Homeಮುಖಪುಟಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

ಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

- Advertisement -
- Advertisement -

ಇಂದು ದೇಶದ ಮೊದಲ ಉಪಪ್ರಧಾನ ಮಂತ್ರಿ ಹಾಗೂ ಗೃಹಸಚಿವರಾಗಿದ್ದ ವಲ್ಲಭಬಾಯಿ ಪಟೇಲ್‌ ಅವರ ಜನ್ಮದಿನ. ‘ಉಕ್ಕಿನ ಮನುಷ್ಯ’ ಎಂದು ಕರೆಯಲ್ಪಡುವ ಅವರ ಜನ್ಮದಿನಕ್ಕೆ ಪ್ರಧಾನ ಮೋದಿ, ಗೃಹ ಸಚಿವ ಅಮಿತ್‌ ಶಾ, ರಾಹುಲ್ ಗಾಂಧಿ ಸೇರಿದಂತೆ ಹಲವಾರು ಜನರು ಶುಭಕೋರಿದ್ದಾರೆ.

ಅವರ ಜನ್ಮವನ್ನು ‘ರಾಷ್ಟ್ರೀಯ ಏಕತಾ ದಿನ’ವಾಗಿ ಆಚರಿಸಲಾಗುತ್ತದೆ. ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರಾಗಿದ್ದ ಅವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಮಾತ್ರವಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಸರ್ದಾರ್‌ ಪಟೇಲ್‌ ಪಾತ್ರ ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

RSS ಬಗ್ಗೆ ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್‌ ಪಟೇಲ್‌!

ಮಹಾತ್ಮ ಗಾಂಧಿ ಕೊಲೆಯ ನಂತರ ಸೆಪ್ಟೆಂಬರ್ 11, 1948 ರಂದು ಸರ್ದಾರ್‌ ಪಟೇಲ್‌ ಅವರು ಆರೆಸ್ಸೆಸ್‌ ನಾಯಕ ಗೋಳ್ವಲ್ಕರ್‌‌ಗೆ ಬರೆದ ಪತ್ರದಲ್ಲಿ ಹೀಗಿದ್ದವು…

“…ವ್ಯಕ್ತಿತ್ವ, ಸಭ್ಯತೆ ಅಥವಾ ಸಜ್ಜನಿಕೆಯ ಎಲ್ಲ ಪರಿಗಣನೆಗಳನ್ನು ಕಡೆಗಣಿಸಿ ಜನರಲ್ಲಿ ವಿಷಕಾರಿ ಅಶಾಂತಿ ಸೃಷ್ಟಿಸಿತು. ಭಾಷಣಗಳೆಲ್ಲ ಸಂಪೂರ್ಣ ಕೋಮು ವಿಷಮಯವಾಗಿತ್ತು. ಈ ವಿಷವನ್ನು ಹರಡಿ ಹಿಂದೂಗಳನ್ನು ಪ್ರಚೋದಿಸಿ ಅವರನ್ನು ರಕ್ಷಣೆಗಾಗಿ ಸಂಘಟಿಸಬೇಕಾಗಿರಲಿಲ್ಲ.

ವಿಷದ ಪರಿಣಾಮವಾಗಿ, ಗಾಂಧೀಜಿಯ ಅಮೂಲ್ಯವಾದ ಜೀವದ ತ್ಯಾಗವನ್ನು ದೇಶವು ಅನುಭವಿಸಬೇಕಾಯಿತು. ಆರೆಸ್ಸೆಸ್‌ ಮೇಲೆ ಸರ್ಕಾರ ಅಥವಾ ಜನರ ಸಹಾನುಭೂತಿಯ ಒಂದು ತುಣುಕೂ ಉಳಿದಿಲ್ಲ. ನಿಜ ಹೇಳಬೇಕೆಂದರೆ ವಿರೋಧವೇ ಉಳಿಯಿತು.

ಗಾಂಧೀಜಿಯ ಮರಣದ ನಂತರ ಆರೆಸ್ಸೆಸ್‌‌ನವರು ಸಂತೋಷ ವ್ಯಕ್ತಪಡಿಸಿ ಸಿಹಿ ಹಂಚಿದಾಗ ಈ ವಿರೋಧ ತೀವ್ರವಾಯಿತು. ಈ ಪರಿಸ್ಥಿತಿಯಲ್ಲಿ ಆರೆಸ್ಸೆಸ್‌‌ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಯಿತು.

ಅಂದಿನಿಂದ, ಆರು ತಿಂಗಳುಗಳು ಕಳೆದಿವೆ. ಆರೆಸ್ಸೆಸ್‌‌ ಈಗಲಾದರೂ ಸರಿ ದಾರಿಗೆ ಬರುತ್ತಾರೆ ಎಂದು ನಾವು ಭಾವಿಸಿದ್ದೆವು. ಆದರೆ ನನಗೆ ಬಂದಿರುವ ವರದಿಗಳ ಪ್ರಕಾರ ಆರೆಸ್ಸೆಸ್‌ ಅದೇ ಹಳೆಯ ಚಟುವಟಿಕೆಗಳಿಗೆ ಜೀವ ತುಂಬುತ್ತಿದೆ ಎಂದು ಸ್ಪಷ್ಟವಾಗಿದೆ”

ಇದನ್ನೂ ಓದಿ: “ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?”

ಸರ್ದಾರ್ ಪಟೇಲ್‌ ಹಿಂದೂ ರಾಷ್ಟ್ರದ ಪ್ರತಿಪಾದನೆಯನ್ನು ತಿರಸ್ಕರಿಸಿದ್ದರು. ದೇಶದಲ್ಲಿ ಜಾತ್ಯಾತೀತ ಉಳಿಸುವ ವಿಷಯಗಳ ಬಗ್ಗೆ ಅವರು ಪ್ರಧಾನಿ ನೆಹರೂ ಅವರ ಚಿಂತನೆಗಳನ್ನು ಒಪ್ಪಿಕೊಂಡಿದ್ದರು.

ಪತ್ರವೊಂದರಲ್ಲಿ ಸರ್ದಾರ್‌ ಪಟೇಲ್‌ ಅವರು, “ಭಾರತವನ್ನು ಹಿಂದೂ ರಾಷ್ಟ್ರವೆಂದು ಹಾಗೂ ಹಿಂದೂ ಧರ್ಮವನ್ನು ದೇಶದ ಧರ್ಮವೆಂದು ಪರಿಗಣಿಸಲು ಸಾಧ್ಯವಿಲ್ಲ. ದೇಶದಲ್ಲಿ ಇತರ ಅಲ್ಪಸಂಖ್ಯಾತರಿದ್ದಾರೆ ಎಂಬುದನ್ನು ನಾವು ಮರೆಯಬಾರದು. ಅವರ ರಕ್ಷಣೆಯು ನಮ್ಮ ಪ್ರಾಥಮಿಕ ಜವಾಬ್ದಾರಿಯಾಗಿದೆ. ದೇಶವು ಜಾತಿ ಅಥವಾ ಧರ್ಮದ ಭೇದವಿಲ್ಲದೆ ಎಲ್ಲರಿಗೂ ಸಲ್ಲಬೇಕು”

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...