Homeಮುಖಪುಟಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ,...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

- Advertisement -
- Advertisement -

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ ನನ್ನ ಕಾನೂನು ಹೋರಾಟವನ್ನು ಮುಂದುವರಿಸಲು ದೃಢನಿಶ್ಚಯ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಮಲಯಾಳಂ ಸುದ್ದಿವಾಹಿನಿ ಏಷ್ಯಾನೆಟ್ ನ್ಯೂಸ್‌ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಂತ್ರಸ್ತೆ ತೀವ್ರವಾದ ಭಯ, ಕಳಂಕ ಮತ್ತು ಚರ್ಚ್‌ನೊಳಗಿನ ಜೀವನದ ಕಠೋರ ವಾಸ್ತವಗಳಿಂದಾಗಿ ಪದೇ ಪದೇ ನಿಂದನೆ ಅನುಭವಿಸಿದರೂ ವರ್ಷಗಳ ಕಾಲ ಮೌನವಾಗಿದ್ದೆ ಎಂದು ಹೇಳಿದ್ದಾರೆ. ತನ್ನ ಮೇಲೆ ಹದಿಮೂರು ಬಾರಿ ಅತ್ಯಾಚಾರ ನಡೆದಿದೆ. ಆದರೆ, ಕಾನ್ವೆಂಟ್ ತೊರೆದರೆ ‘ಓಡಿಹೋದ ಸನ್ಯಾಸಿನಿ’ ಎಂದು ಹಣೆಪಟ್ಟಿ ಕಟ್ಟುವ ಭಯದಿಂದ ಆರಂಭದಲ್ಲಿ ಮಾತನಾಡಿರಲಿಲ್ಲ ಎಂದಿದ್ದಾರೆ.

ಬಿಷಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಬಳಿಕ ಇದು ಮೊದಲ ಬಾರಿಯಾಗಿದೆ ಸಂತ್ರಸ್ತೆ ಮನ ತೊರೆದು ಮಾತನಾಡಿರುವುದು. ಅಸಲಿಗೆ ಸಂಸತ್ರಸ್ತೆಯ ಹೆಸರು ಬಹಿರಂಗಗೊಂಡಿರುವುದೇ ಇದು ಮೊದಲ ಬಾರಿಯಾಗಿದೆ.

ಕಳೆದ 9 ವರ್ಷಗಳಲ್ಲಿ ಸಂತ್ರಸ್ತೆಗೆ ನ್ಯಾಯ ಒದಗಿಸಲು ಅವರ ಜೊತೆಯಿದ್ದ 6 ಮಂದಿ ಸನ್ಯಾಸಿನಿಗಳು ಹೋರಾಟ ನಡೆಸಿದ್ದರು. ಅವರಲ್ಲಿ ಸಿಸ್ಟರ್ ಅನುಪಮಾ ಕೆಲಮಂಗಲತುವೆಲಿಯಿಲ್ ಪ್ರಮುಖರು. ಸಿಸ್ಟರ್ ಅನುಪಮಾ ಈ ಘಟನೆಯ ಬಳಿಕ ಸನ್ಯಾಸತ್ವ ತೊರೆದು ಕೇರಳದ ಅಲಪ್ಪುಝದಲ್ಲಿರುವ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

2018ರಲ್ಲಿ, ಕೇರಳದ ಕುರವಿಲಂಙಾಡುವಿನಲ್ಲಿರುವ ಸೇಂಟ್ ಫ್ರಾನ್ಸಿಸ್ ಮಿಷನ್ ಹೋಂನಲ್ಲಿ ವಾಸಿಸುತ್ತಿದ್ದ ಹಿರಿಯ ಸನ್ಯಾಸಿನಿ, ಆಗ ಪಂಜಾಬ್‌ನ ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿದ್ದ ಫ್ರಾಂಕೊ ಮುಲಕ್ಕಲ್ ಅವರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಭಾರತದಲ್ಲಿ ಹಾಲಿ ಬಿಷಪ್ ವಿರುದ್ದ ಸನ್ಯಾನಿಸಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಪೊಲೀಸ್ ದೂರು ದಾಖಲಿಸಿರುವುದು ಇದು ಮೊದಲ ಬಾರಿಯಾಗಿತ್ತು.

ಜನವರಿ 2022ರಲ್ಲಿ, ಪ್ರಕರಣದ ವಿಚಾರಣಾ ನ್ಯಾಯಾಲಯವಾದ ಕೊಟ್ಟಾಯಂನಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಫ್ರಾಂಕೊ ಮುಲಕ್ಕಲ್ ಅವರನ್ನು ಖುಲಾಸೆಗೊಳಿಸಿತು. 2023ರಲ್ಲಿ, ಮುಲಕ್ಕಲ್ ಅವರು ದಿವಂಗತ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಈಗ ಜಲಂಧರ್‌ನ ಬಿಷಪ್ ಎಮೆರಿಟಸ್ ಎಂಬ ಬಿರುದನ್ನು ಪಡೆದಿದ್ದಾರೆ. ಇದು ಹಿಂದಿನ ಸೇವೆಯನ್ನು ಗುರುತಿಸಿ ನಿವೃತ್ತ ಬಿಷಪ್‌ಗಳಿಗೆ ನೀಡಲಾಗುವ ಗೌರವ ಸ್ಥಾನಮಾನವಾಗಿದೆ.

