Homeಕರ್ನಾಟಕಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

ಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

- Advertisement -
- Advertisement -

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ನರಸಿಂಹರಾಜು ಅವರ ಜನ್ಮದಿನವಿಂದು. ನಟಿ ಆರ್. ಟಿ. ರಮಾ ಅವರು ನರಸಿಂಹರಾಜು ಅವರ ಜೋಡಿಯಾಗಿ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ತಮ್ಮ ನೆಚ್ಚಿನ ಹಾಸ್ಯನಟನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಚಿತ್ರೀಕರಣ ಸಂದರ್ಭದ ಕೆಲವು ಸ್ವಾರಸ್ಯಕರ ಘಟನೆಗಳನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

ಪಾಂಡುರಂಗ ಪ್ರೊಡಕ್ಷನ್ಸ್ ಅವರ ‘ಅನುರಾಧ’; ಚಿತ್ರೀಕರಣದ ಸಂದರ್ಭ. ರಾಜಾಶಂಕರ್, ಪಂಢರೀಬಾಯಿ, ಅಶ್ವಥ್ ಇತರರು ಪ್ರಮುಖ ಪಾತ್ರಗಳಲ್ಲಿದ್ದರು. ನರಸಿಂಹರಾಜು ಮತ್ತು ನಾನು ಹಾಸ್ಯ ಪಾತ್ರಗಳಲ್ಲಿ ನಟಿಸುತ್ತಿದ್ದೆವು. ಈ ಚಿತ್ರಕ್ಕಾಗಿ ನಾನು ಸೈಕಲ್ ಕಲಿಯುವ ಅನಿವಾರ್ಯತೆ ಎದುರಾಗಿತ್ತು. ಮದ್ರಾಸ್‍ನಲ್ಲಿ ನಟ ಬೆಂಗಳೂರು ನಾಗೇಶ್ ಸಹಕಾರದಲ್ಲಿ ಲೇಡಿಸ್ ಸೈಕಲ್ ಹೊಡೆಯುವುದನ್ನು ಕಲಿತಿದ್ದೆ. ಆದರೆ ‘ಅನುರಾಧ’ ಚಿತ್ರಕ್ಕೆ ಮೈಸೂರಿನಲ್ಲಿ ಚಿತ್ರೀಕರಣ ನಡೆದಿತ್ತು. ಸೈಕಲ್ ಬರುತ್ತದೆಂದು ನಿರ್ದೇಶಕರಿಗೆ ಧೈರ್ಯದಿಂದ ಭರವಸೆ ಕೊಟ್ಟಿದ್ದೆ. ದುರದೃಷ್ಟವತಾಶ್ ಮೈಸೂರಿನಲ್ಲಿ ನನಗೆ ಲೇಡೀಸ್ ಸೈಕಲ್ ಸಿಗಲಿಲ್ಲ! ಕೊನೆಗೆ ಗಂಡಸರ ಸೈಕಲ್ ಅನ್ನೇ ಹೊಡೆಯುವುದೆಂದು
ನಿರ್ಧಾರವಾಯಿತು.

ಚಿತ್ರದಲ್ಲಿ ನರಸಿಂಹರಾಜು ಕಾರು ಡ್ರೈವ್ ಮಾಡುತ್ತಾರೆ. ಸನ್ನಿವೇಶವೊಂದರಲ್ಲಿ ನಾನು ಸೈಕಲ್‍ನಲ್ಲಿ ಅವರ ಕಾರಿಗೆ ಡ್ಯಾಷ್ ಹೊಡೆಯಬೇಕು. ಗಂಡಸರ ಸೈಕಲ್ ಆದ್ದರಿಂದ ಕುಳ್ಳಿಯಾದ ನನಗೆ ಪೆಡಲ್ ಸಿಗುತ್ತಲೇ ಇರಲಿಲ್ಲ. ಅಲ್ಲದೆ ಬ್ರೇಕ್ ಹಿಡಿಯೋದನ್ನು ಕೂಡ ಮದ್ರಾಸ್‍ನಲ್ಲಿ ಸರಿಯಾಗಿ ಕಲಿತಿರಲಿಲ್ಲ. ಆಗ ಈ ಸನ್ನಿವೇಶದ ಚಿತ್ರೀಕರಣದುದ್ದಕ್ಕೂ ತಮಾಷೆಗಳು ನಡೆದವು. ಸೈಕಲ್ ಮೇಲೆ ಕುಳಿತಿದ್ದ ನನ್ನನ್ನು ಯಾರೊ ಒಬ್ಬರು ಎತ್ತರದ ಪ್ರದೇಶದಿಂದ ದಬ್ಬುತ್ತಿದ್ದರು. ಶಾಟ್ ಮುಗಿಯುತ್ತಿದ್ದಂತೆ ಮತ್ತಿಬ್ಬರು ಓಡಿಬಂದು ಸೈಕಲ್
ಹಿಡಿದುಕೊಳ್ಳಬೇಕಿತ್ತು!

