Homeಮುಖಪುಟ"ಕುದುರೆ ಓಡಿಹೋದ ನಂತರ..." - ಬಿರೇನ್ ಸಿಂಗ್ ರಾಜೀನಾಮೆಗೆ ಕಾಂಗ್ರೆಸ್ ಪ್ರತಿಕ್ರಿಯೆ

“ಕುದುರೆ ಓಡಿಹೋದ ನಂತರ…” – ಬಿರೇನ್ ಸಿಂಗ್ ರಾಜೀನಾಮೆಗೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ರಾಜೀನಾಮೆಯು “ಕುದುರೆ ಓಡಿಹೋದ ನಂತರ ಲಾಯದ ಬಾಗಿಲು ಮುಚ್ಚಿದಂತೆ” ಎಂದು ಕಾಂಗ್ರೆಸ್ ಭಾನುವಾರ ಹೇಳಿದ್ದು, ಜನಾಂಗೀಯ ಹಿಂಸಾಚಾರ ನಡೆದು 2 ವರ್ಷಗಳ ನಂತರ ತಡವಾಗಿ ರಾಜೀನಾಮೆ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. “ಬಿಜೆಪಿಯು 21 ತಿಂಗಳ ಕಾಲ ಮಣಿಪುರದಲ್ಲಿ ಬೆಂಕಿ ಹಚ್ಚಿ, ಜನರ ಕೈಬಿಟ್ಟಿತು ಎಂಬ ವಿಚಾರ ಬಹಳ ನೋವಿನ ಸಂಗತಿ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ತಿರಸ್ಕಾರ ಮತ್ತು ನಿರಾಸಕ್ತಿಯ ನಿಜವಾದ ಅಪರಾಧಿ ಎಂದು ಖರ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. “ಮಣಿಪುರ ಭಾರತದ ಒಂದು ಭಾಗ ಎಂಬುದನ್ನು ಅವರು ಮರೆತಿದ್ದಾರೆ. ಅವರು ತಮ್ಮ ನೆನಪನ್ನು ಮರುಸ್ಥಾಪಿಸಿಕೊಂಡು ಭಾರತದ ನಕ್ಷೆಯಲ್ಲಿ ಮಣಿಪುರ ರಾಜ್ಯವನ್ನು ಗುರುತಿಸುವ ಸಮಯ ಬಂದಿದೆ!” ಎಂದು ಹೇಳಿದ್ದಾರೆ. ಕುದುರೆ ಓಡಿಹೋದ ನಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರ ವಿಚಾರದಲ್ಲಿ ಮುಖ್ಯಮಂತ್ರಿಯು ಪಕ್ಷಪಾತದಿಂದ ಪ್ರತಿಕ್ರಿಯೆ ನೀಡುತ್ತಿದ್ದಾರೆ ಮತ್ತು ಅವರು ಬಹುಮತೀಯತೆಯನ್ನು ಪ್ರಚೋದಿಸಿದ್ದಾರೆ ಎಂದು ಕುಕಿ-ಜೋಮಿ-ಹ್ಮರ್ ಗುಂಪುಗಳು ನಿರಂತರ ಆರೋಪಿಸುತ್ತಲೆ ಬರುತ್ತಿದ್ದು, ಈ ನಡುವೆ ಭಾನುವಾರ ಸಂಜೆ ಮುಖ್ಯಮಂತ್ರಿ ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮೇ 2023 ರಿಂದ ಮೈತೇಯಿ ಮತ್ತು ಕುಕಿ-ಜೋಮಿ-ಹ್ಮರ್ ಸಮುದಾಯಗಳ ನಡುವಿನ ಹಿಂಸಾಚಾರದಲ್ಲಿ ಕನಿಷ್ಠ 258 ಜನರು ಸಾವನ್ನಪ್ಪಿದ್ದು, 60 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.

ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿರೇನ್ ಸಿಂಗ್ ಅವರನ್ನು ದೂಷಿಸಿದ್ದು, “ಹೆಚ್ಚುತ್ತಿರುವ ಸಾರ್ವಜನಿಕ ಒತ್ತಡ, ಸುಪ್ರೀಂ ಕೋರ್ಟ್ ತನಿಖೆ ಮತ್ತು ಕಾಂಗ್ರೆಸ್‌ನ ಅವಿಶ್ವಾಸ ನಿರ್ಣಯದ ಪರಿಣಾಮವಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕಾಯಿತು” ಎಂದು ಪ್ರತಿಪಾದಿಸಿದ್ದಾರೆ.

ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವುದು ಆದ್ಯತೆಯಾಗಿರಬೇಕು ಎಂದು ಒತ್ತಿಹೇಳಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ, ಸಹಜಸ್ಥಿತಿ ಮರಳಿ ತರುವ ಯೋಜನೆಯನ್ನು ವಿವರಿಸುವಂತೆ ಪ್ರಧಾನಿಯನ್ನು ಕೇಳಿದ್ದಾರೆ.

