Homeಮುಖಪುಟಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

ಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

- Advertisement -
- Advertisement -

ಇಂದು ದೇಶದ ಮೊದಲ ಉಪಪ್ರಧಾನ ಮಂತ್ರಿ ಹಾಗೂ ಗೃಹಸಚಿವರಾಗಿದ್ದ ವಲ್ಲಭಬಾಯಿ ಪಟೇಲ್‌ ಅವರ ಜನ್ಮದಿನ. ‘ಉಕ್ಕಿನ ಮನುಷ್ಯ’ ಎಂದು ಕರೆಯಲ್ಪಡುವ ಅವರ ಜನ್ಮದಿನಕ್ಕೆ ಪ್ರಧಾನ ಮೋದಿ, ಗೃಹ ಸಚಿವ ಅಮಿತ್‌ ಶಾ, ರಾಹುಲ್ ಗಾಂಧಿ ಸೇರಿದಂತೆ ಹಲವಾರು ಜನರು ಶುಭಕೋರಿದ್ದಾರೆ.

ಅವರ ಜನ್ಮವನ್ನು ‘ರಾಷ್ಟ್ರೀಯ ಏಕತಾ ದಿನ’ವಾಗಿ ಆಚರಿಸಲಾಗುತ್ತದೆ. ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರಾಗಿದ್ದ ಅವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಮಾತ್ರವಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಸರ್ದಾರ್‌ ಪಟೇಲ್‌ ಪಾತ್ರ ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

RSS ಬಗ್ಗೆ ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್‌ ಪಟೇಲ್‌!

ಮಹಾತ್ಮ ಗಾಂಧಿ ಕೊಲೆಯ ನಂತರ ಸೆಪ್ಟೆಂಬರ್ 11, 1948 ರಂದು ಸರ್ದಾರ್‌ ಪಟೇಲ್‌ ಅವರು ಆರೆಸ್ಸೆಸ್‌ ನಾಯಕ ಗೋಳ್ವಲ್ಕರ್‌‌ಗೆ ಬರೆದ ಪತ್ರದಲ್ಲಿ ಹೀಗಿದ್ದವು…

“…ವ್ಯಕ್ತಿತ್ವ, ಸಭ್ಯತೆ ಅಥವಾ ಸಜ್ಜನಿಕೆಯ ಎಲ್ಲ ಪರಿಗಣನೆಗಳನ್ನು ಕಡೆಗಣಿಸಿ ಜನರಲ್ಲಿ ವಿಷಕಾರಿ ಅಶಾಂತಿ ಸೃಷ್ಟಿಸಿತು. ಭಾಷಣಗಳೆಲ್ಲ ಸಂಪೂರ್ಣ ಕೋಮು ವಿಷಮಯವಾಗಿತ್ತು. ಈ ವಿಷವನ್ನು ಹರಡಿ ಹಿಂದೂಗಳನ್ನು ಪ್ರಚೋದಿಸಿ ಅವರನ್ನು ರಕ್ಷಣೆಗಾಗಿ ಸಂಘಟಿಸಬೇಕಾಗಿರಲಿಲ್ಲ.

ವಿಷದ ಪರಿಣಾಮವಾಗಿ, ಗಾಂಧೀಜಿಯ ಅಮೂಲ್ಯವಾದ ಜೀವದ ತ್ಯಾಗವನ್ನು ದೇಶವು ಅನುಭವಿಸಬೇಕಾಯಿತು. ಆರೆಸ್ಸೆಸ್‌ ಮೇಲೆ ಸರ್ಕಾರ ಅಥವಾ ಜನರ ಸಹಾನುಭೂತಿಯ ಒಂದು ತುಣುಕೂ ಉಳಿದಿಲ್ಲ. ನಿಜ ಹೇಳಬೇಕೆಂದರೆ ವಿರೋಧವೇ ಉಳಿಯಿತು.

ಗಾಂಧೀಜಿಯ ಮರಣದ ನಂತರ ಆರೆಸ್ಸೆಸ್‌‌ನವರು ಸಂತೋಷ ವ್ಯಕ್ತಪಡಿಸಿ ಸಿಹಿ ಹಂಚಿದಾಗ ಈ ವಿರೋಧ ತೀವ್ರವಾಯಿತು. ಈ ಪರಿಸ್ಥಿತಿಯಲ್ಲಿ ಆರೆಸ್ಸೆಸ್‌‌ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಯಿತು.

ಅಂದಿನಿಂದ, ಆರು ತಿಂಗಳುಗಳು ಕಳೆದಿವೆ. ಆರೆಸ್ಸೆಸ್‌‌ ಈಗಲಾದರೂ ಸರಿ ದಾರಿಗೆ ಬರುತ್ತಾರೆ ಎಂದು ನಾವು ಭಾವಿಸಿದ್ದೆವು. ಆದರೆ ನನಗೆ ಬಂದಿರುವ ವರದಿಗಳ ಪ್ರಕಾರ ಆರೆಸ್ಸೆಸ್‌ ಅದೇ ಹಳೆಯ ಚಟುವಟಿಕೆಗಳಿಗೆ ಜೀವ ತುಂಬುತ್ತಿದೆ ಎಂದು ಸ್ಪಷ್ಟವಾಗಿದೆ”

ಇದನ್ನೂ ಓದಿ: “ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?”

ಸರ್ದಾರ್ ಪಟೇಲ್‌ ಹಿಂದೂ ರಾಷ್ಟ್ರದ ಪ್ರತಿಪಾದನೆಯನ್ನು ತಿರಸ್ಕರಿಸಿದ್ದರು. ದೇಶದಲ್ಲಿ ಜಾತ್ಯಾತೀತ ಉಳಿಸುವ ವಿಷಯಗಳ ಬಗ್ಗೆ ಅವರು ಪ್ರಧಾನಿ ನೆಹರೂ ಅವರ ಚಿಂತನೆಗಳನ್ನು ಒಪ್ಪಿಕೊಂಡಿದ್ದರು.

ಪತ್ರವೊಂದರಲ್ಲಿ ಸರ್ದಾರ್‌ ಪಟೇಲ್‌ ಅವರು, “ಭಾರತವನ್ನು ಹಿಂದೂ ರಾಷ್ಟ್ರವೆಂದು ಹಾಗೂ ಹಿಂದೂ ಧರ್ಮವನ್ನು ದೇಶದ ಧರ್ಮವೆಂದು ಪರಿಗಣಿಸಲು ಸಾಧ್ಯವಿಲ್ಲ. ದೇಶದಲ್ಲಿ ಇತರ ಅಲ್ಪಸಂಖ್ಯಾತರಿದ್ದಾರೆ ಎಂಬುದನ್ನು ನಾವು ಮರೆಯಬಾರದು. ಅವರ ರಕ್ಷಣೆಯು ನಮ್ಮ ಪ್ರಾಥಮಿಕ ಜವಾಬ್ದಾರಿಯಾಗಿದೆ. ದೇಶವು ಜಾತಿ ಅಥವಾ ಧರ್ಮದ ಭೇದವಿಲ್ಲದೆ ಎಲ್ಲರಿಗೂ ಸಲ್ಲಬೇಕು”

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...