Homeಮುಖಪುಟಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ,...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

- Advertisement -
- Advertisement -

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ ನನ್ನ ಕಾನೂನು ಹೋರಾಟವನ್ನು ಮುಂದುವರಿಸಲು ದೃಢನಿಶ್ಚಯ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಮಲಯಾಳಂ ಸುದ್ದಿವಾಹಿನಿ ಏಷ್ಯಾನೆಟ್ ನ್ಯೂಸ್‌ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಂತ್ರಸ್ತೆ ತೀವ್ರವಾದ ಭಯ, ಕಳಂಕ ಮತ್ತು ಚರ್ಚ್‌ನೊಳಗಿನ ಜೀವನದ ಕಠೋರ ವಾಸ್ತವಗಳಿಂದಾಗಿ ಪದೇ ಪದೇ ನಿಂದನೆ ಅನುಭವಿಸಿದರೂ ವರ್ಷಗಳ ಕಾಲ ಮೌನವಾಗಿದ್ದೆ ಎಂದು ಹೇಳಿದ್ದಾರೆ. ತನ್ನ ಮೇಲೆ ಹದಿಮೂರು ಬಾರಿ ಅತ್ಯಾಚಾರ ನಡೆದಿದೆ. ಆದರೆ, ಕಾನ್ವೆಂಟ್ ತೊರೆದರೆ ‘ಓಡಿಹೋದ ಸನ್ಯಾಸಿನಿ’ ಎಂದು ಹಣೆಪಟ್ಟಿ ಕಟ್ಟುವ ಭಯದಿಂದ ಆರಂಭದಲ್ಲಿ ಮಾತನಾಡಿರಲಿಲ್ಲ ಎಂದಿದ್ದಾರೆ.

ಬಿಷಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಬಳಿಕ ಇದು ಮೊದಲ ಬಾರಿಯಾಗಿದೆ ಸಂತ್ರಸ್ತೆ ಮನ ತೊರೆದು ಮಾತನಾಡಿರುವುದು. ಅಸಲಿಗೆ ಸಂಸತ್ರಸ್ತೆಯ ಹೆಸರು ಬಹಿರಂಗಗೊಂಡಿರುವುದೇ ಇದು ಮೊದಲ ಬಾರಿಯಾಗಿದೆ.

ಕಳೆದ 9 ವರ್ಷಗಳಲ್ಲಿ ಸಂತ್ರಸ್ತೆಗೆ ನ್ಯಾಯ ಒದಗಿಸಲು ಅವರ ಜೊತೆಯಿದ್ದ 6 ಮಂದಿ ಸನ್ಯಾಸಿನಿಗಳು ಹೋರಾಟ ನಡೆಸಿದ್ದರು. ಅವರಲ್ಲಿ ಸಿಸ್ಟರ್ ಅನುಪಮಾ ಕೆಲಮಂಗಲತುವೆಲಿಯಿಲ್ ಪ್ರಮುಖರು. ಸಿಸ್ಟರ್ ಅನುಪಮಾ ಈ ಘಟನೆಯ ಬಳಿಕ ಸನ್ಯಾಸತ್ವ ತೊರೆದು ಕೇರಳದ ಅಲಪ್ಪುಝದಲ್ಲಿರುವ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

2018ರಲ್ಲಿ, ಕೇರಳದ ಕುರವಿಲಂಙಾಡುವಿನಲ್ಲಿರುವ ಸೇಂಟ್ ಫ್ರಾನ್ಸಿಸ್ ಮಿಷನ್ ಹೋಂನಲ್ಲಿ ವಾಸಿಸುತ್ತಿದ್ದ ಹಿರಿಯ ಸನ್ಯಾಸಿನಿ, ಆಗ ಪಂಜಾಬ್‌ನ ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿದ್ದ ಫ್ರಾಂಕೊ ಮುಲಕ್ಕಲ್ ಅವರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಭಾರತದಲ್ಲಿ ಹಾಲಿ ಬಿಷಪ್ ವಿರುದ್ದ ಸನ್ಯಾನಿಸಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಪೊಲೀಸ್ ದೂರು ದಾಖಲಿಸಿರುವುದು ಇದು ಮೊದಲ ಬಾರಿಯಾಗಿತ್ತು.

ಜನವರಿ 2022ರಲ್ಲಿ, ಪ್ರಕರಣದ ವಿಚಾರಣಾ ನ್ಯಾಯಾಲಯವಾದ ಕೊಟ್ಟಾಯಂನಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಫ್ರಾಂಕೊ ಮುಲಕ್ಕಲ್ ಅವರನ್ನು ಖುಲಾಸೆಗೊಳಿಸಿತು. 2023ರಲ್ಲಿ, ಮುಲಕ್ಕಲ್ ಅವರು ದಿವಂಗತ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಈಗ ಜಲಂಧರ್‌ನ ಬಿಷಪ್ ಎಮೆರಿಟಸ್ ಎಂಬ ಬಿರುದನ್ನು ಪಡೆದಿದ್ದಾರೆ. ಇದು ಹಿಂದಿನ ಸೇವೆಯನ್ನು ಗುರುತಿಸಿ ನಿವೃತ್ತ ಬಿಷಪ್‌ಗಳಿಗೆ ನೀಡಲಾಗುವ ಗೌರವ ಸ್ಥಾನಮಾನವಾಗಿದೆ.

