Homeಮುಖಪುಟಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ,...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

- Advertisement -
- Advertisement -

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ ನನ್ನ ಕಾನೂನು ಹೋರಾಟವನ್ನು ಮುಂದುವರಿಸಲು ದೃಢನಿಶ್ಚಯ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಮಲಯಾಳಂ ಸುದ್ದಿವಾಹಿನಿ ಏಷ್ಯಾನೆಟ್ ನ್ಯೂಸ್‌ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಂತ್ರಸ್ತೆ ತೀವ್ರವಾದ ಭಯ, ಕಳಂಕ ಮತ್ತು ಚರ್ಚ್‌ನೊಳಗಿನ ಜೀವನದ ಕಠೋರ ವಾಸ್ತವಗಳಿಂದಾಗಿ ಪದೇ ಪದೇ ನಿಂದನೆ ಅನುಭವಿಸಿದರೂ ವರ್ಷಗಳ ಕಾಲ ಮೌನವಾಗಿದ್ದೆ ಎಂದು ಹೇಳಿದ್ದಾರೆ. ತನ್ನ ಮೇಲೆ ಹದಿಮೂರು ಬಾರಿ ಅತ್ಯಾಚಾರ ನಡೆದಿದೆ. ಆದರೆ, ಕಾನ್ವೆಂಟ್ ತೊರೆದರೆ ‘ಓಡಿಹೋದ ಸನ್ಯಾಸಿನಿ’ ಎಂದು ಹಣೆಪಟ್ಟಿ ಕಟ್ಟುವ ಭಯದಿಂದ ಆರಂಭದಲ್ಲಿ ಮಾತನಾಡಿರಲಿಲ್ಲ ಎಂದಿದ್ದಾರೆ.

ಬಿಷಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಬಳಿಕ ಇದು ಮೊದಲ ಬಾರಿಯಾಗಿದೆ ಸಂತ್ರಸ್ತೆ ಮನ ತೊರೆದು ಮಾತನಾಡಿರುವುದು. ಅಸಲಿಗೆ ಸಂಸತ್ರಸ್ತೆಯ ಹೆಸರು ಬಹಿರಂಗಗೊಂಡಿರುವುದೇ ಇದು ಮೊದಲ ಬಾರಿಯಾಗಿದೆ.

ಕಳೆದ 9 ವರ್ಷಗಳಲ್ಲಿ ಸಂತ್ರಸ್ತೆಗೆ ನ್ಯಾಯ ಒದಗಿಸಲು ಅವರ ಜೊತೆಯಿದ್ದ 6 ಮಂದಿ ಸನ್ಯಾಸಿನಿಗಳು ಹೋರಾಟ ನಡೆಸಿದ್ದರು. ಅವರಲ್ಲಿ ಸಿಸ್ಟರ್ ಅನುಪಮಾ ಕೆಲಮಂಗಲತುವೆಲಿಯಿಲ್ ಪ್ರಮುಖರು. ಸಿಸ್ಟರ್ ಅನುಪಮಾ ಈ ಘಟನೆಯ ಬಳಿಕ ಸನ್ಯಾಸತ್ವ ತೊರೆದು ಕೇರಳದ ಅಲಪ್ಪುಝದಲ್ಲಿರುವ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

2018ರಲ್ಲಿ, ಕೇರಳದ ಕುರವಿಲಂಙಾಡುವಿನಲ್ಲಿರುವ ಸೇಂಟ್ ಫ್ರಾನ್ಸಿಸ್ ಮಿಷನ್ ಹೋಂನಲ್ಲಿ ವಾಸಿಸುತ್ತಿದ್ದ ಹಿರಿಯ ಸನ್ಯಾಸಿನಿ, ಆಗ ಪಂಜಾಬ್‌ನ ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿದ್ದ ಫ್ರಾಂಕೊ ಮುಲಕ್ಕಲ್ ಅವರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಭಾರತದಲ್ಲಿ ಹಾಲಿ ಬಿಷಪ್ ವಿರುದ್ದ ಸನ್ಯಾನಿಸಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಪೊಲೀಸ್ ದೂರು ದಾಖಲಿಸಿರುವುದು ಇದು ಮೊದಲ ಬಾರಿಯಾಗಿತ್ತು.

ಜನವರಿ 2022ರಲ್ಲಿ, ಪ್ರಕರಣದ ವಿಚಾರಣಾ ನ್ಯಾಯಾಲಯವಾದ ಕೊಟ್ಟಾಯಂನಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಫ್ರಾಂಕೊ ಮುಲಕ್ಕಲ್ ಅವರನ್ನು ಖುಲಾಸೆಗೊಳಿಸಿತು. 2023ರಲ್ಲಿ, ಮುಲಕ್ಕಲ್ ಅವರು ದಿವಂಗತ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಈಗ ಜಲಂಧರ್‌ನ ಬಿಷಪ್ ಎಮೆರಿಟಸ್ ಎಂಬ ಬಿರುದನ್ನು ಪಡೆದಿದ್ದಾರೆ. ಇದು ಹಿಂದಿನ ಸೇವೆಯನ್ನು ಗುರುತಿಸಿ ನಿವೃತ್ತ ಬಿಷಪ್‌ಗಳಿಗೆ ನೀಡಲಾಗುವ ಗೌರವ ಸ್ಥಾನಮಾನವಾಗಿದೆ.

