Homeಕರ್ನಾಟಕಬಿಸ್ಮಿಲ್ಲಾ... ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

ಬಿಸ್ಮಿಲ್ಲಾ… ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಮೂವರು ಸ್ಥಳೀಯ ಮುಸ್ಲಿಮರು ‘ಬಿಸ್ಮಿಲ್ಲಾ…ಬಿಸ್ಮಿಲ್ಲಾ’ ಎಂದು ಪಠಿಸುತ್ತಾ ದಾಳಿಯ ಸ್ಥಳದಿಂದ ನಮಗೆ ಕೆಳಗೆ ಬರಲು ಸಹಾಯ ಮಾಡಿದರು ಎಂದು ಘಟನೆಯಲ್ಲಿ ಹತ್ಯೆಯಾದ ಕರ್ನಾಟಕದ ನಿವಾಸಿ ಮಂಜುನಾಥ ರಾವ್ ಅವರ ಪತ್ನಿ ಪಲ್ಲವಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ರಾಜ್ಯದ ಇಬ್ಬರು ಸೇರಿದಂತೆ 28 ಜನರು ಮೃತಪಟ್ಟಿದ್ದಾರೆ. ಶಿವಮೊಗ್ಗದ ನಿವಾಸಿ ಆಗಿರುವ ಮಂಜುನಾಥ್ ರಾವ್ ಮತ್ತು ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಅವರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ ಇಬ್ಬರ ಕುಟುಂಬಗಳು ಸುರಕ್ಷಿತವಾಗಿವೆ ಎಂದು ವರದಿಗಳು ಉಲ್ಲೇಖಿಸಿವೆ.

ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ 41 ವರ್ಷದ ಭರತ್ ಭೂಷಣ್, 47 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಮಂಜುನಾಥ ರಾವ್ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಈ ವೇಳೆ ಅವರೊಂದಿಗೆ ಇದ್ದ ಅವರ ಕುಟುಂಬ ದಾಳಿಯಿಂದ ಬಚಾವಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆ ನಂತರ ಮಾಧ್ಯಮಗಳ ಜೊತೆಗೆ ಪಹಲ್ಗಾಮ್‌ನಿಂದ ಮಾತನಾಡಿದ್ದ ಮಂಜುನಾಥ್ ಅವರ ಪತ್ನಿ ಪಲ್ಲವಿ, ಭಯೋತ್ಪಾದಕರು ತನ್ನ ಪತಿಯ ಮೇಲೆ ಗುಂಡು ಹಾರಿಸಿದಾಗ, ತಾನು ಮತ್ತು ತನ್ನ ಮಗ ಅಲ್ಲೇ ಇದ್ದೆವು. ನಾವು ಕುದುರೆ ಸವಾರಿಯ ಮೂಲಕ ಸ್ಥಳಕ್ಕೆ ತಲುಪಿದ್ದೆವು. ನನ್ನ ಪತಿ ನನ್ನ ಮಗನಿಗೆ ತಿಂಡಿ ಖರೀದಿಸಲು ತೆರಳಿದ್ದರು ಈ ವೇಳೆ ದಾಳಿ ನಡೆಸಿದೆ ಎಂದು ಅವರು ಹೇಳಿದ್ದಾರೆ.

“ಕೆಲವೇ ನಿಮಿಷಗಳಲ್ಲಿ, ನನ್ನ ಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಬಂತು. ಅವರು ನನ್ನ ಕಣ್ಣ ಮುಂದೆಯೇ ನಿಧನರಾದರು, ಮತ್ತು ನಾನು ಅಸಹಾಯಕಳಾಗಿದ್ದೆ. ತನ್ನನ್ನೂ ಕೊಲ್ಲುವಂತೆ ಉಗ್ರಗಾಮಿಗಳಿಗೆ ಕೇಳಿಕೊಂಡೆ. ನನ್ನ ಮಗ ಮತ್ತು ನಾನು ಇಬ್ಬರೂ ಉಗ್ರಗಾಮಿಗಳನ್ನು ನಮ್ಮನ್ನೂ ಕೊಲ್ಲುವಂತೆ ಕೇಳಿಕೊಂಡೆವು” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ಭಯೋತ್ಪಾದಕ ನಮ್ಮನ್ನು ಕೊಲ್ಲುವುದಿಲ್ಲ, ಇದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸಬೇಕೆಂದು ಹೇಳಿದ ಎಂದು ಅವರು ಹೇಳಿದ್ದಾರೆ. ದಾಳಿಯ ಸಮಯದಲ್ಲಿ ಯಾವುದೇ ಸೇನಾ ಸಿಬ್ಬಂದಿ ಇರಲಿಲ್ಲ ಎಂದು ಅವರು ಹೇಳಿದ್ದಾರೆ.

“ದಾಳಿಯಿಂದ ನಮ್ಮನ್ನು ರಕ್ಷಿಸುವಲ್ಲಿ ನಮ್ಮ ಚಾಲಕ ಹಾಗೂ ಸ್ಥಳೀಯ ಮೂವರು ಮುಸ್ಲಿಮರು ಸಹಾಯ ಮಾಡಿದ್ದಾರೆ. ಘಟನೆ ನಡೆದಾಗಿನಿಂದ ಚಾಲಕ ನಮ್ಮೊಂದಿಗಿದ್ದಾರೆ. ಮೂವರು ಸ್ಥಳೀಯ ಮುಸ್ಲಿಮರು ‘ಬಿಸ್ಮಿಲ್ಲಾ… ಬಿಸ್ಮಿಲ್ಲಾ…’ ಎಂದು ಹೇಳುತ್ತಾ ದಾಳಿ ನಡೆದ ಸ್ಥಳದಿಂದ ಸುರಕ್ಷಿತವಗಿ ಕೆಳಗೆ ಬರಲು ನಮಗೆ ಸಹಾಯ ಮಾಡಿದರು” ಎಂದು ಅವರು ಹೇಳಿದ್ದಾರೆ.

ಅವರು ನನ್ನ ಸಹೋದರರಂತೆ ಇದ್ದರು. ಅವರಲ್ಲಿ ಒಬ್ಬರು ನನ್ನ ಮಗನನ್ನು ಎತ್ತಿಕೊಂಡು ಬಂದರು. ಇನ್ನಿಬ್ಬರು ಕಠಿಣ ಭೂಪ್ರದೇಶವನ್ನು ದಾಟಲು ನನಗೆ ಸಹಾಯ ಮಾಡಿದರು ಎಂದು ಪಲ್ಲವಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...