Homeಮುಖಪುಟಬಿಟ್‌ಕಾಯಿನ್ ಸುಲಿಗೆ ಪ್ರಕರಣ: ಬಿಜೆಪಿ ಮಾಜಿ ಶಾಸಕ, ಎಸ್‌ಪಿ ಸೇರಿ 14 ಜನರಿಗೆ ಜೀವಾವಧಿ ಶಿಕ್ಷೆ

ಬಿಟ್‌ಕಾಯಿನ್ ಸುಲಿಗೆ ಪ್ರಕರಣ: ಬಿಜೆಪಿ ಮಾಜಿ ಶಾಸಕ, ಎಸ್‌ಪಿ ಸೇರಿ 14 ಜನರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

2018ರ ಬಿಟ್‌ಕಾಯಿನ್ ಸುಲಿಗೆ ಪ್ರಕರಣದಲ್ಲಿ ಗುಜರಾತ್‌ನ ಬಿಜೆಪಿ ಮಾಜಿ ಶಾಸಕ ನಳಿನ್ ಕೊಟಾಡಿಯಾ, ಅಮ್ರೇಲಿ ಜಿಲ್ಲೆಯ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಪಟೇಲ್ ಮತ್ತು ಇತರ 12 ಜನರಿಗೆ ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ಶುಕ್ರವಾರ (ಆ.29) ಜೀವಾವಧಿ ಶಿಕ್ಷೆ ವಿಧಿಸಿದೆ.

ಸೂರತ್ ಮೂಲದ ಬಿಲ್ಡರ್ ಶೈಲೇಶ್ ಭಟ್ ಮತ್ತು ಅವರ ಪಾಲುದಾರರನ್ನು ಗಾಂಧಿನಗರದಿಂದ ಅಪಹರಿಸಿ ರೂ.32 ಕೋಟಿ ಮೌಲ್ಯದ 200 ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಅಹಮದಾಬಾದ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಾದವ್ ಅವರು ಕೊಟಾಡಿಯಾ, ಪಟೇಲ್ ಮತ್ತು ಇತರರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

ಕೊಟಾಡಿಯಾ ಅವರು 2012 ಮತ್ತು 2017 ರ ನಡುವೆ ಅಮ್ರೇಲಿಯ ಧಾರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

“ಈ ಪ್ರಕರಣದಲ್ಲಿ ಆರೋಪ ಹೊರಿಸಲಾದ ಒಟ್ಟು 15 ಜನರಲ್ಲಿ ಕೊಟಾಡಿಯಾ ಸೇರಿದಂತೆ 14 ಜನರನ್ನು ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ. ಇನ್ನೊಬ್ಬರು ಬಿಪಿನ್ ಪಟೇಲ್‌ ಎಂಬ ವ್ಯಕ್ತಿಯನ್ನು ಬಿಡುಗಡೆ ಮಾಡಿದೆ. ಆರೋಪಿಗಳು 200 ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ ಪಿತೂರಿಯ ಭಾಗವಾಗಿದ್ದಕ್ಕಾಗಿ ತಪ್ಪಿತಸ್ಥರೆಂದು ಕಂಡುಬಂದಿದೆ. ಅವರಲ್ಲಿ ಅಮ್ರೇಲಿ ಪೊಲೀಸ್ ಪಡೆಯ ಒಂಬತ್ತು ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ” ಎಂದು ಈ ಕಾನ್‌ಸ್ಟೆಬಲ್‌ಗಳನ್ನು ಪ್ರತಿನಿಧಿಸಿದ್ದ ವಕೀಲ ಪರೇಶ್ ವಘೇಲಾ ಹೇಳಿದ್ದಾರೆ.

ಒಂದು ವಾರದೊಳಗೆ ಒಂಬತ್ತು ಪೊಲೀಸರು ಹೈಕೋರ್ಟ್‌ನಲ್ಲಿ ತೀರ್ಪನ್ನು ಪ್ರಶ್ನಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 9, 2018ರಂದು ಅಮ್ರೇಲಿಯ ಪೊಲೀಸರು ಗಾಂಧಿನಗರದಿಂದ ನನ್ನನ್ನು ಮತ್ತು ನನ್ನ ವ್ಯವಹಾರ ಪಾಲುದಾರ ಕಿರಿತ್ ಪಲಾಡಿಯಾ ಅವರನ್ನು ಅಪಹರಿಸಿ, ನಮ್ಮ ಬಳಿಯಿದ್ದ ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಬಿಲ್ಡರ್ ಭಟ್ ಆರೋಪಿಸಿದ್ದರು.

ಭಟ್ ಅವರು ಗೃಹ ಇಲಾಖೆಗೆ ಸಲ್ಲಿಸಿದ ಅರ್ಜಿಯಲ್ಲಿ, ಮಾಜಿ ಶಾಸಕ ಕೊಟಾಡಿಯಾ ಮತ್ತು ಅಂದಿನ ಅಮ್ರೇಲಿ ಎಸ್‌ಪಿ ಪಟೇಲ್ ಅವರು ತನ್ನ ಮತ್ತು ಪಾಲುದಾರ ಪಲಾಡಿಯಾ ಅವರಿಂದ ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿದ್ದರು.

ಗೃಹ ಇಲಾಖೆಯ ಸೂಚನೆಯ ಮೇರೆಗೆ, ರಾಜ್ಯ ಸಿಐಡಿ-ಅಪರಾಧ ವಿಭಾಗವು ಕೊಟಾಡಿಯಾ ಮತ್ತು ಇತರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪಹರಣ, ಸುಲಿಗೆ ಮತ್ತು ಕ್ರಿಮಿನಲ್ ಪಿತೂರಿಗಾಗಿ ಎಫ್‌ಐಆರ್ ದಾಖಲಿಸಿತ್ತು.

ಹಲವು ತಿಂಗಳುಗಳ ಕಾಲ ಬಂಧನದಿಂದ ತಪ್ಪಿಸಿಕೊಂಡಿದ್ದ ಕೊಟಾಡಿಯಾ ಅವರನ್ನು ಅಂತಿಮವಾಗಿ ಸೆಪ್ಟೆಂಬರ್ 2018ರಲ್ಲಿ ಉತ್ತರ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯ ಜಾಮೀನು ನೀಡಿತ್ತು. ಪಟೇಲ್ ಮತ್ತು ಅವರ ಅಧೀನ ಅಧಿಕಾರಿಗಳು ಸೇರಿದಂತೆ ಇತರ ಆರೋಪಿಗಳಿಗೂ ಬಂಧನದ ನಂತರ ಜಾಮೀನು ನೀಡಲಾಗಿತ್ತು.

ಹೈದರಾಬಾದ್: ‘ಡಿಜಿಟಲ್ ಅರೆಸ್ಟ್’ ಮೂಲಕ ರೂ.72 ಲಕ್ಷ ಕಳೆದುಕೊಂಡ 82 ವರ್ಷದ ವೃದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...