ನರಸಿಂಹರಾಜು (ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ)

ಮೊದಲ ಟೇಕ್‍ನಲ್ಲಿ ಸೈಕಲ್ ಮೇಲೆ ಕುಳಿತಿದ್ದ ನನ್ನನ್ನು ಯಾರೋ ದಬ್ಬಿದರು. ಪೆಡಲ್ ಸಿಗದೆ ನಾನು ಪರದಾಡುತ್ತಾ ಗಾಬರಿಗೊಂಡೆ. ಬ್ರೇಕ್ ಹಿಡಿಯಲು ಗೊತ್ತಾಗದೆ ರಸ್ತೆ ಬಿಟ್ಟು ಪಕ್ಕದ ಮಣ್ಣಿನ ಗುಂಡಿಯಲ್ಲಿ ಸೈಕಲ್ ಜತೆಗೇ ಬಿದ್ದೆ! ನರಸಿಂಹರಾಜು ಕಾರಿನಿಂದಿಳಿದು ಕೂಗುತ್ತಾ ಓಡಿ ಬಂದರು. ಕೈ-ಕಾಲು ಪರಚಿಕೊಂಡ ನನ್ನನ್ನು ಮೆಲ್ಲಗೆ ನಡೆಸಿಕೊಂಡು ಬಂದರು. ನೋವು ತೋರಿಸಿಕೊಳ್ಳದೆ ಮತ್ತೊಂದು ಟೇಕ್‍ಗೆ ರೆಡಿಯಾದೆ. ನಾನು ಸೈಕಲ್ ಓಡಿಸುವ ಪರಿಯಿಂದ ಕಾರಿನ ಡ್ರೈವರ್ ಸೀಟಿನಲ್ಲಿದ್ದ ನರಸಿಂಹರಾಜು ನನಗಿಂತಲೂ ಹೆಚ್ಚು ಗಾಬರಿಗೊಂಡಿದ್ದರು! ಎರಡನೇ ಟೇಕ್‍ನಲ್ಲಿ ನಾಲ್ಕೈದು ಸಹಾಯಕರೊಂದಿಗೆ
ಅಂತೂ ಶಾಟ್ ಓಕೆ ಆಯ್ತು.

ಹಂಡೆಯೊಳಗೆ ನರಸಿಂಹರಾಜು!

‘ಕನ್ಯಕಾಪರಮೇಶ್ವರಿ’ ಸಿನಿಮಾ ಚಿತ್ರೀಕರಣದ ಒಂದು ಸನ್ನಿವೇಶ. ನರಸಿಂಹರಾಜು ನನ್ನ ಪತಿ ಹಾಗೂ ನಟಿ ರಮಾದೇವಿ ನನ್ನ ಅಮ್ಮನಾಗಿ ನಟಿಸುತ್ತಿದ್ದರು. ನನ್ನಮ್ಮನಿಗೆ ಅಳಿಯ ನರಸಿಂಹರಾಜು ಅವರನ್ನು ಕಂಡರಾಗದು. ಆಕೆ ಇಲ್ಲದ ವೇಳೆ ನೋಡಿಕೊಂಡು ನರಸಿಂಹರಾಜು ನಮ್ಮ ಮನೆಗೆ ಬರುತ್ತಾರೆ. ಅಷ್ಟರಲ್ಲಿ ಹೊರಗೆ ಹೋಗಿದ್ದ ಅಮ್ಮ, ಬೆಕ್ಕು ಅಡ್ಡ ಬಂದು ಅಪಶಕುನವಾಯ್ತೆಂದು ಮರಳಿ ಮನೆಗೆ ಬರುತ್ತಾಳೆ. ನಾನು ಅವಸರಕ್ಕೆ ಪತಿ ನರಸಿಂಹರಾಜು ಅವರನ್ನು ದೊಡ್ಡ ನೀರಿನ ಹಂಡೆಯಲ್ಲಿ ಮುಚ್ಚಿಡುತ್ತೇನೆ. ಬೆಕ್ಕು ಅಡ್ಡ ಬಂದು ಮೈಲಿಗೆಯಾಗಿದೆ ಎಂದು ಅಮ್ಮ ಸ್ನಾನ ಮಾಡಲು ಅಣಿಯಾಗುತ್ತಾಳೆ.

