Homeಕರ್ನಾಟಕಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

ಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

- Advertisement -
- Advertisement -

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ನರಸಿಂಹರಾಜು ಅವರ ಜನ್ಮದಿನವಿಂದು. ನಟಿ ಆರ್. ಟಿ. ರಮಾ ಅವರು ನರಸಿಂಹರಾಜು ಅವರ ಜೋಡಿಯಾಗಿ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ತಮ್ಮ ನೆಚ್ಚಿನ ಹಾಸ್ಯನಟನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಚಿತ್ರೀಕರಣ ಸಂದರ್ಭದ ಕೆಲವು ಸ್ವಾರಸ್ಯಕರ ಘಟನೆಗಳನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

ಪಾಂಡುರಂಗ ಪ್ರೊಡಕ್ಷನ್ಸ್ ಅವರ ‘ಅನುರಾಧ’; ಚಿತ್ರೀಕರಣದ ಸಂದರ್ಭ. ರಾಜಾಶಂಕರ್, ಪಂಢರೀಬಾಯಿ, ಅಶ್ವಥ್ ಇತರರು ಪ್ರಮುಖ ಪಾತ್ರಗಳಲ್ಲಿದ್ದರು. ನರಸಿಂಹರಾಜು ಮತ್ತು ನಾನು ಹಾಸ್ಯ ಪಾತ್ರಗಳಲ್ಲಿ ನಟಿಸುತ್ತಿದ್ದೆವು. ಈ ಚಿತ್ರಕ್ಕಾಗಿ ನಾನು ಸೈಕಲ್ ಕಲಿಯುವ ಅನಿವಾರ್ಯತೆ ಎದುರಾಗಿತ್ತು. ಮದ್ರಾಸ್‍ನಲ್ಲಿ ನಟ ಬೆಂಗಳೂರು ನಾಗೇಶ್ ಸಹಕಾರದಲ್ಲಿ ಲೇಡಿಸ್ ಸೈಕಲ್ ಹೊಡೆಯುವುದನ್ನು ಕಲಿತಿದ್ದೆ. ಆದರೆ ‘ಅನುರಾಧ’ ಚಿತ್ರಕ್ಕೆ ಮೈಸೂರಿನಲ್ಲಿ ಚಿತ್ರೀಕರಣ ನಡೆದಿತ್ತು. ಸೈಕಲ್ ಬರುತ್ತದೆಂದು ನಿರ್ದೇಶಕರಿಗೆ ಧೈರ್ಯದಿಂದ ಭರವಸೆ ಕೊಟ್ಟಿದ್ದೆ. ದುರದೃಷ್ಟವತಾಶ್ ಮೈಸೂರಿನಲ್ಲಿ ನನಗೆ ಲೇಡೀಸ್ ಸೈಕಲ್ ಸಿಗಲಿಲ್ಲ! ಕೊನೆಗೆ ಗಂಡಸರ ಸೈಕಲ್ ಅನ್ನೇ ಹೊಡೆಯುವುದೆಂದು
ನಿರ್ಧಾರವಾಯಿತು.

ಚಿತ್ರದಲ್ಲಿ ನರಸಿಂಹರಾಜು ಕಾರು ಡ್ರೈವ್ ಮಾಡುತ್ತಾರೆ. ಸನ್ನಿವೇಶವೊಂದರಲ್ಲಿ ನಾನು ಸೈಕಲ್‍ನಲ್ಲಿ ಅವರ ಕಾರಿಗೆ ಡ್ಯಾಷ್ ಹೊಡೆಯಬೇಕು. ಗಂಡಸರ ಸೈಕಲ್ ಆದ್ದರಿಂದ ಕುಳ್ಳಿಯಾದ ನನಗೆ ಪೆಡಲ್ ಸಿಗುತ್ತಲೇ ಇರಲಿಲ್ಲ. ಅಲ್ಲದೆ ಬ್ರೇಕ್ ಹಿಡಿಯೋದನ್ನು ಕೂಡ ಮದ್ರಾಸ್‍ನಲ್ಲಿ ಸರಿಯಾಗಿ ಕಲಿತಿರಲಿಲ್ಲ. ಆಗ ಈ ಸನ್ನಿವೇಶದ ಚಿತ್ರೀಕರಣದುದ್ದಕ್ಕೂ ತಮಾಷೆಗಳು ನಡೆದವು. ಸೈಕಲ್ ಮೇಲೆ ಕುಳಿತಿದ್ದ ನನ್ನನ್ನು ಯಾರೊ ಒಬ್ಬರು ಎತ್ತರದ ಪ್ರದೇಶದಿಂದ ದಬ್ಬುತ್ತಿದ್ದರು. ಶಾಟ್ ಮುಗಿಯುತ್ತಿದ್ದಂತೆ ಮತ್ತಿಬ್ಬರು ಓಡಿಬಂದು ಸೈಕಲ್
ಹಿಡಿದುಕೊಳ್ಳಬೇಕಿತ್ತು!