ತಮ್ಮ ದೀರ್ಘ ಮೌನಕ್ಕೆ ಕಾರಣಗಳನ್ನು ವಿವರಿಸಿದ ಸಂತ್ರಸ್ತೆ, ಸನ್ಯಾಸಿನಿಯೊಬ್ಬಳಿಗೆ ಪರಿಶುದ್ಧತೆಯನ್ನು ಅತ್ಯುನ್ನತ ಮೌಲ್ಯವೆಂದು ಪರಿಗಣಿಸಲಾಗುತ್ತದೆ. ಅದು ‘ಕಳೆದುಹೋಗಿದೆ’ ಎಂದು ಗೊತ್ತಾದರೆ ಸನ್ಯಾಸಿನಿಯನ್ನು ತಕ್ಷಣವೇ ಚರ್ಚ್‌ನಿಂದ ಹೊರಹಾಕಬಹುದು. ಚರ್ಚ್ ತೊರೆದ ಅನೇಕ ಮಹಿಳೆಯರಿಗೆ ‘ಓಡಿಹೋದ ಸನ್ಯಾಸಿನಿಗಳು’ ಎಂಬ ಹಣೆಪಟ್ಟಿ ಕಟ್ಟಲ್ಪಟ್ಟದ್ದನ್ನು ನಾನು ನೋಡಿದ್ದೇನೆ. ಇದು ಅವರಿಗೆ ಮತ್ತು ಅವರ ಕುಟುಂಬಗಳಿಗೆ ಜೀವಮಾನದ ಅವಮಾನವನ್ನು ತರುತ್ತದೆ ಎಂದಿದ್ದಾರೆ.

ತನ್ನ ಪಾವಿತ್ರ್ಯ ಕಸಿದುಕೊಳ್ಳಲಾಗಿದೆ ಎಂದು ತಾನು ಬೆಳೆಸುತ್ತಿರುವ ಮಕ್ಕಳಿಗೆ ಹೇಳುವುದನ್ನು ಎಂದಿಗೂ ಊಹಿಸಲೂ ಸಾಧ್ಯವಿಲ್ಲ. ಒಬ್ಬ ತಾಯಿ ತನ್ನ ಮಕ್ಕಳ ಮುಂದೆ ಇದನ್ನು ಹೇಳಲು ಸಾಧ್ಯವಿಲ್ಲ. ಈ ಭಯವು ತನ್ನನ್ನು ವರ್ಷಗಳ ಕಾಲ ಮೌನವಾಗಿಡುವಂತೆ ಮಾಡಿತು ಎಂದು ಹೇಳಿದ್ದಾರೆ.

ಎಲ್ಲವೂ ಸಾಮಾನ್ಯವಾಗಿದೆ ಎಂದು ನಟಿಸುತ್ತಾ ಕಾನ್ವೆಂಟ್ ಒಳಗೆ ವಾಸಿಸುವುದನ್ನು ಮುಂದುವರಿಸುವ ನೋವನ್ನು ಸಂತ್ರಸ್ತೆ ಬಿಚ್ಚಿಟ್ಟಿದ್ದು, “ನಗುನಗುತ್ತಾ, ಚೆನ್ನಾಗಿ ವಸ್ತ್ರ ಧರಿಸಿ, ಶಾಂತವಾಗಿ ಹೊರಗೆ ಹೆಜ್ಜೆ ಹಾಕಬೇಕಾಯಿತು ಮತ್ತು ಒಳಗಿನ ಅಪಾರ ನೋವನ್ನು ಮರೆಮಾಡಬೇಕಾಯಿತು” ಎಂದು ಹೇಳಿದ್ದಾರೆ. “ಎಲ್ಲವನ್ನೂ ತನ್ನೊಳಗೆ ಇಟ್ಟುಕೊಂಡು, ಆಘಾತವನ್ನು ಒಂಟಿಯಾಗಿ ಹೊತ್ತುಕೊಂಡು ಕಾನ್ವೆಂಟ್‌ನಲ್ಲಿ ವಾಸಿಸುವುದನ್ನು ಮುಂದುವರೆಸಿದ್ದೇನೆ” ಎಂದು ತಿಳಿಸಿದ್ದಾರೆ.

ಅನೇಕ ಕಾನ್ವೆಂಟ್‌ಗಳಲ್ಲಿ ಇದೇ ರೀತಿಯ ಅನುಭವಗಳಿವೆ. ಮೌನವಾಗಿ ನೋವು ಅನುಭವಿಸುತ್ತಿರುವ ಹಲವಾರು ಜನರನ್ನು ತಾನು ವೈಯಕ್ತಿಕವಾಗಿ ತಿಳಿದಿದ್ದೇನೆ. ಎಲ್ಲಾ ಸತ್ಯಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಮಾತನಾಡಲು ಧೈರ್ಯ ಮಾಡುವವರಿಗೆ ಏನಾಗುತ್ತದೆ ಎಂದು ನಾನು ನೋಡಿದ್ದೇನೆ ಎಂದಿದ್ದಾರೆ.

