Homeಮುಖಪುಟಬಿಟ್‌ಕಾಯಿನ್ ಸುಲಿಗೆ ಪ್ರಕರಣ: ಬಿಜೆಪಿ ಮಾಜಿ ಶಾಸಕ, ಎಸ್‌ಪಿ ಸೇರಿ 14 ಜನರಿಗೆ ಜೀವಾವಧಿ ಶಿಕ್ಷೆ

ಬಿಟ್‌ಕಾಯಿನ್ ಸುಲಿಗೆ ಪ್ರಕರಣ: ಬಿಜೆಪಿ ಮಾಜಿ ಶಾಸಕ, ಎಸ್‌ಪಿ ಸೇರಿ 14 ಜನರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

2018ರ ಬಿಟ್‌ಕಾಯಿನ್ ಸುಲಿಗೆ ಪ್ರಕರಣದಲ್ಲಿ ಗುಜರಾತ್‌ನ ಬಿಜೆಪಿ ಮಾಜಿ ಶಾಸಕ ನಳಿನ್ ಕೊಟಾಡಿಯಾ, ಅಮ್ರೇಲಿ ಜಿಲ್ಲೆಯ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಪಟೇಲ್ ಮತ್ತು ಇತರ 12 ಜನರಿಗೆ ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ಶುಕ್ರವಾರ (ಆ.29) ಜೀವಾವಧಿ ಶಿಕ್ಷೆ ವಿಧಿಸಿದೆ.

ಸೂರತ್ ಮೂಲದ ಬಿಲ್ಡರ್ ಶೈಲೇಶ್ ಭಟ್ ಮತ್ತು ಅವರ ಪಾಲುದಾರರನ್ನು ಗಾಂಧಿನಗರದಿಂದ ಅಪಹರಿಸಿ ರೂ.32 ಕೋಟಿ ಮೌಲ್ಯದ 200 ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಅಹಮದಾಬಾದ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಾದವ್ ಅವರು ಕೊಟಾಡಿಯಾ, ಪಟೇಲ್ ಮತ್ತು ಇತರರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

ಕೊಟಾಡಿಯಾ ಅವರು 2012 ಮತ್ತು 2017 ರ ನಡುವೆ ಅಮ್ರೇಲಿಯ ಧಾರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

“ಈ ಪ್ರಕರಣದಲ್ಲಿ ಆರೋಪ ಹೊರಿಸಲಾದ ಒಟ್ಟು 15 ಜನರಲ್ಲಿ ಕೊಟಾಡಿಯಾ ಸೇರಿದಂತೆ 14 ಜನರನ್ನು ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ. ಇನ್ನೊಬ್ಬರು ಬಿಪಿನ್ ಪಟೇಲ್‌ ಎಂಬ ವ್ಯಕ್ತಿಯನ್ನು ಬಿಡುಗಡೆ ಮಾಡಿದೆ. ಆರೋಪಿಗಳು 200 ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ ಪಿತೂರಿಯ ಭಾಗವಾಗಿದ್ದಕ್ಕಾಗಿ ತಪ್ಪಿತಸ್ಥರೆಂದು ಕಂಡುಬಂದಿದೆ. ಅವರಲ್ಲಿ ಅಮ್ರೇಲಿ ಪೊಲೀಸ್ ಪಡೆಯ ಒಂಬತ್ತು ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ” ಎಂದು ಈ ಕಾನ್‌ಸ್ಟೆಬಲ್‌ಗಳನ್ನು ಪ್ರತಿನಿಧಿಸಿದ್ದ ವಕೀಲ ಪರೇಶ್ ವಘೇಲಾ ಹೇಳಿದ್ದಾರೆ.

ಒಂದು ವಾರದೊಳಗೆ ಒಂಬತ್ತು ಪೊಲೀಸರು ಹೈಕೋರ್ಟ್‌ನಲ್ಲಿ ತೀರ್ಪನ್ನು ಪ್ರಶ್ನಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 9, 2018ರಂದು ಅಮ್ರೇಲಿಯ ಪೊಲೀಸರು ಗಾಂಧಿನಗರದಿಂದ ನನ್ನನ್ನು ಮತ್ತು ನನ್ನ ವ್ಯವಹಾರ ಪಾಲುದಾರ ಕಿರಿತ್ ಪಲಾಡಿಯಾ ಅವರನ್ನು ಅಪಹರಿಸಿ, ನಮ್ಮ ಬಳಿಯಿದ್ದ ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಬಿಲ್ಡರ್ ಭಟ್ ಆರೋಪಿಸಿದ್ದರು.

ಭಟ್ ಅವರು ಗೃಹ ಇಲಾಖೆಗೆ ಸಲ್ಲಿಸಿದ ಅರ್ಜಿಯಲ್ಲಿ, ಮಾಜಿ ಶಾಸಕ ಕೊಟಾಡಿಯಾ ಮತ್ತು ಅಂದಿನ ಅಮ್ರೇಲಿ ಎಸ್‌ಪಿ ಪಟೇಲ್ ಅವರು ತನ್ನ ಮತ್ತು ಪಾಲುದಾರ ಪಲಾಡಿಯಾ ಅವರಿಂದ ಬಿಟ್‌ಕಾಯಿನ್‌ಗಳನ್ನು ಸುಲಿಗೆ ಮಾಡಿದ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿದ್ದರು.

ಗೃಹ ಇಲಾಖೆಯ ಸೂಚನೆಯ ಮೇರೆಗೆ, ರಾಜ್ಯ ಸಿಐಡಿ-ಅಪರಾಧ ವಿಭಾಗವು ಕೊಟಾಡಿಯಾ ಮತ್ತು ಇತರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪಹರಣ, ಸುಲಿಗೆ ಮತ್ತು ಕ್ರಿಮಿನಲ್ ಪಿತೂರಿಗಾಗಿ ಎಫ್‌ಐಆರ್ ದಾಖಲಿಸಿತ್ತು.

ಹಲವು ತಿಂಗಳುಗಳ ಕಾಲ ಬಂಧನದಿಂದ ತಪ್ಪಿಸಿಕೊಂಡಿದ್ದ ಕೊಟಾಡಿಯಾ ಅವರನ್ನು ಅಂತಿಮವಾಗಿ ಸೆಪ್ಟೆಂಬರ್ 2018ರಲ್ಲಿ ಉತ್ತರ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯ ಜಾಮೀನು ನೀಡಿತ್ತು. ಪಟೇಲ್ ಮತ್ತು ಅವರ ಅಧೀನ ಅಧಿಕಾರಿಗಳು ಸೇರಿದಂತೆ ಇತರ ಆರೋಪಿಗಳಿಗೂ ಬಂಧನದ ನಂತರ ಜಾಮೀನು ನೀಡಲಾಗಿತ್ತು.

ಹೈದರಾಬಾದ್: ‘ಡಿಜಿಟಲ್ ಅರೆಸ್ಟ್’ ಮೂಲಕ ರೂ.72 ಲಕ್ಷ ಕಳೆದುಕೊಂಡ 82 ವರ್ಷದ ವೃದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...