Homeಮುಖಪುಟ"ಕುದುರೆ ಓಡಿಹೋದ ನಂತರ..." - ಬಿರೇನ್ ಸಿಂಗ್ ರಾಜೀನಾಮೆಗೆ ಕಾಂಗ್ರೆಸ್ ಪ್ರತಿಕ್ರಿಯೆ

“ಕುದುರೆ ಓಡಿಹೋದ ನಂತರ…” – ಬಿರೇನ್ ಸಿಂಗ್ ರಾಜೀನಾಮೆಗೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ರಾಜೀನಾಮೆಯು “ಕುದುರೆ ಓಡಿಹೋದ ನಂತರ ಲಾಯದ ಬಾಗಿಲು ಮುಚ್ಚಿದಂತೆ” ಎಂದು ಕಾಂಗ್ರೆಸ್ ಭಾನುವಾರ ಹೇಳಿದ್ದು, ಜನಾಂಗೀಯ ಹಿಂಸಾಚಾರ ನಡೆದು 2 ವರ್ಷಗಳ ನಂತರ ತಡವಾಗಿ ರಾಜೀನಾಮೆ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. “ಬಿಜೆಪಿಯು 21 ತಿಂಗಳ ಕಾಲ ಮಣಿಪುರದಲ್ಲಿ ಬೆಂಕಿ ಹಚ್ಚಿ, ಜನರ ಕೈಬಿಟ್ಟಿತು ಎಂಬ ವಿಚಾರ ಬಹಳ ನೋವಿನ ಸಂಗತಿ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ತಿರಸ್ಕಾರ ಮತ್ತು ನಿರಾಸಕ್ತಿಯ ನಿಜವಾದ ಅಪರಾಧಿ ಎಂದು ಖರ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. “ಮಣಿಪುರ ಭಾರತದ ಒಂದು ಭಾಗ ಎಂಬುದನ್ನು ಅವರು ಮರೆತಿದ್ದಾರೆ. ಅವರು ತಮ್ಮ ನೆನಪನ್ನು ಮರುಸ್ಥಾಪಿಸಿಕೊಂಡು ಭಾರತದ ನಕ್ಷೆಯಲ್ಲಿ ಮಣಿಪುರ ರಾಜ್ಯವನ್ನು ಗುರುತಿಸುವ ಸಮಯ ಬಂದಿದೆ!” ಎಂದು ಹೇಳಿದ್ದಾರೆ. ಕುದುರೆ ಓಡಿಹೋದ ನಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರ ವಿಚಾರದಲ್ಲಿ ಮುಖ್ಯಮಂತ್ರಿಯು ಪಕ್ಷಪಾತದಿಂದ ಪ್ರತಿಕ್ರಿಯೆ ನೀಡುತ್ತಿದ್ದಾರೆ ಮತ್ತು ಅವರು ಬಹುಮತೀಯತೆಯನ್ನು ಪ್ರಚೋದಿಸಿದ್ದಾರೆ ಎಂದು ಕುಕಿ-ಜೋಮಿ-ಹ್ಮರ್ ಗುಂಪುಗಳು ನಿರಂತರ ಆರೋಪಿಸುತ್ತಲೆ ಬರುತ್ತಿದ್ದು, ಈ ನಡುವೆ ಭಾನುವಾರ ಸಂಜೆ ಮುಖ್ಯಮಂತ್ರಿ ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮೇ 2023 ರಿಂದ ಮೈತೇಯಿ ಮತ್ತು ಕುಕಿ-ಜೋಮಿ-ಹ್ಮರ್ ಸಮುದಾಯಗಳ ನಡುವಿನ ಹಿಂಸಾಚಾರದಲ್ಲಿ ಕನಿಷ್ಠ 258 ಜನರು ಸಾವನ್ನಪ್ಪಿದ್ದು, 60 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.

ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿರೇನ್ ಸಿಂಗ್ ಅವರನ್ನು ದೂಷಿಸಿದ್ದು, “ಹೆಚ್ಚುತ್ತಿರುವ ಸಾರ್ವಜನಿಕ ಒತ್ತಡ, ಸುಪ್ರೀಂ ಕೋರ್ಟ್ ತನಿಖೆ ಮತ್ತು ಕಾಂಗ್ರೆಸ್‌ನ ಅವಿಶ್ವಾಸ ನಿರ್ಣಯದ ಪರಿಣಾಮವಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕಾಯಿತು” ಎಂದು ಪ್ರತಿಪಾದಿಸಿದ್ದಾರೆ.

ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವುದು ಆದ್ಯತೆಯಾಗಿರಬೇಕು ಎಂದು ಒತ್ತಿಹೇಳಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ, ಸಹಜಸ್ಥಿತಿ ಮರಳಿ ತರುವ ಯೋಜನೆಯನ್ನು ವಿವರಿಸುವಂತೆ ಪ್ರಧಾನಿಯನ್ನು ಕೇಳಿದ್ದಾರೆ.