ಚರ್ಚ್‌ನೊಳಗಿನ ದೌರ್ಜನ್ಯವನ್ನು ಹೇಳಿಕೊಂಡ ನಂತರ ನನ್ನನ್ನು ಪ್ರತ್ಯೇಕಿಸಲಾಗಿತ್ತು. ಬಿಷಪ್ ಫ್ರಾಂಕೊ ನನ್ನ ಕುಟುಂಬ ಸದಸ್ಯರು ಮತ್ತು ಸಹ ಸನ್ಯಾಸಿಗಳನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಪ್ರಯತ್ನಿಸಿದರು. ಕಾನ್ವೆಂಟ್‌ನೊಳಗಿನ ಕೆಲ ಸನ್ಯಾಸಿಗಳು ಅವರನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಹಣಕ್ಕಾಗಿ ದೂರು ದಾಖಲಿಸಲಾಗಿದೆ ಎಂಬ ಆರೋಪಗಳನ್ನು ಸಂತ್ರಸ್ತೆ ಸುಳ್ಳು ಎಂದು ತಳ್ಳಿ ಹಾಕಿದ್ದು, “ನಾನು ಡಯಾಸಿಸ್ ಅಥವಾ ಫ್ರಾಂಕೊ ಅವರಿಂದ ಒಂದು ರೂಪಾಯಿಯನ್ನೂ ಪಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆಯ ಬಳಿಕ ಹೋರಾಟ ನಡೆಸಿದ ಮೂವರು ಸನ್ಯಾಸಿನಿಗಳು ಒಂಟಿತನ ಮತ್ತು ಕಿರುಕುಳವನ್ನು ಎದುರಿಸಿದ ನಂತರ ಚರ್ಚ್ ತೊರೆದರು ಎಂದು ಬಹಿರಂಗಪಡಿಸಿದ ಸಂತ್ರಸ್ತೆ, ತಾನು ಸೇರಿದಂತೆ ಉಳಿದ ಮೂವರು ಈಗ ಕಾನ್ವೆಂಟ್ ಒಳಗೆ ಟೈಲರಿಂಗ್ ಕೆಲಸ ಮಾಡುವ ಮೂಲಕ ಬದುಕುಳಿದಿದ್ದೇವೆ. ಚರ್ಚ್ ನಾಯಕತ್ವದ ಮೌನವೇ ಅವರನ್ನು ಬೀದಿಗೆ ತಳ್ಳಿದ್ದು, ಅವರಿಗೆ ಬೆಂಬಲ ಅಥವಾ ರಕ್ಷಣೆ ಇಲ್ಲದಾಗಿದೆ ಎಂದು ಹೇಳಿದ್ದಾರೆ.

“ನಾವು ಇನ್ನೂ ಜೀವಂತವಾಗಿದ್ದೇವೆ, ನಾವು ಇನ್ನೂ ಇಲ್ಲಿದ್ದೇವೆ… ನಮ್ಮ ಹೋರಾಟ ಇನ್ನೂ ಮುಂದುವರೆದಿದೆ ಎಂದು ಜನರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ” ಎಂದಿದ್ದಾರೆ.

ಈ ಪ್ರಕರಣವನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮೂಲಕ ಮುಂದುವರಿಸಲು ನಿರ್ಧರಿಸಿದ್ದೇನೆ. ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬರುವವರೆಗೆ ನಾನು ವಿಶ್ರಾಂತಿ ಪಡೆಯುವುದಿಲ್ಲ. ನನ್ನ ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಹೊರಬಿದ್ದ 2017ರ ನಟಿ ಮೇಲಿನ ಅತ್ಯಾಚಾರ ಪ್ರಕರಣದ ತೀರ್ಪನ್ನು ಸಂತ್ರಸ್ತೆ ಉಲ್ಲೇಖಿಸಿದ್ದು, “ಆ ತೀರ್ಪು ನಿಜವಾಗಿಯೂ ನನಗೆ ನೋವುಂಟು ಮಾಡಿದೆ. ನನ್ನ ಸ್ವಂತ ಪ್ರಕರಣದ ತೀರ್ಪು ಬಂದ ದಿನಕ್ಕೆ ಅದು ನನ್ನನ್ನು ಕರೆದೊಯ್ಯಲ್ಪಟ್ಟಿತು. ಆಕೆಗೂ ನ್ಯಾಯ ಸಿಕ್ಕಿಲ್ಲ” ಎಂದು ಹೇಳಿದ್ದಾರೆ.

“ಅದಕ್ಕಾಗಿಯೇ ನಾನು ಈಗ ಸಾರ್ವಜನಿಕವಾಗಿ ಹೊರಬರಲು ನಿರ್ಧರಿಸಿದ್ದೇನೆ” ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...