತ್ಯವಿದೆ,” ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯಾವುದೇ ಅಧಿಕೃತ ಹೇಳಿಕೆಗಳನ್ನು ನೀಡುವ ಮೊದಲು ಅಥವಾ ಈ ವಿಷಯದ ಬಗ್ಗೆ ಮಾಧ್ಯಮಗಳೊಂದಿಗೆ ತೊಡಗಿಸಿಕೊಳ್ಳುವ ಮೊದಲು ಸದಸ್ಯರು ರಾಜ್ಯ ಅಥವಾ ರಾಷ್ಟ್ರೀಯ ಅಧ್ಯಕ್ಷರಿಂದ ಅನುಮತಿ ಪಡೆಯಬೇಕು ಎಂದು ಸಲಹೆಯು ಹೇಳಿದೆ. ನವೆಂಬರ್ 18 ರಂದು ಸಿಎಂ ಸೆಕ್ರೆಟರಿಯೇಟ್‌ನಲ್ಲಿ ಬಿರೆನ್ ಸಿಂಗ್ ಕರೆದಿದ್ದ ಎನ್‌ಡಿಎ ಸಭೆಯಲ್ಲಿ ಮೂವರು ಎನ್‌ಪಿಪಿ ಶಾಸಕರು ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಪಕ್ಷದ ಈ ನಿರ್ದೇಶನ ಬಂದಿದೆ. ಬಿರೇನ್ ಸಿಂಗ್ ಸರ್ಕಾರ

ಈ ನಡುವೆ, ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕೇಂದ್ರ ಸರ್ಕಾರವು “ಸಾಮೂಹಿಕ ಕಾರ್ಯಾಚರಣೆ” ಪ್ರಾರಂಭಿಸಬೇಕೆಂದು ಒತ್ತಾಯಿಸಿ ಮಣಿಪುರದ ಆಡಳಿತಾರೂಢ ಎನ್‌ಡಿಎ ಶಾಸಕರು ಅಂಗೀಕರಿಸಿದ ನಿರ್ಣಯವು “ವಿಭಜಕ, ಏಕಪಕ್ಷೀಯ ಮತ್ತು ಕೋಮುವಾದ” ಆಗಿದೆ ಎಂದು ಕುಕಿ-ಹ್ಮಾರ್-ಜೋಮಿ ಬುಡಕಟ್ಟು ಸಮುದಾಯಗಳ ಹತ್ತು ಶಾಸಕರು ಹೇಳಿದ್ದರು. ವಿಶೇಷವೆಂದರೆ, ಈ ಹತ್ತು ಶಾಸಕರಲ್ಲಿ 7 ಮಂದಿ ಬಿಜೆಪಿ ಪಕ್ಷದವರಾಗಿದ್ದು, ಒಬ್ಬರು ಪಕ್ಷೇತರ ಶಾಸಕ ಮತ್ತು ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ ಶಾಸಕರಾಗಿದ್ದಾರೆ.

ಕೇವಲ ಒಂದು ಸಮುದಾಯದ ವಿರುದ್ಧ ಸಾಮೂಹಿಕ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು ಪಕ್ಷಪಾತವಾಗಿದೆ ಎಂದು ಈ ಶಾಸಕರು ಹೇಳಿದ್ದಾರೆ. “ಎಲ್ಲಾ ಬಂಡುಕೋರ ಗುಂಪುಗಳಿಂದ ಎಲ್ಲಾ ಅಕ್ರಮ ಶಸ್ತ್ರಾಸ್ತ್ರಗಳನ್ನು ಮರುಪಡೆಯಲು ರಾಜ್ಯದಾದ್ಯಂತ ಸಾಮೂಹಿಕ ಕಾರ್ಯಾಚರಣೆಗಳನ್ನು ನಡೆಸಬೇಕು” ಎಂದು ಶಾಸಕರು ಹೇಳಿದ್ದಾರೆ.

10 ಮಂದಿ ಶಾಸಕರ ಹೇಳಿಕೆಗೂ ಒಂದು ದಿನ ಮುಂಚಿತವಾಗಿ, ನವೆಂಬರ್ 18 ರಂದು, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ 28 ಎನ್‌ಡಿಎ ಶಾಸಕರು ನವೆಂಬರ್ 11 ರಂದು ಜಿರಿಬಾಮ್‌ನಲ್ಲಿ ಆರು ಮೈತೇಯಿ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿ ಹತ್ಯೆಗೈದ ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ಣಯವನ್ನು ಅಂಗೀಕರಿಸಿದ್ದರು. ಈ ನಿರ್ಣಯದಲ್ಲಿ, ಏಳು ದಿನಗಳೊಳಗೆ ಶಂಕಿತ ಉಗ್ರರನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಕಾರಣ ರಾಜ್ಯದ ಐದು ಕಣಿವೆ ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ (AFSPA)ಯನ್ನು ಜಾರಿಗೊಳಿಸಿರುವುದನ್ನು ಪರಿಶೀಲಿಸುವಂತೆ ಎನ್‌ಡಿಎ ಶಾಸಕರು ಒತ್ತಾಯಿಸಿದ್ದರು. “ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆ” ಗಾಗಿ ಶೋಧನೆ ನಡೆಸಲು, ಜನರನ್ನು ಬಂಧಿಸಲು ಮತ್ತು ಗುಂಡಿನ ದಾಳಿ ನಡೆಸಲು ಸೇನಾ ಸಿಬ್ಬಂದಿಗೆ AFSPA ಕಾಯಿದೆಯು ಅಧಿಕಾರವನ್ನು ನೀಡುತ್ತದೆ. ಒಂದು ವೇಳೆ ಈ ದಾಳಿಯಲ್ಲಿ ವ್ಯಕ್ತಿಯು ಮೃತಪಟ್ಟರೆ ಕಾಯಿದೆ ಸೇನಾ ಸಿಬ್ಬಂದಿಗೆ ರಕ್ಷಣೆ ನೀಡುತ್ತದೆ.

ಇದನ್ನೂ ಓದಿ: ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...