Homeಮುಖಪುಟಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

ಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

- Advertisement -
- Advertisement -

ಇಂದು ದೇಶದ ಮೊದಲ ಉಪಪ್ರಧಾನ ಮಂತ್ರಿ ಹಾಗೂ ಗೃಹಸಚಿವರಾಗಿದ್ದ ವಲ್ಲಭಬಾಯಿ ಪಟೇಲ್‌ ಅವರ ಜನ್ಮದಿನ. ‘ಉಕ್ಕಿನ ಮನುಷ್ಯ’ ಎಂದು ಕರೆಯಲ್ಪಡುವ ಅವರ ಜನ್ಮದಿನಕ್ಕೆ ಪ್ರಧಾನ ಮೋದಿ, ಗೃಹ ಸಚಿವ ಅಮಿತ್‌ ಶಾ, ರಾಹುಲ್ ಗಾಂಧಿ ಸೇರಿದಂತೆ ಹಲವಾರು ಜನರು ಶುಭಕೋರಿದ್ದಾರೆ.

ಅವರ ಜನ್ಮವನ್ನು ‘ರಾಷ್ಟ್ರೀಯ ಏಕತಾ ದಿನ’ವಾಗಿ ಆಚರಿಸಲಾಗುತ್ತದೆ. ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರಾಗಿದ್ದ ಅವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಮಾತ್ರವಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಸರ್ದಾರ್‌ ಪಟೇಲ್‌ ಪಾತ್ರ ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

RSS ಬಗ್ಗೆ ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್‌ ಪಟೇಲ್‌!

ಮಹಾತ್ಮ ಗಾಂಧಿ ಕೊಲೆಯ ನಂತರ ಸೆಪ್ಟೆಂಬರ್ 11, 1948 ರಂದು ಸರ್ದಾರ್‌ ಪಟೇಲ್‌ ಅವರು ಆರೆಸ್ಸೆಸ್‌ ನಾಯಕ ಗೋಳ್ವಲ್ಕರ್‌‌ಗೆ ಬರೆದ ಪತ್ರದಲ್ಲಿ ಹೀಗಿದ್ದವು…

“…ವ್ಯಕ್ತಿತ್ವ, ಸಭ್ಯತೆ ಅಥವಾ ಸಜ್ಜನಿಕೆಯ ಎಲ್ಲ ಪರಿಗಣನೆಗಳನ್ನು ಕಡೆಗಣಿಸಿ ಜನರಲ್ಲಿ ವಿಷಕಾರಿ ಅಶಾಂತಿ ಸೃಷ್ಟಿಸಿತು. ಭಾಷಣಗಳೆಲ್ಲ ಸಂಪೂರ್ಣ ಕೋಮು ವಿಷಮಯವಾಗಿತ್ತು. ಈ ವಿಷವನ್ನು ಹರಡಿ ಹಿಂದೂಗಳನ್ನು ಪ್ರಚೋದಿಸಿ ಅವರನ್ನು ರಕ್ಷಣೆಗಾಗಿ ಸಂಘಟಿಸಬೇಕಾಗಿರಲಿಲ್ಲ.

ವಿಷದ ಪರಿಣಾಮವಾಗಿ, ಗಾಂಧೀಜಿಯ ಅಮೂಲ್ಯವಾದ ಜೀವದ ತ್ಯಾಗವನ್ನು ದೇಶವು ಅನುಭವಿಸಬೇಕಾಯಿತು. ಆರೆಸ್ಸೆಸ್‌ ಮೇಲೆ ಸರ್ಕಾರ ಅಥವಾ ಜನರ ಸಹಾನುಭೂತಿಯ ಒಂದು ತುಣುಕೂ ಉಳಿದಿಲ್ಲ. ನಿಜ ಹೇಳಬೇಕೆಂದರೆ ವಿರೋಧವೇ ಉಳಿಯಿತು.

ಗಾಂಧೀಜಿಯ ಮರಣದ ನಂತರ ಆರೆಸ್ಸೆಸ್‌‌ನವರು ಸಂತೋಷ ವ್ಯಕ್ತಪಡಿಸಿ ಸಿಹಿ ಹಂಚಿದಾಗ ಈ ವಿರೋಧ ತೀವ್ರವಾಯಿತು. ಈ ಪರಿಸ್ಥಿತಿಯಲ್ಲಿ ಆರೆಸ್ಸೆಸ್‌‌ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಯಿತು.

ಅಂದಿನಿಂದ, ಆರು ತಿಂಗಳುಗಳು ಕಳೆದಿವೆ. ಆರೆಸ್ಸೆಸ್‌‌ ಈಗಲಾದರೂ ಸರಿ ದಾರಿಗೆ ಬರುತ್ತಾರೆ ಎಂದು ನಾವು ಭಾವಿಸಿದ್ದೆವು. ಆದರೆ ನನಗೆ ಬಂದಿರುವ ವರದಿಗಳ ಪ್ರಕಾರ ಆರೆಸ್ಸೆಸ್‌ ಅದೇ ಹಳೆಯ ಚಟುವಟಿಕೆಗಳಿಗೆ ಜೀವ ತುಂಬುತ್ತಿದೆ ಎಂದು ಸ್ಪಷ್ಟವಾಗಿದೆ”

ಇದನ್ನೂ ಓದಿ: “ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?”

ಸರ್ದಾರ್ ಪಟೇಲ್‌ ಹಿಂದೂ ರಾಷ್ಟ್ರದ ಪ್ರತಿಪಾದನೆಯನ್ನು ತಿರಸ್ಕರಿಸಿದ್ದರು. ದೇಶದಲ್ಲಿ ಜಾತ್ಯಾತೀತ ಉಳಿಸುವ ವಿಷಯಗಳ ಬಗ್ಗೆ ಅವರು ಪ್ರಧಾನಿ ನೆಹರೂ ಅವರ ಚಿಂತನೆಗಳನ್ನು ಒಪ್ಪಿಕೊಂಡಿದ್ದರು.

ಪತ್ರವೊಂದರಲ್ಲಿ ಸರ್ದಾರ್‌ ಪಟೇಲ್‌ ಅವರು, “ಭಾರತವನ್ನು ಹಿಂದೂ ರಾಷ್ಟ್ರವೆಂದು ಹಾಗೂ ಹಿಂದೂ ಧರ್ಮವನ್ನು ದೇಶದ ಧರ್ಮವೆಂದು ಪರಿಗಣಿಸಲು ಸಾಧ್ಯವಿಲ್ಲ. ದೇಶದಲ್ಲಿ ಇತರ ಅಲ್ಪಸಂಖ್ಯಾತರಿದ್ದಾರೆ ಎಂಬುದನ್ನು ನಾವು ಮರೆಯಬಾರದು. ಅವರ ರಕ್ಷಣೆಯು ನಮ್ಮ ಪ್ರಾಥಮಿಕ ಜವಾಬ್ದಾರಿಯಾಗಿದೆ. ದೇಶವು ಜಾತಿ ಅಥವಾ ಧರ್ಮದ ಭೇದವಿಲ್ಲದೆ ಎಲ್ಲರಿಗೂ ಸಲ್ಲಬೇಕು”

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...