Homeಕರ್ನಾಟಕಬಿಸ್ಮಿಲ್ಲಾ... ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

ಬಿಸ್ಮಿಲ್ಲಾ… ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಮೂವರು ಸ್ಥಳೀಯ ಮುಸ್ಲಿಮರು ‘ಬಿಸ್ಮಿಲ್ಲಾ…ಬಿಸ್ಮಿಲ್ಲಾ’ ಎಂದು ಪಠಿಸುತ್ತಾ ದಾಳಿಯ ಸ್ಥಳದಿಂದ ನಮಗೆ ಕೆಳಗೆ ಬರಲು ಸಹಾಯ ಮಾಡಿದರು ಎಂದು ಘಟನೆಯಲ್ಲಿ ಹತ್ಯೆಯಾದ ಕರ್ನಾಟಕದ ನಿವಾಸಿ ಮಂಜುನಾಥ ರಾವ್ ಅವರ ಪತ್ನಿ ಪಲ್ಲವಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ರಾಜ್ಯದ ಇಬ್ಬರು ಸೇರಿದಂತೆ 28 ಜನರು ಮೃತಪಟ್ಟಿದ್ದಾರೆ. ಶಿವಮೊಗ್ಗದ ನಿವಾಸಿ ಆಗಿರುವ ಮಂಜುನಾಥ್ ರಾವ್ ಮತ್ತು ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಅವರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ ಇಬ್ಬರ ಕುಟುಂಬಗಳು ಸುರಕ್ಷಿತವಾಗಿವೆ ಎಂದು ವರದಿಗಳು ಉಲ್ಲೇಖಿಸಿವೆ.

ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ 41 ವರ್ಷದ ಭರತ್ ಭೂಷಣ್, 47 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಮಂಜುನಾಥ ರಾವ್ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಈ ವೇಳೆ ಅವರೊಂದಿಗೆ ಇದ್ದ ಅವರ ಕುಟುಂಬ ದಾಳಿಯಿಂದ ಬಚಾವಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆ ನಂತರ ಮಾಧ್ಯಮಗಳ ಜೊತೆಗೆ ಪಹಲ್ಗಾಮ್‌ನಿಂದ ಮಾತನಾಡಿದ್ದ ಮಂಜುನಾಥ್ ಅವರ ಪತ್ನಿ ಪಲ್ಲವಿ, ಭಯೋತ್ಪಾದಕರು ತನ್ನ ಪತಿಯ ಮೇಲೆ ಗುಂಡು ಹಾರಿಸಿದಾಗ, ತಾನು ಮತ್ತು ತನ್ನ ಮಗ ಅಲ್ಲೇ ಇದ್ದೆವು. ನಾವು ಕುದುರೆ ಸವಾರಿಯ ಮೂಲಕ ಸ್ಥಳಕ್ಕೆ ತಲುಪಿದ್ದೆವು. ನನ್ನ ಪತಿ ನನ್ನ ಮಗನಿಗೆ ತಿಂಡಿ ಖರೀದಿಸಲು ತೆರಳಿದ್ದರು ಈ ವೇಳೆ ದಾಳಿ ನಡೆಸಿದೆ ಎಂದು ಅವರು ಹೇಳಿದ್ದಾರೆ.

“ಕೆಲವೇ ನಿಮಿಷಗಳಲ್ಲಿ, ನನ್ನ ಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಬಂತು. ಅವರು ನನ್ನ ಕಣ್ಣ ಮುಂದೆಯೇ ನಿಧನರಾದರು, ಮತ್ತು ನಾನು ಅಸಹಾಯಕಳಾಗಿದ್ದೆ. ತನ್ನನ್ನೂ ಕೊಲ್ಲುವಂತೆ ಉಗ್ರಗಾಮಿಗಳಿಗೆ ಕೇಳಿಕೊಂಡೆ. ನನ್ನ ಮಗ ಮತ್ತು ನಾನು ಇಬ್ಬರೂ ಉಗ್ರಗಾಮಿಗಳನ್ನು ನಮ್ಮನ್ನೂ ಕೊಲ್ಲುವಂತೆ ಕೇಳಿಕೊಂಡೆವು” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ಭಯೋತ್ಪಾದಕ ನಮ್ಮನ್ನು ಕೊಲ್ಲುವುದಿಲ್ಲ, ಇದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸಬೇಕೆಂದು ಹೇಳಿದ ಎಂದು ಅವರು ಹೇಳಿದ್ದಾರೆ. ದಾಳಿಯ ಸಮಯದಲ್ಲಿ ಯಾವುದೇ ಸೇನಾ ಸಿಬ್ಬಂದಿ ಇರಲಿಲ್ಲ ಎಂದು ಅವರು ಹೇಳಿದ್ದಾರೆ.

“ದಾಳಿಯಿಂದ ನಮ್ಮನ್ನು ರಕ್ಷಿಸುವಲ್ಲಿ ನಮ್ಮ ಚಾಲಕ ಹಾಗೂ ಸ್ಥಳೀಯ ಮೂವರು ಮುಸ್ಲಿಮರು ಸಹಾಯ ಮಾಡಿದ್ದಾರೆ. ಘಟನೆ ನಡೆದಾಗಿನಿಂದ ಚಾಲಕ ನಮ್ಮೊಂದಿಗಿದ್ದಾರೆ. ಮೂವರು ಸ್ಥಳೀಯ ಮುಸ್ಲಿಮರು ‘ಬಿಸ್ಮಿಲ್ಲಾ… ಬಿಸ್ಮಿಲ್ಲಾ…’ ಎಂದು ಹೇಳುತ್ತಾ ದಾಳಿ ನಡೆದ ಸ್ಥಳದಿಂದ ಸುರಕ್ಷಿತವಗಿ ಕೆಳಗೆ ಬರಲು ನಮಗೆ ಸಹಾಯ ಮಾಡಿದರು” ಎಂದು ಅವರು ಹೇಳಿದ್ದಾರೆ.

ಅವರು ನನ್ನ ಸಹೋದರರಂತೆ ಇದ್ದರು. ಅವರಲ್ಲಿ ಒಬ್ಬರು ನನ್ನ ಮಗನನ್ನು ಎತ್ತಿಕೊಂಡು ಬಂದರು. ಇನ್ನಿಬ್ಬರು ಕಠಿಣ ಭೂಪ್ರದೇಶವನ್ನು ದಾಟಲು ನನಗೆ ಸಹಾಯ ಮಾಡಿದರು ಎಂದು ಪಲ್ಲವಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...