ಸೋಮವಾರ ಮಣಿಪುರ ವಿಧಾನಸಭೆಯಲ್ಲಿ ತಮ್ಮ ಪಕ್ಷವು ಬಿರೇನ್ ಸಿಂಗ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಜ್ಜಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಪ್ರಧಾನಿ ಸಂಘರ್ಷ ಪೀಡಿತ ರಾಜ್ಯಕ್ಕೆ ಭೇಟಿ ನೀಡಬೇಕು ಎಂಬ ವಿರೋಧ ಪಕ್ಷದ ಬೇಡಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ.

“ಮುಖ್ಯಮಂತ್ರಿಯ ರಾಜೀನಾಮೆ ತಡವಾಗಿ ಆಗಿದೆ” ಎಂದು ಹೇಳಿರುವ ಜೈರಾಮ್ ರಮೇಶ್, “ಮಣಿಪುರದ ಜನರು ಈಗ ಫ್ರಾನ್ಸ್ ಮತ್ತು ಅಮೆರಿಕಾಗೆ ತೆರಳಿರುವ ಹಾರುವ ಪ್ರಧಾನಿಯ ಭೇಟಿಗಾಗಿ ಕಾಯುತ್ತಿದ್ದಾರೆ. ಕಳೆದ ಇಪ್ಪತ್ತು ತಿಂಗಳುಗಳಿಂದ ಮಣಿಪುರಕ್ಕೆ ಹೋಗಲು ಅವರಿಗೆ ಸಮಯ ಅಥವಾ ಒಲವು ಸಿಗುತ್ತಿಲ್ಲ.” ಎಂದು ಹೇಳಿದ್ದಾರೆ.

21 ತಿಂಗಳ ಹಿಂದೆ ಹಿಂಸಾಚಾರ ಪ್ರಾರಂಭವಾದಾಗಿನಿಂದ, ಕುಕಿ-ಜೋಮಿ-ಹ್ಮರ್ ಗುಂಪುಗಳು ಸಂಘರ್ಷಕ್ಕೆ ಬಿರೇನ್ ಸಿಂಗ್ ಅವರ ಪಕ್ಷಪಾತದ ವರ್ತನೆ ಮತ್ತು ಬಹುಸಂಖ್ಯಾತ ನೀತಿಗಳೆ ಕಾರಣ ಎಂದು ಹೇಳಿದ್ದು, ಸಮುದಾಯವು ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿವೆ.

ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ನಡೆಸಲು ಬಿರೇನ್ ಸಿಂಗ್ ಅವರನ್ನು ಸಂಪರ್ಕಿಸಲಾಗಿತ್ತು ಎಂದು ಹೇಳಲಾದ ಆಡಿಯೋ ತುಣುಕುಗಳ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಫೆಬ್ರವರಿ 3 ರಂದು ಸುಪ್ರೀಂ ಕೋರ್ಟ್ ಕೇಂದ್ರ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ ಆದೇಶಿಸಿದೆ. ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್‌ನ ಅರ್ಜಿಯ ಮೇರೆಗೆ ಈ ಆದೇಶವನ್ನು ಕೋರ್ಟ್‌ ನೀಡಿತ್ತು.

“ಸಂಘರ್ಷ ಹೇಗೆ ಮತ್ತು ಏಕೆ ಪ್ರಾರಂಭವಾಯಿತು” ಎಂಬುದಕ್ಕೆ ಮುಖ್ಯಮಂತ್ರಿಯೇ ಕಾರಣ ಎಂದು ಹೇಳುವ ಆಡಿಯೋ ರೆಕಾರ್ಡಿಂಗ್‌ಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಸಂಘಟನೆ ಕೋರಿತ್ತು.

ಅರ್ಜಿದಾರರನ್ನು ಪ್ರತಿನಿಧಿಸುವ ವಕೀಲ ಪ್ರಶಾಂತ್ ಭೂಷಣ್, ಸ್ವತಂತ್ರ ವಿಧಿವಿಜ್ಞಾನ ಪ್ರಯೋಗಾಲಯ ಟೇಪ್‌ಗಳನ್ನು ಪರಿಶೀಲಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧ್ವನಿಮುದ್ರಣಗಳಲ್ಲಿ ಕೇಳಿಬಂದ ಧ್ವನಿ ಮುಖ್ಯಮಂತ್ರಿಯವರದು ಎಂದು ಪ್ರಯೋಗಾಲಯವು 93% ಖಚಿತತೆಯೊಂದಿಗೆ ದೃಢಪಡಿಸಿದೆ ಎಂದು ಭೂಷಣ್ ಹೇಳಿದ್ದಾರೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...