Homeಮುಖಪುಟಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

ಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

- Advertisement -
- Advertisement -

ಇಂದು ದೇಶದ ಮೊದಲ ಉಪಪ್ರಧಾನ ಮಂತ್ರಿ ಹಾಗೂ ಗೃಹಸಚಿವರಾಗಿದ್ದ ವಲ್ಲಭಬಾಯಿ ಪಟೇಲ್‌ ಅವರ ಜನ್ಮದಿನ. ‘ಉಕ್ಕಿನ ಮನುಷ್ಯ’ ಎಂದು ಕರೆಯಲ್ಪಡುವ ಅವರ ಜನ್ಮದಿನಕ್ಕೆ ಪ್ರಧಾನ ಮೋದಿ, ಗೃಹ ಸಚಿವ ಅಮಿತ್‌ ಶಾ, ರಾಹುಲ್ ಗಾಂಧಿ ಸೇರಿದಂತೆ ಹಲವಾರು ಜನರು ಶುಭಕೋರಿದ್ದಾರೆ.

ಅವರ ಜನ್ಮವನ್ನು ‘ರಾಷ್ಟ್ರೀಯ ಏಕತಾ ದಿನ’ವಾಗಿ ಆಚರಿಸಲಾಗುತ್ತದೆ. ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರಾಗಿದ್ದ ಅವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಮಾತ್ರವಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಸರ್ದಾರ್‌ ಪಟೇಲ್‌ ಪಾತ್ರ ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

RSS ಬಗ್ಗೆ ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್‌ ಪಟೇಲ್‌!

ಮಹಾತ್ಮ ಗಾಂಧಿ ಕೊಲೆಯ ನಂತರ ಸೆಪ್ಟೆಂಬರ್ 11, 1948 ರಂದು ಸರ್ದಾರ್‌ ಪಟೇಲ್‌ ಅವರು ಆರೆಸ್ಸೆಸ್‌ ನಾಯಕ ಗೋಳ್ವಲ್ಕರ್‌‌ಗೆ ಬರೆದ ಪತ್ರದಲ್ಲಿ ಹೀಗಿದ್ದವು…

“…ವ್ಯಕ್ತಿತ್ವ, ಸಭ್ಯತೆ ಅಥವಾ ಸಜ್ಜನಿಕೆಯ ಎಲ್ಲ ಪರಿಗಣನೆಗಳನ್ನು ಕಡೆಗಣಿಸಿ ಜನರಲ್ಲಿ ವಿಷಕಾರಿ ಅಶಾಂತಿ ಸೃಷ್ಟಿಸಿತು. ಭಾಷಣಗಳೆಲ್ಲ ಸಂಪೂರ್ಣ ಕೋಮು ವಿಷಮಯವಾಗಿತ್ತು. ಈ ವಿಷವನ್ನು ಹರಡಿ ಹಿಂದೂಗಳನ್ನು ಪ್ರಚೋದಿಸಿ ಅವರನ್ನು ರಕ್ಷಣೆಗಾಗಿ ಸಂಘಟಿಸಬೇಕಾಗಿರಲಿಲ್ಲ.

ವಿಷದ ಪರಿಣಾಮವಾಗಿ, ಗಾಂಧೀಜಿಯ ಅಮೂಲ್ಯವಾದ ಜೀವದ ತ್ಯಾಗವನ್ನು ದೇಶವು ಅನುಭವಿಸಬೇಕಾಯಿತು. ಆರೆಸ್ಸೆಸ್‌ ಮೇಲೆ ಸರ್ಕಾರ ಅಥವಾ ಜನರ ಸಹಾನುಭೂತಿಯ ಒಂದು ತುಣುಕೂ ಉಳಿದಿಲ್ಲ. ನಿಜ ಹೇಳಬೇಕೆಂದರೆ ವಿರೋಧವೇ ಉಳಿಯಿತು.

ಗಾಂಧೀಜಿಯ ಮರಣದ ನಂತರ ಆರೆಸ್ಸೆಸ್‌‌ನವರು ಸಂತೋಷ ವ್ಯಕ್ತಪಡಿಸಿ ಸಿಹಿ ಹಂಚಿದಾಗ ಈ ವಿರೋಧ ತೀವ್ರವಾಯಿತು. ಈ ಪರಿಸ್ಥಿತಿಯಲ್ಲಿ ಆರೆಸ್ಸೆಸ್‌‌ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಯಿತು.

ಅಂದಿನಿಂದ, ಆರು ತಿಂಗಳುಗಳು ಕಳೆದಿವೆ. ಆರೆಸ್ಸೆಸ್‌‌ ಈಗಲಾದರೂ ಸರಿ ದಾರಿಗೆ ಬರುತ್ತಾರೆ ಎಂದು ನಾವು ಭಾವಿಸಿದ್ದೆವು. ಆದರೆ ನನಗೆ ಬಂದಿರುವ ವರದಿಗಳ ಪ್ರಕಾರ ಆರೆಸ್ಸೆಸ್‌ ಅದೇ ಹಳೆಯ ಚಟುವಟಿಕೆಗಳಿಗೆ ಜೀವ ತುಂಬುತ್ತಿದೆ ಎಂದು ಸ್ಪಷ್ಟವಾಗಿದೆ”

ಇದನ್ನೂ ಓದಿ: “ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?”

ಸರ್ದಾರ್ ಪಟೇಲ್‌ ಹಿಂದೂ ರಾಷ್ಟ್ರದ ಪ್ರತಿಪಾದನೆಯನ್ನು ತಿರಸ್ಕರಿಸಿದ್ದರು. ದೇಶದಲ್ಲಿ ಜಾತ್ಯಾತೀತ ಉಳಿಸುವ ವಿಷಯಗಳ ಬಗ್ಗೆ ಅವರು ಪ್ರಧಾನಿ ನೆಹರೂ ಅವರ ಚಿಂತನೆಗಳನ್ನು ಒಪ್ಪಿಕೊಂಡಿದ್ದರು.

ಪತ್ರವೊಂದರಲ್ಲಿ ಸರ್ದಾರ್‌ ಪಟೇಲ್‌ ಅವರು, “ಭಾರತವನ್ನು ಹಿಂದೂ ರಾಷ್ಟ್ರವೆಂದು ಹಾಗೂ ಹಿಂದೂ ಧರ್ಮವನ್ನು ದೇಶದ ಧರ್ಮವೆಂದು ಪರಿಗಣಿಸಲು ಸಾಧ್ಯವಿಲ್ಲ. ದೇಶದಲ್ಲಿ ಇತರ ಅಲ್ಪಸಂಖ್ಯಾತರಿದ್ದಾರೆ ಎಂಬುದನ್ನು ನಾವು ಮರೆಯಬಾರದು. ಅವರ ರಕ್ಷಣೆಯು ನಮ್ಮ ಪ್ರಾಥಮಿಕ ಜವಾಬ್ದಾರಿಯಾಗಿದೆ. ದೇಶವು ಜಾತಿ ಅಥವಾ ಧರ್ಮದ ಭೇದವಿಲ್ಲದೆ ಎಲ್ಲರಿಗೂ ಸಲ್ಲಬೇಕು”

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...