ತಮ್ಮ ದೀರ್ಘ ಮೌನಕ್ಕೆ ಕಾರಣಗಳನ್ನು ವಿವರಿಸಿದ ಸಂತ್ರಸ್ತೆ, ಸನ್ಯಾಸಿನಿಯೊಬ್ಬಳಿಗೆ ಪರಿಶುದ್ಧತೆಯನ್ನು ಅತ್ಯುನ್ನತ ಮೌಲ್ಯವೆಂದು ಪರಿಗಣಿಸಲಾಗುತ್ತದೆ. ಅದು ‘ಕಳೆದುಹೋಗಿದೆ’ ಎಂದು ಗೊತ್ತಾದರೆ ಸನ್ಯಾಸಿನಿಯನ್ನು ತಕ್ಷಣವೇ ಚರ್ಚ್‌ನಿಂದ ಹೊರಹಾಕಬಹುದು. ಚರ್ಚ್ ತೊರೆದ ಅನೇಕ ಮಹಿಳೆಯರಿಗೆ ‘ಓಡಿಹೋದ ಸನ್ಯಾಸಿನಿಗಳು’ ಎಂಬ ಹಣೆಪಟ್ಟಿ ಕಟ್ಟಲ್ಪಟ್ಟದ್ದನ್ನು ನಾನು ನೋಡಿದ್ದೇನೆ. ಇದು ಅವರಿಗೆ ಮತ್ತು ಅವರ ಕುಟುಂಬಗಳಿಗೆ ಜೀವಮಾನದ ಅವಮಾನವನ್ನು ತರುತ್ತದೆ ಎಂದಿದ್ದಾರೆ.

ತನ್ನ ಪಾವಿತ್ರ್ಯ ಕಸಿದುಕೊಳ್ಳಲಾಗಿದೆ ಎಂದು ತಾನು ಬೆಳೆಸುತ್ತಿರುವ ಮಕ್ಕಳಿಗೆ ಹೇಳುವುದನ್ನು ಎಂದಿಗೂ ಊಹಿಸಲೂ ಸಾಧ್ಯವಿಲ್ಲ. ಒಬ್ಬ ತಾಯಿ ತನ್ನ ಮಕ್ಕಳ ಮುಂದೆ ಇದನ್ನು ಹೇಳಲು ಸಾಧ್ಯವಿಲ್ಲ. ಈ ಭಯವು ತನ್ನನ್ನು ವರ್ಷಗಳ ಕಾಲ ಮೌನವಾಗಿಡುವಂತೆ ಮಾಡಿತು ಎಂದು ಹೇಳಿದ್ದಾರೆ.

ಎಲ್ಲವೂ ಸಾಮಾನ್ಯವಾಗಿದೆ ಎಂದು ನಟಿಸುತ್ತಾ ಕಾನ್ವೆಂಟ್ ಒಳಗೆ ವಾಸಿಸುವುದನ್ನು ಮುಂದುವರಿಸುವ ನೋವನ್ನು ಸಂತ್ರಸ್ತೆ ಬಿಚ್ಚಿಟ್ಟಿದ್ದು, “ನಗುನಗುತ್ತಾ, ಚೆನ್ನಾಗಿ ವಸ್ತ್ರ ಧರಿಸಿ, ಶಾಂತವಾಗಿ ಹೊರಗೆ ಹೆಜ್ಜೆ ಹಾಕಬೇಕಾಯಿತು ಮತ್ತು ಒಳಗಿನ ಅಪಾರ ನೋವನ್ನು ಮರೆಮಾಡಬೇಕಾಯಿತು” ಎಂದು ಹೇಳಿದ್ದಾರೆ. “ಎಲ್ಲವನ್ನೂ ತನ್ನೊಳಗೆ ಇಟ್ಟುಕೊಂಡು, ಆಘಾತವನ್ನು ಒಂಟಿಯಾಗಿ ಹೊತ್ತುಕೊಂಡು ಕಾನ್ವೆಂಟ್‌ನಲ್ಲಿ ವಾಸಿಸುವುದನ್ನು ಮುಂದುವರೆಸಿದ್ದೇನೆ” ಎಂದು ತಿಳಿಸಿದ್ದಾರೆ.

ಅನೇಕ ಕಾನ್ವೆಂಟ್‌ಗಳಲ್ಲಿ ಇದೇ ರೀತಿಯ ಅನುಭವಗಳಿವೆ. ಮೌನವಾಗಿ ನೋವು ಅನುಭವಿಸುತ್ತಿರುವ ಹಲವಾರು ಜನರನ್ನು ತಾನು ವೈಯಕ್ತಿಕವಾಗಿ ತಿಳಿದಿದ್ದೇನೆ. ಎಲ್ಲಾ ಸತ್ಯಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಮಾತನಾಡಲು ಧೈರ್ಯ ಮಾಡುವವರಿಗೆ ಏನಾಗುತ್ತದೆ ಎಂದು ನಾನು ನೋಡಿದ್ದೇನೆ ಎಂದಿದ್ದಾರೆ.

