Homeಕರ್ನಾಟಕಬಿಸ್ಮಿಲ್ಲಾ... ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

ಬಿಸ್ಮಿಲ್ಲಾ… ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಮೂವರು ಸ್ಥಳೀಯ ಮುಸ್ಲಿಮರು ‘ಬಿಸ್ಮಿಲ್ಲಾ…ಬಿಸ್ಮಿಲ್ಲಾ’ ಎಂದು ಪಠಿಸುತ್ತಾ ದಾಳಿಯ ಸ್ಥಳದಿಂದ ನಮಗೆ ಕೆಳಗೆ ಬರಲು ಸಹಾಯ ಮಾಡಿದರು ಎಂದು ಘಟನೆಯಲ್ಲಿ ಹತ್ಯೆಯಾದ ಕರ್ನಾಟಕದ ನಿವಾಸಿ ಮಂಜುನಾಥ ರಾವ್ ಅವರ ಪತ್ನಿ ಪಲ್ಲವಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ರಾಜ್ಯದ ಇಬ್ಬರು ಸೇರಿದಂತೆ 28 ಜನರು ಮೃತಪಟ್ಟಿದ್ದಾರೆ. ಶಿವಮೊಗ್ಗದ ನಿವಾಸಿ ಆಗಿರುವ ಮಂಜುನಾಥ್ ರಾವ್ ಮತ್ತು ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಅವರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ ಇಬ್ಬರ ಕುಟುಂಬಗಳು ಸುರಕ್ಷಿತವಾಗಿವೆ ಎಂದು ವರದಿಗಳು ಉಲ್ಲೇಖಿಸಿವೆ.

ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ 41 ವರ್ಷದ ಭರತ್ ಭೂಷಣ್, 47 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಮಂಜುನಾಥ ರಾವ್ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಈ ವೇಳೆ ಅವರೊಂದಿಗೆ ಇದ್ದ ಅವರ ಕುಟುಂಬ ದಾಳಿಯಿಂದ ಬಚಾವಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆ ನಂತರ ಮಾಧ್ಯಮಗಳ ಜೊತೆಗೆ ಪಹಲ್ಗಾಮ್‌ನಿಂದ ಮಾತನಾಡಿದ್ದ ಮಂಜುನಾಥ್ ಅವರ ಪತ್ನಿ ಪಲ್ಲವಿ, ಭಯೋತ್ಪಾದಕರು ತನ್ನ ಪತಿಯ ಮೇಲೆ ಗುಂಡು ಹಾರಿಸಿದಾಗ, ತಾನು ಮತ್ತು ತನ್ನ ಮಗ ಅಲ್ಲೇ ಇದ್ದೆವು. ನಾವು ಕುದುರೆ ಸವಾರಿಯ ಮೂಲಕ ಸ್ಥಳಕ್ಕೆ ತಲುಪಿದ್ದೆವು. ನನ್ನ ಪತಿ ನನ್ನ ಮಗನಿಗೆ ತಿಂಡಿ ಖರೀದಿಸಲು ತೆರಳಿದ್ದರು ಈ ವೇಳೆ ದಾಳಿ ನಡೆಸಿದೆ ಎಂದು ಅವರು ಹೇಳಿದ್ದಾರೆ.

“ಕೆಲವೇ ನಿಮಿಷಗಳಲ್ಲಿ, ನನ್ನ ಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಬಂತು. ಅವರು ನನ್ನ ಕಣ್ಣ ಮುಂದೆಯೇ ನಿಧನರಾದರು, ಮತ್ತು ನಾನು ಅಸಹಾಯಕಳಾಗಿದ್ದೆ. ತನ್ನನ್ನೂ ಕೊಲ್ಲುವಂತೆ ಉಗ್ರಗಾಮಿಗಳಿಗೆ ಕೇಳಿಕೊಂಡೆ. ನನ್ನ ಮಗ ಮತ್ತು ನಾನು ಇಬ್ಬರೂ ಉಗ್ರಗಾಮಿಗಳನ್ನು ನಮ್ಮನ್ನೂ ಕೊಲ್ಲುವಂತೆ ಕೇಳಿಕೊಂಡೆವು” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ಭಯೋತ್ಪಾದಕ ನಮ್ಮನ್ನು ಕೊಲ್ಲುವುದಿಲ್ಲ, ಇದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸಬೇಕೆಂದು ಹೇಳಿದ ಎಂದು ಅವರು ಹೇಳಿದ್ದಾರೆ. ದಾಳಿಯ ಸಮಯದಲ್ಲಿ ಯಾವುದೇ ಸೇನಾ ಸಿಬ್ಬಂದಿ ಇರಲಿಲ್ಲ ಎಂದು ಅವರು ಹೇಳಿದ್ದಾರೆ.

“ದಾಳಿಯಿಂದ ನಮ್ಮನ್ನು ರಕ್ಷಿಸುವಲ್ಲಿ ನಮ್ಮ ಚಾಲಕ ಹಾಗೂ ಸ್ಥಳೀಯ ಮೂವರು ಮುಸ್ಲಿಮರು ಸಹಾಯ ಮಾಡಿದ್ದಾರೆ. ಘಟನೆ ನಡೆದಾಗಿನಿಂದ ಚಾಲಕ ನಮ್ಮೊಂದಿಗಿದ್ದಾರೆ. ಮೂವರು ಸ್ಥಳೀಯ ಮುಸ್ಲಿಮರು ‘ಬಿಸ್ಮಿಲ್ಲಾ… ಬಿಸ್ಮಿಲ್ಲಾ…’ ಎಂದು ಹೇಳುತ್ತಾ ದಾಳಿ ನಡೆದ ಸ್ಥಳದಿಂದ ಸುರಕ್ಷಿತವಗಿ ಕೆಳಗೆ ಬರಲು ನಮಗೆ ಸಹಾಯ ಮಾಡಿದರು” ಎಂದು ಅವರು ಹೇಳಿದ್ದಾರೆ.

ಅವರು ನನ್ನ ಸಹೋದರರಂತೆ ಇದ್ದರು. ಅವರಲ್ಲಿ ಒಬ್ಬರು ನನ್ನ ಮಗನನ್ನು ಎತ್ತಿಕೊಂಡು ಬಂದರು. ಇನ್ನಿಬ್ಬರು ಕಠಿಣ ಭೂಪ್ರದೇಶವನ್ನು ದಾಟಲು ನನಗೆ ಸಹಾಯ ಮಾಡಿದರು ಎಂದು ಪಲ್ಲವಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...