ತಮ್ಮ ದೀರ್ಘ ಮೌನಕ್ಕೆ ಕಾರಣಗಳನ್ನು ವಿವರಿಸಿದ ಸಂತ್ರಸ್ತೆ, ಸನ್ಯಾಸಿನಿಯೊಬ್ಬಳಿಗೆ ಪರಿಶುದ್ಧತೆಯನ್ನು ಅತ್ಯುನ್ನತ ಮೌಲ್ಯವೆಂದು ಪರಿಗಣಿಸಲಾಗುತ್ತದೆ. ಅದು ‘ಕಳೆದುಹೋಗಿದೆ’ ಎಂದು ಗೊತ್ತಾದರೆ ಸನ್ಯಾಸಿನಿಯನ್ನು ತಕ್ಷಣವೇ ಚರ್ಚ್‌ನಿಂದ ಹೊರಹಾಕಬಹುದು. ಚರ್ಚ್ ತೊರೆದ ಅನೇಕ ಮಹಿಳೆಯರಿಗೆ ‘ಓಡಿಹೋದ ಸನ್ಯಾಸಿನಿಗಳು’ ಎಂಬ ಹಣೆಪಟ್ಟಿ ಕಟ್ಟಲ್ಪಟ್ಟದ್ದನ್ನು ನಾನು ನೋಡಿದ್ದೇನೆ. ಇದು ಅವರಿಗೆ ಮತ್ತು ಅವರ ಕುಟುಂಬಗಳಿಗೆ ಜೀವಮಾನದ ಅವಮಾನವನ್ನು ತರುತ್ತದೆ ಎಂದಿದ್ದಾರೆ.

ತನ್ನ ಪಾವಿತ್ರ್ಯ ಕಸಿದುಕೊಳ್ಳಲಾಗಿದೆ ಎಂದು ತಾನು ಬೆಳೆಸುತ್ತಿರುವ ಮಕ್ಕಳಿಗೆ ಹೇಳುವುದನ್ನು ಎಂದಿಗೂ ಊಹಿಸಲೂ ಸಾಧ್ಯವಿಲ್ಲ. ಒಬ್ಬ ತಾಯಿ ತನ್ನ ಮಕ್ಕಳ ಮುಂದೆ ಇದನ್ನು ಹೇಳಲು ಸಾಧ್ಯವಿಲ್ಲ. ಈ ಭಯವು ತನ್ನನ್ನು ವರ್ಷಗಳ ಕಾಲ ಮೌನವಾಗಿಡುವಂತೆ ಮಾಡಿತು ಎಂದು ಹೇಳಿದ್ದಾರೆ.

ಎಲ್ಲವೂ ಸಾಮಾನ್ಯವಾಗಿದೆ ಎಂದು ನಟಿಸುತ್ತಾ ಕಾನ್ವೆಂಟ್ ಒಳಗೆ ವಾಸಿಸುವುದನ್ನು ಮುಂದುವರಿಸುವ ನೋವನ್ನು ಸಂತ್ರಸ್ತೆ ಬಿಚ್ಚಿಟ್ಟಿದ್ದು, “ನಗುನಗುತ್ತಾ, ಚೆನ್ನಾಗಿ ವಸ್ತ್ರ ಧರಿಸಿ, ಶಾಂತವಾಗಿ ಹೊರಗೆ ಹೆಜ್ಜೆ ಹಾಕಬೇಕಾಯಿತು ಮತ್ತು ಒಳಗಿನ ಅಪಾರ ನೋವನ್ನು ಮರೆಮಾಡಬೇಕಾಯಿತು” ಎಂದು ಹೇಳಿದ್ದಾರೆ. “ಎಲ್ಲವನ್ನೂ ತನ್ನೊಳಗೆ ಇಟ್ಟುಕೊಂಡು, ಆಘಾತವನ್ನು ಒಂಟಿಯಾಗಿ ಹೊತ್ತುಕೊಂಡು ಕಾನ್ವೆಂಟ್‌ನಲ್ಲಿ ವಾಸಿಸುವುದನ್ನು ಮುಂದುವರೆಸಿದ್ದೇನೆ” ಎಂದು ತಿಳಿಸಿದ್ದಾರೆ.

ಅನೇಕ ಕಾನ್ವೆಂಟ್‌ಗಳಲ್ಲಿ ಇದೇ ರೀತಿಯ ಅನುಭವಗಳಿವೆ. ಮೌನವಾಗಿ ನೋವು ಅನುಭವಿಸುತ್ತಿರುವ ಹಲವಾರು ಜನರನ್ನು ತಾನು ವೈಯಕ್ತಿಕವಾಗಿ ತಿಳಿದಿದ್ದೇನೆ. ಎಲ್ಲಾ ಸತ್ಯಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಮಾತನಾಡಲು ಧೈರ್ಯ ಮಾಡುವವರಿಗೆ ಏನಾಗುತ್ತದೆ ಎಂದು ನಾನು ನೋಡಿದ್ದೇನೆ ಎಂದಿದ್ದಾರೆ.