ಚರ್ಚ್‌ನೊಳಗಿನ ದೌರ್ಜನ್ಯವನ್ನು ಹೇಳಿಕೊಂಡ ನಂತರ ನನ್ನನ್ನು ಪ್ರತ್ಯೇಕಿಸಲಾಗಿತ್ತು. ಬಿಷಪ್ ಫ್ರಾಂಕೊ ನನ್ನ ಕುಟುಂಬ ಸದಸ್ಯರು ಮತ್ತು ಸಹ ಸನ್ಯಾಸಿಗಳನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಪ್ರಯತ್ನಿಸಿದರು. ಕಾನ್ವೆಂಟ್‌ನೊಳಗಿನ ಕೆಲ ಸನ್ಯಾಸಿಗಳು ಅವರನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಹಣಕ್ಕಾಗಿ ದೂರು ದಾಖಲಿಸಲಾಗಿದೆ ಎಂಬ ಆರೋಪಗಳನ್ನು ಸಂತ್ರಸ್ತೆ ಸುಳ್ಳು ಎಂದು ತಳ್ಳಿ ಹಾಕಿದ್ದು, “ನಾನು ಡಯಾಸಿಸ್ ಅಥವಾ ಫ್ರಾಂಕೊ ಅವರಿಂದ ಒಂದು ರೂಪಾಯಿಯನ್ನೂ ಪಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆಯ ಬಳಿಕ ಹೋರಾಟ ನಡೆಸಿದ ಮೂವರು ಸನ್ಯಾಸಿನಿಗಳು ಒಂಟಿತನ ಮತ್ತು ಕಿರುಕುಳವನ್ನು ಎದುರಿಸಿದ ನಂತರ ಚರ್ಚ್ ತೊರೆದರು ಎಂದು ಬಹಿರಂಗಪಡಿಸಿದ ಸಂತ್ರಸ್ತೆ, ತಾನು ಸೇರಿದಂತೆ ಉಳಿದ ಮೂವರು ಈಗ ಕಾನ್ವೆಂಟ್ ಒಳಗೆ ಟೈಲರಿಂಗ್ ಕೆಲಸ ಮಾಡುವ ಮೂಲಕ ಬದುಕುಳಿದಿದ್ದೇವೆ. ಚರ್ಚ್ ನಾಯಕತ್ವದ ಮೌನವೇ ಅವರನ್ನು ಬೀದಿಗೆ ತಳ್ಳಿದ್ದು, ಅವರಿಗೆ ಬೆಂಬಲ ಅಥವಾ ರಕ್ಷಣೆ ಇಲ್ಲದಾಗಿದೆ ಎಂದು ಹೇಳಿದ್ದಾರೆ.

“ನಾವು ಇನ್ನೂ ಜೀವಂತವಾಗಿದ್ದೇವೆ, ನಾವು ಇನ್ನೂ ಇಲ್ಲಿದ್ದೇವೆ… ನಮ್ಮ ಹೋರಾಟ ಇನ್ನೂ ಮುಂದುವರೆದಿದೆ ಎಂದು ಜನರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ” ಎಂದಿದ್ದಾರೆ.

ಈ ಪ್ರಕರಣವನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮೂಲಕ ಮುಂದುವರಿಸಲು ನಿರ್ಧರಿಸಿದ್ದೇನೆ. ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬರುವವರೆಗೆ ನಾನು ವಿಶ್ರಾಂತಿ ಪಡೆಯುವುದಿಲ್ಲ. ನನ್ನ ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಹೊರಬಿದ್ದ 2017ರ ನಟಿ ಮೇಲಿನ ಅತ್ಯಾಚಾರ ಪ್ರಕರಣದ ತೀರ್ಪನ್ನು ಸಂತ್ರಸ್ತೆ ಉಲ್ಲೇಖಿಸಿದ್ದು, “ಆ ತೀರ್ಪು ನಿಜವಾಗಿಯೂ ನನಗೆ ನೋವುಂಟು ಮಾಡಿದೆ. ನನ್ನ ಸ್ವಂತ ಪ್ರಕರಣದ ತೀರ್ಪು ಬಂದ ದಿನಕ್ಕೆ ಅದು ನನ್ನನ್ನು ಕರೆದೊಯ್ಯಲ್ಪಟ್ಟಿತು. ಆಕೆಗೂ ನ್ಯಾಯ ಸಿಕ್ಕಿಲ್ಲ” ಎಂದು ಹೇಳಿದ್ದಾರೆ.

“ಅದಕ್ಕಾಗಿಯೇ ನಾನು ಈಗ ಸಾರ್ವಜನಿಕವಾಗಿ ಹೊರಬರಲು ನಿರ್ಧರಿಸಿದ್ದೇನೆ” ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...