Homeಕರ್ನಾಟಕಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

ಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

- Advertisement -
- Advertisement -

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ನರಸಿಂಹರಾಜು ಅವರ ಜನ್ಮದಿನವಿಂದು. ನಟಿ ಆರ್. ಟಿ. ರಮಾ ಅವರು ನರಸಿಂಹರಾಜು ಅವರ ಜೋಡಿಯಾಗಿ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ತಮ್ಮ ನೆಚ್ಚಿನ ಹಾಸ್ಯನಟನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಚಿತ್ರೀಕರಣ ಸಂದರ್ಭದ ಕೆಲವು ಸ್ವಾರಸ್ಯಕರ ಘಟನೆಗಳನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

ಪಾಂಡುರಂಗ ಪ್ರೊಡಕ್ಷನ್ಸ್ ಅವರ ‘ಅನುರಾಧ’; ಚಿತ್ರೀಕರಣದ ಸಂದರ್ಭ. ರಾಜಾಶಂಕರ್, ಪಂಢರೀಬಾಯಿ, ಅಶ್ವಥ್ ಇತರರು ಪ್ರಮುಖ ಪಾತ್ರಗಳಲ್ಲಿದ್ದರು. ನರಸಿಂಹರಾಜು ಮತ್ತು ನಾನು ಹಾಸ್ಯ ಪಾತ್ರಗಳಲ್ಲಿ ನಟಿಸುತ್ತಿದ್ದೆವು. ಈ ಚಿತ್ರಕ್ಕಾಗಿ ನಾನು ಸೈಕಲ್ ಕಲಿಯುವ ಅನಿವಾರ್ಯತೆ ಎದುರಾಗಿತ್ತು. ಮದ್ರಾಸ್‍ನಲ್ಲಿ ನಟ ಬೆಂಗಳೂರು ನಾಗೇಶ್ ಸಹಕಾರದಲ್ಲಿ ಲೇಡಿಸ್ ಸೈಕಲ್ ಹೊಡೆಯುವುದನ್ನು ಕಲಿತಿದ್ದೆ. ಆದರೆ ‘ಅನುರಾಧ’ ಚಿತ್ರಕ್ಕೆ ಮೈಸೂರಿನಲ್ಲಿ ಚಿತ್ರೀಕರಣ ನಡೆದಿತ್ತು. ಸೈಕಲ್ ಬರುತ್ತದೆಂದು ನಿರ್ದೇಶಕರಿಗೆ ಧೈರ್ಯದಿಂದ ಭರವಸೆ ಕೊಟ್ಟಿದ್ದೆ. ದುರದೃಷ್ಟವತಾಶ್ ಮೈಸೂರಿನಲ್ಲಿ ನನಗೆ ಲೇಡೀಸ್ ಸೈಕಲ್ ಸಿಗಲಿಲ್ಲ! ಕೊನೆಗೆ ಗಂಡಸರ ಸೈಕಲ್ ಅನ್ನೇ ಹೊಡೆಯುವುದೆಂದು
ನಿರ್ಧಾರವಾಯಿತು.

ಚಿತ್ರದಲ್ಲಿ ನರಸಿಂಹರಾಜು ಕಾರು ಡ್ರೈವ್ ಮಾಡುತ್ತಾರೆ. ಸನ್ನಿವೇಶವೊಂದರಲ್ಲಿ ನಾನು ಸೈಕಲ್‍ನಲ್ಲಿ ಅವರ ಕಾರಿಗೆ ಡ್ಯಾಷ್ ಹೊಡೆಯಬೇಕು. ಗಂಡಸರ ಸೈಕಲ್ ಆದ್ದರಿಂದ ಕುಳ್ಳಿಯಾದ ನನಗೆ ಪೆಡಲ್ ಸಿಗುತ್ತಲೇ ಇರಲಿಲ್ಲ. ಅಲ್ಲದೆ ಬ್ರೇಕ್ ಹಿಡಿಯೋದನ್ನು ಕೂಡ ಮದ್ರಾಸ್‍ನಲ್ಲಿ ಸರಿಯಾಗಿ ಕಲಿತಿರಲಿಲ್ಲ. ಆಗ ಈ ಸನ್ನಿವೇಶದ ಚಿತ್ರೀಕರಣದುದ್ದಕ್ಕೂ ತಮಾಷೆಗಳು ನಡೆದವು. ಸೈಕಲ್ ಮೇಲೆ ಕುಳಿತಿದ್ದ ನನ್ನನ್ನು ಯಾರೊ ಒಬ್ಬರು ಎತ್ತರದ ಪ್ರದೇಶದಿಂದ ದಬ್ಬುತ್ತಿದ್ದರು. ಶಾಟ್ ಮುಗಿಯುತ್ತಿದ್ದಂತೆ ಮತ್ತಿಬ್ಬರು ಓಡಿಬಂದು ಸೈಕಲ್
ಹಿಡಿದುಕೊಳ್ಳಬೇಕಿತ್ತು!