ಚರ್ಚ್‌ನೊಳಗಿನ ದೌರ್ಜನ್ಯವನ್ನು ಹೇಳಿಕೊಂಡ ನಂತರ ನನ್ನನ್ನು ಪ್ರತ್ಯೇಕಿಸಲಾಗಿತ್ತು. ಬಿಷಪ್ ಫ್ರಾಂಕೊ ನನ್ನ ಕುಟುಂಬ ಸದಸ್ಯರು ಮತ್ತು ಸಹ ಸನ್ಯಾಸಿಗಳನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಪ್ರಯತ್ನಿಸಿದರು. ಕಾನ್ವೆಂಟ್‌ನೊಳಗಿನ ಕೆಲ ಸನ್ಯಾಸಿಗಳು ಅವರನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಹಣಕ್ಕಾಗಿ ದೂರು ದಾಖಲಿಸಲಾಗಿದೆ ಎಂಬ ಆರೋಪಗಳನ್ನು ಸಂತ್ರಸ್ತೆ ಸುಳ್ಳು ಎಂದು ತಳ್ಳಿ ಹಾಕಿದ್ದು, “ನಾನು ಡಯಾಸಿಸ್ ಅಥವಾ ಫ್ರಾಂಕೊ ಅವರಿಂದ ಒಂದು ರೂಪಾಯಿಯನ್ನೂ ಪಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆಯ ಬಳಿಕ ಹೋರಾಟ ನಡೆಸಿದ ಮೂವರು ಸನ್ಯಾಸಿನಿಗಳು ಒಂಟಿತನ ಮತ್ತು ಕಿರುಕುಳವನ್ನು ಎದುರಿಸಿದ ನಂತರ ಚರ್ಚ್ ತೊರೆದರು ಎಂದು ಬಹಿರಂಗಪಡಿಸಿದ ಸಂತ್ರಸ್ತೆ, ತಾನು ಸೇರಿದಂತೆ ಉಳಿದ ಮೂವರು ಈಗ ಕಾನ್ವೆಂಟ್ ಒಳಗೆ ಟೈಲರಿಂಗ್ ಕೆಲಸ ಮಾಡುವ ಮೂಲಕ ಬದುಕುಳಿದಿದ್ದೇವೆ. ಚರ್ಚ್ ನಾಯಕತ್ವದ ಮೌನವೇ ಅವರನ್ನು ಬೀದಿಗೆ ತಳ್ಳಿದ್ದು, ಅವರಿಗೆ ಬೆಂಬಲ ಅಥವಾ ರಕ್ಷಣೆ ಇಲ್ಲದಾಗಿದೆ ಎಂದು ಹೇಳಿದ್ದಾರೆ.

“ನಾವು ಇನ್ನೂ ಜೀವಂತವಾಗಿದ್ದೇವೆ, ನಾವು ಇನ್ನೂ ಇಲ್ಲಿದ್ದೇವೆ… ನಮ್ಮ ಹೋರಾಟ ಇನ್ನೂ ಮುಂದುವರೆದಿದೆ ಎಂದು ಜನರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ” ಎಂದಿದ್ದಾರೆ.

ಈ ಪ್ರಕರಣವನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮೂಲಕ ಮುಂದುವರಿಸಲು ನಿರ್ಧರಿಸಿದ್ದೇನೆ. ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬರುವವರೆಗೆ ನಾನು ವಿಶ್ರಾಂತಿ ಪಡೆಯುವುದಿಲ್ಲ. ನನ್ನ ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಹೊರಬಿದ್ದ 2017ರ ನಟಿ ಮೇಲಿನ ಅತ್ಯಾಚಾರ ಪ್ರಕರಣದ ತೀರ್ಪನ್ನು ಸಂತ್ರಸ್ತೆ ಉಲ್ಲೇಖಿಸಿದ್ದು, “ಆ ತೀರ್ಪು ನಿಜವಾಗಿಯೂ ನನಗೆ ನೋವುಂಟು ಮಾಡಿದೆ. ನನ್ನ ಸ್ವಂತ ಪ್ರಕರಣದ ತೀರ್ಪು ಬಂದ ದಿನಕ್ಕೆ ಅದು ನನ್ನನ್ನು ಕರೆದೊಯ್ಯಲ್ಪಟ್ಟಿತು. ಆಕೆಗೂ ನ್ಯಾಯ ಸಿಕ್ಕಿಲ್ಲ” ಎಂದು ಹೇಳಿದ್ದಾರೆ.

“ಅದಕ್ಕಾಗಿಯೇ ನಾನು ಈಗ ಸಾರ್ವಜನಿಕವಾಗಿ ಹೊರಬರಲು ನಿರ್ಧರಿಸಿದ್ದೇನೆ” ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...