ಸೋಮವಾರ ಮಣಿಪುರ ವಿಧಾನಸಭೆಯಲ್ಲಿ ತಮ್ಮ ಪಕ್ಷವು ಬಿರೇನ್ ಸಿಂಗ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಜ್ಜಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಪ್ರಧಾನಿ ಸಂಘರ್ಷ ಪೀಡಿತ ರಾಜ್ಯಕ್ಕೆ ಭೇಟಿ ನೀಡಬೇಕು ಎಂಬ ವಿರೋಧ ಪಕ್ಷದ ಬೇಡಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ.

“ಮುಖ್ಯಮಂತ್ರಿಯ ರಾಜೀನಾಮೆ ತಡವಾಗಿ ಆಗಿದೆ” ಎಂದು ಹೇಳಿರುವ ಜೈರಾಮ್ ರಮೇಶ್, “ಮಣಿಪುರದ ಜನರು ಈಗ ಫ್ರಾನ್ಸ್ ಮತ್ತು ಅಮೆರಿಕಾಗೆ ತೆರಳಿರುವ ಹಾರುವ ಪ್ರಧಾನಿಯ ಭೇಟಿಗಾಗಿ ಕಾಯುತ್ತಿದ್ದಾರೆ. ಕಳೆದ ಇಪ್ಪತ್ತು ತಿಂಗಳುಗಳಿಂದ ಮಣಿಪುರಕ್ಕೆ ಹೋಗಲು ಅವರಿಗೆ ಸಮಯ ಅಥವಾ ಒಲವು ಸಿಗುತ್ತಿಲ್ಲ.” ಎಂದು ಹೇಳಿದ್ದಾರೆ.

21 ತಿಂಗಳ ಹಿಂದೆ ಹಿಂಸಾಚಾರ ಪ್ರಾರಂಭವಾದಾಗಿನಿಂದ, ಕುಕಿ-ಜೋಮಿ-ಹ್ಮರ್ ಗುಂಪುಗಳು ಸಂಘರ್ಷಕ್ಕೆ ಬಿರೇನ್ ಸಿಂಗ್ ಅವರ ಪಕ್ಷಪಾತದ ವರ್ತನೆ ಮತ್ತು ಬಹುಸಂಖ್ಯಾತ ನೀತಿಗಳೆ ಕಾರಣ ಎಂದು ಹೇಳಿದ್ದು, ಸಮುದಾಯವು ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿವೆ.

ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ನಡೆಸಲು ಬಿರೇನ್ ಸಿಂಗ್ ಅವರನ್ನು ಸಂಪರ್ಕಿಸಲಾಗಿತ್ತು ಎಂದು ಹೇಳಲಾದ ಆಡಿಯೋ ತುಣುಕುಗಳ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಫೆಬ್ರವರಿ 3 ರಂದು ಸುಪ್ರೀಂ ಕೋರ್ಟ್ ಕೇಂದ್ರ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ ಆದೇಶಿಸಿದೆ. ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್‌ನ ಅರ್ಜಿಯ ಮೇರೆಗೆ ಈ ಆದೇಶವನ್ನು ಕೋರ್ಟ್‌ ನೀಡಿತ್ತು.

“ಸಂಘರ್ಷ ಹೇಗೆ ಮತ್ತು ಏಕೆ ಪ್ರಾರಂಭವಾಯಿತು” ಎಂಬುದಕ್ಕೆ ಮುಖ್ಯಮಂತ್ರಿಯೇ ಕಾರಣ ಎಂದು ಹೇಳುವ ಆಡಿಯೋ ರೆಕಾರ್ಡಿಂಗ್‌ಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಸಂಘಟನೆ ಕೋರಿತ್ತು.

ಅರ್ಜಿದಾರರನ್ನು ಪ್ರತಿನಿಧಿಸುವ ವಕೀಲ ಪ್ರಶಾಂತ್ ಭೂಷಣ್, ಸ್ವತಂತ್ರ ವಿಧಿವಿಜ್ಞಾನ ಪ್ರಯೋಗಾಲಯ ಟೇಪ್‌ಗಳನ್ನು ಪರಿಶೀಲಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧ್ವನಿಮುದ್ರಣಗಳಲ್ಲಿ ಕೇಳಿಬಂದ ಧ್ವನಿ ಮುಖ್ಯಮಂತ್ರಿಯವರದು ಎಂದು ಪ್ರಯೋಗಾಲಯವು 93% ಖಚಿತತೆಯೊಂದಿಗೆ ದೃಢಪಡಿಸಿದೆ ಎಂದು ಭೂಷಣ್ ಹೇಳಿದ್ದಾರೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...