ನರಸಿಂಹರಾಜು (ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ)

ಮೊದಲ ಟೇಕ್‍ನಲ್ಲಿ ಸೈಕಲ್ ಮೇಲೆ ಕುಳಿತಿದ್ದ ನನ್ನನ್ನು ಯಾರೋ ದಬ್ಬಿದರು. ಪೆಡಲ್ ಸಿಗದೆ ನಾನು ಪರದಾಡುತ್ತಾ ಗಾಬರಿಗೊಂಡೆ. ಬ್ರೇಕ್ ಹಿಡಿಯಲು ಗೊತ್ತಾಗದೆ ರಸ್ತೆ ಬಿಟ್ಟು ಪಕ್ಕದ ಮಣ್ಣಿನ ಗುಂಡಿಯಲ್ಲಿ ಸೈಕಲ್ ಜತೆಗೇ ಬಿದ್ದೆ! ನರಸಿಂಹರಾಜು ಕಾರಿನಿಂದಿಳಿದು ಕೂಗುತ್ತಾ ಓಡಿ ಬಂದರು. ಕೈ-ಕಾಲು ಪರಚಿಕೊಂಡ ನನ್ನನ್ನು ಮೆಲ್ಲಗೆ ನಡೆಸಿಕೊಂಡು ಬಂದರು. ನೋವು ತೋರಿಸಿಕೊಳ್ಳದೆ ಮತ್ತೊಂದು ಟೇಕ್‍ಗೆ ರೆಡಿಯಾದೆ. ನಾನು ಸೈಕಲ್ ಓಡಿಸುವ ಪರಿಯಿಂದ ಕಾರಿನ ಡ್ರೈವರ್ ಸೀಟಿನಲ್ಲಿದ್ದ ನರಸಿಂಹರಾಜು ನನಗಿಂತಲೂ ಹೆಚ್ಚು ಗಾಬರಿಗೊಂಡಿದ್ದರು! ಎರಡನೇ ಟೇಕ್‍ನಲ್ಲಿ ನಾಲ್ಕೈದು ಸಹಾಯಕರೊಂದಿಗೆ
ಅಂತೂ ಶಾಟ್ ಓಕೆ ಆಯ್ತು.

ಹಂಡೆಯೊಳಗೆ ನರಸಿಂಹರಾಜು!

‘ಕನ್ಯಕಾಪರಮೇಶ್ವರಿ’ ಸಿನಿಮಾ ಚಿತ್ರೀಕರಣದ ಒಂದು ಸನ್ನಿವೇಶ. ನರಸಿಂಹರಾಜು ನನ್ನ ಪತಿ ಹಾಗೂ ನಟಿ ರಮಾದೇವಿ ನನ್ನ ಅಮ್ಮನಾಗಿ ನಟಿಸುತ್ತಿದ್ದರು. ನನ್ನಮ್ಮನಿಗೆ ಅಳಿಯ ನರಸಿಂಹರಾಜು ಅವರನ್ನು ಕಂಡರಾಗದು. ಆಕೆ ಇಲ್ಲದ ವೇಳೆ ನೋಡಿಕೊಂಡು ನರಸಿಂಹರಾಜು ನಮ್ಮ ಮನೆಗೆ ಬರುತ್ತಾರೆ. ಅಷ್ಟರಲ್ಲಿ ಹೊರಗೆ ಹೋಗಿದ್ದ ಅಮ್ಮ, ಬೆಕ್ಕು ಅಡ್ಡ ಬಂದು ಅಪಶಕುನವಾಯ್ತೆಂದು ಮರಳಿ ಮನೆಗೆ ಬರುತ್ತಾಳೆ. ನಾನು ಅವಸರಕ್ಕೆ ಪತಿ ನರಸಿಂಹರಾಜು ಅವರನ್ನು ದೊಡ್ಡ ನೀರಿನ ಹಂಡೆಯಲ್ಲಿ ಮುಚ್ಚಿಡುತ್ತೇನೆ. ಬೆಕ್ಕು ಅಡ್ಡ ಬಂದು ಮೈಲಿಗೆಯಾಗಿದೆ ಎಂದು ಅಮ್ಮ ಸ್ನಾನ ಮಾಡಲು ಅಣಿಯಾಗುತ್ತಾಳೆ.

