Homeಮುಖಪುಟಬಿರೇನ್ ಸಿಂಗ್ ರಾಜೀನಾಮೆ; ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ಬಿರೇನ್ ಸಿಂಗ್ ರಾಜೀನಾಮೆ; ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

- Advertisement -
- Advertisement -

ಮಣಿಪುರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್ ಬಿರೇನ್ ಸಿಂಗ್ ಅವರ ಉತ್ತರಾಧಿಕಾರಿಯ ಕುರಿತು ಒಮ್ಮತ ಮೂಡಲು ವಿಫಲವಾದ ಕಾರಣ, ರಾಜ್ಯವನ್ನು ರಾಷ್ಟ್ರಪತಿ ಆಳ್ವಿಕೆಗೆ ಒಳಪಡಿಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಸೂಚನೆ ಗುರುವಾರ ತಿಳಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರವೂ ಮುಖ್ಯಮಂತ್ರಿ ಹುದ್ದೆಗೆ ಹೊಸ ನಾಯಕನನ್ನು ಹೆಸರಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕತ್ವ ವಿಫಲವಾದ ಕಾರಣ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಇಂದು, ಗೃಹ ಸಚಿವಾಲಯ (ಎಂಎಚ್‌ಎ) ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಘೋಷಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದೆ.

“ಭಾರತದ ರಾಷ್ಟ್ರಪತಿಗಳಾದ ನಾನು, ದ್ರೌಪದಿ ಮುರ್ಮು, ಮಣಿಪುರ ರಾಜ್ಯದ ರಾಜ್ಯಪಾಲರಿಂದ ವರದಿಯನ್ನು ಸ್ವೀಕರಿಸಿದ್ದೇನೆ, ವರದಿ ಮತ್ತು ನನಗೆ ಬಂದ ಇತರ ಮಾಹಿತಿಯನ್ನು ಪರಿಗಣಿಸಿದ ನಂತರ, ಆ ರಾಜ್ಯದ ಸರ್ಕಾರವನ್ನು ಭಾರತದ ಸಂವಿಧಾನದ ನಿಬಂಧನೆಗಳಿಗೆ ಅನುಗುಣವಾಗಿ (ಇನ್ನು ಮುಂದೆ ಸಂವಿಧಾನ ಎಂದು ಕರೆಯಲಾಗುತ್ತದೆ) ನಡೆಸಲಾಗದ ಪರಿಸ್ಥಿತಿ ಉದ್ಭವಿಸಿದೆ ಎಂದು ನನಗೆ ತೃಪ್ತಿ ಇದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪಕ್ಷದ ಈಶಾನ್ಯ ಉಸ್ತುವಾರಿ ಸಂಬಿತ್ ಪಾತ್ರ ಮತ್ತು ಶಾಸಕರ ನಡುವೆ ಹಲವಾರು ಸುತ್ತಿನ ಚರ್ಚೆಗಳ ಹೊರತಾಗಿಯೂ ಸಿಎಂ ಹುದ್ದೆಗೆ ಹೊಸ ನಾಯಕನನ್ನು ಹೆಸರಿಸಲು ಬಿಜೆಪಿ ವಿಫಲವಾಗಿದೆ.

ಕಳೆದ ಎರಡು ದಿನಗಳಲ್ಲಿ ಪತ್ರಾ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಎರಡು ಬಾರಿ ಭೇಟಿ ಮಾಡಿದರು. ಮಂಗಳವಾರ, ರಾಜ್ಯ ಪಕ್ಷದ ಅಧ್ಯಕ್ಷೆ ಎ ಶಾರದಾ ದೇವಿ ಅವರೊಂದಿಗೆ ಪತ್ರಾ ಭಲ್ಲಾ ಅವರೊಂದಿಗೆ ಮಾತುಕತೆ ನಡೆಸಿದರು. ಬುಧವಾರ ಅವರು ಮತ್ತೆ ರಾಜ್ಯಪಾಲರನ್ನು ಭೇಟಿಯಾದರು.

ಕಾಂಗ್ರೆಸ್ ಶಾಸಕ ಥೋಕ್ಚೋಮ್ ಲೋಕೇಶ್ವರ್, ಪತ್ರಾ ಅವರ ರಾಜ್ಯ ಭೇಟಿಯ ಉದ್ದೇಶವನ್ನು ಪ್ರಶ್ನಿಸಿದರು. ನಾಯಕತ್ವದ ಬಿಕ್ಕಟ್ಟನ್ನು ಪರಿಹರಿಸುವ ಉದ್ದೇಶವಿದೆಯೇ ಎಂದು ಕೇಳಿದರು.

ಬಿಜೆಪಿ ಶಾಸಕರೊಂದಿಗೆ ಚರ್ಚಿಸುವ ಮೂಲಕ ಹೊಸ ಮುಖ್ಯಮಂತ್ರಿಯನ್ನು ನೇಮಿಸಲು ಪತ್ರಾ ಮುಂದಾಳತ್ವ ವಹಿಸಬೇಕಿತ್ತು ಎಂದು ಕಾಂಗ್ರೆಸ್ ಶಾಸಕರು ಹೇಳಿದರು. “ವಿಧಾನಸಭೆ ಅಧಿವೇಶನ ನಡೆಯದಂತೆ ಮತ್ತು ರಾಜ್ಯದ ಸಮಸ್ಯೆಗಳು ಬದಿಗಿಡದಂತೆ ನೋಡಿಕೊಳ್ಳಲು ಅವರ ಭೇಟಿ ನೀಡಿದ್ದಾರೆ. ಇಲ್ಲಿಯವರೆಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ” ಎಂದು ಮಾಜಿ ಸ್ಪೀಕರ್ ಹೇಳಿದರು.

ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದೇಕೆ?

ಮೇ 2023 ರಲ್ಲಿ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಸಿಂಗ್ ವಿರೋಧ ಪಕ್ಷಗಳಿಂದ, ವಿಶೇಷವಾಗಿ ರಾಜ್ಯ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್‌ನಿಂದ ಭಾರಿ ಟೀಕೆ ಎದುರಿಸುತ್ತಿದ್ದರು. ಕೆಲವು ಬಿಜೆಪಿ ಶಾಸಕರು ಈ ನಿರ್ಣಯದ ಪರವಾಗಿ ಮತ ಚಲಾಯಿಸಬಹುದು ಎಂಬ ವರದಿಗಳಿದ್ದವು.

ಮಣಿಪುರದ ರಾಜ್ಯಪಾಲರು ಫೆಬ್ರವರಿ 10, 2025 ರಂದು ಪ್ರಾರಂಭವಾಗುವಂತೆ ವಿಧಾನಸಭಾ ಅಧಿವೇಶನವನ್ನು ಕರೆದಿದ್ದರು. ಸಿಎಂ ರಾಜೀನಾಮೆ ಬಳಿಕ ತಮ್ಮ ಆದೇಶ ವಾಪಸ್ ಪಡೆದರು.

ಇದನ್ನೂ ಓದಿ; ವರ್ಷ ಪೂರೈಸಿದ ‘ದೆಹಲಿ ಚಲೋ’ ರೈತರ ಪ್ರತಿಭಟನೆ; ಖಾನೌರಿ ಗಡಿಯಲ್ಲಿ ‘ಮಹಾಪಂಚಾಯತ್ ಏಕತೆ’ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...