ನರಸಿಂಹರಾಜು (ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ)

ಮೊದಲ ಟೇಕ್‍ನಲ್ಲಿ ಸೈಕಲ್ ಮೇಲೆ ಕುಳಿತಿದ್ದ ನನ್ನನ್ನು ಯಾರೋ ದಬ್ಬಿದರು. ಪೆಡಲ್ ಸಿಗದೆ ನಾನು ಪರದಾಡುತ್ತಾ ಗಾಬರಿಗೊಂಡೆ. ಬ್ರೇಕ್ ಹಿಡಿಯಲು ಗೊತ್ತಾಗದೆ ರಸ್ತೆ ಬಿಟ್ಟು ಪಕ್ಕದ ಮಣ್ಣಿನ ಗುಂಡಿಯಲ್ಲಿ ಸೈಕಲ್ ಜತೆಗೇ ಬಿದ್ದೆ! ನರಸಿಂಹರಾಜು ಕಾರಿನಿಂದಿಳಿದು ಕೂಗುತ್ತಾ ಓಡಿ ಬಂದರು. ಕೈ-ಕಾಲು ಪರಚಿಕೊಂಡ ನನ್ನನ್ನು ಮೆಲ್ಲಗೆ ನಡೆಸಿಕೊಂಡು ಬಂದರು. ನೋವು ತೋರಿಸಿಕೊಳ್ಳದೆ ಮತ್ತೊಂದು ಟೇಕ್‍ಗೆ ರೆಡಿಯಾದೆ. ನಾನು ಸೈಕಲ್ ಓಡಿಸುವ ಪರಿಯಿಂದ ಕಾರಿನ ಡ್ರೈವರ್ ಸೀಟಿನಲ್ಲಿದ್ದ ನರಸಿಂಹರಾಜು ನನಗಿಂತಲೂ ಹೆಚ್ಚು ಗಾಬರಿಗೊಂಡಿದ್ದರು! ಎರಡನೇ ಟೇಕ್‍ನಲ್ಲಿ ನಾಲ್ಕೈದು ಸಹಾಯಕರೊಂದಿಗೆ
ಅಂತೂ ಶಾಟ್ ಓಕೆ ಆಯ್ತು.

ಹಂಡೆಯೊಳಗೆ ನರಸಿಂಹರಾಜು!

‘ಕನ್ಯಕಾಪರಮೇಶ್ವರಿ’ ಸಿನಿಮಾ ಚಿತ್ರೀಕರಣದ ಒಂದು ಸನ್ನಿವೇಶ. ನರಸಿಂಹರಾಜು ನನ್ನ ಪತಿ ಹಾಗೂ ನಟಿ ರಮಾದೇವಿ ನನ್ನ ಅಮ್ಮನಾಗಿ ನಟಿಸುತ್ತಿದ್ದರು. ನನ್ನಮ್ಮನಿಗೆ ಅಳಿಯ ನರಸಿಂಹರಾಜು ಅವರನ್ನು ಕಂಡರಾಗದು. ಆಕೆ ಇಲ್ಲದ ವೇಳೆ ನೋಡಿಕೊಂಡು ನರಸಿಂಹರಾಜು ನಮ್ಮ ಮನೆಗೆ ಬರುತ್ತಾರೆ. ಅಷ್ಟರಲ್ಲಿ ಹೊರಗೆ ಹೋಗಿದ್ದ ಅಮ್ಮ, ಬೆಕ್ಕು ಅಡ್ಡ ಬಂದು ಅಪಶಕುನವಾಯ್ತೆಂದು ಮರಳಿ ಮನೆಗೆ ಬರುತ್ತಾಳೆ. ನಾನು ಅವಸರಕ್ಕೆ ಪತಿ ನರಸಿಂಹರಾಜು ಅವರನ್ನು ದೊಡ್ಡ ನೀರಿನ ಹಂಡೆಯಲ್ಲಿ ಮುಚ್ಚಿಡುತ್ತೇನೆ. ಬೆಕ್ಕು ಅಡ್ಡ ಬಂದು ಮೈಲಿಗೆಯಾಗಿದೆ ಎಂದು ಅಮ್ಮ ಸ್ನಾನ ಮಾಡಲು ಅಣಿಯಾಗುತ್ತಾಳೆ.