ನಾನು ನೀರಿನ ಹಂಡೆಯನ್ನು ಒಲೆ ಮೇಲಿಟ್ಟು ಬೆಂಕಿ ಹಾಕಬೇಕು. ಹಂಡೆ ಒಳಗೆ ನರಸಿಂಹರಾಜು! ಎರಡು ಟೇಕ್‍ನಲ್ಲೂ ಓಕೆಯಾಗದ್ದರಿಂದ ಹಿತ್ತಾಳೆಯ ಹಂಡೆ ಸಿಕ್ಕಾಪಟ್ಟೆ ಬಿಸಿಯಾಗಿತ್ತು. ಒಳಗಿದ್ದ ನರಸಿಂಹರಾಜು ಕೂಗು ಹಾಕತೊಡಗಿದ್ದರು. ಶಾಟ್ ಓಕೆಯಾಗುತ್ತಿದ್ದಂತೆಯೇ ನರಸಿಂಹರಾಜು ಒಮ್ಮೆಗೇ ಹಂಡೆಯಿಂದ ಹೊರಜಿಗಿದದದ್ದು ಈಗಲೂ ಕಣ್ಣಿಗೆ ಕಟ್ಟಿದಂತಿದೆ!

ಆರ್. ಟಿ. ರಮಾ (ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ)

ಕಾಪಾಡಿ ಕಾಪಾಡಿ!

ನರಸಿಂಹರಾಜು ಅವರೊಂದಿಗಿನ ಚಿತ್ರವೊಂದರಲ್ಲಿ ಪಜೀತಿ ಎದುರಾಗಿತ್ತು. ಶ್ರೀರಂಗಪಟ್ಟಣದ ಬಳಿಯ ಪಶ್ಚಿಮವಾಹಿನಿ ಹೊಳೆಯಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಹೊಳೆಯಲ್ಲಿ ಬಿದ್ದ ನರಸಿಂಹರಾಜು ಅವರನ್ನು ನಾನು ಕಾಪಾಡುವ ಸನ್ನಿವೇಶ. ಹೊಳೆಯಲ್ಲಿ ನೀರು ಹರಿಯುತ್ತಿದ್ದು ಸೆಳವು ಕೊಂಚ ಹೆಚ್ಚಾಗಿಯೇ ಇತ್ತು. ನರಸಿಂಹರಾಜು ಅವರಿಗೇನೋ ಈಜು ಬರುತ್ತಿತ್ತು. ಅವರನ್ನು ಕಾಪಾಡಬೇಕಿದ್ದ ಈಜಲು ಬಾರದ ನಾನು ಭಯದಿಂದ ನಡುಗತೊಡಗಿದೆ!

ನನ್ನ ಪಡಿಪಾಟಲು ನೋಡಿ ನಿರ್ದೇಶಕರು ಹೊಳೆಯಲ್ಲಿ ಮೂರಡಿ ಆಳವಿದ್ದ ಪ್ರದೇಶದಲ್ಲಿ ಶೂಟಿಂಗ್ ನಡೆಸಲು ಸಜ್ಜಾದರು. ನರಸಿಂಹರಾಜು ಅವರೇನೋ ಸಲೀಸಾಗಿ ಹೊಳೆ ಮಧ್ಯೆ ಹೋಗಿ ನಿಂತು, ನಿರ್ದೇಶಕರ ಅಣತಿಯಂತೆ `ಕಾಪಾಡಿ ಕಾಪಾಡಿ’ ಎಂದು ಕೂಗು ಹಾಕಿದರು. ಅವರನ್ನು ಕಾಪಾಡಬೇಕಿದ್ದ ನಾನು ನೀರಿಗಿಳಿದು ಕೊಂಚ ದೂರ ಹೋಗುತ್ತಿದ್ದಂತೆ ಕೂಗತೊಡಗಿದೆ!

ಕೊನೆಗೆ ನರಸಿಂಹರಾಜು ಅವರೇ ನನ್ನ ಬಳಿ ಬಂದರು. ನೀರೊಳಗೇ ನನ್ನ ಕೈ ಹಿಡಿದುಕೊಂಡು, ತಾವೇ ಮುಳುಗುತ್ತಿರುವಂತೆ `ಆ್ಯಕ್ಷನ್’ ಮಾಡಿದರು. ನಾನು ಧೈರ್ಯ ಮಾಡಿ ಅವರನ್ನು ಕಾಪಾಡುವವಳಂತೆ ನಟಿಸಿದೆ(!). ಅಂತೂ ಇಂತೂ ನಿರ್ದೇಶಕರು ಶಾಟ್ ಓಕೆ ಮಾಡಿದರು. ಇಲ್ಲಿ ಯಾರನ್ನು ಯಾರು ಕಾಪಾಡಿದರು ಎನ್ನುವ ಗೊಂದಲದಿಂದ ನರಸಿಂಹರಾಜು ಮತ್ತು ನಾನು ಇಬ್ಬರೂ ಮನಸಾರೆ ನಕ್ಕೆವು.

ನಿರೂಪಣೆ: ಶಶಿಧರ ಚಿತ್ರದುರ್ಗ


ಓದಿ: ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...