Homeಮುಖಪುಟಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

ಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

- Advertisement -
- Advertisement -

ಇಂದು ದೇಶದ ಮೊದಲ ಉಪಪ್ರಧಾನ ಮಂತ್ರಿ ಹಾಗೂ ಗೃಹಸಚಿವರಾಗಿದ್ದ ವಲ್ಲಭಬಾಯಿ ಪಟೇಲ್‌ ಅವರ ಜನ್ಮದಿನ. ‘ಉಕ್ಕಿನ ಮನುಷ್ಯ’ ಎಂದು ಕರೆಯಲ್ಪಡುವ ಅವರ ಜನ್ಮದಿನಕ್ಕೆ ಪ್ರಧಾನ ಮೋದಿ, ಗೃಹ ಸಚಿವ ಅಮಿತ್‌ ಶಾ, ರಾಹುಲ್ ಗಾಂಧಿ ಸೇರಿದಂತೆ ಹಲವಾರು ಜನರು ಶುಭಕೋರಿದ್ದಾರೆ.

ಅವರ ಜನ್ಮವನ್ನು ‘ರಾಷ್ಟ್ರೀಯ ಏಕತಾ ದಿನ’ವಾಗಿ ಆಚರಿಸಲಾಗುತ್ತದೆ. ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರಾಗಿದ್ದ ಅವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಮಾತ್ರವಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಸರ್ದಾರ್‌ ಪಟೇಲ್‌ ಪಾತ್ರ ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

RSS ಬಗ್ಗೆ ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್‌ ಪಟೇಲ್‌!

ಮಹಾತ್ಮ ಗಾಂಧಿ ಕೊಲೆಯ ನಂತರ ಸೆಪ್ಟೆಂಬರ್ 11, 1948 ರಂದು ಸರ್ದಾರ್‌ ಪಟೇಲ್‌ ಅವರು ಆರೆಸ್ಸೆಸ್‌ ನಾಯಕ ಗೋಳ್ವಲ್ಕರ್‌‌ಗೆ ಬರೆದ ಪತ್ರದಲ್ಲಿ ಹೀಗಿದ್ದವು…

“…ವ್ಯಕ್ತಿತ್ವ, ಸಭ್ಯತೆ ಅಥವಾ ಸಜ್ಜನಿಕೆಯ ಎಲ್ಲ ಪರಿಗಣನೆಗಳನ್ನು ಕಡೆಗಣಿಸಿ ಜನರಲ್ಲಿ ವಿಷಕಾರಿ ಅಶಾಂತಿ ಸೃಷ್ಟಿಸಿತು. ಭಾಷಣಗಳೆಲ್ಲ ಸಂಪೂರ್ಣ ಕೋಮು ವಿಷಮಯವಾಗಿತ್ತು. ಈ ವಿಷವನ್ನು ಹರಡಿ ಹಿಂದೂಗಳನ್ನು ಪ್ರಚೋದಿಸಿ ಅವರನ್ನು ರಕ್ಷಣೆಗಾಗಿ ಸಂಘಟಿಸಬೇಕಾಗಿರಲಿಲ್ಲ.

ವಿಷದ ಪರಿಣಾಮವಾಗಿ, ಗಾಂಧೀಜಿಯ ಅಮೂಲ್ಯವಾದ ಜೀವದ ತ್ಯಾಗವನ್ನು ದೇಶವು ಅನುಭವಿಸಬೇಕಾಯಿತು. ಆರೆಸ್ಸೆಸ್‌ ಮೇಲೆ ಸರ್ಕಾರ ಅಥವಾ ಜನರ ಸಹಾನುಭೂತಿಯ ಒಂದು ತುಣುಕೂ ಉಳಿದಿಲ್ಲ. ನಿಜ ಹೇಳಬೇಕೆಂದರೆ ವಿರೋಧವೇ ಉಳಿಯಿತು.

ಗಾಂಧೀಜಿಯ ಮರಣದ ನಂತರ ಆರೆಸ್ಸೆಸ್‌‌ನವರು ಸಂತೋಷ ವ್ಯಕ್ತಪಡಿಸಿ ಸಿಹಿ ಹಂಚಿದಾಗ ಈ ವಿರೋಧ ತೀವ್ರವಾಯಿತು. ಈ ಪರಿಸ್ಥಿತಿಯಲ್ಲಿ ಆರೆಸ್ಸೆಸ್‌‌ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಯಿತು.

ಅಂದಿನಿಂದ, ಆರು ತಿಂಗಳುಗಳು ಕಳೆದಿವೆ. ಆರೆಸ್ಸೆಸ್‌‌ ಈಗಲಾದರೂ ಸರಿ ದಾರಿಗೆ ಬರುತ್ತಾರೆ ಎಂದು ನಾವು ಭಾವಿಸಿದ್ದೆವು. ಆದರೆ ನನಗೆ ಬಂದಿರುವ ವರದಿಗಳ ಪ್ರಕಾರ ಆರೆಸ್ಸೆಸ್‌ ಅದೇ ಹಳೆಯ ಚಟುವಟಿಕೆಗಳಿಗೆ ಜೀವ ತುಂಬುತ್ತಿದೆ ಎಂದು ಸ್ಪಷ್ಟವಾಗಿದೆ”

ಇದನ್ನೂ ಓದಿ: “ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?”

ಸರ್ದಾರ್ ಪಟೇಲ್‌ ಹಿಂದೂ ರಾಷ್ಟ್ರದ ಪ್ರತಿಪಾದನೆಯನ್ನು ತಿರಸ್ಕರಿಸಿದ್ದರು. ದೇಶದಲ್ಲಿ ಜಾತ್ಯಾತೀತ ಉಳಿಸುವ ವಿಷಯಗಳ ಬಗ್ಗೆ ಅವರು ಪ್ರಧಾನಿ ನೆಹರೂ ಅವರ ಚಿಂತನೆಗಳನ್ನು ಒಪ್ಪಿಕೊಂಡಿದ್ದರು.

ಪತ್ರವೊಂದರಲ್ಲಿ ಸರ್ದಾರ್‌ ಪಟೇಲ್‌ ಅವರು, “ಭಾರತವನ್ನು ಹಿಂದೂ ರಾಷ್ಟ್ರವೆಂದು ಹಾಗೂ ಹಿಂದೂ ಧರ್ಮವನ್ನು ದೇಶದ ಧರ್ಮವೆಂದು ಪರಿಗಣಿಸಲು ಸಾಧ್ಯವಿಲ್ಲ. ದೇಶದಲ್ಲಿ ಇತರ ಅಲ್ಪಸಂಖ್ಯಾತರಿದ್ದಾರೆ ಎಂಬುದನ್ನು ನಾವು ಮರೆಯಬಾರದು. ಅವರ ರಕ್ಷಣೆಯು ನಮ್ಮ ಪ್ರಾಥಮಿಕ ಜವಾಬ್ದಾರಿಯಾಗಿದೆ. ದೇಶವು ಜಾತಿ ಅಥವಾ ಧರ್ಮದ ಭೇದವಿಲ್ಲದೆ ಎಲ್ಲರಿಗೂ ಸಲ್ಲಬೇಕು”

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...