Homeಮುಖಪುಟಬಿಟ್‌ಕಾಯಿನ್ ಸುಲಿಗೆ ಪ್ರಕರಣ: ಬಿಜೆಪಿ ಮಾಜಿ ಶಾಸಕ, ಎಸ್‌ಪಿ ಸೇರಿ 14 ಜನರಿಗೆ ಜೀವಾವಧಿ ಶಿಕ್ಷೆ

ಬಿಟ್‌ಕಾಯಿನ್ ಸುಲಿಗೆ ಪ್ರಕರಣ: ಬಿಜೆಪಿ ಮಾಜಿ ಶಾಸಕ, ಎಸ್‌ಪಿ ಸೇರಿ 14 ಜನರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

2018ರ ಬಿಟ್‌ಕಾಯಿನ್ ಸುಲಿಗೆ ಪ್ರಕರಣದಲ್ಲಿ ಗುಜರಾತ್‌ನ ಬಿಜೆಪಿ ಮಾಜಿ ಶಾಸಕ ನಳಿನ್ ಕೊಟಾಡಿಯಾ, ಅಮ್ರೇಲಿ ಜಿಲ್ಲೆಯ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಪಟೇಲ್ ಮತ್ತು ಇತರ 12 ಜನರಿಗೆ ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ಶುಕ್ರವಾರ (ಆ.29) ಜೀವಾವಧಿ ಶಿಕ್ಷೆ ವಿಧಿಸಿದೆ.

ಸೂರತ್ ಮೂಲದ ಬಿಲ್ಡರ್ ಶೈಲೇಶ್ ಭಟ್ ಮತ್ತು ಅವರ ಪಾಲುದಾರರನ್ನು ಗಾಂಧಿನಗರದಿಂದ ಅಪಹರಿಸಿ ರೂ.32 ಕೋಟಿ ಮೌಲ್ಯದ 200 ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಅಹಮದಾಬಾದ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಾದವ್ ಅವರು ಕೊಟಾಡಿಯಾ, ಪಟೇಲ್ ಮತ್ತು ಇತರರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

ಕೊಟಾಡಿಯಾ ಅವರು 2012 ಮತ್ತು 2017 ರ ನಡುವೆ ಅಮ್ರೇಲಿಯ ಧಾರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

“ಈ ಪ್ರಕರಣದಲ್ಲಿ ಆರೋಪ ಹೊರಿಸಲಾದ ಒಟ್ಟು 15 ಜನರಲ್ಲಿ ಕೊಟಾಡಿಯಾ ಸೇರಿದಂತೆ 14 ಜನರನ್ನು ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ. ಇನ್ನೊಬ್ಬರು ಬಿಪಿನ್ ಪಟೇಲ್‌ ಎಂಬ ವ್ಯಕ್ತಿಯನ್ನು ಬಿಡುಗಡೆ ಮಾಡಿದೆ. ಆರೋಪಿಗಳು 200 ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ ಪಿತೂರಿಯ ಭಾಗವಾಗಿದ್ದಕ್ಕಾಗಿ ತಪ್ಪಿತಸ್ಥರೆಂದು ಕಂಡುಬಂದಿದೆ. ಅವರಲ್ಲಿ ಅಮ್ರೇಲಿ ಪೊಲೀಸ್ ಪಡೆಯ ಒಂಬತ್ತು ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ” ಎಂದು ಈ ಕಾನ್‌ಸ್ಟೆಬಲ್‌ಗಳನ್ನು ಪ್ರತಿನಿಧಿಸಿದ್ದ ವಕೀಲ ಪರೇಶ್ ವಘೇಲಾ ಹೇಳಿದ್ದಾರೆ.

ಒಂದು ವಾರದೊಳಗೆ ಒಂಬತ್ತು ಪೊಲೀಸರು ಹೈಕೋರ್ಟ್‌ನಲ್ಲಿ ತೀರ್ಪನ್ನು ಪ್ರಶ್ನಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 9, 2018ರಂದು ಅಮ್ರೇಲಿಯ ಪೊಲೀಸರು ಗಾಂಧಿನಗರದಿಂದ ನನ್ನನ್ನು ಮತ್ತು ನನ್ನ ವ್ಯವಹಾರ ಪಾಲುದಾರ ಕಿರಿತ್ ಪಲಾಡಿಯಾ ಅವರನ್ನು ಅಪಹರಿಸಿ, ನಮ್ಮ ಬಳಿಯಿದ್ದ ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಬಿಲ್ಡರ್ ಭಟ್ ಆರೋಪಿಸಿದ್ದರು.

ಭಟ್ ಅವರು ಗೃಹ ಇಲಾಖೆಗೆ ಸಲ್ಲಿಸಿದ ಅರ್ಜಿಯಲ್ಲಿ, ಮಾಜಿ ಶಾಸಕ ಕೊಟಾಡಿಯಾ ಮತ್ತು ಅಂದಿನ ಅಮ್ರೇಲಿ ಎಸ್‌ಪಿ ಪಟೇಲ್ ಅವರು ತನ್ನ ಮತ್ತು ಪಾಲುದಾರ ಪಲಾಡಿಯಾ ಅವರಿಂದ ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿದ್ದರು.

ಗೃಹ ಇಲಾಖೆಯ ಸೂಚನೆಯ ಮೇರೆಗೆ, ರಾಜ್ಯ ಸಿಐಡಿ-ಅಪರಾಧ ವಿಭಾಗವು ಕೊಟಾಡಿಯಾ ಮತ್ತು ಇತರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪಹರಣ, ಸುಲಿಗೆ ಮತ್ತು ಕ್ರಿಮಿನಲ್ ಪಿತೂರಿಗಾಗಿ ಎಫ್‌ಐಆರ್ ದಾಖಲಿಸಿತ್ತು.

ಹಲವು ತಿಂಗಳುಗಳ ಕಾಲ ಬಂಧನದಿಂದ ತಪ್ಪಿಸಿಕೊಂಡಿದ್ದ ಕೊಟಾಡಿಯಾ ಅವರನ್ನು ಅಂತಿಮವಾಗಿ ಸೆಪ್ಟೆಂಬರ್ 2018ರಲ್ಲಿ ಉತ್ತರ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯ ಜಾಮೀನು ನೀಡಿತ್ತು. ಪಟೇಲ್ ಮತ್ತು ಅವರ ಅಧೀನ ಅಧಿಕಾರಿಗಳು ಸೇರಿದಂತೆ ಇತರ ಆರೋಪಿಗಳಿಗೂ ಬಂಧನದ ನಂತರ ಜಾಮೀನು ನೀಡಲಾಗಿತ್ತು.

ಹೈದರಾಬಾದ್: ‘ಡಿಜಿಟಲ್ ಅರೆಸ್ಟ್’ ಮೂಲಕ ರೂ.72 ಲಕ್ಷ ಕಳೆದುಕೊಂಡ 82 ವರ್ಷದ ವೃದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...