ನಾನು ನೀರಿನ ಹಂಡೆಯನ್ನು ಒಲೆ ಮೇಲಿಟ್ಟು ಬೆಂಕಿ ಹಾಕಬೇಕು. ಹಂಡೆ ಒಳಗೆ ನರಸಿಂಹರಾಜು! ಎರಡು ಟೇಕ್‍ನಲ್ಲೂ ಓಕೆಯಾಗದ್ದರಿಂದ ಹಿತ್ತಾಳೆಯ ಹಂಡೆ ಸಿಕ್ಕಾಪಟ್ಟೆ ಬಿಸಿಯಾಗಿತ್ತು. ಒಳಗಿದ್ದ ನರಸಿಂಹರಾಜು ಕೂಗು ಹಾಕತೊಡಗಿದ್ದರು. ಶಾಟ್ ಓಕೆಯಾಗುತ್ತಿದ್ದಂತೆಯೇ ನರಸಿಂಹರಾಜು ಒಮ್ಮೆಗೇ ಹಂಡೆಯಿಂದ ಹೊರಜಿಗಿದದದ್ದು ಈಗಲೂ ಕಣ್ಣಿಗೆ ಕಟ್ಟಿದಂತಿದೆ!

ಆರ್. ಟಿ. ರಮಾ (ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ)

ಕಾಪಾಡಿ ಕಾಪಾಡಿ!

ನರಸಿಂಹರಾಜು ಅವರೊಂದಿಗಿನ ಚಿತ್ರವೊಂದರಲ್ಲಿ ಪಜೀತಿ ಎದುರಾಗಿತ್ತು. ಶ್ರೀರಂಗಪಟ್ಟಣದ ಬಳಿಯ ಪಶ್ಚಿಮವಾಹಿನಿ ಹೊಳೆಯಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಹೊಳೆಯಲ್ಲಿ ಬಿದ್ದ ನರಸಿಂಹರಾಜು ಅವರನ್ನು ನಾನು ಕಾಪಾಡುವ ಸನ್ನಿವೇಶ. ಹೊಳೆಯಲ್ಲಿ ನೀರು ಹರಿಯುತ್ತಿದ್ದು ಸೆಳವು ಕೊಂಚ ಹೆಚ್ಚಾಗಿಯೇ ಇತ್ತು. ನರಸಿಂಹರಾಜು ಅವರಿಗೇನೋ ಈಜು ಬರುತ್ತಿತ್ತು. ಅವರನ್ನು ಕಾಪಾಡಬೇಕಿದ್ದ ಈಜಲು ಬಾರದ ನಾನು ಭಯದಿಂದ ನಡುಗತೊಡಗಿದೆ!

ನನ್ನ ಪಡಿಪಾಟಲು ನೋಡಿ ನಿರ್ದೇಶಕರು ಹೊಳೆಯಲ್ಲಿ ಮೂರಡಿ ಆಳವಿದ್ದ ಪ್ರದೇಶದಲ್ಲಿ ಶೂಟಿಂಗ್ ನಡೆಸಲು ಸಜ್ಜಾದರು. ನರಸಿಂಹರಾಜು ಅವರೇನೋ ಸಲೀಸಾಗಿ ಹೊಳೆ ಮಧ್ಯೆ ಹೋಗಿ ನಿಂತು, ನಿರ್ದೇಶಕರ ಅಣತಿಯಂತೆ `ಕಾಪಾಡಿ ಕಾಪಾಡಿ’ ಎಂದು ಕೂಗು ಹಾಕಿದರು. ಅವರನ್ನು ಕಾಪಾಡಬೇಕಿದ್ದ ನಾನು ನೀರಿಗಿಳಿದು ಕೊಂಚ ದೂರ ಹೋಗುತ್ತಿದ್ದಂತೆ ಕೂಗತೊಡಗಿದೆ!

ಕೊನೆಗೆ ನರಸಿಂಹರಾಜು ಅವರೇ ನನ್ನ ಬಳಿ ಬಂದರು. ನೀರೊಳಗೇ ನನ್ನ ಕೈ ಹಿಡಿದುಕೊಂಡು, ತಾವೇ ಮುಳುಗುತ್ತಿರುವಂತೆ `ಆ್ಯಕ್ಷನ್’ ಮಾಡಿದರು. ನಾನು ಧೈರ್ಯ ಮಾಡಿ ಅವರನ್ನು ಕಾಪಾಡುವವಳಂತೆ ನಟಿಸಿದೆ(!). ಅಂತೂ ಇಂತೂ ನಿರ್ದೇಶಕರು ಶಾಟ್ ಓಕೆ ಮಾಡಿದರು. ಇಲ್ಲಿ ಯಾರನ್ನು ಯಾರು ಕಾಪಾಡಿದರು ಎನ್ನುವ ಗೊಂದಲದಿಂದ ನರಸಿಂಹರಾಜು ಮತ್ತು ನಾನು ಇಬ್ಬರೂ ಮನಸಾರೆ ನಕ್ಕೆವು.

ನಿರೂಪಣೆ: ಶಶಿಧರ ಚಿತ್ರದುರ್ಗ


ಓದಿ: ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...