ನಾನು ನೀರಿನ ಹಂಡೆಯನ್ನು ಒಲೆ ಮೇಲಿಟ್ಟು ಬೆಂಕಿ ಹಾಕಬೇಕು. ಹಂಡೆ ಒಳಗೆ ನರಸಿಂಹರಾಜು! ಎರಡು ಟೇಕ್‍ನಲ್ಲೂ ಓಕೆಯಾಗದ್ದರಿಂದ ಹಿತ್ತಾಳೆಯ ಹಂಡೆ ಸಿಕ್ಕಾಪಟ್ಟೆ ಬಿಸಿಯಾಗಿತ್ತು. ಒಳಗಿದ್ದ ನರಸಿಂಹರಾಜು ಕೂಗು ಹಾಕತೊಡಗಿದ್ದರು. ಶಾಟ್ ಓಕೆಯಾಗುತ್ತಿದ್ದಂತೆಯೇ ನರಸಿಂಹರಾಜು ಒಮ್ಮೆಗೇ ಹಂಡೆಯಿಂದ ಹೊರಜಿಗಿದದದ್ದು ಈಗಲೂ ಕಣ್ಣಿಗೆ ಕಟ್ಟಿದಂತಿದೆ!

ಆರ್. ಟಿ. ರಮಾ (ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ)

ಕಾಪಾಡಿ ಕಾಪಾಡಿ!

ನರಸಿಂಹರಾಜು ಅವರೊಂದಿಗಿನ ಚಿತ್ರವೊಂದರಲ್ಲಿ ಪಜೀತಿ ಎದುರಾಗಿತ್ತು. ಶ್ರೀರಂಗಪಟ್ಟಣದ ಬಳಿಯ ಪಶ್ಚಿಮವಾಹಿನಿ ಹೊಳೆಯಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಹೊಳೆಯಲ್ಲಿ ಬಿದ್ದ ನರಸಿಂಹರಾಜು ಅವರನ್ನು ನಾನು ಕಾಪಾಡುವ ಸನ್ನಿವೇಶ. ಹೊಳೆಯಲ್ಲಿ ನೀರು ಹರಿಯುತ್ತಿದ್ದು ಸೆಳವು ಕೊಂಚ ಹೆಚ್ಚಾಗಿಯೇ ಇತ್ತು. ನರಸಿಂಹರಾಜು ಅವರಿಗೇನೋ ಈಜು ಬರುತ್ತಿತ್ತು. ಅವರನ್ನು ಕಾಪಾಡಬೇಕಿದ್ದ ಈಜಲು ಬಾರದ ನಾನು ಭಯದಿಂದ ನಡುಗತೊಡಗಿದೆ!

ನನ್ನ ಪಡಿಪಾಟಲು ನೋಡಿ ನಿರ್ದೇಶಕರು ಹೊಳೆಯಲ್ಲಿ ಮೂರಡಿ ಆಳವಿದ್ದ ಪ್ರದೇಶದಲ್ಲಿ ಶೂಟಿಂಗ್ ನಡೆಸಲು ಸಜ್ಜಾದರು. ನರಸಿಂಹರಾಜು ಅವರೇನೋ ಸಲೀಸಾಗಿ ಹೊಳೆ ಮಧ್ಯೆ ಹೋಗಿ ನಿಂತು, ನಿರ್ದೇಶಕರ ಅಣತಿಯಂತೆ `ಕಾಪಾಡಿ ಕಾಪಾಡಿ’ ಎಂದು ಕೂಗು ಹಾಕಿದರು. ಅವರನ್ನು ಕಾಪಾಡಬೇಕಿದ್ದ ನಾನು ನೀರಿಗಿಳಿದು ಕೊಂಚ ದೂರ ಹೋಗುತ್ತಿದ್ದಂತೆ ಕೂಗತೊಡಗಿದೆ!

ಕೊನೆಗೆ ನರಸಿಂಹರಾಜು ಅವರೇ ನನ್ನ ಬಳಿ ಬಂದರು. ನೀರೊಳಗೇ ನನ್ನ ಕೈ ಹಿಡಿದುಕೊಂಡು, ತಾವೇ ಮುಳುಗುತ್ತಿರುವಂತೆ `ಆ್ಯಕ್ಷನ್’ ಮಾಡಿದರು. ನಾನು ಧೈರ್ಯ ಮಾಡಿ ಅವರನ್ನು ಕಾಪಾಡುವವಳಂತೆ ನಟಿಸಿದೆ(!). ಅಂತೂ ಇಂತೂ ನಿರ್ದೇಶಕರು ಶಾಟ್ ಓಕೆ ಮಾಡಿದರು. ಇಲ್ಲಿ ಯಾರನ್ನು ಯಾರು ಕಾಪಾಡಿದರು ಎನ್ನುವ ಗೊಂದಲದಿಂದ ನರಸಿಂಹರಾಜು ಮತ್ತು ನಾನು ಇಬ್ಬರೂ ಮನಸಾರೆ ನಕ್ಕೆವು.

ನಿರೂಪಣೆ: ಶಶಿಧರ ಚಿತ್ರದುರ್ಗ


ಓದಿ: ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...